< عَامُوس 5 >

اِسْمَعُوا هَذَا ٱلْقَوْلَ ٱلَّذِي أَنَا أُنَادِي بِهِ عَلَيْكُمْ، مَرْثَاةً يَا بَيْتَ إِسْرَائِيلَ: ١ 1
ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:
«سَقَطَتْ عَذْرَاءُ إِسْرَائِيلَ. لَا تَعُودُ تَقُومُ. ٱنْطَرَحَتْ عَلَى أَرْضِهَا لَيْسَ مَنْ يُقِيمُهَا». ٢ 2
“ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”
لِأَنَّهُ هَكَذَا قَالَ ٱلسَّيِّدُ ٱلرَّبُّ: «ٱلْمَدِينَةُ ٱلْخَارِجَةُ بِأَلْفٍ، يَبْقَى لَهَا مِئَةٌ، وَٱلْخَارِجَةُ بِمِئَةٍ يَبْقَى لَهَا عَشَرَةٌ مِنْ بَيْتِ إِسْرَائِيلَ». ٣ 3
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”
لِأَنَّهُ هَكَذَا قَالَ ٱلرَّبُّ لِبَيْتِ إِسْرَائِيلَ: «ٱطْلُبُوا فَتَحْيَوْا. ٤ 4
ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
وَلَا تَطْلُبُوا بَيْتَ إِيلَ، وَإِلَى ٱلْجِلْجَالِ لَا تَذْهَبُوا، وَإِلَى بِئْرَ سَبْعٍ لَا تَعْبُرُوا. لِأَنَّ ٱلْجِلْجَالَ تُسْبَى سَبْيًا، وَبَيْتَ إِيلَ تَصِيرُ عَدَمًا». ٥ 5
ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”
اُطْلُبُوا ٱلرَّبَّ فَتَحْيَوْا لِئَلَّا يَقْتَحِمَ بَيْتَ يُوسُفَ كَنَارٍ تُحْرِقُ، وَلَا يَكُونُ مَنْ يُطْفِئُهَا مِنْ بَيْتِ إِيلَ. ٦ 6
ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
يَا أَيُّهَا ٱلَّذِينَ يُحَوِّلُونَ ٱلْحَقَّ أَفْسَنْتِينًا، وَيُلْقُونَ ٱلْبِرَّ إِلَى ٱلْأَرْضِ. ٧ 7
ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.
اَلَّذِي صَنَعَ ٱلثُّرَيَّا وَٱلْجَبَّارَ، وَيُحَوِّلُ ظِلَّ ٱلْمَوْتِ صُبْحًا، وَيُظْلِمُ ٱلنَّهَارَ كَٱللَّيْلِ. ٱلَّذِي يَدْعُو مِيَاهَ ٱلْبَحْرِ وَيَصُبُّهَا عَلَى وَجْهِ ٱلْأَرْضِ، يَهْوَهُ ٱسْمُهُ. ٨ 8
ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.
ٱلَّذِي يُفْلِحُ ٱلْخَرِبَ عَلَى ٱلْقَوِيِّ، فَيَأْتِي ٱلْخَرِبُ عَلَى ٱلْحِصْنِ. ٩ 9
ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.
إِنَّهُمْ فِي ٱلْبَابِ يُبْغِضُونَ ٱلْمُنْذِرَ، وَيَكْرَهُونَ ٱلْمُتَكَلِّمَ بِٱلصِّدْقِ. ١٠ 10
ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.
لِذَلِكَ مِنْ أَجْلِ أَنَّكُمْ تَدُوسُونَ ٱلْمِسْكِينَ، وَتَأْخُذُونَ مِنْهُ هَدِيَّةَ قَمْحٍ، بَنَيْتُمْ بُيُوتًا مِنْ حِجَارَةٍ مَنْحُوتَةٍ وَلَا تَسْكُنُونَ فِيهَا، وَغَرَسْتُمْ كُرُومًا شَهِيَّةً وَلَا تَشْرَبُونَ خَمْرَهَا. ١١ 11
ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.
لِأَنِّي عَلِمْتُ أَنَّ ذُنُوبَكُمْ كَثِيرَةٌ وَخَطَايَاكُمْ وَافِرَةٌ أَيُّهَا ٱلْمُضَايِقُونَ ٱلْبَارَّ، ٱلْآخِذُونَ ٱلرَّشْوَةَ، ٱلصَّادُّونَ ٱلْبَائِسِينَ فِي ٱلْبَابِ. ١٢ 12
ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.
لِذَلِكَ يَصْمُتُ ٱلْعَاقِلُ فِي ذَلِكَ ٱلزَّمَانِ لِأَنَّهُ زَمَانٌ رَدِيءٌ. ١٣ 13
ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.
اُطْلُبُوا ٱلْخَيْرَ لَا ٱلشَّرَّ لِكَىْ تَحْيَوْا، فَعَلَى هَذَا يَكُونُ ٱلرَّبُّ إِلَهُ ٱلْجُنُودِ مَعَكُمْ كَمَا قُلْتُمْ. ١٤ 14
ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
اُبْغُضُوا ٱلشَّرَّ، وَأَحِبُّوا ٱلْخَيْرَ، وَثَبِّتُوا ٱلْحَقَّ فِي ٱلْبَابِ، لَعَلَّ ٱلرَّبَّ إِلَهَ ٱلْجُنُودِ يَتَرَاءَفُ عَلَى بَقِيَّةِ يُوسُفَ. ١٥ 15
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.
لِذَلِكَ هَكَذَا قَالَ ٱلسَّيِّدُ ٱلرَّبُّ إِلَهُ ٱلْجُنُودِ: «فِي جَمِيعِ ٱلْأَسْوَاقِ نَحِيبٌ، وَفِي جَمِيعِ ٱلْأَزِقَّةِ يَقُولُونَ: آهِ! آهِ! وَيَدْعُونَ ٱلْفَلَّاحَ إِلَى ٱلنَّوْحِ، وَجَمِيعَ عَارِفِي ٱلرِّثَاءِ لِلنَّدْبِ. ١٦ 16
ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.
وَفِي جَمِيعِ ٱلْكُرُومِ نَدْبٌ، لِأَنِّي أَعْبُرُ فِي وَسَطِكَ، قَالَ ٱلرَّبُّ». ١٧ 17
ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
وَيْلٌ لِلَّذِينَ يَشْتَهُونَ يَوْمَ ٱلرَّبِّ! لِمَاذَا لَكُمْ يَوْمُ ٱلرَّبِّ؟ هُوَ ظَلَامٌ لَا نُورٌ. ١٨ 18
ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.
كَمَا إِذَا هَرَبَ إِنْسَانٌ مِنْ أَمَامِ ٱلْأَسَدِ فَصَادَفَهُ ٱلدُّبُّ، أَوْ دَخَلَ ٱلْبَيْتَ وَوَضَعَ يَدَهُ عَلَى ٱلْحَائِطِ فَلَدَغَتْهُ ٱلْحَيَّةُ! ١٩ 19
ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.
أَلَيْسَ يَوْمُ ٱلرَّبِّ ظَلَامًا لَا نُورًا، وَقَتَامًا وَلَا نُورَ لَهُ؟ ٢٠ 20
ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.
«بَغَضْتُ، كَرِهْتُ أَعْيَادَكُمْ، وَلَسْتُ أَلْتَذُّ بِٱعْتِكَافَاتِكُمْ. ٢١ 21
ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.
إِنِّي إِذَا قَدَّمْتُمْ لِي مُحْرَقَاتِكُمْ وَتَقْدِمَاتِكُمْ لَا أَرْتَضِي، وَذَبَائِحَ ٱلسَّلَامَةِ مِنْ مُسَمَّنَاتِكُمْ لَا أَلْتَفِتُ إِلَيْهَا. ٢٢ 22
ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.
أَبْعِدْ عَنِّي ضَجَّةَ أَغَانِيكَ، وَنَغْمَةَ رَبَابِكَ لَا أَسْمَعُ. ٢٣ 23
ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.
وَلْيَجْرِ ٱلْحَقُّ كَٱلْمِيَاهِ، وَٱلْبِرُّ كَنَهْرٍ دَائِمٍ. ٢٤ 24
ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
«هَلْ قَدَّمْتُمْ لِي ذَبَائِحَ وَتَقْدِمَاتٍ فِي ٱلْبَرِّيَّةِ أَرْبَعِينَ سَنَةً يَا بَيْتَ إِسْرَائِيلَ؟ ٢٥ 25
ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?
بَلْ حَمَلْتُمْ خَيْمَةَ مَلْكُومِكُمْ، وَتِمْثَالَ أَصْنَامِكُمْ، نَجْمَ إِلَهِكُمُ ٱلَّذِي صَنَعْتُمْ لِنُفُوسِكُمْ. ٢٦ 26
ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
فَأَسْبِيكُمْ إِلَى مَا وَرَاءَ دِمَشْقَ، قَالَ ٱلرَّبُّ إِلَهُ ٱلْجُنُودِ ٱسْمُهُ». ٢٧ 27
ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.

< عَامُوس 5 >