< أعمال 28 >

وَلَمَّا نَجَوْا وَجَدُوا أَنَّ ٱلْجَزِيرَةَ تُدْعَى مَلِيطَةَ. ١ 1
ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.
فَقَدَّمَ أَهْلُهَا ٱلْبَرَابِرَةُ لَنَا إِحْسَانًا غَيْرَ ٱلْمُعْتَادِ، لِأَنَّهُمْ أَوْقَدُوا نَارًا وَقَبِلُوا جَمِيعَنَا مِنْ أَجْلِ ٱلْمَطَرِ ٱلَّذِي أَصَابَنَا وَمِنْ أَجْلِ ٱلْبَرْدِ. ٢ 2
ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.
فَجَمَعَ بُولُسُ كَثِيرًا مِنَ ٱلْقُضْبَانِ وَوَضَعَهَا عَلَى ٱلنَّارِ، فَخَرَجَتْ مِنَ ٱلْحَرَارَةِ أَفْعَى وَنَشِبَتْ فِي يَدِهِ. ٣ 3
ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.
فَلَمَّا رَأَى ٱلْبَرَابِرَةُ ٱلْوَحْشَ مُعَلَّقًا بِيَدِهِ، قَالَ بَعْضُهُمْ لِبَعْضٍ: «لَا بُدَّ أَنَّ هَذَا ٱلْإِنْسَانَ قَاتِلٌ، لَمْ يَدَعْهُ ٱلْعَدْلُ يَحْيَا وَلَوْ نَجَا مِنَ ٱلْبَحْرِ». ٤ 4
ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
فَنَفَضَ هُوَ ٱلْوَحْشَ إِلَى ٱلنَّارِ وَلَمْ يَتَضَرَّرْ بِشَيْءٍ رَدِيٍّ ٥ 5
ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.
وَأَمَّا هُمْ فَكَانُوا يَنْتَظِرُونَ أَنَّهُ عَتِيدٌ أَنْ يَنْتَفِخَ أَوْ يَسْقُطَ بَغْتَةً مَيْتًا. فَإِذِ ٱنْتَظَرُوا كَثِيرًا وَرَأَوْا أَنَّهُ لَمْ يَعْرِضْ لَهُ شَيْءٌ مُضِرٌّ، تَغَيَّرُوا وَقَالُوا: «هُوَ إِلَهٌ!». ٦ 6
ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.
وَكَانَ فِي مَا حَوْلَ ذَلِكَ ٱلْمَوْضِعِ ضِيَاعٌ لِمُقَدَّمِ ٱلْجَزِيرَةِ ٱلَّذِي ٱسْمُهُ بُوبْلِيُوسُ. فَهَذَا قَبِلَنَا وَأَضَافَنَا بِمُلَاطَفَةٍ ثَلَاثَةَ أَيَّامٍ. ٧ 7
ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.
فَحَدَثَ أَنَّ أَبَا بُوبْلِيُوسَ كَانَ مُضْطَجِعًا مُعْتَرًى بِحُمَّى وَسَحْجٍ. فَدَخَلَ إِلَيْهِ بُولُسُ وَصَلَّى، وَوَضَعَ يَدَيْهِ عَلَيْهِ فَشَفَاهُ. ٨ 8
ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.
فَلَمَّا صَارَ هَذَا، كَانَ ٱلْبَاقُونَ ٱلَّذِينَ بِهِمْ أَمْرَاضٌ فِي ٱلْجَزِيرَةِ يَأْتُونَ وَيُشْفَوْنَ. ٩ 9
ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.
فَأَكْرَمَنَا هَؤُلَاءِ إِكْرَامَاتٍ كَثِيرَةً. وَلَمَّا أَقْلَعْنَا زَوَّدُونَا مَا يُحْتَاجُ إِلَيْهِ. ١٠ 10
ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.
وَبَعْدَ ثَلَاثَةِ أَشْهُرٍ أَقْلَعْنَا فِي سَفِينَةٍ إِسْكَنْدَرِيَّةٍ مَوْسُومَةٍ بِعَلَامَةِ ٱلْجَوْزَاءِ، كَانَتْ قَدْ شَتَتْ فِي ٱلْجَزِيرَةِ. ١١ 11
ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.
فَنَزَلْنَا إِلَى سِرَاكُوسَا وَمَكَثْنَا ثَلَاثَةَ أَيَّامٍ. ١٢ 12
ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.
ثُمَّ مِنْ هُنَاكَ دُرْنَا وَأَقْبَلْنَا إِلَى رِيغِيُونَ. وَبَعْدَ يَوْمٍ وَاحِدٍ حَدَثَتْ رِيحٌ جَنُوبٌ، فَجِئْنَا فِي ٱلْيَوْمِ ٱلثَّانِي إِلَى بُوطِيُولِي، ١٣ 13
ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.
حَيْثُ وَجَدْنَا إِخْوَةً فَطَلَبُوا إِلَيْنَا أَنْ نَمْكُثَ عِنْدَهُمْ سَبْعَةَ أَيَّامٍ. وَهَكَذَا أَتَيْنَا إِلَى رُومِيَةَ. ١٤ 14
ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.
وَمِنْ هُنَاكَ لَمَّا سَمِعَ ٱلْإِخْوَةُ بِخَبَرِنَا، خَرَجُوا لِٱسْتِقْبَالِنَا إِلَى فُورُنِ أَبِّيُوسَ وَٱلثَّلَاثَةِ ٱلْحَوَانِيتِ. فَلَمَّا رَآهُمْ بُولُسُ شَكَرَ ٱللهَ وَتَشَجَّعَ. ١٥ 15
ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.
وَلَمَّا أَتَيْنَا إِلَى رُومِيَةَ سَلَّمَ قَائِدُ ٱلْمِئَةِ ٱلْأَسْرَى إِلَى رَئِيسِ ٱلْمُعَسْكَرِ، وَأَمَّا بُولُسُ فَأُذِنَ لَهُ أَنْ يُقِيمَ وَحْدَهُ مَعَ ٱلْعَسْكَرِيِّ ٱلَّذِي كَانَ يَحْرُسُهُ. ١٦ 16
ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.
وَبَعْدَ ثَلَاثَةِ أَيَّامٍ ٱسْتَدْعَى بُولُسُ ٱلَّذِينَ كَانُوا وُجُوهَ ٱلْيَهُودِ. فَلَمَّا ٱجْتَمَعُوا قَالَ لَهُمْ: «أَيُّهَا ٱلرِّجَالُ ٱلْإِخْوَةُ، مَعَ أَنِّي لَمْ أَفْعَلْ شَيْئًا ضِدَّ ٱلشَّعْبِ أَوْ عَوَائِدِ ٱلْآبَاءِ، أُسْلِمْتُ مُقَيَّدًا مِنْ أُورُشَلِيمَ إِلَى أَيْدِي ٱلرُّومَانِيِّينَ، ١٧ 17
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.
ٱلَّذِينَ لَمَّا فَحَصُوا كَانُوا يُرِيدُونَ أَنْ يُطْلِقُونِي، لِأَنَّهُ لَمْ تَكُنْ فِيَّ عِلَّةٌ وَاحِدَةٌ لِلْمَوْتِ. ١٨ 18
ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.
وَلَكِنْ لَمَّا قَاوَمَ ٱلْيَهُودُ، ٱضْطُرِرْتُ أَنْ أَرْفَعَ دَعْوَايَ إِلَى قَيْصَرَ، لَيْسَ كَأَنَّ لِي شَيْئًا لِأَشْتَكِيَ بِهِ عَلَى أُمَّتِي. ١٩ 19
ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.
فَلِهَذَا ٱلسَّبَبِ طَلَبْتُكُمْ لِأَرَاكُمْ وَأُكَلِّمَكُمْ، لِأَنِّي مِنْ أَجْلِ رَجَاءِ إِسْرَائِيلَ مُوثَقٌ بِهَذِهِ ٱلسِّلْسِلَةِ». ٢٠ 20
ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.
فَقَالُوا لَهُ: «نَحْنُ لَمْ نَقْبَلْ كِتَابَاتٍ فِيكَ مِنَ ٱلْيَهُودِيَّةِ، وَلَا أَحَدٌ مِنَ ٱلْإِخْوَةِ جَاءَ فَأَخْبَرَنَا أَوْ تَكَلَّمَ عَنْكَ بِشَيْءٍ رَدِيٍّ. ٢١ 21
ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.
وَلَكِنَّنَا نَسْتَحْسِنُ أَنْ نَسْمَعَ مِنْكَ مَاذَا تَرَى، لِأَنَّهُ مَعْلُومٌ عِنْدَنَا مِنْ جِهَةِ هَذَا ٱلْمَذْهَبِ أَنَّهُ يُقَاوَمُ فِي كُلِّ مَكَانٍ». ٢٢ 22
ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.
فَعَيَّنُوا لَهُ يَوْمًا، فَجَاءَ إِلَيْهِ كَثِيرُونَ إِلَى ٱلْمَنْزِلِ، فَطَفِقَ يَشْرَحُ لَهُمْ شَاهِدًا بِمَلَكُوتِ ٱللهِ، وَمُقْنِعًا إِيَّاهُمْ مِنْ نَامُوسِ مُوسَى وَٱلْأَنْبِيَاءِ بِأَمْرِ يَسُوعَ، مِنَ ٱلصَّبَاحِ إِلَى ٱلْمَسَاءِ. ٢٣ 23
ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.
فَٱقْتَنَعَ بَعْضُهُمْ بِمَا قِيلَ، وَبَعْضُهُمْ لَمْ يُؤْمِنُوا. ٢٤ 24
ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.
فَٱنْصَرَفُوا وَهُمْ غَيْرُ مُتَّفِقِينَ بَعْضُهُمْ مَعَ بَعْضٍ، لَمَّا قَالَ بُولُسُ كَلِمَةً وَاحِدَةً: «إِنَّهُ حَسَنًا كَلَّمَ ٱلرُّوحُ ٱلْقُدُسُ آبَاءَنَا بِإِشَعْيَاءَ ٱلنَّبِيِّ ٢٥ 25
ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:
قَائِلًا: ٱذْهَبْ إِلَى هَذَا ٱلشَّعْبِ وَقُلْ: سَتَسْمَعُونَ سَمْعًا وَلَا تَفْهَمُونَ، وَسَتَنْظُرُونَ نَظَرًا وَلَا تُبْصِرُونَ. ٢٦ 26
“‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”
لِأَنَّ قَلْبَ هَذَا ٱلشَّعْبِ قَدْ غَلُظَ، وَبِآذَانِهِمْ سَمِعُوا ثَقِيلًا، وَأَعْيُنُهُمْ أَغْمَضُوهَا. لِئَلَّا يُبْصِرُوا بِأَعْيُنِهِمْ وَيَسْمَعُوا بِآذَانِهِمْ وَيَفْهَمُوا بِقُلُوبِهِمْ وَيَرْجِعُوا، فَأَشْفِيَهُمْ. ٢٧ 27
ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.
فَلْيَكُنْ مَعْلُومًا عِنْدَكُمْ أَنَّ خَلَاصَ ٱللهِ قَدْ أُرْسِلَ إِلَى ٱلْأُمَمِ، وَهُمْ سَيَسْمَعُونَ!». ٢٨ 28
“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.
وَلَمَّا قَالَ هَذَا مَضَى ٱلْيَهُودُ وَلَهُمْ مُبَاحَثَةٌ كَثِيرَةٌ فِيمَا بَيْنَهُمْ. ٢٩ 29
ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.
وَأَقَامَ بُولُسُ سَنَتَيْنِ كَامِلَتَينِ فِي بَيْتٍ ٱسْتَأْجَرَهُ لِنَفْسِهِ. وَكَانَ يَقْبَلُ جَمِيعَ ٱلَّذِينَ يَدْخُلُونَ إِلَيْهِ، ٣٠ 30
ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.
كَارِزًا بِمَلَكُوتِ ٱللهِ، وَمُعَلِّمًا بِأَمْرِ ٱلرَّبِّ يَسُوعَ ٱلْمَسِيحِ بِكُلِّ مُجَاهَرَةٍ، بِلَا مَانِعٍ. ٣١ 31
ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.

< أعمال 28 >