< اَلْقُضَاة 5 >
فَتَرَنَّمَتْ دَبُورَةُ وَبَارَاقُ بْنُ أَبِينُوعَمَ فِي ذَلِكَ ٱلْيَوْمِ قَائِلَيْنِ: | ١ 1 |
೧ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
«لِأَجْلِ قِيَادَةِ ٱلْقُوَّادِ فِي إِسْرَائِيلَ، لِأَجْلِ ٱنْتِدَابِ ٱلشَّعْبِ، بَارِكُوا ٱلرَّبَّ. | ٢ 2 |
೨“ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
اِسْمَعُوا أَيُّهَا ٱلْمُلُوكُ وَٱصْغَوْا أَيُّهَا ٱلْعُظَمَاءُ. أَنَا، أَنَا لِلرَّبِّ أَتَرَنَّمُ. أُزَمِّرُ لِلرَّبِّ إِلَهِ إِسْرَائِيلَ. | ٣ 3 |
೩“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
يَارَبُّ بِخُرُوجِكَ مِنْ سِعِيرَ، بِصُعُودِكَ مِنْ صَحْرَاءِ أَدُومَ، ٱلْأَرْضُ ٱرْتَعَدَتِ. ٱلسَّمَاوَاتُ أَيْضًا قَطَرَتْ. كَذَلِكَ ٱلسُّحُبُ قَطَرَتْ مَاءً. | ٤ 4 |
೪“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
تَزَلْزَلَتِ ٱلْجِبَالُ مِنْ وَجْهِ ٱلرَّبِّ، وَسِينَاءُ هَذَا مِنْ وَجْهِ ٱلرَّبِّ إِلَهِ إِسْرَائِيلَ. | ٥ 5 |
೫ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
«فِي أَيَّامِ شَمْجَرَ بْنِ عَنَاةَ، فِي أَيَّامِ يَاعِيلَ، ٱسْتَرَاحَتِ ٱلطُّرُقُ، وَعَابِرُو ٱلسُّبُلِ سَارُوا فِي مَسَالِكَ مُعْوَجَّةٍ. | ٦ 6 |
೬“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
خُذِلَ ٱلْحُكَّامُ فِي إِسْرَائِيلَ. خُذِلُوا حَتَّى قُمْتُ أَنَا دَبُورَةُ. قُمْتُ أُمًّا فِي إِسْرَائِيلَ. | ٧ 7 |
೭ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
اِخْتَارَ آلِهَةً حَدِيثَةً. حِينَئِذٍ حَرْبُ ٱلْأَبْوَابِ. هَلْ كَانَ يُرَى مِجَنٌّ أَوْ رُمْحٌ فِي أَرْبَعِينَ أَلْفًا مِنْ إِسْرَائِيلَ؟ | ٨ 8 |
೮ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
قَلْبِي نَحْوَ قُضَاةِ إِسْرَائِيلَ ٱلْمُنْتَدِبِينَ فِي ٱلشَّعْبِ. بَارِكُوا ٱلرَّبَّ. | ٩ 9 |
೯ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
أَيُّهَا ٱلرَّاكِبُونَ ٱلْأُتُنَ ٱلصُّحْرَ، ٱلْجَالِسُونَ عَلَى طَنَافِسَ، وَٱلسَّالِكُونَ فِي ٱلطَّرِيقِ، سَبِّحُوا! | ١٠ 10 |
೧೦“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
مِنْ صَوْتِ ٱلْمُحَاصِّينَ بَيْنَ ٱلْأَحْوَاضِ هُنَاكَ يُثْنُونَ عَلَى حَقِّ ٱلرَّبِّ، حَقِّ حُكَّامِهِ فِي إِسْرَائِيلَ. حِينَئِذٍ نَزَلَ شَعْبُ ٱلرَّبِّ إِلَى ٱلْأَبْوَابِ. | ١١ 11 |
೧೧ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
«اِسْتَيْقِظِي، ٱسْتَيْقِظِي يَا دَبُورَةُ! ٱسْتَيْقِظِي، ٱسْتَيْقِظِي وَتَكَلَّمِي بِنَشِيدٍ! قُمْ يَا بَارَاقُ وَٱسْبِ سَبْيَكَ، يَا ٱبْنَ أَبِينُوعَمَ! | ١٢ 12 |
೧೨‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
حِينَئِذٍ تَسَلَّطَ ٱلشَّارِدُ عَلَى عُظَمَاءِ ٱلشَّعْبِ. ٱلرَّبُّ سَلَّطَنِي عَلَى ٱلْجَبَابِرَةِ. | ١٣ 13 |
೧೩“ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
جَاءَ مِنْ أَفْرَايِمَ ٱلَّذِينَ مَقَرُّهُمْ بَيْنَ عَمَالِيقَ، وَبَعْدَكَ بَنْيَامِينُ مَعَ قَوْمِكَ. مِنْ مَاكِيرَ نَزَلَ قُضَاةٌ، وَمِنْ زَبُولُونَ مَاسِكُونَ بِقَضِيبِ ٱلْقَائِدِ. | ١٤ 14 |
೧೪ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
وَٱلرُّؤَسَاءُ فِي يَسَّاكَرَ مَعَ دَبُورَةَ. وَكَمَا يَسَّاكَرُ هَكَذَا بَارَاقُ. اِنْدَفَعَ إِلَى ٱلْوَادِي وَرَاءَهُ. عَلَى مَسَاقِي رَأُوبَيْنَ أَقْضِيَةُ قَلْبٍ عَظِيمَةٌ. | ١٥ 15 |
೧೫ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
لِمَاذَا أَقَمْتَ بَيْنَ ٱلْحَظَائِرِ لِسَمْعِ ٱلصَّفِيرِ لِلْقُطْعَانِ. لَدَى مَسَاقِي رَأُوبَيْنَ مَبَاحِثُ قَلْبٍ عَظِيمَةٌ. | ١٦ 16 |
೧೬ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
جِلْعَادُ فِي عَبْرِ ٱلْأُرْدُنِّ سَكَنَ. وَدَانُ، لِمَاذَا ٱسْتَوْطَنَ لَدَى ٱلسُّفُنِ؟ وَأَشِيرُ أَقَامَ عَلَى سَاحِلِ ٱلْبَحْرِ، وَفِي فُرَضِهِ سَكَنَ. | ١٧ 17 |
೧೭ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
زَبُولُونُ شَعْبٌ أَهَانَ نَفْسَهُ إِلَى ٱلْمَوْتِ مَعَ نَفْتَالِي عَلَى رَوَابِي ٱلْحَقْلِ. | ١٨ 18 |
೧೮ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
«جَاءَ مُلُوكٌ. حَارَبُوا. حِينَئِذٍ حَارَبَ مُلُوكُ كَنْعَانَ فِي تَعْنَكَ عَلَى مِيَاهِ مَجِدُّو. بِضْعَ فِضَّةٍ لَمْ يَأْخُذُوا. | ١٩ 19 |
೧೯“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
مِنَ ٱلسَّمَاوَاتِ حَارَبُوا. ٱلْكَوَاكِبُ مِنْ حُبُكِهَا حَارَبَتْ سِيسَرَا. | ٢٠ 20 |
೨೦ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
نَهْرُ قِيشُونَ جَرَفَهُمْ. نَهْرُ وَقَائِعَ نَهْرُ قِيشُونَ. دُوسِي يَا نَفْسِي بِعِزٍّ. | ٢١ 21 |
೨೧ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
«حِينَئِذٍ ضَرَبَتْ أَعْقَابُ ٱلْخَيْلِ مِنَ ٱلسَّوْقِ، سَوْقِ أَقْوِيَائِهِ. | ٢٢ 22 |
೨೨ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
اِلْعَنُوا مِيرُوزَ قَالَ مَلَاكُ ٱلرَّبِّ. اِلْعَنُوا سَاكِنِيهَا لَعْنًا، لِأَنَّهُمْ لَمْ يَأْتُوا لِمَعُونَةِ ٱلرَّبِّ، مَعُونَةِ ٱلرَّبِّ بَيْنَ ٱلْجَبَابِرَةِ. | ٢٣ 23 |
೨೩ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’
تُبَارَكُ عَلَى ٱلنِّسَاءِ يَاعِيلُ ٱمْرَأَةُ حَابِرَ ٱلْقَيْنِيِّ. عَلَى ٱلنِّسَاءِ فِي ٱلْخِيَامِ تُبَارَكُ. | ٢٤ 24 |
೨೪“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
طَلَبَ مَاءً فَأَعْطَتْهُ لَبَنًا. فِي قَصْعَةِ ٱلْعُظَمَاءِ قَدَّمَتْ زُبْدَةً. | ٢٥ 25 |
೨೫ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
مَدَّتْ يَدَهَا إِلَى ٱلْوَتَدِ، وَيَمِينَهَا إِلَى مِضْرَابِ ٱلْعَمَلَةِ، وَضَرَبَتْ سِيسَرَا وَسَحَقَتْ رَأْسَهُ، شَدَّخَتْ وَخَرَّقَتْ صُدْغَهُ. | ٢٦ 26 |
೨೬ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
بَيْنَ رِجْلَيْهَا ٱنْطَرَحَ، سَقَطَ، ٱضْطَجَعَ. بَيْنَ رِجْلَيْهَا ٱنْطَرَحَ، سَقَطَ. حَيْثُ ٱنْطَرَحَ فَهُنَاكَ سَقَطَ مَقْتُولًا. | ٢٧ 27 |
೨೭ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
مِنَ ٱلْكُوَّةِ أَشْرَفَتْ وَوَلْوَلَتْ أُمُّ سِيسَرَا مِنَ ٱلشُّبَّاكِ: لِمَاذَا أَبْطَأَتْ مَرْكَبَاتُهُ عَنِ ٱلْمَجِيءِ؟ لِمَاذَا تَأَخَّرَتْ خَطَوَاتُ مَرَاكِبِهِ؟ | ٢٨ 28 |
೨೮“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
فَأَجَابَتْهَا أَحْكَمُ سَيِّدَاتِهَا، بَلْ هِيَ رَدَّتْ جَوَابًا لِنَفْسِهَا: | ٢٩ 29 |
೨೯ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
أَلَمْ يَجِدُوا وَيَقْسِمُوا ٱلْغَنِيمَةَ! فَتَاةً أَوْ فَتَاتَيْنِ لِكُلِّ رَجُلٍ! غَنِيمَةَ ثِيَابٍ مَصْبُوغَةٍ لِسِيسَرَا! غَنِيمَةَ ثِيَابٍ مَصْبُوغَةٍ مُطَرَّزَةٍ! ثِيَابٍ مَصْبُوغَةٍ مُطَرَّزَةِ ٱلْوَجْهَيْنِ غَنِيمَةً لِعُنُقِي! | ٣٠ 30 |
೩೦‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ? ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
هَكَذَا يَبِيدُ جَمِيعُ أَعْدَائِكَ يَارَبُّ. وَأَحِبَّاؤُهُ كَخُرُوجِ ٱلشَّمْسِ فِي جَبَرُوتِهَا». وَٱسْتَرَاحَتِ ٱلْأَرْضُ أَرْبَعِينَ سَنَةً. | ٣١ 31 |
೩೧ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.