< يوحنَّا 2 >
وَفِي ٱلْيَوْمِ ٱلثَّالِثِ كَانَ عُرْسٌ فِي قَانَا ٱلْجَلِيلِ، وَكَانَتْ أُمُّ يَسُوعَ هُنَاكَ. | ١ 1 |
೧ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
وَدُعِيَ أَيْضًا يَسُوعُ وَتَلَامِيذُهُ إِلَى ٱلْعُرْسِ. | ٢ 2 |
೨ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
وَلَمَّا فَرَغَتِ ٱلْخَمْرُ، قَالَتْ أُمُّ يَسُوعَ لَهُ: «لَيْسَ لَهُمْ خَمْرٌ». | ٣ 3 |
೩ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
قَالَ لَهَا يَسُوعُ: «مَا لِي وَلَكِ يَا ٱمْرَأَةُ؟ لَمْ تَأْتِ سَاعَتِي بَعْدُ». | ٤ 4 |
೪ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
قَالَتْ أُمُّهُ لِلْخُدَّامِ: «مَهْمَا قَالَ لَكُمْ فَٱفْعَلُوهُ». | ٥ 5 |
೫ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
وَكَانَتْ سِتَّةُ أَجْرَانٍ مِنْ حِجَارَةٍ مَوْضُوعَةً هُنَاكَ، حَسَبَ تَطْهِيرِ ٱلْيَهُودِ، يَسَعُ كُلُّ وَاحِدٍ مِطْرَيْنِ أَوْ ثَلَاثَةً. | ٦ 6 |
೬ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
قَالَ لَهُمْ يَسُوعُ: «ٱمْلَأُوا ٱلْأَجْرَانَ مَاءً». فَمَلَأُوهَا إِلَى فَوْقُ. | ٧ 7 |
೭ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
ثُمَّ قَالَ لَهُمُ: «ٱسْتَقُوا ٱلْآنَ وَقَدِّمُوا إِلَى رَئِيسِ ٱلْمُتَّكَإِ». فَقَدَّمُوا. | ٨ 8 |
೮ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
فَلَمَّا ذَاقَ رَئِيسُ ٱلْمُتَّكَإِ ٱلْمَاءَ ٱلْمُتَحَوِّلَ خَمْرًا، وَلَمْ يَكُنْ يَعْلَمُ مِنْ أَيْنَ هِيَ، لَكِنَّ ٱلْخُدَّامَ ٱلَّذِينَ كَانُوا قَدِ ٱسْتَقَوْا ٱلْمَاءَ عَلِمُوا، دَعَا رَئِيسُ ٱلْمُتَّكَإِ ٱلْعَرِيسَ | ٩ 9 |
೯ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
وَقَالَ لَهُ: «كُلُّ إِنْسَانٍ إِنَّمَا يَضَعُ ٱلْخَمْرَ ٱلْجَيِّدَةَ أَوَّلًا، وَمَتَى سَكِرُوا فَحِينَئِذٍ ٱلدُّونَ. أَمَّا أَنْتَ فَقَدْ أَبْقَيْتَ ٱلْخَمْرَ ٱلْجَيِّدَةَ إِلَى ٱلْآنَ!». | ١٠ 10 |
೧೦“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
هَذِهِ بِدَايَةُ ٱلْآيَاتِ فَعَلَهَا يَسُوعُ فِي قَانَا ٱلْجَلِيلِ، وَأَظْهَرَ مَجْدَهُ، فَآمَنَ بِهِ تَلَامِيذُهُ. | ١١ 11 |
೧೧ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
وَبَعْدَ هَذَا ٱنْحَدَرَ إِلَى كَفْرِنَاحُومَ، هُوَ وَأُمُّهُ وَإِخْوَتُهُ وَتَلَامِيذُهُ، وَأَقَامُوا هُنَاكَ أَيَّامًا لَيْسَتْ كَثِيرَةً. | ١٢ 12 |
೧೨ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
وَكَانَ فِصْحُ ٱلْيَهُودِ قَرِيبًا، فَصَعِدَ يَسُوعُ إِلَى أُورُشَلِيمَ، | ١٣ 13 |
೧೩ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
وَوَجَدَ فِي ٱلْهَيْكَلِ ٱلَّذِينَ كَانُوا يَبِيعُونَ بَقَرًا وَغَنَمًا وَحَمَامًا، وَٱلصَّيَارِفَ جُلُوسًا. | ١٤ 14 |
೧೪ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
فَصَنَعَ سَوْطًا مِنْ حِبَالٍ وَطَرَدَ ٱلْجَمِيعَ مِنَ ٱلْهَيْكَلِ، اَلْغَنَمَ وَٱلْبَقَرَ، وَكَبَّ دَرَاهِمَ ٱلصَّيَارِفِ وَقَلَّبَ مَوَائِدَهُمْ. | ١٥ 15 |
೧೫ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
وَقَالَ لِبَاعَةِ ٱلْحَمَامِ: «ٱرْفَعُوا هَذِهِ مِنْ هَهُنَا! لَا تَجْعَلُوا بَيْتَ أَبِي بَيْتَ تِجَارَةٍ!». | ١٦ 16 |
೧೬ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
فَتَذَكَّرَ تَلَامِيذُهُ أَنَّهُ مَكْتُوبٌ: «غَيْرَةُ بَيْتِكَ أَكَلَتْنِي». | ١٧ 17 |
೧೭ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
فَأَجَابَ ٱلْيَهُودُ وَقَالوُا لَهُ: «أَيَّةَ آيَةٍ تُرِينَا حَتَّى تَفْعَلَ هَذَا؟». | ١٨ 18 |
೧೮ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
أَجَابَ يَسُوعُ وَقَالَ لَهُمْ: «ٱنْقُضُوا هَذَا ٱلْهَيْكَلَ، وَفِي ثَلَاثَةِ أَيَّامٍ أُقِيمُهُ». | ١٩ 19 |
೧೯ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
فَقَالَ ٱلْيَهُودُ: «فِي سِتٍّ وَأَرْبَعِينَ سَنَةً بُنِيَ هَذَا ٱلْهَيْكَلُ، أَفَأَنْتَ فِي ثَلَاثَةِ أَيَّامٍ تُقِيمُهُ؟». | ٢٠ 20 |
೨೦ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
وَأَمَّا هُوَ فَكَانَ يَقُولُ عَنْ هَيْكَلِ جَسَدِهِ. | ٢١ 21 |
೨೧ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
فَلَمَّا قَامَ مِنَ ٱلْأَمْوَاتِ، تَذَكَّرَ تَلَامِيذُهُ أَنَّهُ قَالَ هَذَا، فَآمَنُوا بِٱلْكِتَابِ وَٱلْكَلَامِ ٱلَّذِي قَالَهُ يَسُوعُ. | ٢٢ 22 |
೨೨ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
وَلَمَّا كَانَ فِي أُورُشَلِيمَ فِي عِيدِ ٱلْفِصْحِ، آمَنَ كَثِيرُونَ بِٱسْمِهِ، إِذْ رَأَوْا ٱلْآيَاتِ ٱلَّتِي صَنَعَ. | ٢٣ 23 |
೨೩ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
لَكِنَّ يَسُوعَ لَمْ يَأْتَمِنْهُمْ عَلَى نَفْسِهِ، لِأَنَّهُ كَانَ يَعْرِفُ ٱلْجَمِيعَ. | ٢٤ 24 |
೨೪ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
وَلِأَنَّهُ لَمْ يَكُنْ مُحْتَاجًا أَنْ يَشْهَدَ أَحَدٌ عَنِ ٱلْإِنْسَانِ، لِأَنَّهُ عَلِمَ مَا كَانَ فِي ٱلْإِنْسَانِ. | ٢٥ 25 |
೨೫ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.