< أعمال 22 >

«أَيُّهَا ٱلرِّجَالُ ٱلْإِخْوَةُ وَٱلْآبَاءُ، ٱسْمَعُوا ٱحْتِجَاجِي ٱلْآنَ لَدَيْكُمْ». ١ 1
“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.
فَلَمَّا سَمِعُوا أَنَّهُ يُنَادِي لَهُمْ بِٱللُّغَةِ ٱلْعِبْرَانِيَّةِ أَعْطَوْا سُكُوتًا أَحْرَى. فَقَالَ: ٢ 2
ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ;
«أَنَا رَجُلٌ يَهُودِيٌّ وُلِدْتُ فِي طَرْسُوسَ كِيلِيكِيَّةَ، وَلَكِنْ رَبَيْتُ فِي هَذِهِ ٱلْمَدِينَةِ مُؤَدَّبًا عِنْدَ رِجْلَيْ غَمَالَائِيلَ عَلَى تَحْقِيقِ ٱلنَّامُوسِ ٱلْأَبَوِيِّ. وَكُنْتُ غَيُورًا لِلهِ كَمَا أَنْتُمْ جَمِيعُكُمُ ٱلْيَوْمَ. ٣ 3
“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
وَٱضْطَهَدْتُ هَذَا ٱلطَّرِيقَ حَتَّى ٱلْمَوْتِ، مُقَيِّدًا وَمُسَلِّمًا إِلَى ٱلسُّجُونِ رِجَالًا وَنِسَاءً، ٤ 4
ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
كَمَا يَشْهَدُ لِي أَيْضًا رَئِيسُ ٱلْكَهَنَةِ وَجَمِيعُ ٱلْمَشْيَخَةِ، ٱلَّذِينَ إِذْ أَخَذْتُ أَيْضًا مِنْهُمْ رَسَائِلَ لِلْإِخْوَةِ إِلَى دِمَشْقَ، ذَهَبْتُ لِآتِيَ بِٱلَّذِينَ هُنَاكَ إِلَى أُورُشَلِيمَ مُقَيَّدِينَ لِكَيْ يُعَاقَبُوا. ٥ 5
ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
فَحَدَثَ لِي وَأَنَا ذَاهِبٌ وَمُتَقَرِّبٌ إِلَى دِمَشْقَ أَنَّهُ نَحْوَ نِصْفِ ٱلنَّهَارِ، بَغْتَةً أَبْرَقَ حَوْلِي مِنَ ٱلسَّمَاءِ نُورٌ عَظِيمٌ. ٦ 6
“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
فَسَقَطْتُ عَلَى ٱلْأَرْضِ، وَسَمِعْتُ صَوْتًا قَائِلًا لِي: شَاوُلُ، شَاوُلُ! لِمَاذَا تَضْطَهِدُنِي؟ ٧ 7
ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
فَأَجَبْتُ: مَنْ أَنْتَ يَا سَيِّدُ؟ فَقَالَ لِي: أَنَا يَسُوعُ ٱلنَّاصِرِيُّ ٱلَّذِي أَنْتَ تَضْطَهِدُهُ. ٨ 8
“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
وَٱلَّذِينَ كَانُوا مَعِي نَظَرُوا ٱلنُّورَ وَٱرْتَعَبُوا، وَلَكِنَّهُمْ لَمْ يَسْمَعُوا صَوْتَ ٱلَّذِي كَلَّمَنِي. ٩ 9
ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.
فَقُلْتُ: مَاذَا أَفْعَلُ يَارَبُّ؟ فَقَالَ لِي ٱلرَّبُّ: قُمْ وَٱذْهَبْ إِلَى دِمَشْقَ، وَهُنَاكَ يُقَالُ لَكَ عَنْ جَمِيعِ مَا تَرَتَّبَ لَكَ أَنْ تَفْعَلَ. ١٠ 10
೧೦“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
وَإِذْ كُنْتُ لَا أُبْصِرُ مِنْ أَجْلِ بَهَاءِ ذَلِكَ ٱلنُّورِ، ٱقْتَادَنِي بِيَدِي ٱلَّذِينَ كَانُوا مَعِي، فَجِئْتُ إِلَى دِمَشْقَ. ١١ 11
೧೧ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
«ثُمَّ إِنَّ حَنَانِيَّا رَجُلًا تَقِيًّا حَسَبَ ٱلنَّامُوسِ، وَمَشْهُودًا لَهُ مِنْ جَمِيعِ ٱلْيَهُودِ ٱلسُّكَّانِ ١٢ 12
೧೨“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ
أَتَى إِلَيَّ، وَوَقَفَ وَقَالَ لِي: أَيُّهَا ٱلْأَخُ شَاوُلُ، أَبْصِرْ! فَفِي تِلْكَ ٱلسَّاعَةِ نَظَرْتُ إِلَيْهِ. ١٣ 13
೧೩ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
فَقَالَ: إِلَهُ آبَائِنَا ٱنْتَخَبَكَ لِتَعْلَمَ مَشِيئَتَهُ، وَتُبْصِرَ ٱلْبَارَّ، وَتَسْمَعَ صَوْتًا مِنْ فَمِهِ. ١٤ 14
೧೪“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
لِأَنَّكَ سَتَكُونُ لَهُ شَاهِدًا لِجَمِيعِ ٱلنَّاسِ بِمَا رَأَيْتَ وَسَمِعْتَ. ١٥ 15
೧೫ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
وَٱلْآنَ لِمَاذَا تَتَوَانَى؟ قُمْ وَٱعْتَمِدْ وَٱغْسِلْ خَطَايَاكَ دَاعِيًا بِٱسْمِ ٱلرَّبِّ. ١٦ 16
೧೬ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
وَحَدَثَ لِي بَعْدَ مَا رَجَعْتُ إِلَى أُورُشَلِيمَ وَكُنْتُ أُصَلِّي فِي ٱلْهَيْكَلِ، أَنِّي حَصَلْتُ فِي غَيْبَةٍ، ١٧ 17
೧೭“ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
فَرَأَيْتُهُ قَائِلًا لِي: أَسْرِعْ! وَٱخْرُجْ عَاجِلًا مِنْ أُورُشَلِيمَ، لِأَنَّهُمْ لَا يَقْبَلُونَ شَهَادَتَكَ عَنِّي. ١٨ 18
೧೮ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.
فَقُلْتُ: يَارَبُّ، هُمْ يَعْلَمُونَ أَنِّي كُنْتُ أَحْبِسُ وَأَضْرِبُ فِي كُلِّ مَجْمَعٍ ٱلَّذِينَ يُؤْمِنُونَ بِكَ. ١٩ 19
೧೯“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
وَحِينَ سُفِكَ دَمُ ٱسْتِفَانُوسَ شَهِيدِكَ كُنْتُ أَنَا وَاقِفًا وَرَاضِيًا بِقَتْلِهِ، وَحَافِظًا ثِيَابَ ٱلَّذِينَ قَتَلُوهُ. ٢٠ 20
೨೦ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
فَقَالَ لِي: ٱذْهَبْ، فَإِنِّي سَأُرْسِلُكَ إِلَى ٱلْأُمَمِ بَعِيدًا». ٢١ 21
೨೧ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.
فَسَمِعُوا لَهُ حَتَّى هَذِهِ ٱلْكَلِمَةِ، ثُمَّ رَفَعُوا أَصْوَاتَهُمْ قَائِلِينَ: «خُذْ مِثْلَ هَذَا مِنَ ٱلْأَرْضِ، لِأَنَّهُ كَانَ لَا يَجُوزُ أَنْ يَعِيشَ!». ٢٢ 22
೨೨ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
وَإِذْ كَانُوا يَصِيحُونَ وَيَطْرَحُونَ ثِيَابَهُمْ وَيَرْمُونَ غُبَارًا إِلَى ٱلْجَوِّ، ٢٣ 23
೨೩ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,
أَمَرَ ٱلْأَمِيرُ أَنْ يُذْهَبَ بِهِ إِلَى ٱلْمُعَسْكَرِ، قَائِلًا أَنْ يُفْحَصَ بِضَرَبَاتٍ، لِيَعْلَمَ لِأَيِّ سَبَبٍ كَانُوا يَصْرُخُونَ عَلَيْهِ هَكَذَا. ٢٤ 24
೨೪ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
فَلَمَّا مَدُّوهُ لِلسِّيَاطِ، قَالَ بُولُسُ لِقَائِدِ ٱلْمِئَةِ ٱلْوَاقِفِ: «أَيَجُوزُ لَكُمْ أَنْ تَجْلِدُوا إِنْسَانًا رُومَانِيًّا غَيْرَ مَقْضِيٍّ عَلَيْهِ؟». ٢٥ 25
೨೫ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
فَإِذْ سَمِعَ قَائِدُ ٱلْمِئَةِ ذَهَبَ إِلَى ٱلْأَمِيرِ، وَأَخْبَرَهُ قَائِلًا: «ٱنْظُرْ مَاذَا أَنْتَ مُزْمِعٌ أَنْ تَفْعَلَ! لِأَنَّ هَذَا ٱلرَّجُلَ رُومَانِيٌّ». ٢٦ 26
೨೬ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
فَجَاءَ ٱلْأَمِيرُ وَقَالَ لَهُ: «قُلْ لِي: أَنْتَ رُومَانِيٌّ؟». فَقَالَ: «نَعَمْ». ٢٧ 27
೨೭ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.
فَأَجَابَ ٱلْأَمِيرُ: «أَمَّا أَنَا فَبِمَبْلَغٍ كَبِيرٍ ٱقْتَنَيْتُ هَذِهِ ٱلرَّعَوِيَّةَ». فَقَالَ بُولُسُ: «أَمَّا أَنَا فَقَدْ وُلِدْتُ فِيهَا». ٢٨ 28
೨೮ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.
وَلِلْوَقْتِ تَنَحَّى عَنْهُ ٱلَّذِينَ كَانُوا مُزْمِعِينَ أَنْ يَفْحَصُوهُ. وَٱخْتَشَى ٱلْأَمِيرُ لَمَّا عَلِمَ أَنَّهُ رُومَانِيٌّ، وَلِأَنَّهُ قَدْ قَيَّدَهُ. ٢٩ 29
೨೯ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
وَفِي ٱلْغَدِ إِذْ كَانَ يُرِيدُ أَنْ يَعْلَمَ ٱلْيَقِينَ: لِمَاذَا يَشْتَكِي ٱلْيَهُودُ عَلَيْهِ؟ حَلَّهُ مِنَ ٱلرِّبَاطِ، وَأَمَرَ أَنْ يَحْضُرَ رُؤَسَاءُ ٱلْكَهَنَةِ وَكُلُّ مَجْمَعِهِمْ. فَأَحْدَرَ بُولُسَ وَأَقَامَهُ لَدَيْهِمْ. ٣٠ 30
೩೦ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

< أعمال 22 >