< إِرْمِيَا 27 >

فِي ٱبْتِدَاءِ مُلْكِ يَهُويَاقِيمَ بْنِ يُوشِيَّا مَلِكِ يَهُوذَا، صَارَ هَذَا ٱلْكَلَامُ إِلَى إِرْمِيَا مِنْ قِبَلِ ٱلرَّبِّ قَائِلًا: ١ 1
ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.
«هَكَذَا قَالَ ٱلرَّبُّ لِي: ٱصْنَعْ لِنَفْسِكَ رُبُطًا وَأَنْيَارًا، وَٱجْعَلْهَا عَلَى عُنْقِكَ، ٢ 2
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
وَأَرْسِلْهَا إِلَى مَلِكِ أَدُومَ، وَإِلَى مَلِكِ مُوآبَ، وَإِلَى مَلِكِ بَنِي عَمُّونَ، وَإِلَى مَلِكِ صُورَ، وَإِلَى مَلِكِ صَيْدُونَ، بِيَدِ ٱلرُّسُلِ ٱلْقَادِمِينَ إِلَى أُورُشَلِيمَ، إِلَى صِدْقِيَّا مَلِكِ يَهُوذَا. ٣ 3
ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.
وَأَوْصِهِمْ إِلَى سَادَتِهِمْ قَائِلًا: هَكَذَا قَالَ رَبُّ ٱلْجُنُودِ إِلَهُ إِسْرَائِيلَ: هَكَذَا تَقُولُونَ لِسَادَتِكُمْ: ٤ 4
‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:
إِنِّي أَنَا صَنَعْتُ ٱلْأَرْضَ وَٱلْإِنْسَانَ وَٱلْحَيَوَانَ ٱلَّذِي عَلَى وَجْهِ ٱلْأَرْضِ، بِقُوَّتِي ٱلْعَظِيمَةِ وَبِذِرَاعِي ٱلْمَمْدُودَةِ، وَأَعْطَيْتُهَا لِمَنْ حَسُنَ فِي عَيْنَيَّ. ٥ 5
ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.
وَٱلْآنَ قَدْ دَفَعْتُ كُلَّ هَذِهِ ٱلْأَرَاضِي لِيَدِ نَبُوخَذْنَاصَّرَ مَلِكِ بَابِلَ عَبْدِي، وَأَعْطَيْتُهُ أَيْضًا حَيَوَانَ ٱلْحَقْلِ لِيَخْدِمَهُ. ٦ 6
ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.
فَتَخْدِمُهُ كُلُّ ٱلشُّعُوبِ، وَٱبْنَهُ وَٱبْنَ ٱبْنِهِ، حَتَّى يَأْتِيَ وَقْتُ أَرْضِهِ أَيْضًا، فَتَسْتَخْدِمُهُ شُعُوبٌ كَثِيرَةٌ وَمُلُوكٌ عِظَامٌ. ٧ 7
ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.
وَيَكُونُ أَنَّ ٱلْأُمَّةَ أَوِ ٱلْمَمْلَكَةَ ٱلَّتِي لَا تَخْدِمُ نَبُوخَذْنَاصَّرَ مَلِكَ بَابِلَ، وَٱلَّتِي لَا تَجْعَلُ عُنُقَهَا تَحْتَ نِيرِ مَلِكِ بَابِلَ، إِنِّي أُعَاقِبُ تِلْكَ ٱلْأُمَّةَ بِٱلسَّيْفِ وَٱلْجُوعِ وَٱلْوَبَإِ، يَقُولُ ٱلرَّبُّ، حَتَّى أُفْنِيَهَا بِيَدِهِ. ٨ 8
“‘“ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.
فَلَا تَسْمَعُوا أَنْتُمْ لِأَنْبِيَائِكُمْ وَعَرَّافِيكُمْ وَحَالِمِيكُمْ وَعَائِفِيكُمْ وَسَحَرَتِكُمُ ٱلَّذِينَ يُكَلِّمُونَكُمْ قَائِلِينَ: لَا تَخْدِمُوا مَلِكَ بَابِلَ. ٩ 9
‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.
لِأَنَّهُمْ إِنَّمَا يَتَنَبَّأُونَ لَكُمْ بِٱلْكَذِبِ، لِكَيْ يُبْعِدُوكُمْ مِنْ أَرْضِكُمْ، وَلِأَطْرُدَكُمْ فَتَهْلِكُوا. ١٠ 10
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.
وَٱلْأُمَّةُ ٱلَّتِي تُدْخِلُ عُنُقَهَا تَحْتَ نِيرِ مَلِكِ بَابِلَ وَتَخْدِمُهُ، أَجْعَلُهَا تَسْتَقِرُّ فِي أَرْضِهَا، يَقُولُ ٱلرَّبُّ، وَتَعْمَلُهَا وَتَسْكُنُ بِهَا». ١١ 11
ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.”’”
وَكَلَّمْتُ صِدْقِيَّا مَلِكَ يَهُوذَا بِكُلِّ هَذَا ٱلْكَلَامِ، قَائِلًا: «أَدْخِلُوا أَعْنَاقَكُمْ تَحْتَ نِيرِ مَلِكِ بَابِلَ وَٱخْدِمُوهُ وَشَعْبَهُ وَٱحْيَوْا. ١٢ 12
ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.
لِمَاذَا تَمُوتُونَ أَنْتَ وَشَعْبُكَ بِٱلسَّيْفِ بِٱلْجُوعِ وَٱلْوَبَإِ، كَمَا تَكَلَّمَ ٱلرَّبُّ عَنِ ٱلْأُمَّةِ ٱلَّتِي لَا تَخْدِمُ مَلِكَ بَابِلَ؟ ١٣ 13
ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?
فَلَا تَسْمَعُوا لِكَلَامِ ٱلْأَنْبِيَاءِ ٱلَّذِينَ يُكَلِّمُونَكُمْ قَائِلِينَ: لَا تَخْدِمُوا مَلِكَ بَابِلَ، لِأَنَّهُمْ إِنَّمَا يَتَنَبَّأُونَ لَكُمْ بِٱلْكَذِبِ. ١٤ 14
‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
لِأَنِّي لَمْ أُرْسِلْهُمْ، يَقُولُ ٱلرَّبُّ، بَلْ هُمْ يَتَنَبَّأُونَ بِٱسْمِي بِٱلْكَذِبِ، لِكَيْ أَطْرُدَكُمْ فَتَهْلِكُوا أَنْتُمْ وَٱلْأَنْبِيَاءُ ٱلَّذِينَ يَتَنَبَّأُونَ لَكُمْ». ١٥ 15
ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”
وَكَلَّمْتُ ٱلْكَهَنَةَ وَكُلَّ هَذَا ٱلشَّعْبِ قَائِلًا: «هَكَذَا قَالَ ٱلرَّبُّ: لَا تَسْمَعُوا لِكَلَامِ أَنْبِيَائِكُمُ ٱلَّذِينَ يَتَنَبَّأُونَ لَكُمْ قَائِلِينَ: هَا آنِيَةُ بَيْتِ ٱلرَّبِّ سَتُرَدُّ سَرِيعًا مِنْ بَابِلَ. لِأَنَّهُمْ إِنَّمَا يَتَنَبَّأُونَ لَكُمْ بِٱلْكَذِبِ. ١٦ 16
ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
لَا تَسْمَعُوا لَهُمْ. اُخْدِمُوا مَلِكَ بَابِلَ وَٱحْيَوْا. لِمَاذَا تَصِيرُ هَذِهِ ٱلْمَدِينَةُ خَرِبَةً؟ ١٧ 17
ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?
فَإِنْ كَانُوا أَنْبِيَاءَ، وَإِنْ كَانَتْ كَلِمَةُ ٱلرَّبِّ مَعَهُمْ، فَلْيَتَوَسَّلُوا إِلَى رَبِّ ٱلْجُنُودِ لِكَيْ لَا تَذْهَبَ إِلَى بَابِلَ ٱلْآنِيَةُ ٱلْبَاقِيَةُ فِي بَيْتِ ٱلرَّبِّ وَبَيْتِ مَلِكِ يَهُوذَا وَفِي أُورُشَلِيمَ. ١٨ 18
ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.
«لِأَنَّهُ هَكَذَا قَالَ رَبُّ ٱلْجُنُودِ عَنِ ٱلْأَعْمِدَةِ وَعَنِ ٱلْبَحْرِ وَعَنِ ٱلْقَوَاعِدِ وَعَنْ سَائِرِ ٱلْآنِيَةِ ٱلْبَاقِيَةِ فِي هَذِهِ ٱلْمَدِينَةِ، ١٩ 19
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.
ٱلَّتِي لَمْ يَأْخُذْهَا نَبُوخَذْنَاصَّرُ مَلِكُ بَابِلَ عِنْدَ سَبْيِهِ يَكُنْيَا بْنَ يَهُويَاقِيمَ مَلِكَ يَهُوذَا مِنْ أُورُشَلِيمَ إِلَى بَابِلَ وَكُلَّ أَشْرَافِ يَهُوذَا وَأُورُشَلِيمَ. ٢٠ 20
إِنَّهُ هَكَذَا قَالَ رَبُّ ٱلْجُنُودِ إِلَهُ إِسْرَائِيلَ عَنِ ٱلْآنِيَةِ ٱلْبَاقِيَةِ فِي بَيْتِ ٱلرَّبِّ وَبَيْتِ مَلِكِ يَهُوذَا وَفِي أُورُشَلِيمَ: ٢١ 21
ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:
يُؤْتَى بِهَا إِلَى بَابِلَ، وَتَكُونُ هُنَاكَ إِلَى يَوْمِ ٱفْتِقَادِي إِيَّاهَا، يَقُولُ ٱلرَّبُّ، فَأُصْعِدُهَا وَأَرُدُّهَا إِلَى هَذَا ٱلْمَوْضِعِ». ٢٢ 22
‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”

< إِرْمِيَا 27 >