< لُوقا 17 >
وَقَالَ لِتَلَامِيذِهِ: «لَا يُمْكِنُ إِلَّا أَنْ تَأْتِيَ ٱلْعَثَرَاتُ، وَلَكِنْ وَيْلٌ لِلَّذِي تَأْتِي بِوَاسِطَتِهِ! | ١ 1 |
೧ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
خَيْرٌ لَهُ لَوْ طُوِّقَ عُنُقُهُ بِحَجَرِ رَحًى وَطُرِحَ فِي ٱلْبَحْرِ، مِنْ أَنْ يُعْثِرَ أَحَدَ هَؤُلَاءِ ٱلصِّغَارِ. | ٢ 2 |
೨ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
اِحْتَرِزُوا لِأَنْفُسِكُمْ. وَإِنْ أَخْطَأَ إِلَيْكَ أَخُوكَ فَوَبِّخْهُ، وَإِنْ تَابَ فَٱغْفِرْ لَهُ. | ٣ 3 |
೩ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
وَإِنْ أَخْطَأَ إِلَيْكَ سَبْعَ مَرَّاتٍ فِي ٱلْيَوْمِ، وَرَجَعَ إِلَيْكَ سَبْعَ مَرَّاتٍ فِي ٱلْيَوْمِ قَائِلًا: أَنَا تَائِبٌ، فَٱغْفِرْ لَهُ». | ٤ 4 |
೪ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
فَقَالَ ٱلرُّسُلُ لِلرَّبِّ: «زِدْ إِيمَانَنَا!». | ٥ 5 |
೫ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
فَقَالَ ٱلرَّبُّ: «لَوْ كَانَ لَكُمْ إِيمَانٌ مِثْلُ حَبَّةِ خَرْدَلٍ، لَكُنْتُمْ تَقُولُونَ لِهَذِهِ ٱلْجُمَّيْزَةِ: ٱنْقَلِعِي وَٱنْغَرِسِي فِي ٱلْبَحْرِ فَتُطِيعُكُمْ. | ٦ 6 |
೬ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
«وَمَنْ مِنْكُمْ لَهُ عَبْدٌ يَحْرُثُ أَوْ يَرْعَى، يَقُولُ لَهُ إِذَا دَخَلَ مِنَ ٱلْحَقْلِ: تَقَدَّمْ سَرِيعًا وَٱتَّكِئْ. | ٧ 7 |
೭“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
بَلْ أَلَا يَقُولُ لَهُ: أَعْدِدْ مَا أَتَعَشَّى بِهِ، وَتَمَنْطَقْ وَٱخْدِمْنِي حَتَّى آكُلَ وَأَشْرَبَ، وَبَعْدَ ذَلِكَ تَأْكُلُ وَتَشْرَبُ أَنْتَ؟ | ٨ 8 |
೮ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
فَهَلْ لِذَلِكَ ٱلْعَبْدِ فَضْلٌ لِأَنَّهُ فَعَلَ مَا أُمِرَ بِهِ؟ لَا أَظُنُّ. | ٩ 9 |
೯ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
كَذَلِكَ أَنْتُمْ أَيْضًا، مَتَى فَعَلْتُمْ كُلَّ مَا أُمِرْتُمْ بِهِ فَقُولُوا: إِنَّنَا عَبِيدٌ بَطَّالُونَ، لِأَنَّنَا إِنَّمَا عَمِلْنَا مَا كَانَ يَجِبُ عَلَيْنَا». | ١٠ 10 |
೧೦ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
وَفِي ذَهَابِهِ إِلَى أُورُشَلِيمَ ٱجْتَازَ فِي وَسْطِ ٱلسَّامِرَةِ وَٱلْجَلِيلِ. | ١١ 11 |
೧೧ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
وَفِيمَا هُوَ دَاخِلٌ إِلَى قَرْيَةٍ ٱسْتَقْبَلَهُ عَشَرَةُ رِجَالٍ بُرْصٍ، فَوَقَفُوا مِنْ بَعِيدٍ | ١٢ 12 |
೧೨ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
وَرَفَعوُا صَوْتًا قَائِلِينَ: «يَا يَسُوعُ، يَا مُعَلِّمُ، ٱرْحَمْنَا!». | ١٣ 13 |
೧೩“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
فَنَظَرَ وَقَالَ لَهُمُ: «ٱذْهَبُوا وَأَرُوا أَنْفُسَكُمْ لِلْكَهَنَةِ». وَفِيمَا هُمْ مُنْطَلِقُونَ طَهَرُوا. | ١٤ 14 |
೧೪ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
فَوَاحِدٌ مِنْهُمْ لَمَّا رَأَى أَنَّهُ شُفِيَ، رَجَعَ يُمَجِّدُ ٱللهَ بِصَوْتٍ عَظِيمٍ، | ١٥ 15 |
೧೫ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
وَخَرَّ عَلَى وَجْهِهِ عِنْدَ رِجْلَيْهِ شَاكِرًا لَهُ، وَكَانَ سَامِرِيًّا. | ١٦ 16 |
೧೬ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
فَأجَابَ يَسُوعُ وَقَالَ: «أَلَيْسَ ٱلْعَشَرَةُ قَدْ طَهَرُوا؟ فَأَيْنَ ٱلتِّسْعَةُ؟ | ١٧ 17 |
೧೭ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
أَلَمْ يُوجَدْ مَنْ يَرْجِعُ لِيُعْطِيَ مَجْدًا لِلهِ غَيْرُ هَذَا ٱلْغَرِيبِ ٱلْجِنْسِ؟». | ١٨ 18 |
೧೮ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
ثُمَّ قَالَ لَهُ: «قُمْ وَٱمْضِ، إِيمَانُكَ خَلَّصَكَ». | ١٩ 19 |
೧೯ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
وَلَمَّا سَأَلَهُ ٱلْفَرِّيسِيُّونَ: «مَتَى يَأْتِي مَلَكُوتُ ٱللهِ؟». أَجَابَهُمْ وَقَالَ: «لَا يَأْتِي مَلَكُوتُ ٱللهِ بِمُرَاقَبَةٍ، | ٢٠ 20 |
೨೦ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
وَلَا يَقُولُونَ: هُوَذَا هَهُنَا، أَوْ: هُوَذَا هُنَاكَ! لِأَنْ هَا مَلَكُوتُ ٱللهِ دَاخِلَكُمْ». | ٢١ 21 |
೨೧‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
وَقَالَ لِلتَّلَامِيذِ: «سَتَأْتِي أَيَّامٌ فِيهَا تَشْتَهُونَ أَنْ تَرَوْا يَوْمًا وَاحِدًا مِنْ أَيَّامِ ٱبْنِ ٱلْإِنْسَانِ وَلَا تَرَوْنَ. | ٢٢ 22 |
೨೨ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
وَيَقُولُونَ لَكُمْ: هُوَذَا هَهُنَا! أَوْ: هُوَذَا هُنَاكَ! لَا تَذْهَبُوا وَلَا تَتْبَعُوا، | ٢٣ 23 |
೨೩ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
لِأَنَّهُ كَمَا أَنَّ ٱلْبَرْقَ ٱلَّذِي يَبْرُقُ مِنْ نَاحِيَةٍ تَحْتَ ٱلسَّمَاءِ يُضِيءُ إِلَى نَاحِيَةٍ تَحْتَ ٱلسَّمَاءِ، كَذَلِكَ يَكُونُ أَيْضًا ٱبْنُ ٱلْإِنْسَانِ فِي يَوْمِهِ. | ٢٤ 24 |
೨೪ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
وَلَكِنْ يَنْبَغِي أَوَّلًا أَنْ يَتَأَلَّمَ كَثِيرًا وَيُرْفَضَ مِنْ هَذَا ٱلْجِيلِ. | ٢٥ 25 |
೨೫ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
وَكَمَا كَانَ فِي أَيَّامِ نُوحٍ كَذَلِكَ يَكُونُ أَيْضًا فِي أَيَّامِ ٱبْنِ ٱلْإِنْسَانِ: | ٢٦ 26 |
೨೬ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
كَانُوا يَأْكُلُونَ وَيَشْرَبُونَ، وَيُزَوِّجُونَ وَيَتَزَوَّجُونَ، إِلَى ٱلْيَوْمِ ٱلَّذِي فِيهِ دَخَلَ نُوحٌ ٱلْفُلْكَ، وَجَاءَ ٱلطُّوفَانُ وَأَهْلَكَ ٱلْجَمِيعَ. | ٢٧ 27 |
೨೭ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
كَذَلِكَ أَيْضًا كَمَا كَانَ فِي أَيَّامِ لُوطٍ: كَانُوا يَأْكُلُونَ وَيَشْرَبُونَ، وَيَشْتَرُونَ وَيَبِيعُونَ، وَيَغْرِسُونَ وَيَبْنُونَ. | ٢٨ 28 |
೨೮ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
وَلَكِنَّ ٱلْيَوْمَ ٱلَّذِي فِيهِ خَرَجَ لُوطٌ مِنْ سَدُومَ، أَمْطَرَ نَارًا وَكِبْرِيتًا مِنَ ٱلسَّمَاءِ فَأَهْلَكَ ٱلْجَمِيعَ. | ٢٩ 29 |
೨೯ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
هَكَذَا يَكُونُ فِي ٱلْيَوْمِ ٱلَّذِي فِيهِ يُظْهَرُ ٱبْنُ ٱلْإِنْسَانِ. | ٣٠ 30 |
೩೦ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
فِي ذَلِكَ ٱلْيَوْمِ مَنْ كَانَ عَلَى ٱلسَّطْحِ وَأَمْتِعَتُهُ فِي ٱلْبَيْتِ فَلَا يَنْزِلْ لِيَأْخُذَهَا، وَٱلَّذِي فِي ٱلْحَقْلِ كَذَلِكَ لَا يَرْجِعْ إِلَى ٱلْوَرَاءِ. | ٣١ 31 |
೩೧ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
اُذْكُرُوا ٱمْرَأَةَ لُوطٍ! | ٣٢ 32 |
೩೨ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
مَنْ طَلَبَ أَنْ يُخَلِّصَ نَفْسَهُ يُهْلِكُهَا، وَمَنْ أَهْلَكَهَا يُحْيِيهَا. | ٣٣ 33 |
೩೩ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
أَقُولُ لَكُمْ: إِنَّهُ فِي تِلْكَ ٱللَّيْلَةِ يَكُونُ ٱثْنَانِ عَلَى فِرَاشٍ وَاحِدٍ، فَيُؤْخَذُ ٱلْوَاحِدُ وَيُتْرَكُ ٱلْآخَرُ. | ٣٤ 34 |
೩೪ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
تَكُونُ ٱثْنَتَانِ تَطْحَنَانِ مَعًا، فَتُؤْخَذُ ٱلْوَاحِدَةُ وَتُتْرَكُ ٱلْأُخْرَى. | ٣٥ 35 |
೩೫ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
يَكُونُ ٱثْنَانِ فِي ٱلْحَقْلِ، فَيُؤْخَذُ ٱلْوَاحِدُ وَيُتْرَكُ ٱلْآخَرُ». | ٣٦ 36 |
೩೬“ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
فَأَجَابوا وَقَالُوا لَهُ: «أَيْنَ يَارَبُّ؟». فَقَالَ لَهُمْ: «حَيْثُ تَكُونُ ٱلْجُثَّةُ هُنَاكَ تَجْتَمِعُ ٱلنُّسُورُ». | ٣٧ 37 |
೩೭ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.