< عِبرانِيّين 11 >

وَأَمَّا ٱلْإِيمَانُ فَهُوَ ٱلثِّقَةُ بِمَا يُرْجَى وَٱلْإِيقَانُ بِأُمُورٍ لَا تُرَى. ١ 1
ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.
فَإِنَّهُ فِي هَذَا شُهِدَ لِلْقُدَمَاءِ. ٢ 2
ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.
بِٱلْإِيمَانِ نَفْهَمُ أَنَّ ٱلْعَالَمِينَ أُتْقِنَتْ بِكَلِمَةِ ٱللهِ، حَتَّى لَمْ يَتَكَوَّنْ مَا يُرَى مِمَّا هُوَ ظَاهِرٌ. (aiōn g165) ٣ 3
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. (aiōn g165)
بِٱلْإِيمَانِ قَدَّمَ هَابِيلُ لِلهِ ذَبِيحَةً أَفْضَلَ مِنْ قَايِينَ. فَبِهِ شُهِدَ لَهُ أَنَّهُ بَارٌّ، إِذْ شَهِدَ ٱللهُ لِقَرَابِينِهِ. وَبِهِ، وَإِنْ مَاتَ، يَتَكَلَّمْ بَعْدُ! ٤ 4
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
بِٱلْإِيمَانِ نُقِلَ أَخْنُوخُ لِكَيْ لَا يَرَى ٱلْمَوْتَ، وَلَمْ يُوجَدْ لِأَنَّ ٱللهَ نَقَلَهُ. إِذْ قَبْلَ نَقْلِهِ شُهِدَ لَهُ بِأَنَّهُ قَدْ أَرْضَى ٱللهَ. ٥ 5
ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
وَلَكِنْ بِدُونِ إِيمَانٍ لَا يُمْكِنُ إِرْضَاؤُهُ، لِأَنَّهُ يَجِبُ أَنَّ ٱلَّذِي يَأْتِي إِلَى ٱللهِ يُؤْمِنُ بِأَنَّهُ مَوْجُودٌ، وَأَنَّهُ يُجَازِي ٱلَّذِينَ يَطْلُبُونَهُ. ٦ 6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
بِٱلْإِيمَانِ نُوحٌ لَمَّا أُوحِيَ إِلَيْهِ عَنْ أُمُورٍ لَمْ تُرَ بَعْدُ خَافَ، فَبَنَى فُلْكًا لِخَلَاصِ بَيْتِهِ، فَبِهِ دَانَ ٱلْعَالَمَ، وَصَارَ وَارِثًا لِلْبِرِّ ٱلَّذِي حَسَبَ ٱلْإِيمَانِ. ٧ 7
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
بِٱلْإِيمَانِ إِبْرَاهِيمُ لَمَّا دُعِيَ أَطَاعَ أَنْ يَخْرُجَ إِلَى ٱلْمَكَانِ ٱلَّذِي كَانَ عَتِيدًا أَنْ يَأْخُذَهُ مِيرَاثًا، فَخَرَجَ وَهُوَ لَا يَعْلَمُ إِلَى أَيْنَ يَأْتِي. ٨ 8
ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
بِٱلْإِيمَانِ تَغَرَّبَ فِي أَرْضِ ٱلْمَوْعِدِ كَأَنَّهَا غَرِيبَةٌ، سَاكِنًا فِي خِيَامٍ مَعَ إِسْحَاقَ وَيَعْقُوبَ ٱلْوَارِثَيْنِ مَعَهُ لِهَذَا ٱلْمَوْعِدِ عَيْنِهِ. ٩ 9
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
لِأَنَّهُ كَانَ يَنْتَظِرُ ٱلْمَدِينَةَ ٱلَّتِي لَهَا ٱلْأَسَاسَاتُ، ٱلَّتِي صَانِعُهَا وَبَارِئُهَا ٱللهُ. ١٠ 10
೧೦ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
بِٱلْإِيمَانِ سَارَةُ نَفْسُهَا أَيْضًا أَخَذَتْ قُدْرَةً عَلَى إِنْشَاءِ نَسْلٍ، وَبَعْدَ وَقْتِ ٱلسِّنِّ وَلَدَتْ، إِذْ حَسِبَتِ ٱلَّذِي وَعَدَ صَادِقًا. ١١ 11
೧೧ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.
لِذَلِكَ وُلِدَ أَيْضًا مِنْ وَاحِدٍ، وَذَلِكَ مِنْ مُمَاتٍ، مِثْلُ نُجُومِ ٱلسَّمَاءِ فِي ٱلْكَثْرَةِ، وَكَالرَّمْلِ ٱلَّذِي عَلَى شَاطِىءِ ٱلْبَحْرِ ٱلَّذِي لَا يُعَدُّ. ١٢ 12
೧೨ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.
فِي ٱلْإِيمَانِ مَاتَ هَؤُلَاءِ أَجْمَعُونَ، وَهُمْ لَمْ يَنَالُوا ٱلْمَوَاعِيدَ، بَلْ مِنْ بَعِيدٍ نَظَرُوهَا وَصَدَّقُوهَا وَحَيَّوْهَا، وَأَقَرُّوا بِأَنَّهُمْ غُرَبَاءُ وَنُزَلَاءُ عَلَى ٱلْأَرْضِ. ١٣ 13
೧೩ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
فَإِنَّ ٱلَّذِينَ يَقُولُونَ مِثْلَ هَذَا يُظْهِرُونَ أَنَّهُمْ يَطْلُبُونَ وَطَنًا. ١٤ 14
೧೪ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.
فَلَوْ ذَكَرُوا ذَلِكَ ٱلَّذِي خَرَجُوا مِنْهُ، لَكَانَ لَهُمْ فُرْصَةٌ لِلرُّجُوعِ. ١٥ 15
೧೫ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.
وَلَكِنِ ٱلْآنَ يَبْتَغُونَ وَطَنًا أَفْضَلَ، أَيْ سَمَاوِيًّا. لِذَلِكَ لَا يَسْتَحِي بِهِمِ ٱللهُ أَنْ يُدْعَى إِلَهَهُمْ، لِأَنَّهُ أَعَدَّ لَهُمْ مَدِينَةً. ١٦ 16
೧೬ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
بِٱلْإِيمَانِ قَدَّمَ إِبْرَاهِيمُ إِسْحَاقَ وَهُوَ مُجَرَّبٌ. قَدَّمَ ٱلَّذِي قَبِلَ ٱلْمَوَاعِيدَ، وَحِيدَهُ ١٧ 17
೧೭ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
ٱلَّذِي قِيلَ لَهُ: «إِنَّهُ بِإِسْحَاقَ يُدْعَى لَكَ نَسْلٌ». ١٨ 18
೧೮
إِذْ حَسِبَ أَنَّ ٱللهَ قَادِرٌ عَلَى ٱلْإِقَامَةِ مِنَ ٱلْأَمْوَاتِ أَيْضًا، ٱلَّذِينَ مِنْهُمْ أَخَذَهُ أَيْضًا فِي مِثَالٍ. ١٩ 19
೧೯ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.
بِٱلْإِيمَانِ إِسْحَاقُ بَارَكَ يَعْقُوبَ وَعِيسُو مِنْ جِهَةِ أُمُورٍ عَتِيدَةٍ. ٢٠ 20
೨೦ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
بِٱلْإِيمَانِ يَعْقُوبُ عِنْدَ مَوْتِهِ بَارَكَ كُلَّ وَاحِدٍ مِنِ ٱبْنَيْ يُوسُفَ، وَسَجَدَ عَلَى رَأْسِ عَصَاهُ. ٢١ 21
೨೧ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
بِٱلْإِيمَانِ يُوسُفُ عِنْدَ مَوْتِهِ ذَكَرَ خُرُوجَ بَنِي إِسْرَائِيلَ وَأَوْصَى مِنْ جِهَةِ عِظَامِهِ. ٢٢ 22
೨೨ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
بِٱلْإِيمَانِ مُوسَى، بَعْدَمَا وُلِدَ، أَخْفَاهُ أَبَوَاهُ ثَلَاثَةَ أَشْهُرٍ، لِأَنَّهُمَا رَأَيَا ٱلصَّبِيَّ جَمِيلًا، وَلَمْ يَخْشَيَا أَمْرَ ٱلْمَلِكِ. ٢٣ 23
೨೩ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
بِٱلْإِيمَانِ مُوسَى لَمَّا كَبِرَ أَبَى أَنْ يُدْعَى ٱبْنَ ٱبْنَةِ فِرْعَوْنَ، ٢٤ 24
೨೪ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
مُفَضِّلًا بِٱلْأَحْرَى أَنْ يُذَلَّ مَعَ شَعْبِ ٱللهِ عَلَى أَنْ يَكُونَ لَهُ تَمَتُّعٌ وَقْتِيٌّ بِٱلْخَطِيَّةِ، ٢٥ 25
೨೫ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
حَاسِبًا عَارَ ٱلْمَسِيحِ غِنًى أَعْظَمَ مِنْ خَزَائِنِ مِصْرَ، لِأَنَّهُ كَانَ يَنْظُرُ إِلَى ٱلْمُجَازَاةِ. ٢٦ 26
೨೬ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
بِٱلْإِيمَانِ تَرَكَ مِصْرَ غَيْرَ خَائِفٍ مِنْ غَضَبِ ٱلْمَلِكِ،لِأَنَّهُ تَشَدَّدَ، كَأَنَّهُ يَرَى مَنْ لَا يُرَى. ٢٧ 27
೨೭ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
بِٱلْإِيمَانِ صَنَعَ ٱلْفِصْحَ وَرَشَّ ٱلدَّمَ لِئَلَّا يَمَسَّهُمُ ٱلَّذِي أَهْلَكَ ٱلْأَبْكَارَ. ٢٨ 28
೨೮ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
بِٱلْإِيمَانِ ٱجْتَازُوا فِي ٱلْبَحْرِ ٱلْأَحْمَرِ كَمَا فِي ٱلْيَابِسَةِ، ٱلْأَمْرُ ٱلَّذِي لَمَّا شَرَعَ فِيهِ ٱلْمِصْرِيُّونَ غَرِقُوا. ٢٩ 29
೨೯ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
بِٱلْإِيمَانِ سَقَطَتْ أَسْوَارُ أَرِيحَا بَعْدَمَا طِيفَ حَوْلَهَا سَبْعَةَ أَيَّامٍ. ٣٠ 30
೩೦ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
بِٱلْإِيمَانِ رَاحَابُ ٱلزَّانِيَةُ لَمْ تَهْلِكْ مَعَ ٱلْعُصَاةِ، إِذْ قَبِلَتِ ٱلْجَاسُوسَيْنِ بِسَلَامٍ. ٣١ 31
೩೧ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
وَمَاذَا أَقُولُ أَيْضًا؟ لِأَنَّهُ يُعْوِزُنِي ٱلْوَقْتُ إِنْ أَخْبَرْتُ عَنْ جِدْعُونَ، وَبَارَاقَ، وَشَمْشُونَ، وَيَفْتَاحَ، وَدَاوُدَ، وَصَمُوئِيلَ، وَٱلْأَنْبِيَاءِ، ٣٢ 32
೩೨ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
ٱلَّذِينَ بِٱلْإِيمَانِ: قَهَرُوا مَمَالِكَ، صَنَعُوا بِرًّا، نَالُوا مَوَاعِيدَ، سَدُّوا أَفْوَاهَ أُسُودٍ، ٣٣ 33
೩೩ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
أَطْفَأُوا قُوَّةَ ٱلنَّارِ، نَجَوْا مِنْ حَدِّ ٱلسَّيْفِ، تَقَوَّوْا مِنْ ضَعْفٍ، صَارُوا أَشِدَّاءَ فِي ٱلْحَرْبِ، هَزَمُوا جُيُوشَ غُرَبَاءَ، ٣٤ 34
೩೪ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
أَخَذَتْ نِسَاءٌ أَمْوَاتَهُنَّ بِقِيَامَةٍ. وَآخَرُونَ عُذِّبُوا وَلَمْ يَقْبَلُوا ٱلنَّجَاةَ لِكَيْ يَنَالُوا قِيَامَةً أَفْضَلَ. ٣٥ 35
೩೫ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
وَآخَرُونَ تَجَرَّبُوا فِي هُزُءٍ وَجَلْدٍ، ثُمَّ فِي قُيُودٍ أَيْضًا وَحَبْسٍ. ٣٦ 36
೩೬ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
رُجِمُوا، نُشِرُوا، جُرِّبُوا، مَاتُوا قَتْلًا بِٱلسَّيْفِ، طَافُوا فِي جُلُودِ غَنَمٍ وَجُلُودِ مِعْزَى، مُعْتَازِينَ، مَكْرُوبِينَ، مُذَلِّينَ، ٣٧ 37
೩೭ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
وَهُمْ لَمْ يَكُنِ ٱلْعَالَمُ مُسْتَحِقًّا لَهُمْ. تَائِهِينَ فِي بَرَارِيَّ وَجِبَالٍ وَمَغَايِرَ وَشُقُوقِ ٱلْأَرْضِ. ٣٨ 38
೩೮ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
فَهَؤُلَاءِ كُلُّهُمْ، مَشْهُودًا لَهُمْ بِٱلْإِيمَانِ، لَمْ يَنَالُوا ٱلْمَوْعِدَ، ٣٩ 39
೩೯ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.
إِذْ سَبَقَ ٱللهُ فَنَظَرَ لَنَا شَيْئًا أَفْضَلَ، لِكَيْ لَا يُكْمَلُوا بِدُونِنَا. ٤٠ 40
೪೦ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.

< عِبرانِيّين 11 >