< اَلْجَامِعَةِ 12 >
فَٱذْكُرْ خَالِقَكَ فِي أَيَّامِ شَبَابِكَ، قَبْلَ أَنْ تَأْتِيَ أَيَّامُ ٱلشَّرِّ أَوْ تَجِيءَ ٱلسِّنُونَ إِذْ تَقُولُ: «لَيْسَ لِي فِيهَا سُرُورٌ». | ١ 1 |
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.
قَبْلَ مَا تَظْلُمُ ٱلشَّمْسُ وَٱلنُّورُ وَٱلْقَمَرُ وَٱلنُّجُومُ، وَتَرْجِعُ ٱلسُّحُبُ بَعْدَ ٱلْمَطَرِ. | ٢ 2 |
ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.
فِي يَوْمٍ يَتَزَعْزَعُ فِيهِ حَفَظَةُ ٱلْبَيْتِ، وَتَتَلَوَّى رِجَالُ ٱلْقُوَّةِ، وَتَبْطُلُ ٱلطَّوَاحِنُ لِأَنَّهَا قَلَّتْ، وَتُظْلِمُ ٱلنَّوَاظِرُ مِنَ ٱلشَّبَابِيكِ. | ٣ 3 |
ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
وَتُغْلَقُ ٱلْأَبْوَابُ فِي ٱلسُّوقِ. حِينَ يَنْخَفِضُ صَوْتُ ٱلْمِطْحَنَةِ، وَيَقُومُ لِصَوْتِ ٱلْعُصْفُورِ، وَتُحَطُّ كُلُّ بَنَاتِ ٱلْغِنَاءِ. | ٤ 4 |
ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.
وَأَيْضًا يَخَافُونَ مِنَ ٱلْعَالِي، وَفِي ٱلطَّرِيقِ أَهْوَالٌ، وَٱللَّوْزُ يُزْهِرُ، وَٱلْجُنْدُبُ يُسْتَثْقَلُ، وَٱلشَّهْوَةُ تَبْطُلُ. لِأَنَّ ٱلْإِنْسَانَ ذَاهِبٌ إِلَى بَيْتِهِ ٱلْأَبَدِيِّ، وَٱلنَّادِبُونَ يَطُوفُونَ فِي ٱلسُّوقِ. | ٥ 5 |
ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.
قَبْلَ مَا يَنْفَصِمُ حَبْلُ ٱلْفِضَّةِ، أَوْ يَنْسَحِقُ كُوزُ ٱلذَّهَبِ، أَوْ تَنْكَسِرُ ٱلْجَرَّةُ عَلَى ٱلْعَيْنِ، أَوْ تَنْقَصِفُ ٱلْبَكَرَةُ عِنْدَ ٱلْبِئْرِ. | ٦ 6 |
ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.
فَيَرْجِعُ ٱلتُّرَابُ إِلَى ٱلْأَرْضِ كَمَا كَانَ، وَتَرْجِعُ ٱلرُّوحُ إِلَى ٱللهِ ٱلَّذِي أَعْطَاهَا. | ٧ 7 |
ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.
بَاطِلُ ٱلْأَبَاطِيلِ، قَالَ ٱلْجَامِعَةُ: ٱلْكُلُّ بَاطِلٌ. | ٨ 8 |
“ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.
بَقِيَ أَنَّ ٱلْجَامِعَةَ كَانَ حَكِيمًا، وَأَيْضًا عَلَّمَ ٱلشَّعْبَ عِلْمًا، وَوَزَنَ وَبَحَثَ وَأَتْقَنَ أَمْثَالًا كَثِيرَةً. | ٩ 9 |
ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.
اَلْجَامِعَةُ طَلَبَ أَنْ يَجِدَ كَلِمَاتٍ مُسِرَّةً مَكْتُوبَةً بِٱلِٱسْتِقَامَةِ، كَلِمَاتِ حَقٍّ. | ١٠ 10 |
ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.
كَلَامُ ٱلْحُكَمَاءِ كَٱلْمَنَاسِيسِ، وَكَأَوْتَادٍ مُنْغَرِزَةٍ، أَرْبَابُ ٱلْجَمَاعَاتِ، قَدْ أُعْطِيَتْ مِنْ رَاعٍ وَاحِدٍ. | ١١ 11 |
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.
وَبَقِيَ، فَمِنْ هَذَا يَاٱبْنِي تَحَذَّرْ: لِعَمَلِ كُتُبٍ كَثِيرَةٍ لَا نِهَايَةَ، وَٱلدَّرْسُ ٱلْكَثِيرُ تَعَبٌ لِلْجَسَدِ. | ١٢ 12 |
ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.
فَلْنَسْمَعْ خِتَامَ ٱلْأَمْرِ كُلِّهِ: ٱتَّقِ ٱللهَ وَٱحْفَظْ وَصَايَاهُ، لِأَنَّ هَذَا هُوَ ٱلْإِنْسَانُ كُلُّهُ. | ١٣ 13 |
ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.
لِأَنَّ ٱللهَ يُحْضِرُ كُلَّ عَمَلٍ إِلَى ٱلدَّيْنُونَةِ، عَلَى كُلِّ خَفِيٍّ، إِنْ كَانَ خَيْرًا أَوْ شَرًّا. | ١٤ 14 |
ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.