< إِشَعْيَاءَ 37 >
فَلَمَّا سَمِعَ ٱلْمَلِكُ حَزَقِيَّا ذَلِكَ مَزَّقَ ثِيَابَهُ وَتَغَطَّى بِمِسْحٍ وَدَخَلَ بَيْتَ ٱلرَّبِّ. | ١ 1 |
೧ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
وَأَرْسَلَ أَلِيَاقِيمَ ٱلَّذِي عَلَى ٱلْبَيْتِ وَشَبْنَةَ ٱلْكَاتِبَ وَشُيُوخَ ٱلْكَهَنَةِ مُتَغَطِّينَ بِمُسُوحٍ إِلَى إِشَعْيَاءَ بْنِ آمُوصَ ٱلنَّبِيِّ. | ٢ 2 |
೨ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
فَقَالُوا لَهُ: «هَكَذَا يَقُولُ حَزَقِيَّا: هَذَا ٱلْيَوْمُ يَوْمُ شِدَّةٍ وَتَأْدِيبٍ وَإِهَانَةٍ، لِأَنَّ ٱلْأَجِنَّةَ دَنَتْ إِلَى ٱلْمَوْلِدِ وَلَا قُوَّةَ عَلَى ٱلْوِلَادَةِ. | ٣ 3 |
೩ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
لَعَلَّ ٱلرَّبَّ إِلَهَكَ يَسْمَعُ كَلَامَ رَبْشَاقَى ٱلَّذِي أَرْسَلَهُ مَلِكُ أَشُّورَ سَيِّدُهُ لِيُعَيِّرَ ٱلْإِلَهَ ٱلْحَيَّ، فَيُوَبِّخَ عَلَى ٱلْكَلَامِ ٱلَّذِي سَمِعَهُ ٱلرَّبُّ إِلَهُكَ. فَٱرْفَعْ صَلَاةً لِأَجْلِ ٱلْبَقِيَّةِ ٱلْمَوْجُودَةِ». | ٤ 4 |
೪ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.
فَجَاءَ عَبِيدُ ٱلْمَلِكِ حَزَقِيَّا إِلَى إِشَعْيَاءَ. | ٥ 5 |
೫ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,
فَقَالَ لَهُمْ إِشَعْيَاءُ: «هَكَذَا تَقُولُونَ لِسَيِّدِكُمْ: هَكَذَا يَقُولُ ٱلرَّبُّ: لَا تَخَفْ بِسَبَبِ ٱلْكَلَامِ ٱلَّذِي سَمِعْتَهُ، ٱلَّذِي جَدَّفَ عَلَيَّ بِهِ غِلْمَانُ مَلِكِ أَشُّورَ. | ٦ 6 |
೬“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
هَأَنَذَا أَجْعَلُ فِيهِ رُوحًا فَيَسْمَعُ خَبَرًا وَيَرْجِعُ إِلَى أَرْضِهِ، وَأُسْقِطُهُ بِٱلسَّيْفِ فِي أَرْضِهِ». | ٧ 7 |
೭ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.
فَرَجَعَ رَبْشَاقَى وَوَجَدَ مَلِكَ أَشُّورَ يُحَارِبُ لِبْنَةَ، لِأَنَّهُ سَمِعَ أَنَّهُ ٱرْتَحَلَ عَنْ لَخِيشَ. | ٨ 8 |
೮ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
وَسَمِعَ عَنْ تِرْهَاقَةَ مَلِكِ كُوشَ قَوْلًا: «قَدْ خَرَجَ لِيُحَارِبَكَ». فَلَمَّا سَمِعَ أَرْسَلَ رُسُلًا إِلَى حَزَقِيَّا قَائِلًا: | ٩ 9 |
೯ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,
«هَكَذَا تُكَلِّمُونَ حَزَقِيَّا مَلِكَ يَهُوذَا قَائِلِينَ: لَا يَخْدَعْكَ إِلَهُكَ ٱلَّذِي أَنْتَ مُتَوَكِّلٌ عَلَيْهِ، قَائِلًا: لَا تُدْفَعُ أُورُشَلِيمُ إِلَى يَدِ مَلِكِ أَشُّورَ. | ١٠ 10 |
೧೦“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
إِنَّكَ قَدْ سَمِعْتَ مَا فَعَلَ مُلُوكُ أَشُّورَ بِجَمِيعِ ٱلْأَرَاضِي لِتَحْرِيمِهَا. وَهَلْ تَنْجُو أَنْتَ؟ | ١١ 11 |
೧೧ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
هَلْ أَنْقَذَ آلِهَةُ ٱلْأُمَمِ هَؤُلَاءِ ٱلَّذِينَ أَهْلَكَهُمْ آبَائِي، جُوزَانَ وَحَارَانَ وَرَصَفَ وَبَنِي عَدَنَ، ٱلَّذِينَ فِي تَلَسَّارَ؟ | ١٢ 12 |
೧೨ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
أَيْنَ مَلِكُ حَمَاةَ وَمَلِكُ أَرْفَادَ وَمَلِكُ مَدِينَةِ سَفَرْوَايِمَ وَهَيْنَعَ وَعِوَّا؟». | ١٣ 13 |
೧೩ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
فَأَخَذَ حَزَقِيَّا ٱلرَّسَائِلَ مِنْ يَدِ ٱلرُّسُلِ وَقَرَأَهَا، ثُمَّ صَعِدَ إِلَى بَيْتِ ٱلرَّبِّ، وَنَشَرَهَا حَزَقِيَّا أَمَامَ ٱلرَّبِّ، | ١٤ 14 |
೧೪ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
وَصَلَّى حَزَقِيَّا إِلَى ٱلرَّبِّ قَائِلًا: | ١٥ 15 |
೧೫ಹಿಜ್ಕೀಯನು ಯೆಹೋವನನ್ನು ಕುರಿತು
«يَارَبَّ ٱلْجُنُودِ، إِلَهَ إِسْرَائِيلَ ٱلْجَالِسَ فَوْقَ ٱلْكَرُوبِيمِ، أَنْتَ هُوَ ٱلْإِلَهُ وَحْدَكَ لِكُلِّ مَمَالِكِ ٱلْأَرْضِ. أَنْتَ صَنَعْتَ ٱلسَّمَاوَاتِ وَٱلْأَرْضَ. | ١٦ 16 |
೧೬“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.
أَمِلْ يَارَبُّ أُذُنَكَ وَٱسْمَعِ. ٱفْتَحْ يَارَبُّ عَيْنَيْكَ وَٱنْظُرْ، وَٱسْمَعْ كُلَّ كَلَامِ سَنْحَارِيبَ ٱلَّذِي أَرْسَلَهُ لِيُعَيِّرَ ٱللهَ ٱلْحَيَّ. | ١٧ 17 |
೧೭ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
حَقًّا يَارَبُّ إِنَّ مُلُوكَ أَشُّورَ قَدْ خَرَّبُوا كُلَّ ٱلْأُمَمِ وَأَرْضَهُمْ، | ١٨ 18 |
೧೮ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.
وَدَفَعُوا آلِهَتَهُمْ إِلَى ٱلنَّارِ، لِأَنَّهُمْ لَيْسُوا آلِهَةً بَلْ صَنْعَةُ أَيْدِي ٱلنَّاسِ، خَشَبٌ وَحَجَرٌ، فَأَبَادُوهُمْ. | ١٩ 19 |
೧೯ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
وَٱلْآنَ أَيُّهَا ٱلرَّبُّ إِلَهُنَا خَلِّصْنَا مِنْ يَدِهِ، فَتَعْلَمَ مَمَالِكُ ٱلْأَرْضِ كُلِّهَا أَنَّكَ أَنْتَ ٱلرَّبُّ وَحْدَكَ». | ٢٠ 20 |
೨೦ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”
فَأَرْسَلَ إِشَعْيَاءُ بْنُ آمُوصَ إِلَى حَزَقِيَّا قَائِلًا: «هَكَذَا يَقُولُ ٱلرَّبُّ إِلَهُ إِسْرَائِيلَ ٱلَّذِي صَلَّيْتَ إِلَيْهِ مِنْ جِهَةِ سَنْحَارِيبَ مَلِكِ أَشُّورَ: | ٢١ 21 |
೨೧ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
هَذَا هُوَ ٱلْكَلَامُ ٱلَّذِي تَكَلَّمَ بِهِ ٱلرَّبُّ عَلَيْهِ: اِحْتَقَرَتْكَ. ٱسْتَهْزَأَتْ بِكَ ٱلْعَذْرَاءُ ٱبْنَةُ صِهْيَوْنَ. نَحْوَكَ أَنْغَضَتِ ٱبْنَةُ أُورُشَلِيمَ رَأْسَهَا. | ٢٢ 22 |
೨೨ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
مَنْ عَيَّرْتَ وَجَدَّفْتَ، وَعَلَى مَنْ عَلَّيْتَ صَوْتًا، وَقَدْ رَفَعْتَ إِلَى ٱلْعَلَاءِ عَيْنَيْكَ؟ عَلَى قُدُّوسِ إِسْرَائِيلَ! | ٢٣ 23 |
೨೩ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
عَنْ يَدِ عَبِيدِكَ عَيَّرْتَ ٱلسَّيِّدَ، وَقُلْتَ: بِكَثْرَةِ مَرْكَبَاتِي قَدْ صَعِدْتُ إِلَى عُلُوِّ ٱلْجِبَالِ، عِقَابِ لُبْنَانَ، فَأَقْطَعُ أَرْزَهُ ٱلطَّوِيلَ وَأَفْضَلَ سَرْوِهِ، وَأَدْخُلُ أَقْصَى عُلُوِّهِ، وَعْرَ كَرْمَلِهِ. | ٢٤ 24 |
೨೪ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
أَنَا قَدْ حَفَرْتُ وَشَرِبْتُ مِيَاهًا، وَأُنَشِّفُ بِبَطْنِ قَدَمِي جَمِيعَ خُلْجَانِ مِصْرَ. | ٢٥ 25 |
೨೫ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.
أَلَمْ تَسْمَعْ؟ مُنْذُ ٱلْبَعِيدِ صَنَعْتُهُ. مُنْذُ ٱلْأَيَّامِ ٱلْقَدِيمَةِ صَوَّرْتُهُ. ٱلْآنَ أَتَيْتُ بِهِ. فَتَكُونُ لِتَخْرِيبِ مُدُنٍ مُحَصَّنَةٍ حَتَّى تَصِيرَ رَوَابِيَ خَرِبَةً. | ٢٦ 26 |
೨೬ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
فَسُكَّانُهَا قِصَارُ ٱلْأَيْدِي قَدِ ٱرْتَاعُوا وَخَجِلُوا. صَارُوا كَعُشْبِ ٱلْحَقْلِ وَكَٱلنَّبَاتِ ٱلْأَخْضَرِ، كَحَشِيشِ ٱلسُّطُوحِ، وَكَٱلْمَلْفُوحِ قَبْلَ نُمُوِّهِ. | ٢٧ 27 |
೨೭ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
وَلَكِنَّنِي عَالِمٌ بِجُلُوسِكَ وَخُرُوجِكَ وَدُخُولِكَ وَهَيَجَانِكَ عَلَيَّ. | ٢٨ 28 |
೨೮ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.
لِأَنَّ هَيَجَانَكَ عَلَيَّ وَعَجْرَفَتَكَ قَدْ صَعِدَا إِلَى أُذُنَيَّ، أَضَعُ خِزَامَتِي فِي أَنْفِكَ وَشَكِيمَتِي فِي شَفَتَيْكَ، وَأَرُدُّكَ فِي ٱلطَّرِيقِ ٱلَّذِي جِئْتَ فِيهِ. | ٢٩ 29 |
೨೯ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
«وَهَذِهِ لَكَ ٱلْعَلَامَةُ: تَأْكُلُونَ هَذِهِ ٱلسَّنَةَ زِرِّيعًا، وَفِي ٱلسَّنَةِ ٱلثَّانِيَةِ خِلْفَةً، وَأَمَّا ٱلسَّنَةُ ٱلثَّالِثَةُ فَفِيهَا تَزْرَعُونَ وَتَحْصِدُونَ، وَتَغْرِسُونَ كُرُومًا وَتَأْكُلُونَ أَثْمَارَهَا. | ٣٠ 30 |
೩೦ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
وَيَعُودُ ٱلنَّاجُونَ مِنْ بَيْتِ يَهُوذَا ٱلْبَاقُونَ يَتَأَصَّلُونَ إِلَى أَسْفَلَ، وَيَصْنَعُونَ ثَمَرًا إِلَى مَا فَوْقُ. | ٣١ 31 |
೩೧ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
لِأَنَّهُ مِنْ أُورُشَلِيمَ تَخْرُجُ بَقِيَّةٌ، وَنَاجُونَ مِنْ جَبَلِ صِهْيَوْنَ. غَيْرَةُ رَبِّ ٱلْجُنُودِ تَصْنَعُ هَذَا. | ٣٢ 32 |
೩೨ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
«لِذَلِكَ هَكَذَا يَقُولُ ٱلرَّبُّ عَنْ مَلِكِ أَشُّورَ: لَا يَدْخُلُ هَذِهِ ٱلْمَدِينَةَ، وَلَا يَرْمِي هُنَاكَ سَهْمًا، وَلَا يَتَقَدَّمُ عَلَيْهَا بِتُرْسٍ، وَلَا يُقِيمُ عَلَيْهَا مِتْرَسَةً. | ٣٣ 33 |
೩೩ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.
فِي ٱلطَّرِيقِ ٱلَّذِي جَاءَ فِيهِ يَرْجِعُ، وَإِلَى هَذِهِ ٱلْمَدِينَةِ لَا يَدْخُلُ، يَقُولُ ٱلرَّبُّ. | ٣٤ 34 |
೩೪ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.
وَأُحَامِي عَنْ هَذِهِ ٱلْمَدِينَةِ لِأُخَلِّصَهَا مِنْ أَجْلِ نَفْسِي، وَمِنْ أَجْلِ دَاوُدَ عَبْدِي». | ٣٥ 35 |
೩೫ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.
فَخَرَجَ مَلَاكُ ٱلرَّبِّ وَضَرَبَ مِنْ جَيْشِ أَشُّورَ مِئَةً وَخَمْسَةً وَثَمَانِينَ أَلْفًا. فَلَمَّا بَكَّرُوا صَبَاحًا إِذَا هُمْ جَمِيعًا جُثَثٌ مَيِّتَةٌ. | ٣٦ 36 |
೩೬ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
فَٱنْصَرَفَ سَنْحَارِيبُ مَلِكُ أَشُّورَ وَذَهَبَ رَاجِعًا وَأَقَامَ فِي نِينَوَى. | ٣٧ 37 |
೩೭ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
وَفِيمَا هُوَ سَاجِدٌ فِي بَيْتِ نِسْرُوخَ إِلَهِهِ ضَرَبَهُ أَدْرَمَّلَكُ وَشَرْآصَرُ ٱبْنَاهُ بِٱلسَّيْفِ، وَنَجَوَا إِلَى أَرْضِ أَرَارَاطَ. وَمَلَكَ أَسَرْحَدُّونَ ٱبْنُهُ عِوَضًا عَنْهُ. | ٣٨ 38 |
೩೮ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.