< إِرْمِيَا 39 >

فِي ٱلسَّنَةِ ٱلتَّاسِعَةِ لِصِدْقِيَّا مَلِكِ يَهُوذَا فِي ٱلشَّهْرِ ٱلْعَاشِرِ، أَتَى نَبُوخَذْرَاصَّرُ مَلِكُ بَابِلَ وَكُلُّ جَيْشِهِ إِلَى أُورُشَلِيمَ وَحَاصَرُوهَا. ١ 1
ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.
وَفِي ٱلسَّنَةِ ٱلْحَادِيَةِ عَشَرَةَ لِصِدْقِيَّا، فِي ٱلشَّهْرِ ٱلرَّابِعِ، فِي تَاسِعِ ٱلشَّهْرِ فُتِحَتِ ٱلْمَدِينَةُ. ٢ 2
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.
وَدَخَلَ كُلُّ رُؤَسَاءِ مَلِكِ بَابِلَ وَجَلَسُوا فِي ٱلْبَابِ ٱلْأَوْسَطِ: نَرْجَلَ شَرَاصَرُ، وَسَمْجَرْ نَبُو، وَسَرْسَخِيمُ رَئِيسُ ٱلْخِصْيَانِ، وَنَرْجَلَ شَرَاصَرُ رَئِيسُ ٱلْمَجُوسِ، وَكُلُّ بَقِيَّةِ رُؤَسَاءِ مَلِكِ بَابِلَ. ٣ 3
ನೇರ್ಗಲ್ ಸರೆಚರ್, ಸಮ್ಗರ್‌ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು.
فَلَمَّا رَآهُمْ صِدْقِيَّا مَلِكُ يَهُوذَا وَكُلُّ رِجَالِ ٱلْحَرْبِ، هَرَبُوا وَخَرَجُوا لَيْلًا مِنَ ٱلْمَدِينَةِ فِي طَرِيقِ جَنَّةِ ٱلْمَلِكِ، مِنَ ٱلْبَابِ بَيْنَ ٱلسُّورَيْنِ، وَخَرَجَ هُوَ فِي طَرِيقِ ٱلْعَرَبَةِ. ٤ 4
ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
فَسَعَى جَيْشُ ٱلْكَلْدَانِيِّينَ وَرَاءَهُمْ، فَأَدْرَكُوا صِدْقِيَّا فِي عَرَبَاتِ أَرِيحَا، فَأَخَذُوهُ وَأَصْعَدُوهُ إِلَى نَبُوخَذْنَاصَّرَ مَلِكِ بَابِلَ إِلَى رَبْلَةَ فِي أَرْضِ حَمَاةَ، فَكَلَّمَهُ بِٱلْقَضَاءِ عَلَيْهِ. ٥ 5
ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
فَقَتَلَ مَلِكُ بَابِلَ بَنِي صِدْقِيَّا فِي رَبْلَةَ أَمَامَ عَيْنَيْهِ، وَقَتَلَ مَلِكُ بَابِلَ كُلَّ أَشْرَافِ يَهُوذَا. ٦ 6
ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.
وَأَعْمَى عَيْنَيْ صِدْقِيَّا، وَقَيَّدَهُ بِسَلَاسِلِ نُحَاسٍ لِيَأْتِيَ بِهِ إِلَى بَابِلَ. ٧ 7
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.
أَمَّا بَيْتُ ٱلْمَلِكِ وَبُيُوتُ ٱلشَّعْبِ فَأَحْرَقَهَا ٱلْكَلْدَانِيُّونَ بِٱلنَّارِ، وَنَقَضُوا أَسْوَارَ أُورُشَلِيمَ. ٨ 8
ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
وَبَقِيَّةُ ٱلشَّعْبِ ٱلَّذِينَ بَقُوا فِي ٱلْمَدِينَةِ، وَٱلْهَارِبُونَ ٱلَّذِينَ سَقَطُوا لَهُ، وَبَقِيَّةُ ٱلشَّعْبِ ٱلَّذِينَ بَقُوا، سَبَاهُمْ نَبُوزَرَادَانُ رَئِيسُ ٱلشُّرَطِ إِلَى بَابِلَ. ٩ 9
ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.
وَلَكِنَّ بَعْضَ ٱلشَّعْبِ ٱلْفُقَرَاءَ ٱلَّذِينَ لَمْ يَكُنْ لَهُمْ شَيْءٌ، تَرَكَهُمْ نَبُوزَرَادَانُ رَئِيسُ ٱلشُّرَطِ فِي أَرْضِ يَهُوذَا، وَأَعْطَاهُمْ كُرُومًا وَحُقُولًا فِي ذَلِكَ ٱلْيَوْمِ. ١٠ 10
ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.
وَأَوْصَى نَبُوخَذْرَاصَّرُ مَلِكُ بَابِلَ عَلَى إِرْمِيَا نَبُوزَرَادَانَ رَئِيسَ ٱلشُّرَطِ قَائِلًا: ١١ 11
ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:
«خُذْهُ وَضَعْ عَيْنَيْكَ عَلَيْهِ، وَلَا تَفْعَلْ بِهِ شَيْئًا رَدِيئًا، بَلْ كَمَا يُكَلِّمُكَ هَكَذَا ٱفْعَلْ مَعَهُ». ١٢ 12
“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.
فَأَرْسَلَ نَبُوزَرَادَانُ رَئِيسُ ٱلشُّرَطِ وَنَبُوشَزْبَانُ رَئِيسُ ٱلْخِصْيَانِ وَنَرْجَلُ شَرَاصَرُ رَئِيسُ ٱلْمَجُوسِ وَكُلُّ رُؤَسَاءِ مَلِكِ بَابِلَ، ١٣ 13
ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.
أَرْسَلُوا فَأَخَذُوا إِرْمِيَا مِنْ دَارِ ٱلسِّجْنِ وَأَسْلَمُوهُ لِجَدَلْيَا بْنِ أَخِيقَامَ بْنِ شَافَانَ لِيَخْرُجَ بِهِ إِلَى ٱلْبَيْتِ. فَسَكَنَ بَيْنَ ٱلشَّعْبِ. ١٤ 14
ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
وَصَارَتْ كَلِمَةُ ٱلرَّبِّ إِلَى إِرْمِيَا إِذْ كَانَ مَحْبُوسًا فِي دَارِ ٱلسِّجْنِ قَائِلَةً: ١٥ 15
ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:
«ٱذْهَبْ وَكَلِّمْ عَبْدَ مَلِكَ ٱلْكُوشِيَّ قَائِلًا: هَكَذَا قَالَ رَبُّ ٱلْجُنُودِ إِلَهُ إِسْرَائِيلَ: هَأَنَذَا جَالِبٌ كَلَامِي عَلَى هَذِهِ ٱلْمَدِينَةِ لِلشَّرِّ لَا لِلْخَيْرِ، فَيَحْدُثُ أَمَامَكَ فِي ذَلِكَ ٱلْيَوْمِ. ١٦ 16
“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.
وَلَكِنَّنِي أُنْقِذُكَ فِي ذَلِكَ ٱلْيَوْمِ، يَقُولُ ٱلرَّبُّ، فَلَا تُسْلَمُ لِيَدِ ٱلنَّاسِ ٱلَّذِينَ أَنْتَ خَائِفٌ مِنْهُمْ. ١٧ 17
ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.
بَلْ إِنَّمَا أُنَجِّيكَ نَجَاةً، فَلَا تَسْقُطُ بِٱلسَّيْفِ، بَلْ تَكُونُ لَكَ نَفْسُكَ غَنِيمَةً، لِأَنَّكَ قَدْ تَوَكَّلْتَ عَلَيَّ، يَقُولُ ٱلرَّبُّ». ١٨ 18
ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’” ಎಂಬುದು.

< إِرْمِيَا 39 >