< أعمال 27 >
فَلَمَّا ٱسْتَقَرَّ ٱلرَّأْيُ أَنْ نُسَافِرَ فِي ٱلْبَحْرِ إِلَى إِيطَالِيَا، سَلَّمُوا بُولُسَ وَأَسْرَى آخَرِينَ إِلَى قَائِدِ مِئَةٍ مِنْ كَتِيبَةِ أُوغُسْطُسَ ٱسْمُهُ يُولِيُوسُ. | ١ 1 |
೧ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
فَصَعِدْنَا إِلَى سَفِينَةٍ أَدْرَامِيتِينِيَّةٍ، وَأَقْلَعْنَا مُزْمِعِينَ أَنْ نُسَافِرَ مَارِّينَ بِٱلْمَوَاضِعِ ٱلَّتِي فِي أَسِيَّا. وَكَانَ مَعَنَا أَرِسْتَرْخُسُ، رَجُلٌ مَكِدُونِيٌّ مِنْ تَسَالُونِيكِي. | ٢ 2 |
೨ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
وَفِي ٱلْيَوْمِ ٱلْآخَرِ أَقْبَلْنَا إِلَى صَيْدَاءَ، فَعَامَلَ يُولِيُوسُ بُولُسَ بِٱلرِّفْقِ، وَأَذِنَ أَنْ يَذْهَبَ إِلَى أَصْدِقَائِهِ لِيَحْصُلَ عَلَى عِنَايَةٍ مِنْهُمْ. | ٣ 3 |
೩ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
ثُمَّ أَقْلَعْنَا مِنْ هُنَاكَ وَسَافَرْنَا فِي ٱلْبَحْرِ مِنْ تَحْتِ قُبْرُسَ، لِأَنَّ ٱلرِّيَاحَ كَانَتْ مُضَادَّةً. | ٤ 4 |
೪ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
وَبَعْدَ مَا عَبَرْنَا ٱلْبَحْرَ ٱلَّذِي بِجَانِبِ كِيلِيكِيَّةَ وَبَمْفِيلِيَّةَ، نَزَلْنَا إِلَى مِيرَا لِيكِيَّةَ. | ٥ 5 |
೫ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
فَإِذْ وَجَدَ قَائِدُ ٱلْمِئَةِ هُنَاكَ سَفِينَةً إِسْكَنْدَرِيَّةً مُسَافِرَةً إِلَى إِيطَالِيَا أَدْخَلَنَا فِيهَا. | ٦ 6 |
೬ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
وَلَمَّا كُنَّا نُسَافِرُ رُوَيْدًا أَيَّامًا كَثِيرَةً، وَبِٱلْجَهْدِ صِرْنَا بِقُرْبِ كِنِيدُسَ، وَلَمْ تُمَكِّنَّا ٱلرِّيحُ أَكْثَرَ، سَافَرْنَا مِنْ تَحْتِ كِرِيتَ بِقُرْبِ سَلْمُونِي. | ٧ 7 |
೭ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
وَلَمَّا تَجَاوَزْنَاهَا بِٱلْجَهْدِ جِئْنَا إِلَى مَكَانٍ يُقَالُ لَهُ «ٱلْمَوَانِي ٱلْحَسَنَةُ» ٱلَّتِي بِقُرْبِهَا مَدِينَةُ لَسَائِيَةَ. | ٨ 8 |
೮ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
وَلَمَّا مَضَى زَمَانٌ طَوِيلٌ، وَصَارَ ٱلسَّفَرُ فِي ٱلْبَحْرِ خَطِرًا، إِذْ كَانَ ٱلصَّوْمُ أَيْضًا قَدْ مَضَى، جَعَلَ بُولُسُ يُنْذِرُهُمْ | ٩ 9 |
೯ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
قَائِلًا: «أَيُّهَا ٱلرِّجَالُ، أَنَا أَرَى أَنَّ هَذَا ٱلسَّفَرَ عَتِيدٌ أَنْ يَكُونَ بِضَرَرٍ وَخَسَارَةٍ كَثِيرَةٍ، لَيْسَ لِلشَّحْنِ وَٱلسَّفِينَةِ فَقَطْ، بَلْ لِأَنْفُسِنَا أَيْضًا». | ١٠ 10 |
೧೦“ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.
وَلَكِنْ كَانَ قَائِدُ ٱلْمِئَةِ يَنْقَادُ إِلَى رُبَّانِ ٱلسَّفِينَةِ وَإِلَى صَاحِبِهَا أَكْثَرَ مِمَّا إِلَى قَوْلِ بُولُسَ. | ١١ 11 |
೧೧ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
وَلِأَنَّ ٱلْمِينَا لَمْ يَكُنْ مَوْقِعُهَا صَالِحًا لِلْمَشْتَى، ٱسْتَقَرَّ رَأْيُ أَكْثَرِهِمْ أَنْ يُقْلِعُوا مِنْ هُنَاكَ أَيْضًا، عَسَى أَنْ يُمْكِنَهُمُ ٱلْإِقْبَالُ إِلَى فِينِكْسَ لِيَشْتُوا فِيهَا. وَهِيَ مِينَا فِي كِرِيتَ تَنْظُرُ نَحْوَ ٱلْجَنُوبِ وَٱلشَّمَالِ ٱلْغَرْبِيَّيْنِ. | ١٢ 12 |
೧೨ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.
فَلَمَّا نَسَّمَتْ رِيحٌ جَنُوبٌ، ظَنُّوا أَنَّهُمْ قَدْ مَلَكُوا مَقْصَدَهُمْ، فَرَفَعُوا ٱلْمِرْسَاةَ وَطَفِقُوا يَتَجَاوَزُونَ كِرِيتَ عَلَى أَكْثَرِ قُرْبٍ. | ١٣ 13 |
೧೩ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.
وَلَكِنْ بَعْدَ قَلِيلٍ هَاجَتْ عَلَيْهَا رِيحٌ زَوْبَعِيَّةٌ يُقَالُ لَهَا «أُورُوكْلِيدُونُ». | ١٤ 14 |
೧೪ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
فَلَمَّا خُطِفَتِ ٱلسَّفِينَةُ وَلَمْ يُمْكِنْهَا أَنْ تُقَابِلَ ٱلرِّيحَ، سَلَّمْنَا، فَصِرْنَا نُحْمَلُ. | ١٥ 15 |
೧೫ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
فَجَرَيْنَا تَحْتَ جَزِيرَةٍ يُقَالُ لَهَا «كَلَوْدِي» وَبِٱلْجَهْدِ قَدِرْنَا أَنْ نَمْلِكَ ٱلْقَارِبَ. | ١٦ 16 |
೧೬ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
وَلَمَّا رَفَعُوهُ طَفِقُوا يَسْتَعْمِلُونَ مَعُونَاتٍ، حَازِمِينَ ٱلسَّفِينَةَ، وَإِذْ كَانُوا خَائِفِينَ أَنْ يَقَعُوا فِي ٱلسِّيرْتِسِ، أَنْزَلُوا ٱلْقُلُوعَ، وَهَكَذَا كَانُوا يُحْمَلُونَ. | ١٧ 17 |
೧೭ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
وَإِذْ كُنَّا فِي نَوْءٍ عَنِيفٍ، جَعَلُوا يُفَرِّغُونَ فِي ٱلْغَدِ. | ١٨ 18 |
೧೮ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
وَفِي ٱلْيَوْمِ ٱلثَّالِثِ رَمَيْنَا بِأَيْدِينَا أَثَاثَ ٱلسَّفِينَةِ. | ١٩ 19 |
೧೯ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
وَإِذْ لَمْ تَكُنِ ٱلشَّمْسُ وَلَا ٱلنُّجُومُ تَظْهَرُ أَيَّامًا كَثِيرَةً، وَٱشْتَدَّ عَلَيْنَا نَوْءٌ لَيْسَ بِقَلِيلٍ، ٱنْتُزِعَ أَخِيرًا كُلُّ رَجَاءٍ فِي نَجَاتِنَا. | ٢٠ 20 |
೨೦ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
فَلَمَّا حَصَلَ صَوْمٌ كَثِيرٌ، حِينَئِذٍ وَقَفَ بُولُسُ فِي وَسْطِهِمْ وَقَالَ: «كَانَ يَنْبَغِي أَيُّهَا ٱلرِّجَالُ أَنْ تُذْعِنُوا لِي، وَلَا تُقْلِعُوا مِنْ كِرِيتَ، فَتَسْلَمُوا مِنْ هَذَا ٱلضَّرَرِ وَٱلْخَسَارَةِ. | ٢١ 21 |
೨೧ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
وَٱلْآنَ أُنْذِرُكُمْ أَنْ تُسَرُّوا، لِأَنَّهُ لَا تَكُونُ خَسَارَةُ نَفْسٍ وَاحِدَةٍ مِنْكُمْ، إِلَّا ٱلسَّفِينَةَ. | ٢٢ 22 |
೨೨ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
لِأَنَّهُ وَقَفَ بِي هَذِهِ ٱللَّيْلَةَ مَلَاكُ ٱلْإِلَهِ ٱلَّذِي أَنَا لَهُ وَٱلَّذِي أَعْبُدُهُ، | ٢٣ 23 |
೨೩ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
قَائِلًا: لَا تَخَفْ يَا بُولُسُ. يَنْبَغِي لَكَ أَنْ تَقِفَ أَمَامَ قَيْصَرَ. وَهُوَذَا قَدْ وَهَبَكَ ٱللهُ جَمِيعَ ٱلْمُسَافِرِينَ مَعَكَ. | ٢٤ 24 |
೨೪‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
لِذَلِكَ سُرُّوا أَيُّهَا ٱلرِّجَالُ، لِأَنِّي أُومِنُ بِٱللهِ أَنَّهُ يَكُونُ هَكَذَا كَمَا قِيلَ لِي. | ٢٥ 25 |
೨೫ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
وَلَكِنْ لَا بُدَّ أَنْ نَقَعَ عَلَى جَزِيرَةٍ». | ٢٦ 26 |
೨೬ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.
فَلَمَّا كَانَتِ ٱللَّيْلَةُ ٱلرَّابِعَةَ عَشْرَةَ، وَنَحْنُ نُحْمَلُ تَائِهِينَ فِي بَحْرِ أَدْرِيَا، ظَنَّ ٱلنُّوتِيَّةُ، نَحْوَ نِصْفِ ٱللَّيْلِ، أَنَّهُمُ ٱقْتَرَبُوا إِلَى بَرٍّ. | ٢٧ 27 |
೨೭ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
فَقَاسُوا وَوَجَدُوا عِشْرِينَ قَامَةً. وَلَمَّا مَضَوْا قَلِيلًا قَاسُوا أَيْضًا فَوَجَدُوا خَمْسَ عَشْرَةَ قَامَةً. | ٢٨ 28 |
೨೮ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
وَإِذْ كَانُوا يَخَافُونَ أَنْ يَقَعُوا عَلَى مَوَاضِعَ صَعْبَةٍ، رَمَوْا مِنَ ٱلْمُؤَخَّرِ أَرْبَعَ مَرَاسٍ، وَكَانُوا يَطْلُبُونَ أَنْ يَصِيرَ ٱلنَّهَارُ. | ٢٩ 29 |
೨೯ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
وَلَمَّا كَانَ ٱلنُّوتِيَّةُ يَطْلُبُونَ أَنْ يَهْرُبُوا مِنَ ٱلسَّفِينَةِ، وَأَنْزَلُوا ٱلْقَارِبَ إِلَى ٱلْبَحْرِ بِعِلَّةِ أَنَّهُمْ مُزْمِعُونَ أَنْ يَمُدُّوا مَرَاسِيَ مِنَ ٱلْمُقَدَّمِ، | ٣٠ 30 |
೩೦ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
قَالَ بُولُسُ لِقَائِدِ ٱلْمِئَةِ وَٱلْعَسْكَرِ: «إِنْ لَمْ يَبْقَ هَؤُلَاءِ فِي ٱلسَّفِينَةِ فَأَنْتُمْ لَا تَقْدِرُونَ أَنْ تَنْجُوا». | ٣١ 31 |
೩೧ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.
حِينَئِذٍ قَطَعَ ٱلْعَسْكَرُ حِبَالَ ٱلْقَارِبِ وَتَرَكُوهُ يَسْقُطُ. | ٣٢ 32 |
೩೨ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
وَحَتَّى قَارَبَ أَنْ يَصِيرَ ٱلنَّهَارُ كَانَ بُولُسُ يَطْلُبُ إِلَى ٱلْجَمِيعِ أَنْ يَتَنَاوَلُوا طَعَامًا، قَائِلًا: «هَذَا هُوَ ٱلْيَوْمُ ٱلرَّابِعَ عَشَرَ، وَأَنْتُمْ مُنْتَظِرُونَ لَا تَزَالُونَ صَائِمِينَ، وَلَمْ تَأْخُذُوا شَيْئًا. | ٣٣ 33 |
೩೩ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
لِذَلِكَ أَلْتَمِسُ مِنْكُمْ أَنْ تَتَنَاوَلُوا طَعَامًا، لِأَنَّ هَذَا يَكُونُ مُفِيدًا لِنَجَاتِكُمْ، لِأَنَّهُ لَا تَسْقُطُ شَعْرَةٌ مِنْ رَأْسِ وَاحِدٍ مِنْكُمْ». | ٣٤ 34 |
೩೪ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
وَلَمَّا قَالَ هَذَا أَخَذَ خُبْزًا وَشَكَرَ ٱللهَ أَمَامَ ٱلْجَمِيعِ، وَكَسَّرَ، وَٱبْتَدَأَ يَأْكُلُ. | ٣٥ 35 |
೩೫ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
فَصَارَ ٱلْجَمِيعُ مَسْرُورِينَ وَأَخَذُوا هُمْ أَيْضًا طَعَامًا. | ٣٦ 36 |
೩೬ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
وَكُنَّا فِي ٱلسَّفِينَةِ جَمِيعُ ٱلْأَنْفُسِ مِئَتَيْنِ وَسِتَّةً وَسَبْعِينَ. | ٣٧ 37 |
೩೭ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
وَلَمَّا شَبِعُوا مِنَ ٱلطَّعَامِ طَفِقُوا يُخَفِّفُونَ ٱلسَّفِينَةَ طَارِحِينَ ٱلْحِنْطَةَ فِي ٱلْبَحْرِ. | ٣٨ 38 |
೩೮ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
وَلَمَّا صَارَ ٱلنَّهَارُ لَمْ يَكُونُوا يَعْرِفُونَ ٱلْأَرْضَ، وَلَكِنَّهُمْ أَبْصَرُوا خَلِيجًا لَهُ شَاطِئٌ، فَأَجْمَعُوا أَنْ يَدْفَعُوا إِلَيْهِ ٱلسَّفِينَةَ إِنْ أَمْكَنَهُمْ. | ٣٩ 39 |
೩೯ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
فَلَمَّا نَزَعُوا ٱلْمَرَاسِيَ تَارِكِينَ إِيَّاهَا فِي ٱلْبَحْرِ، وَحَلُّوا رُبُطَ ٱلدَّفَّةِ أَيْضًا، رَفَعُوا قِلْعًا لِلرِّيحِ ٱلْهَابَّةِ، وَأَقْبَلُوا إِلَى ٱلشَّاطِئِ. | ٤٠ 40 |
೪೦ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
وَإِذْ وَقَعُوا عَلَى مَوْضِعٍ بَيْنَ بَحْرَيْنِ، شَطَّطُوا ٱلسَّفِينَةَ، فَٱرْتَكَزَ ٱلْمُقَدَّمُ وَلَبِثَ لَا يَتَحَرَّكُ. وَأَمَّا ٱلْمُؤَخَّرُ فَكَانَ يَنْحَلُّ مِنْ عُنْفِ ٱلْأَمْوَاجِ. | ٤١ 41 |
೪೧ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
فَكَانَ رَأْيُ ٱلْعَسْكَرِ أَنْ يَقْتُلُوا ٱلْأَسْرَى لِئَلَّا يَسْبَحَ أَحَدٌ مِنْهُمْ فَيَهْرُبَ. | ٤٢ 42 |
೪೨ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
وَلَكِنَّ قَائِدَ ٱلْمِئَةِ، إِذْ كَانَ يُرِيدُ أَنْ يُخَلِّصَ بُولُسَ، مَنَعَهُمْ مِنْ هَذَا ٱلرَّأْيِ، وَأَمَرَ أَنَّ ٱلْقَادِرِينَ عَلَى ٱلسِّبَاحَةِ يَرْمُونَ أَنْفُسَهُمْ أَوَّلًا فَيَخْرُجُونَ إِلَى ٱلْبَرِّ، | ٤٣ 43 |
೪೩ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,
وَٱلْبَاقِينَ بَعْضُهُمْ عَلَى أَلْوَاحٍ وَبَعْضُهُمْ عَلَى قِطَعٍ مِنَ ٱلسَّفِينَةِ. فَهَكَذَا حَدَثَ أَنَّ ٱلْجَمِيعَ نَجَوْا إِلَى ٱلْبَرِّ. | ٤٤ 44 |
೪೪ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.