< يَعقُوب 1 >
يَعْقُوبُ، عَبْدُ ٱللهِ وَٱلرَّبِّ يَسُوعَ ٱلْمَسِيحِ، يُهْدِي ٱلسَّلَامَ إِلَى ٱلِٱثْنَيْ عَشَرَ سِبْطًا ٱلَّذِينَ فِي ٱلشَّتَاتِ. | ١ 1 |
೧ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
اِحْسِبُوهُ كُلَّ فَرَحٍ يَا إِخْوَتِي حِينَمَا تَقَعُونَ فِي تَجَارِبَ مُتَنَوِّعَةٍ، | ٢ 2 |
೨ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
عَالِمِينَ أَنَّ ٱمْتِحَانَ إِيمَانِكُمْ يُنْشِئُ صَبْرًا. | ٣ 3 |
೩ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
وَأَمَّا ٱلصَّبْرُ فَلْيَكُنْ لَهُ عَمَلٌ تَامٌّ، لِكَيْ تَكُونُوا تَامِّينَ وَكَامِلِينَ غَيْرَ نَاقِصِينَ فِي شَيْءٍ. | ٤ 4 |
೪ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
وَإِنَّمَا إِنْ كَانَ أَحَدُكُمْ تُعْوِزُهُ حِكْمَةٌ، فَلْيَطْلُبْ مِنَ ٱللهِ ٱلَّذِي يُعْطِي ٱلْجَمِيعَ بِسَخَاءٍ وَلَا يُعَيِّرُ، فَسَيُعْطَى لَهُ. | ٥ 5 |
೫ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
وَلَكِنْ لِيَطْلُبْ بِإِيمَانٍ غَيْرَ مُرْتَابٍ ٱلْبَتَّةَ، لِأَنَّ ٱلْمُرْتَابَ يُشْبِهُ مَوْجًا مِنَ ٱلْبَحْرِ تَخْبِطُهُ ٱلرِّيحُ وَتَدْفَعُهُ. | ٦ 6 |
೬ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
فَلَا يَظُنَّ ذَلِكَ ٱلْإِنْسَانُ أَنَّهُ يَنَالُ شَيْئًا مِنْ عِنْدِ ٱلرَّبِّ. | ٧ 7 |
೭ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
رَجُلٌ ذُو رَأْيَيْنِ هُوَ مُتَقَلْقِلٌ فِي جَمِيعِ طُرُقِهِ. | ٨ 8 |
೮ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
وَلْيَفْتَخِرِ ٱلْأَخُ ٱلْمُتَّضِعُ بِٱرْتِفَاعِهِ، | ٩ 9 |
೯ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
وَأَمَّا ٱلْغَنِيُّ فَبِٱتِّضَاعِهِ، لِأَنَّهُ كَزَهْرِ ٱلْعُشْبِ يَزُولُ. | ١٠ 10 |
೧೦ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
لِأَنَّ ٱلشَّمْسَ أَشْرَقَتْ بِٱلْحَرِّ، فَيَبَّسَتِ ٱلْعُشْبَ، فَسَقَطَ زَهْرُهُ وَفَنِيَ جَمَالُ مَنْظَرِهِ. هَكَذَا يَذْبُلُ ٱلْغَنِيُّ أَيْضًا فِي طُرُقِهِ. | ١١ 11 |
೧೧ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
طُوبَى لِلرَّجُلِ ٱلَّذِي يَحْتَمِلُ ٱلتَّجْرِبَةَ، لِأَنَّهُ إِذَا تَزَكَّى يَنَالُ «إِكْلِيلَ ٱلْحَيَاةِ» ٱلَّذِي وَعَدَ بِهِ ٱلرَّبُّ لِلَّذِينَ يُحِبُّونَهُ. | ١٢ 12 |
೧೨ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
لَا يَقُلْ أَحَدٌ إِذَا جُرِّبَ: «إِنِّي أُجَرَّبُ مِنْ قِبَلِ ٱللهِ»، لِأَنَّ ٱللهَ غَيْرُ مُجَرَّبٍ بِٱلشُّرُورِ، وَهُوَلَا يُجَرِّبُ أَحَدًا. | ١٣ 13 |
೧೩ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
وَلَكِنَّ كُلَّ وَاحِدٍ يُجَرَّبُ إِذَا ٱنْجَذَبَ وَٱنْخَدَعَ مِنْ شَهْوَتِهِ. | ١٤ 14 |
೧೪ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ثُمَّ ٱلشَّهْوَةُ إِذَا حَبِلَتْ تَلِدُ خَطِيَّةً، وَٱلْخَطِيَّةُ إِذَا كَمَلَتْ تُنْتِجُ مَوْتًا. | ١٥ 15 |
೧೫ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
لَا تَضِلُّوا يَا إِخْوَتِي ٱلْأَحِبَّاءَ. | ١٦ 16 |
೧೬ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
كُلُّ عَطِيَّةٍ صَالِحَةٍ وَكُلُّ مَوْهِبَةٍ تَامَّةٍ هِيَ مِنْ فَوْقُ، نَازِلَةٌ مِنْ عِنْدِ أَبِي ٱلْأَنْوَارِ، ٱلَّذِي لَيْسَ عِنْدَهُ تَغْيِيرٌ وَلَا ظِلُّ دَوَرَانٍ. | ١٧ 17 |
೧೭ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
شَاءَ فَوَلَدَنَا بِكَلِمَةِ ٱلْحَقِّ لِكَيْ نَكُونَ بَاكُورَةً مِنْ خَلَائِقِهِ. | ١٨ 18 |
೧೮ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
إِذًا يَا إِخْوَتِي ٱلْأَحِبَّاءَ، لِيَكُنْ كُلُّ إِنْسَانٍ مُسْرِعًا فِي ٱلِٱسْتِمَاعِ، مُبْطِئًا فِي ٱلتَّكَلُّمِ، مُبْطِئًا فِي ٱلْغَضَبِ، | ١٩ 19 |
೧೯ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
لِأَنَّ غَضَبَ ٱلْإِنْسَانِ لَا يَصْنَعُ بِرَّ ٱللهِ. | ٢٠ 20 |
೨೦ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
لِذَلِكَ ٱطْرَحُوا كُلَّ نَجَاسَةٍ وَكَثْرَةَ شَرٍّ، فَٱقْبَلُوا بِوَدَاعَةٍ ٱلْكَلِمَةَ ٱلْمَغْرُوسَةَ ٱلْقَادِرَةَ أَنْ تُخَلِّصَ نُفُوسَكُمْ. | ٢١ 21 |
೨೧ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
وَلَكِنْ كُونُوا عَامِلِينَ بِٱلْكَلِمَةِ، لَا سَامِعِينَ فَقَطْ خَادِعِينَ نُفُوسَكُمْ. | ٢٢ 22 |
೨೨ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
لِأَنَّهُ إِنْ كَانَ أَحَدٌ سَامِعًا لِلْكَلِمَةِ وَلَيْسَ عَامِلًا، فَذَاكَ يُشْبِهُ رَجُلًا نَاظِرًا وَجْهَ خِلْقَتِهِ فِي مِرْآةٍ، | ٢٣ 23 |
೨೩ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
فَإِنَّهُ نَظَرَ ذَاتَهُ وَمَضَى، وَلِلْوَقْتِ نَسِيَ مَا هُوَ. | ٢٤ 24 |
೨೪ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
وَلَكِنْ مَنِ ٱطَّلَعَ عَلَى ٱلنَّامُوسِ ٱلْكَامِلِ - نَامُوسِ ٱلْحُرِّيَّةِ - وَثَبَتَ، وَصَارَ لَيْسَ سَامِعًا نَاسِيًا بَلْ عَامِلًا بِٱلْكَلِمَةِ، فَهَذَا يَكُونُ مَغْبُوطًا فِي عَمَلِهِ. | ٢٥ 25 |
೨೫ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
إِنْ كَانَ أَحَدٌ فِيكُمْ يَظُنُّ أَنَّهُ دَيِّنٌ، وَهُوَ لَيْسَ يُلْجِمُ لِسَانَهُ، بَلْ يَخْدَعُ قَلْبَهُ، فَدِيَانَةُ هَذَا بَاطِلَةٌ. | ٢٦ 26 |
೨೬ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
اَلدِّيَانَةُ ٱلطَّاهِرَةُ ٱلنَّقِيَّةُ عِنْدَ ٱللهِ ٱلْآبِ هِيَ هَذِهِ: ٱفْتِقَادُ ٱلْيَتَامَى وَٱلْأَرَامِلِ فِي ضِيقَتِهِمْ، وَحِفْظُ ٱلْإِنْسَانِ نَفْسَهُ بِلَا دَنَسٍ مِنَ ٱلْعَالَمِ. | ٢٧ 27 |
೨೭ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.