< اَلْجَامِعَةِ 12 >
فَٱذْكُرْ خَالِقَكَ فِي أَيَّامِ شَبَابِكَ، قَبْلَ أَنْ تَأْتِيَ أَيَّامُ ٱلشَّرِّ أَوْ تَجِيءَ ٱلسِّنُونَ إِذْ تَقُولُ: «لَيْسَ لِي فِيهَا سُرُورٌ». | ١ 1 |
೧ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
قَبْلَ مَا تَظْلُمُ ٱلشَّمْسُ وَٱلنُّورُ وَٱلْقَمَرُ وَٱلنُّجُومُ، وَتَرْجِعُ ٱلسُّحُبُ بَعْدَ ٱلْمَطَرِ. | ٢ 2 |
೨ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
فِي يَوْمٍ يَتَزَعْزَعُ فِيهِ حَفَظَةُ ٱلْبَيْتِ، وَتَتَلَوَّى رِجَالُ ٱلْقُوَّةِ، وَتَبْطُلُ ٱلطَّوَاحِنُ لِأَنَّهَا قَلَّتْ، وَتُظْلِمُ ٱلنَّوَاظِرُ مِنَ ٱلشَّبَابِيكِ. | ٣ 3 |
೩ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
وَتُغْلَقُ ٱلْأَبْوَابُ فِي ٱلسُّوقِ. حِينَ يَنْخَفِضُ صَوْتُ ٱلْمِطْحَنَةِ، وَيَقُومُ لِصَوْتِ ٱلْعُصْفُورِ، وَتُحَطُّ كُلُّ بَنَاتِ ٱلْغِنَاءِ. | ٤ 4 |
೪ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
وَأَيْضًا يَخَافُونَ مِنَ ٱلْعَالِي، وَفِي ٱلطَّرِيقِ أَهْوَالٌ، وَٱللَّوْزُ يُزْهِرُ، وَٱلْجُنْدُبُ يُسْتَثْقَلُ، وَٱلشَّهْوَةُ تَبْطُلُ. لِأَنَّ ٱلْإِنْسَانَ ذَاهِبٌ إِلَى بَيْتِهِ ٱلْأَبَدِيِّ، وَٱلنَّادِبُونَ يَطُوفُونَ فِي ٱلسُّوقِ. | ٥ 5 |
೫ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
قَبْلَ مَا يَنْفَصِمُ حَبْلُ ٱلْفِضَّةِ، أَوْ يَنْسَحِقُ كُوزُ ٱلذَّهَبِ، أَوْ تَنْكَسِرُ ٱلْجَرَّةُ عَلَى ٱلْعَيْنِ، أَوْ تَنْقَصِفُ ٱلْبَكَرَةُ عِنْدَ ٱلْبِئْرِ. | ٦ 6 |
೬ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
فَيَرْجِعُ ٱلتُّرَابُ إِلَى ٱلْأَرْضِ كَمَا كَانَ، وَتَرْجِعُ ٱلرُّوحُ إِلَى ٱللهِ ٱلَّذِي أَعْطَاهَا. | ٧ 7 |
೭ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
بَاطِلُ ٱلْأَبَاطِيلِ، قَالَ ٱلْجَامِعَةُ: ٱلْكُلُّ بَاطِلٌ. | ٨ 8 |
೮“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
بَقِيَ أَنَّ ٱلْجَامِعَةَ كَانَ حَكِيمًا، وَأَيْضًا عَلَّمَ ٱلشَّعْبَ عِلْمًا، وَوَزَنَ وَبَحَثَ وَأَتْقَنَ أَمْثَالًا كَثِيرَةً. | ٩ 9 |
೯ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
اَلْجَامِعَةُ طَلَبَ أَنْ يَجِدَ كَلِمَاتٍ مُسِرَّةً مَكْتُوبَةً بِٱلِٱسْتِقَامَةِ، كَلِمَاتِ حَقٍّ. | ١٠ 10 |
೧೦ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
كَلَامُ ٱلْحُكَمَاءِ كَٱلْمَنَاسِيسِ، وَكَأَوْتَادٍ مُنْغَرِزَةٍ، أَرْبَابُ ٱلْجَمَاعَاتِ، قَدْ أُعْطِيَتْ مِنْ رَاعٍ وَاحِدٍ. | ١١ 11 |
೧೧ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
وَبَقِيَ، فَمِنْ هَذَا يَاٱبْنِي تَحَذَّرْ: لِعَمَلِ كُتُبٍ كَثِيرَةٍ لَا نِهَايَةَ، وَٱلدَّرْسُ ٱلْكَثِيرُ تَعَبٌ لِلْجَسَدِ. | ١٢ 12 |
೧೨ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
فَلْنَسْمَعْ خِتَامَ ٱلْأَمْرِ كُلِّهِ: ٱتَّقِ ٱللهَ وَٱحْفَظْ وَصَايَاهُ، لِأَنَّ هَذَا هُوَ ٱلْإِنْسَانُ كُلُّهُ. | ١٣ 13 |
೧೩ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
لِأَنَّ ٱللهَ يُحْضِرُ كُلَّ عَمَلٍ إِلَى ٱلدَّيْنُونَةِ، عَلَى كُلِّ خَفِيٍّ، إِنْ كَانَ خَيْرًا أَوْ شَرًّا. | ١٤ 14 |
೧೪ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.