< لُوقا 19 >
ثُمَّ دَخَلَ وَٱجْتَازَ فِي أَرِيحَا. | ١ 1 |
೧ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ,
وَإِذَا رَجُلٌ ٱسْمُهُ زَكَّا، وَهُوَ رَئِيسٌ لِلْعَشَّارِينَ وَكَانَ غَنِيًّا، | ٢ 2 |
೨ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.
وَطَلَبَ أَنْ يَرَى يَسُوعَ مَنْ هُوَ، وَلَمْ يَقْدِرْ مِنَ ٱلْجَمْعِ، لِأَنَّهُ كَانَ قَصِيرَ ٱلْقَامَةِ. | ٣ 3 |
೩ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
فَرَكَضَ مُتَقَدِّمًا وَصَعِدَ إِلَى جُمَّيْزَةٍ لِكَيْ يَرَاهُ، لِأَنَّهُ كَانَ مُزْمِعًا أَنْ يَمُرَّ مِنْ هُنَاكَ. | ٤ 4 |
೪ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
فَلَمَّا جَاءَ يَسُوعُ إِلَى ٱلْمَكَانِ، نَظَرَ إِلَى فَوْقُ فَرَآهُ، وَقَالَ لَهُ: «يَا زَكَّا، أَسْرِعْ وَٱنْزِلْ، لِأَنَّهُ يَنْبَغِي أَنْ أَمْكُثَ ٱلْيَوْمَ فِي بَيْتِكَ». | ٥ 5 |
೫ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
فَأَسْرَعَ وَنَزَلَ وَقَبِلَهُ فَرِحًا. | ٦ 6 |
೬ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
فَلَمَّا رَأَى ٱلْجَمِيعُ ذَلِكَ تَذَمَّرُوا قَائِلِينَ: «إِنَّهُ دَخَلَ لِيَبِيتَ عِنْدَ رَجُلٍ خَاطِئٍ». | ٧ 7 |
೭ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
فَوَقَفَ زَكَّا وَقَالَ لِلرَّبِّ: «هَا أَنَا يَارَبُّ أُعْطِي نِصْفَ أَمْوَالِي لِلْمَسَاكِينِ، وَإِنْ كُنْتُ قَدْ وَشَيْتُ بِأَحَدٍ أَرُدُّ أَرْبَعَةَ أَضْعَافٍ». | ٨ 8 |
೮ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
فَقَالَ لَهُ يَسُوعُ: «ٱلْيَوْمَ حَصَلَ خَلَاصٌ لِهَذَا ٱلْبَيْتِ، إِذْ هُوَ أَيْضًا ٱبْنُ إِبْرَاهِيمَ، | ٩ 9 |
೯ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
لِأَنَّ ٱبْنَ ٱلْإِنْسَانِ قَدْ جَاءَ لِكَيْ يَطْلُبَ وَيُخَلِّصَ مَا قَدْ هَلَكَ». | ١٠ 10 |
೧೦ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
وَإِذْ كَانُوا يَسْمَعُونَ هَذَا عَادَ فَقَالَ مَثَلًا، لِأَنَّهُ كَانَ قَرِيبًا مِنْ أُورُشَلِيمَ، وَكَانُوا يَظُنُّونَ أَنَّ مَلَكُوتَ ٱللهِ عَتِيدٌ أَنْ يَظْهَرَ فِي ٱلْحَالِ. | ١١ 11 |
೧೧ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
فَقَالَ: «إِنْسَانٌ شَرِيفُ ٱلْجِنْسِ ذَهَبَ إِلَى كُورَةٍ بَعِيدَةٍ لِيَأْخُذَ لِنَفْسِهِ مُلْكًا وَيَرْجِعَ. | ١٢ 12 |
೧೨ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
فَدَعَا عَشَرَةَ عَبِيدٍ لَهُ وَأَعْطَاهُمْ عَشَرَةَ أَمْنَاءٍ، وَقَالَ لَهُمْ: تَاجِرُوا حَتَّى آتِيَ. | ١٣ 13 |
೧೩ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
وَأَمَّا أَهْلُ مَدِينَتِهِ فَكَانُوا يُبْغِضُونَهُ، فَأَرْسَلُوا وَرَاءَهُ سَفَارَةً قَائِلِينَ: لَا نُرِيدُ أَنَّ هَذَا يَمْلِكُ عَلَيْنَا. | ١٤ 14 |
೧೪ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
وَلَمَّا رَجَعَ بَعْدَمَا أَخَذَ ٱلْمُلْكَ، أَمَرَ أَنْ يُدْعَى إِلَيْهِ أُولَئِكَ ٱلْعَبِيدُ ٱلَّذِينَ أَعْطَاهُمُ ٱلْفِضَّةَ، لِيَعْرِفَ بِمَا تَاجَرَ كُلُّ وَاحِدٍ. | ١٥ 15 |
೧೫ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
فَجَاءَ ٱلْأَوَّلُ قَائِلًا: يَا سَيِّدُ، مَنَاكَ رَبِحَ عَشَرَةَ أَمْنَاءٍ. | ١٦ 16 |
೧೬ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
فَقَالَ لَهُ: نِعِمَّا أَيُّهَا ٱلْعَبْدُ ٱلصَّالِحُ! لِأَنَّكَ كُنْتَ أَمِينًا فِي ٱلْقَلِيلِ، فَلْيَكُنْ لَكَ سُلْطَانٌ عَلَى عَشْرِ مُدْنٍ. | ١٧ 17 |
೧೭ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
ثُمَّ جَاءَ ٱلثَّانِي قَائِلًا: يَا سَيِّدُ، مَنَاكَ عَمِلَ خَمْسَةَ أَمْنَاءٍ. | ١٨ 18 |
೧೮ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
فَقَالَ لِهَذَا أَيْضًا: وَكُنْ أَنْتَ عَلَى خَمْسِ مُدْنٍ. | ١٩ 19 |
೧೯ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
ثُمَّ جَاءَ آخَرُ قَائِلًا: يَا سَيِّدُ، هُوَذَا مَنَاكَ ٱلَّذِي كَانَ عِنْدِي مَوْضُوعًا فِي مِنْدِيلٍ، | ٢٠ 20 |
೨೦ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
لِأَنِّي كُنْتُ أَخَافُ مِنْكَ، إِذْ أَنْتَ إِنْسَانٌ صَارِمٌ، تَأْخُذُ مَا لَمْ تَضَعْ، وَتَحْصُدُ مَا لَمْ تَزْرَعْ. | ٢١ 21 |
೨೧
فَقَالَ لَهُ: مِنْ فَمِكَ أَدِينُكَ أَيُّهَا ٱلْعَبْدُ ٱلشِّرِّيرُ. عَرَفْتَ أَنِّي إِنْسَانٌ صَارِمٌ، آخُذُ مَا لَمْ أَضَعْ، وَأَحْصُدُ مَا لَمْ أَزْرَعْ، | ٢٢ 22 |
೨೨ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
فَلِمَاذَا لَمْ تَضَعْ فِضَّتِي عَلَى مَائِدَةِ ٱلصَّيَارِفَةِ، فَكُنْتُ مَتَى جِئْتُ أَسْتَوْفِيهَا مَعَ رِبًا؟ | ٢٣ 23 |
೨೩ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
ثُمَّ قَالَ لِلْحَاضِرِينَ: خُذُوا مِنْهُ ٱلْمَنَا وَأَعْطُوهُ لِلَّذِي عِنْدَهُ ٱلْعَشَرَةُ ٱلْأَمْنَاءُ. | ٢٤ 24 |
೨೪ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.
فَقَالُوا لَهُ: يَا سَيِّدُ، عِنْدَهُ عَشَرَةُ أَمْنَاءٍ! | ٢٥ 25 |
೨೫ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.
لِأَنِّي أَقُولُ لَكُمْ: إِنَّ كُلَّ مَنْ لَهُ يُعْطَى، وَمَنْ لَيْسَ لَهُ فَٱلَّذِي عِنْدَهُ يُؤْخَذُ مِنْهُ. | ٢٦ 26 |
೨೬ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
أَمَّا أَعْدَائِي، أُولَئِكَ ٱلَّذِينَ لَمْ يُرِيدُوا أَنْ أَمْلِكَ عَلَيْهِمْ، فَأْتُوا بِهِمْ إِلَى هُنَا وَٱذْبَحُوهُمْ قُدَّامِي». | ٢٧ 27 |
೨೭ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
وَلَمَّا قَالَ هَذَا تَقَدَّمَ صَاعِدًا إِلَى أُورُشَلِيمَ. | ٢٨ 28 |
೨೮ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
وَإِذْ قَرُبَ مِنْ بَيْتِ فَاجِي وَبَيْتِ عَنْيَا، عِنْدَ ٱلْجَبَلِ ٱلَّذِي يُدْعَى جَبَلَ ٱلزَّيْتُونِ، أَرْسَلَ ٱثْنَيْنِ مِنْ تَلَامِيذِهِ | ٢٩ 29 |
೨೯ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
قَائِلًا: «اِذْهَبَا إِلَى ٱلْقَرْيَةِ ٱلَّتِي أَمَامَكُمَا، وَحِينَ تَدْخُلَانِهَا تَجِدَانِ جَحْشًا مَرْبُوطًا لَمْ يَجْلِسْ عَلَيْهِ أَحَدٌ مِنَ ٱلنَّاسِ قَطُّ. فَحُلَّاهُ وَأْتِيَا بِهِ. | ٣٠ 30 |
೩೦“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
وَإِنْ سَأَلَكُمَا أَحَدٌ: لِمَاذَا تَحُلَّانِهِ؟ فَقُولَا لَهُ هَكَذَا: إِنَّ ٱلرَّبَّ مُحْتَاجٌ إِلَيْهِ». | ٣١ 31 |
೩೧ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.
فَمَضَى ٱلْمُرْسَلَانِ وَوَجَدَا كَمَا قَالَ لَهُمَا. | ٣٢ 32 |
೩೨ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
وَفِيمَا هُمَا يَحُلَّانِ ٱلْجَحْشَ قَالَ لَهُمَا أَصْحَابُهُ: «لِمَاذَا تَحُلَّانِ ٱلْجَحْشَ؟». | ٣٣ 33 |
೩೩ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
فَقَالَا: «ٱلرَّبُّ مُحْتَاجٌ إِلَيْهِ». | ٣٤ 34 |
೩೪ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.
وَأَتَيَا بِهِ إِلَى يَسُوعَ، وَطَرَحَا ثِيَابَهُمَا عَلَى ٱلْجَحْشِ، وَأَرْكَبَا يَسُوعَ. | ٣٥ 35 |
೩೫ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
وَفِيمَا هُوَ سَائِرٌ فَرَشُوا ثِيَابَهُمْ فِي ٱلطَّرِيقِ. | ٣٦ 36 |
೩೬ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
وَلَمَّا قَرُبَ عِنْدَ مُنْحَدَرِ جَبَلِ ٱلزَّيْتُونِ، ٱبْتَدَأَ كُلُّ جُمْهُورِ ٱلتَّلَامِيذِ يَفْرَحُونَ وَيُسَبِّحُونَ ٱللهَ بِصَوْتٍ عَظِيمٍ، لِأَجْلِ جَمِيعِ ٱلْقُوَّاتِ ٱلَّتِي نَظَرُوا، | ٣٧ 37 |
೩೭ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
قَائِلِينَ: «مُبَارَكٌ ٱلْمَلِكُ ٱلْآتِي بِٱسْمِ ٱلرَّبِّ! سَلَامٌ فِي ٱلسَّمَاءِ وَمَجْدٌ فِي ٱلْأَعَالِي!». | ٣٨ 38 |
೩೮“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
وَأَمَّا بَعْضُ ٱلْفَرِّيسِيِّينَ مِنَ ٱلْجَمْعِ فَقَالُوا لَهُ: «يَا مُعَلِّمُ، ٱنْتَهِرْ تَلَامِيذَكَ!». | ٣٩ 39 |
೩೯ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
فَأَجَابَ وَقَالَ لَهُمْ: «أَقُولُ لَكُمْ: إِنَّهُ إِنْ سَكَتَ هَؤُلَاءِ فَٱلْحِجَارَةُ تَصْرُخُ!». | ٤٠ 40 |
೪೦ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.
وَفِيمَا هُوَ يَقْتَرِبُ نَظَرَ إِلَى ٱلْمَدِينَةِ وَبَكَى عَلَيْهَا | ٤١ 41 |
೪೧ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
قَائِلًا: «إِنَّكِ لَوْ عَلِمْتِ أَنْتِ أَيْضًا، حَتَّى فِي يَوْمِكِ هَذَا، مَا هُوَ لِسَلَامِكِ! وَلَكِنِ ٱلْآنَ قَدْ أُخْفِيَ عَنْ عَيْنَيْكِ. | ٤٢ 42 |
೪೨“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
فَإِنَّهُ سَتَأْتِي أَيَّامٌ وَيُحِيطُ بِكِ أَعْدَاؤُكِ بِمِتْرَسَةٍ، وَيُحْدِقُونَ بِكِ وَيُحَاصِرُونَكِم مِنْ كُلِّ جِهَةٍ، | ٤٣ 43 |
೪೩ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.
وَيَهْدِمُونَكِ وَبَنِيكِ فِيكِ، وَلَا يَتْرُكُونَ فِيكِ حَجَرًا عَلَى حَجَرٍ، لِأَنَّكِ لَمْ تَعْرِفِي زَمَانَ ٱفْتِقَادِكِ». | ٤٤ 44 |
೪೪
وَلَمَّا دَخَلَ ٱلْهَيْكَلَ ٱبْتَدَأَ يُخْرِجُ ٱلَّذِينَ كَانُوا يَبِيعُونَ وَيَشْتَرُونَ فِيهِ | ٤٥ 45 |
೪೫ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,
قَائِلًا لَهُمْ: «مَكْتُوبٌ: إِنَّ بَيْتِي بَيْتُ ٱلصَّلَاةِ. وَأَنْتُمْ جَعَلْتُمُوهُ مَغَارَةَ لُصُوصٍ!». | ٤٦ 46 |
೪೬“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
وَكَانَ يُعَلِّمُ كُلَّ يَوْمٍ فِي ٱلْهَيْكَلِ، وَكَانَ رُؤَسَاءُ ٱلْكَهَنَةِ وَٱلْكَتَبَةُ مَعَ وُجُوهِ ٱلشَّعْبِ يَطْلُبُونَ أَنْ يُهْلِكُوهُ، | ٤٧ 47 |
೪೭ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
وَلَمْ يَجِدُوا مَا يَفْعَلُونَ، لِأَنَّ ٱلشَّعْبَ كُلَّهُ كَانَ مُتَعَلِّقًا بِهِ يَسْمَعُ مِنْهُ. | ٤٨ 48 |
೪೮ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.