< أعمال 5 >

وَرَجُلٌ ٱسْمُهُ حَنَانِيَّا، وَٱمْرَأَتُهُ سَفِّيرَةُ، بَاعَ مُلْكًا ١ 1
ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
وَٱخْتَلَسَ مِنَ ٱلثَّمَنِ، وَٱمْرَأَتُهُ لَهَا خَبَرُ ذَلِكَ، وَأَتَى بِجُزْءٍ وَوَضَعَهُ عِنْدَ أَرْجُلِ ٱلرُّسُلِ. ٢ 2
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
فَقَالَ بُطْرُسُ: «يَا حَنَانِيَّا، لِمَاذَا مَلَأَ ٱلشَّيْطَانُ قَلْبَكَ لِتَكْذِبَ عَلَى ٱلرُّوحِ ٱلْقُدُسِ وَتَخْتَلِسَ مِنْ ثَمَنِ ٱلْحَقْلِ؟ ٣ 3
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
أَلَيْسَ وَهُوَ بَاقٍ كَانَ يَبْقَى لَكَ؟ وَلَمَّا بِيعَ، أَلَمْ يَكُنْ فِي سُلْطَانِكَ؟ فَمَا بَالُكَ وَضَعْتَ فِي قَلْبِكَ هَذَا ٱلْأَمْرَ؟ أَنْتَ لَمْ تَكْذِبْ عَلَى ٱلنَّاسِ بَلْ عَلَى ٱللهِ». ٤ 4
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
فَلَمَّا سَمِعَ حَنَانِيَّا هَذَا ٱلْكَلَامَ وَقَعَ وَمَاتَ. وَصَارَ خَوْفٌ عَظِيمٌ عَلَى جَمِيعِ ٱلَّذِينَ سَمِعُوا بِذَلِكَ. ٥ 5
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
فَنَهَضَ ٱلْأَحْدَاثُ وَلَفُّوهُ وَحَمَلُوهُ خَارِجًا وَدَفَنُوهُ. ٦ 6
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
ثُمَّ حَدَثَ بَعْدَ مُدَّةِ نَحْوِ ثَلَاثِ سَاعَاتٍ، أَنَّ ٱمْرَأَتَهُ دَخَلَتْ، وَلَيْسَ لَهَا خَبَرُ مَا جَرَى. ٧ 7
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
فأَجَابَهَا بُطْرُسُ: «قُولِي لِي: أَبِهَذَا ٱلْمِقْدَارِ بِعْتُمَا ٱلْحَقْلَ؟». فَقَالَتْ: «نَعَمْ، بِهَذَا ٱلْمِقْدَارِ». ٨ 8
ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.
فَقَالَ لَهَا بُطْرُسُ: «مَا بَالُكُمَا ٱتَّفَقْتُمَا عَلَى تَجْرِبَةِ رُوحِ ٱلرَّبِّ؟ هُوَذَا أَرْجُلُ ٱلَّذِينَ دَفَنُوا رَجُلَكِ عَلَى ٱلْبَابِ، وَسَيَحْمِلُونَكِ خَارِجًا». ٩ 9
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
فَوَقَعَتْ فِي ٱلْحَالِ عِنْدَ رِجْلَيْهِ وَمَاتَتْ. فَدَخَلَ ٱلشَّبَابُ وَوَجَدُوهَا مَيْتَةً، فَحَمَلُوهَا خَارِجًا وَدَفَنُوهَا بِجَانِبِ رَجُلِهَا. ١٠ 10
೧೦ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
فَصَارَ خَوْفٌ عَظِيمٌ عَلَى جَمِيعِ ٱلْكَنِيسَةِ وَعَلَى جَمِيعِ ٱلَّذِينَ سَمِعُوا بِذَلِكَ. ١١ 11
೧೧ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
وَجَرَتْ عَلَى أَيْدِي ٱلرُّسُلِ آيَاتٌ وَعَجَائِبُ كَثِيرَةٌ فِي ٱلشَّعْبِ. وَكَانَ ٱلْجَمِيعُ بِنَفْسٍ وَاحِدَةٍ فِي رِوَاقِ سُلَيْمَانَ. ١٢ 12
೧೨ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
وَأَمَّا ٱلْآخَرُونَ فَلَمْ يَكُنْ أَحَدٌ مِنْهُمْ يَجْسُرُ أَنْ يَلْتَصِقَ بِهِمْ، لَكِنْ كَانَ ٱلشَّعْبُ يُعَظِّمُهُمْ. ١٣ 13
೧೩ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.
وَكَانَ مُؤْمِنُونَ يَنْضَمُّونَ لِلرَّبِّ أَكْثَرَ، جَمَاهِيرُ مِنْ رِجَالٍ وَنِسَاءٍ، ١٤ 14
೧೪ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
حَتَّى إِنَّهُمْ كَانُوا يَحْمِلُونَ ٱلْمَرْضَى خَارِجًا فِي ٱلشَّوَارِعِ وَيَضَعُونَهُمْ عَلَى فُرُشٍ وَأَسِرَّةٍ، حَتَّى إِذَا جَاءَ بُطْرُسُ يُخَيِّمُ وَلَوْ ظِلُّهُ عَلَى أَحَدٍ مِنْهُمْ. ١٥ 15
೧೫ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
وَٱجْتَمَعَ جُمْهُورُ ٱلْمُدُنِ ٱلْمُحِيطَةِ إِلَى أُورُشَلِيمَ حَامِلِينَ مَرْضَى وَمُعَذَّبِينَ مِنْ أَرْوَاحٍ نَجِسَةٍ، وَكَانُوا يُبْرَأُونَ جَمِيعُهُمْ. ١٦ 16
೧೬ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
فَقَامَ رَئِيسُ ٱلْكَهَنَةِ وَجَمِيعُ ٱلَّذِينَ مَعَهُ، ٱلَّذِينَ هُمْ شِيعَةُ ٱلصَّدُّوقِيِّينَ، وَٱمْتَلَأُوا غَيْرَةً، ١٧ 17
೧೭ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
فَأَلْقَوْا أَيْدِيَهُمْ عَلَى ٱلرُّسُلِ وَوَضَعُوهُمْ فِي حَبْسِ ٱلْعَامَّةِ. ١٨ 18
೧೮ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
وَلَكِنَّ مَلَاكَ ٱلرَّبِّ فِي ٱللَّيْلِ فَتَحَ أَبْوَابَ ٱلسِّجْنِ وَأَخْرَجَهُمْ وَقَالَ: ١٩ 19
೧೯ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
«ٱذْهَبُوا قِفُوا وَكَلِّمُوا ٱلشَّعْبَ فِي ٱلْهَيْكَلِ بِجَمِيعِ كَلَامِ هَذِهِ ٱلْحَيَاةِ». ٢٠ 20
೨೦“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
فَلَمَّا سَمِعُوا دَخَلُوا ٱلْهَيْكَلَ نَحْوَ ٱلصُّبْحِ وَجَعَلُوا يُعَلِّمُونَ. ثُمَّ جَاءَ رَئِيسُ ٱلْكَهَنَةِ وَٱلَّذِينَ مَعَهُ، وَدَعَوْا ٱلْمَجْمَعَ وَكُلَّ مَشْيَخَةِ بَنِي إِسْرَائِيلَ، فَأَرْسَلُوا إِلَى ٱلْحَبْسِ لِيُؤْتَى بِهِمْ. ٢١ 21
೨೧ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
وَلَكِنَّ ٱلْخُدَّامَ لَمَّا جَاءُوا لَمْ يَجِدُوهُمْ فِي ٱلسِّجْنِ، فَرَجَعُوا وَأَخْبَرُوا ٢٢ 22
೨೨ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
قَائِلِينَ: «إِنَّنَا وَجَدْنَا ٱلْحَبْسَ مُغْلَقًا بِكُلِّ حِرْصٍ، وَٱلْحُرَّاسَ وَاقِفِينَ خَارِجًا أَمَامَ ٱلْأَبْوَابِ، وَلَكِنْ لَمَّا فَتَحْنَا لَمْ نَجِدْ فِي ٱلدَّاخِلِ أَحَدًا». ٢٣ 23
೨೩“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
فَلَمَّا سَمِعَ ٱلْكَاهِنُ وَقَائِدُ جُنْدِ ٱلْهَيْكَلِ وَرُؤَسَاءُ ٱلْكَهَنَةِ هَذِهِ ٱلْأَقْوَالَ، ٱرْتَابُوا مِنْ جِهَتِهِمْ: مَا عَسَى أَنْ يَصِيرَ هَذَا؟ ٢٤ 24
೨೪ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
ثُمَّ جَاءَ وَاحِدٌ وَأَخْبَرَهُمْ قَائِلًا: «هُوَذَا ٱلرِّجَالُ ٱلَّذِينَ وَضَعْتُمُوهُمْ فِي ٱلسِّجْنِ هُمْ فِي ٱلْهَيْكَلِ وَاقِفِينَ يُعَلِّمُونَ ٱلشَّعْبَ!». ٢٥ 25
೨೫ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
حِينَئِذٍ مَضَى قَائِدُ ٱلْجُنْدِ مَعَ ٱلْخُدَّامِ، فَأَحْضَرَهُمْ لَا بِعُنْفٍ، لِأَنَّهُمْ كَانُوا يَخَافُونَ ٱلشَّعْبَ لِئَلَّا يُرْجَمُوا. ٢٦ 26
೨೬ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
فَلَمَّا أَحْضَرُوهُمْ أَوْقَفُوهُمْ فِي ٱلْمَجْمَعِ. فَسَأَلَهُمْ رَئِيسُ ٱلْكَهَنَةِ ٢٧ 27
೨೭ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
قَائِلًا: «أَمَا أَوْصَيْنَاكُمْ وَصِيَّةً أَنْ لَا تُعَلِّمُوا بِهَذَا ٱلِٱسْمِ؟ وَهَا أَنْتُمْ قَدْ مَلَأْتُمْ أُورُشَلِيمَ بِتَعْلِيمِكُمْ، وَتُرِيدُونَ أَنْ تَجْلِبُوا عَلَيْنَا دَمَ هَذَا ٱلْإِنْسَانِ». ٢٨ 28
೨೮“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
فَأَجَابَ بُطْرُسُ وَٱلرُّسُلُ وَقَالُوا: «يَنْبَغِي أَنْ يُطَاعَ ٱللهُ أَكْثَرَ مِنَ ٱلنَّاسِ. ٢٩ 29
೨೯ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
إِلَهُ آبَائِنَا أَقَامَ يَسُوعَ ٱلَّذِي أَنْتُمْ قَتَلْتُمُوهُ مُعَلِّقِينَ إِيَّاهُ عَلَى خَشَبَةٍ. ٣٠ 30
೩೦ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
هَذَا رَفَّعَهُ ٱللهُ بِيَمِينِهِ رَئِيسًا وَمُخَلِّصًا، لِيُعْطِيَ إِسْرَائِيلَ ٱلتَّوْبَةَ وَغُفْرَانَ ٱلْخَطَايَا. ٣١ 31
೩೧ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
وَنَحْنُ شُهُودٌ لَهُ بِهَذِهِ ٱلْأُمُورِ، وَٱلرُّوحُ ٱلْقُدُسُ أَيْضًا، ٱلَّذِي أَعْطَاهُ ٱللهُ لِلَّذِينَ يُطِيعُونَهُ». ٣٢ 32
೩೨ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.
فَلَمَّا سَمِعُوا حَنِقُوا، وَجَعَلُوا يَتَشَاوَرُونَ أَنْ يَقْتُلُوهُمْ. ٣٣ 33
೩೩ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.
فَقَامَ فِي ٱلْمَجْمَعِ رَجُلٌ فَرِّيسِيٌّ ٱسْمُهُ غَمَالَائِيلُ، مُعَلِّمٌ لِلنَّامُوسِ، مُكَرَّمٌ عِنْدَ جَمِيعِ ٱلشَّعْبِ، وَأَمَرَ أَنْ يُخْرَجَ ٱلرُّسُلُ قَلِيلًا. ٣٤ 34
೩೪ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
ثُمَّ قَالَ لَهُمْ: «أَيُّهَا ٱلرِّجَالُ ٱلْإِسْرَائِيلِيُّونَ، ٱحْتَرِزُوا لِأَنْفُسِكُمْ مِنْ جِهَةِ هَؤُلَاءِ ٱلنَّاسِ فِي مَا أَنْتُمْ مُزْمِعُونَ أَنْ تَفْعَلُوا. ٣٥ 35
೩೫ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.
لِأَنَّهُ قَبْلَ هَذِهِ ٱلْأَيَّامِ قَامَ ثُودَاسُ قَائِلًا عَنْ نَفْسِهِ: إِنَّهُ شَيْءٌ، ٱلَّذِي ٱلْتَصَقَ بِهِ عَدَدٌ مِنَ ٱلرِّجَالِ نَحْوُ أَرْبَعِمِئَةٍ، ٱلَّذِي قُتِلَ، وَجَمِيعُ ٱلَّذِينَ ٱنْقَادُوا إِلَيْهِ تَبَدَّدُوا وَصَارُوا لَا شَيْءَ. ٣٦ 36
೩೬ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
بَعْدَ هَذَا قَامَ يَهُوذَا ٱلْجَلِيلِيُّ فِي أَيَّامِ ٱلِٱكْتِتَابِ، وَأَزَاغَ وَرَاءَهُ شَعْبًا غَفِيرًا. فَذَاكَ أَيْضًا هَلَكَ، وَجَمِيعُ ٱلَّذِينَ ٱنْقَادُوا إِلَيْهِ تَشَتَّتُوا. ٣٧ 37
೩೭ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
وَٱلْآنَ أَقُولُ لَكُمْ: تَنَحَّوْا عَنْ هَؤُلَاءِ ٱلنَّاسِ وَٱتْرُكُوهُمْ! لِأَنَّهُ إِنْ كَانَ هَذَا ٱلرَّأْيُ أَوْ هَذَا ٱلْعَمَلُ مِنَ ٱلنَّاسِ فَسَوْفَ يَنْتَقِضُ، ٣٨ 38
೩೮ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
وَإِنْ كَانَ مِنَ ٱللهِ فَلَا تَقْدِرُونَ أَنْ تَنْقُضُوهُ، لِئَلَّا تُوجَدُوا مُحَارِبِينَ لِلهِ أَيْضًا». ٣٩ 39
೩೯ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
فَٱنْقَادُوا إِلَيْهِ. وَدَعَوْا ٱلرُّسُلَ وَجَلَدُوهُمْ، وَأَوْصَوْهُمْ أَنْ لَا يَتَكَلَّمُوا بِٱسْمِ يَسُوعَ، ثُمَّ أَطْلَقُوهُمْ. ٤٠ 40
೪೦ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
وَأَمَّا هُمْ فَذَهَبُوا فَرِحِينَ مِنْ أَمَامِ ٱلْمَجْمَعِ، لِأَنَّهُمْ حُسِبُوا مُسْتَأْهِلِينَ أَنْ يُهَانُوا مِنْ أَجْلِ ٱسْمِهِ. ٤١ 41
೪೧ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
وَكَانُوا لَا يَزَالُونَ كُلَّ يَوْمٍ فِي ٱلْهَيْكَلِ وَفِي ٱلْبُيُوتِ مُعَلِّمِينَ وَمُبَشِّرِينَ بِيَسُوعَ ٱلْمَسِيحِ. ٤٢ 42
೪೨ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

< أعمال 5 >