< أَيُّوبَ 34 >
فَأَجَابَ أَلِيهُو وَقَالَ: | ١ 1 |
ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:
«ٱسْمَعُوا أَقْوَالِي أَيُّهَا ٱلْحُكَمَاءُ، وَٱصْغَوْا لِي أَيُّهَا ٱلْعَارِفُونَ. | ٢ 2 |
ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.
لِأَنَّ ٱلْأُذُنَ تَمْتَحِنُ ٱلْأَقْوَالَ، كَمَا أَنَّ ٱلْحَنَكَ يَذُوقُ طَعَامًا. | ٣ 3 |
ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
لِنَمْتَحِنْ لِأَنْفُسِنَا ٱلْحَقَّ، وَنَعْرِفْ بَيْنَ أَنْفُسِنَا مَا هُوَ طَيِّبٌ. | ٤ 4 |
ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
«لِأَنَّ أَيُّوبَ قَالَ: تَبَرَّرْتُ، وَٱللهُ نَزَعَ حَقِّي. | ٥ 5 |
“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.
عِنْدَ مُحَاكَمَتِي أُكَذَّبُ. جُرْحِي عَدِيمُ ٱلشِّفَاءِ مِنْ دُونِ ذَنْبٍ. | ٦ 6 |
ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”
فَأَيُّ إِنْسَانٍ كَأَيُّوبَ يَشْرَبُ ٱلْهُزْءَ كَٱلْمَاءِ، | ٧ 7 |
ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ.
وَيَسِيرُ مُتَّحِدًا مَعَ فَاعِلِي ٱلْإِثْمِ، وَذَاهِبًا مَعَ أَهْلِ ٱلشَّرِّ؟ | ٨ 8 |
ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.
لِأَنَّهُ قَالَ: لَا يَنْتَفِعُ ٱلْإِنْسَانُ بِكَوْنِهِ مَرْضِيًّا عِنْدَ ٱللهِ. | ٩ 9 |
“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”
«لِأَجْلِ ذَلِكَ ٱسْمَعُوا لِي يَا ذَوِي ٱلْأَلْبَابِ. حَاشَا لِلهِ مِنَ ٱلشَّرِّ، وَلِلْقَدِيرِ مِنَ ٱلظُّلْمِ. | ١٠ 10 |
“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.
لِأَنَّهُ يُجَازِي ٱلْإِنْسَانَ عَلَى فِعْلِهِ، وَيُنِيلُ ٱلرَّجُلَ كَطَرِيقِهِ. | ١١ 11 |
ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.
فَحَقًّا إِنَّ ٱللهَ لَا يَفْعَلُ سُوءًا، وَٱلْقَدِيرَ لَا يُعَوِّجُ ٱلْقَضَاءَ. | ١٢ 12 |
ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.
مَنْ وَكَّلَهُ بِٱلْأَرْضِ، وَمَنْ صَنَعَ ٱلْمَسْكُونَةَ كُلَّهَا؟ | ١٣ 13 |
ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?
إِنْ جَعَلَ عَلَيْهِ قَلْبَهُ، إِنْ جَمَعَ إِلَى نَفْسِهِ رُوحَهُ وَنَسَمَتَهُ، | ١٤ 14 |
ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,
يُسَلِّمُ ٱلرُّوحَ كُلُّ بَشَرٍ جَمِيعًا، وَيَعُودُ ٱلْإِنْسَانُ إِلَى ٱلتُّرَابِ. | ١٥ 15 |
ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”
فَإِنْ كَانَ لَكَ فَهْمٌ فَٱسْمَعْ هَذَا، وَٱصْغَ إِلَى صَوْتِ كَلِمَاتِي. | ١٦ 16 |
“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.
أَلَعَلَّ مَنْ يُبْغِضُ ٱلْحَقَّ يَتَسَلَّطُ، أَمِ ٱلْبَارَّ ٱلْكَبِيرَ تَسْتَذْنِبُ؟ | ١٧ 17 |
ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?
أَيُقَالُ لِلْمَلِكِ: يَا لَئِيمُ، وَلِلْنُدَبَاءِ: يَا أَشْرَارُ؟ | ١٨ 18 |
ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?
ٱلَّذِي لَا يُحَابِي بِوُجُوهِ ٱلرُّؤَسَاءِ، وَلَا يَعْتَبِرُ مُوسَعًا دُونَ فَقِيرٍ. لِأَنَّهُمْ جَمِيعَهُمْ عَمَلُ يَدَيْهِ. | ١٩ 19 |
ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.
بَغْتَةً يَمُوتُونَ وَفِي نِصْفِ ٱللَّيْلِ. يَرْتَجُّ ٱلشَّعْبُ وَيَزُولُونَ، وَيُنْزَعُ ٱلْأَعِزَّاءُ لَا بِيَدٍ. | ٢٠ 20 |
ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”
لِأَنَّ عَيْنَيْهِ عَلَى طُرُقِ ٱلْإِنْسَانِ، وَهُوَ يَرَى كُلَّ خَطَوَاتِهِ. | ٢١ 21 |
“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.
لَا ظَلَامَ وَلَا ظِلَّ مَوْتٍ حَيْثُ تَخْتَفِي عُمَّالُ ٱلْإِثْمِ. | ٢٢ 22 |
ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.
لِأَنَّهُ لَا يُلَاحِظُ ٱلْإِنْسَانَ زَمَانًا لِلدُّخُولِ فِي ٱلْمُحَاكَمَةِ مَعَ ٱللهِ. | ٢٣ 23 |
ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.
يُحَطِّمُ ٱلْأَعِزَّاءَ مِنْ دُونِ فَحْصٍ، وَيُقِيمُ آخَرِينَ مَكَانَهُمْ. | ٢٤ 24 |
ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.
لَكِنَّهُ يَعْرِفُ أَعْمَالَهُمْ، وَيُقَلِّبُهُمْ لَيْلًا فَيَنْسَحِقُونَ. | ٢٥ 25 |
ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.
لِكَوْنِهِمْ أَشْرَارًا، يَصْفِقُهُمْ فِي مَرْأَى ٱلنَّاظِرِينَ. | ٢٦ 26 |
ಅವರ ದುಷ್ಟತನಕ್ಕಾಗಿ ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು.
لِأَنَّهُمُ ٱنْصَرَفُوا مِنْ وَرَائِهِ، وَكُلُّ طُرُقِهِ لَمْ يَتَأَمَّلُوهَا، | ٢٧ 27 |
ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.
حَتَّى بَلَّغُوا إِلَيْهِ صُرَاخَ ٱلْمِسْكِينِ، فَسَمِعَ زَعْقَةَ ٱلْبَائِسِينَ. | ٢٨ 28 |
ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.
إِذَا هُوَ سَكَّنَ، فَمَنْ يَشْغَبُ؟ وَإِذَا حَجَبَ وَجْهَهُ، فَمَنْ يَرَاهُ سَوَاءٌ كَانَ عَلَى أُمَّةٍ أَوْ عَلَى إِنْسَانٍ؟ | ٢٩ 29 |
ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?
حَتَّى لَا يَمْلِكَ ٱلْفَاجِرُ وَلَا يَكُونَ شَرَكًا لِلشَّعْبِ. | ٣٠ 30 |
ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”
«وَلَكِنْ هَلْ لِلهِ قَالَ: ٱحْتَمَلْتُ. لَا أَعُودُ أُفْسِدُ؟ | ٣١ 31 |
“ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.
مَا لَمْ أُبْصِرْهُ فَأَرِنِيهِ أَنْتَ. إِنْ كُنْتُ قَدْ فَعَلْتُ إِثْمًا فَلَا أَعُودُ أَفْعَلُهُ. | ٣٢ 32 |
ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.
هَلْ كَرَأْيِكَ يُجَازِيهِ، قَائِلًا: لِأَنَّكَ رَفَضْتَ؟ فَأَنْتَ تَخْتَارُ لَا أَنَا، وَبِمَا تَعْرِفُهُ تَكَلَّمْ. | ٣٣ 33 |
ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”
ذَوُو ٱلْأَلْبَابِ يَقُولُونَ لِي، بَلِ ٱلرَّجُلُ ٱلْحَكِيمُ ٱلَّذِي يَسْمَعُنِي يَقُولُ: | ٣٤ 34 |
“ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:
إِنَّ أَيُّوبَ يَتَكَلَّمُ بِلَا مَعْرِفَةٍ، وَكَلَامُهُ لَيْسَ بِتَعَقُّلٍ. | ٣٥ 35 |
‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.
فَلَيْتَ أَيُّوبَ كَانَ يُمْتَحَنُ إِلَى ٱلْغَايَةِ مِنْ أَجْلِ أَجْوِبَتِهِ كَأَهْلِ ٱلْإِثْمِ. | ٣٦ 36 |
ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ.
لَكِنَّهُ أَضَافَ إِلَى خَطِيَّتِهِ مَعْصِيَةً. يُصَفِّقُ بَيْنَنَا، وَيُكْثِرُ كَلَامَهُ عَلَى ٱللهِ». | ٣٧ 37 |
ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”