< اَلْجَامِعَةِ 8 >
مَنْ كَٱلْحَكِيمِ؟ وَمَنْ يَفْهَمُ تَفْسِيرَ أَمْرٍ؟ حِكْمَةُ ٱلْإِنْسَانِ تُنِيرُ وَجْهَهُ، وَصَلَابَةُ وَجْهِهِ تَتَغَيَّرُ. | ١ 1 |
೧ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
أَنَا أَقُولُ: ٱحْفَظْ أَمْرَ ٱلْمَلِكِ، وَذَاكَ بِسَبَبِ يَمِينِ ٱللهِ. | ٢ 2 |
೨ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
لَا تَعْجَلْ إِلَى ٱلذَّهَابِ مِنْ وَجْهِهِ. لَا تَقِفْ فِي أَمْرٍ شَاقٍّ، لِأَنَّهُ يَفْعَلُ كُلَّ مَا شَاءَ. | ٣ 3 |
೩ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
حَيْثُ تَكُونُ كَلِمَةُ ٱلْمَلِكِ فَهُنَاكَ سُلْطَانٌ. وَمَنْ يَقُولُ لَهُ: «مَاذَا تَفْعَلُ؟». | ٤ 4 |
೪ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
حَافِظُ ٱلْوَصِيَّةِ لَا يَشْعُرُ بِأَمْرٍ شَاقٍّ، وَقَلْبُ ٱلْحَكِيمِ يَعْرِفُ ٱلْوَقْتَ وَٱلْحُكْمَ. | ٥ 5 |
೫ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
لِأَنَّ لِكُلِّ أَمْرٍ وَقْتًا وَحُكْمًا. لِأَنَّ شَرَّ ٱلْإِنْسَانِ عَظِيمٌ عَلَيْهِ، | ٦ 6 |
೬ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
لِأَنَّهُ لَا يَعْلَمُ مَا سَيَكُونُ. لِأَنَّهُ مَنْ يُخْبِرُهُ كَيْفَ يَكُونُ؟ | ٧ 7 |
೭ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
لَيْسَ لِإِنْسَانٍ سُلْطَانٌ عَلَى ٱلرُّوحِ لِيُمْسِكَ ٱلرُّوحَ، وَلَا سُلْطَانٌ عَلَى يَوْمِ ٱلْمَوْتِ، وَلَا تَخْلِيَةٌ فِي ٱلْحَرْبِ، وَلَا يُنَجِّي ٱلشَّرُّ أَصْحَابَهُ. | ٨ 8 |
೮ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
كُلُّ هَذَا رَأَيْتُهُ إِذْ وَجَّهْتُ قَلْبِي لِكُلِّ عَمَلٍ عُمِلَ تَحْتَ ٱلشَّمْسِ، وَقْتَمَا يَتَسَلَّطُ إِنْسَانٌ عَلَى إِنْسَانٍ لِضَرَرِ نَفْسِهِ. | ٩ 9 |
೯ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
وَهَكَذَا رَأَيْتُ أَشْرَارًا يُدْفَنُونَ وَضُمُّوا، وَٱلَّذِينَ عَمِلُوا بِٱلْحَقِّ ذَهَبُوا مِنْ مَكَانِ ٱلْقُدْسِ وَنُسُوا فِي ٱلْمَدِينَةِ. هَذَا أَيْضًا بَاطِلٌ. | ١٠ 10 |
೧೦ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
لِأَنَّ ٱلْقَضَاءَ عَلَى ٱلْعَمَلِ ٱلرَّدِيءِ لَا يُجْرَى سَرِيعًا، فَلِذَلِكَ قَدِ ٱمْتَلَأَ قَلْبُ بَنِي ٱلْبَشَرِ فِيهِمْ لِفَعْلِ ٱلشَّرِّ. | ١١ 11 |
೧೧ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
اَلْخَاطِئُ وَإِنْ عَمِلَ شَرًّا مِئَةَ مَرَّةٍ وَطَالَتْ أَيَّامُهُ، إِلَّا أَنِّي أَعْلَمُ أَنَّهُ يَكُونُ خَيْرٌ لِلْمُتَّقِينَ ٱللهَ ٱلَّذِينَ يَخَافُونَ قُدَّامَهُ. | ١٢ 12 |
೧೨ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
وَلَا يَكُونُ خَيْرٌ لِلشِّرِّيرِ، وَكَٱلظِّلِّ لَا يُطِيلُ أَيَّامَهُ لِأَنَّهُ لَا يَخْشَى قُدَّامَ ٱللهِ. | ١٣ 13 |
೧೩ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
يُوجَدُ بَاطِلٌ يُجْرَى عَلَى ٱلْأَرْضِ: أَنْ يُوجَدَ صِدِّيقُونَ يُصِيبُهُمْ مِثْلَ عَمَلِ ٱلْأَشْرَارِ، وَيُوجَدُ أَشْرَارٌ يُصِيبُهُمْ مِثْلَ عَمَلِ ٱلصِّدِّيقِينَ. فَقُلْتُ: إِنَّ هَذَا أَيْضًا بَاطِلٌ. | ١٤ 14 |
೧೪ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
فَمَدَحْتُ ٱلْفَرَحَ، لِأَنَّهُ لَيْسَ لِلْإِنْسَانِ خَيْرٌ تَحْتَ ٱلشَّمْسِ، إِلَّا أَنْ يَأْكُلَ وَيَشْرَبَ وَيَفْرَحَ، وَهَذَا يَبْقَى لَهُ فِي تَعَبِهِ مُدَّةَ أَيَّامِ حَيَاتِهِ ٱلَّتِي يُعْطِيهِ ٱللهُ إِيَّاهَا تَحْتَ ٱلشَّمْسِ. | ١٥ 15 |
೧೫ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
لَمَّا وَجَّهْتُ قَلْبِي لِأَعْرِفَ ٱلْحِكْمَةَ، وَأَنْظُرَ ٱلْعَمَلَ ٱلَّذِي عُمِلَ عَلَى ٱلْأَرْضِ، وَأَنَّهُ نَهَارًا وَلَيْلًا لَا يَرَى ٱلنَّوْمَ بِعَيْنَيْهِ، | ١٦ 16 |
೧೬ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
رَأَيْتُ كُلَّ عَمَلِ ٱللهِ أَنَّ ٱلْإِنْسَانَ لَا يَسْتَطِيعُ أَنْ يَجِدَ ٱلْعَمَلَ ٱلَّذِي عُمِلَ تَحْتَ ٱلشَّمْسِ. مَهْمَا تَعِبَ ٱلْإِنْسَانُ فِي ٱلطَّلَبِ فَلَا يَجِدُهُ، وَٱلْحَكِيمُ أَيْضًا، وَإِنْ قَالَ بِمَعْرِفَتِهِ، لَا يَقْدِرُ أَنْ يَجِدَهُ. | ١٧ 17 |
೧೭ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”