< لُوقا 5 >

وَإِذْ كَانَ ٱلْجَمْعُ يَزْدَحِمُ عَلَيْهِ لِيَسْمَعَ كَلِمَةَ ٱللهِ، كَانَ وَاقِفًا عِنْدَ بُحَيْرَةِ جَنِّيسَارَتَ. ١ 1
ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.
فَرَأَى سَفِينَتَيْنِ وَاقِفَتَيْنِ عِنْدَ ٱلْبُحَيْرَةِ، وَٱلصَّيَّادُونَ قَدْ خَرَجُوا مِنْهُمَا وَغَسَلُوا ٱلشِّبَاكَ. ٢ 2
ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
فَدَخَلَ إِحْدَى ٱلسَّفِينَتَيْنِ ٱلَّتِي كَانَتْ لِسِمْعَانَ، وَسَأَلَهُ أَنْ يُبْعِدَ قَلِيلًا عَنِ ٱلْبَرِّ. ثُمَّ جَلَسَ وَصَارَ يُعَلِّمُ ٱلْجُمُوعَ مِنَ ٱلسَّفِينَةِ. ٣ 3
ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
وَلَمَّا فَرَغَ مِنَ ٱلْكَلَامِ قَالَ لِسِمْعَانَ: «ٱبْعُدْ إِلَى ٱلْعُمْقِ وَأَلْقُوا شِبَاكَكُمْ لِلصَّيْدِ». ٤ 4
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.
فَأَجَابَ سِمْعَانُ وَقَالَ لَهُ: «يَا مُعَلِّمُ، قَدْ تَعِبْنَا ٱللَّيْلَ كُلَّهُ وَلَمْ نَأْخُذْ شَيْئًا. وَلَكِنْ عَلَى كَلِمَتِكَ أُلْقِي ٱلشَّبَكَةَ». ٥ 5
ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.
وَلَمَّا فَعَلُوا ذَلِكَ أَمْسَكُوا سَمَكًا كَثِيرًا جِدًّا، فَصَارَتْ شَبَكَتُهُمْ تَتَخَرَّقُ. ٦ 6
ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.
فَأَشَارُوا إِلَى شُرَكَائِهِمُ ٱلَّذِينَ فِي ٱلسَّفِينَةِ ٱلْأُخْرَى أَنْ يَأْتُوا وَيُسَاعِدُوهُمْ. فَأَتَوْا وَمَلَأُوا ٱلسَّفِينَتَيْنِ حَتَّى أَخَذَتَا فِي ٱلْغَرَقِ. ٧ 7
ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
فَلَمَّا رَأَى سِمْعَانُ بُطْرُسُ ذَلِكَ خَرَّ عِنْدَ رُكْبَتَيْ يَسُوعَ قَائِلًا: «ٱخْرُجْ مِنْ سَفِينَتِي يَارَبُّ، لِأَنِّي رَجُلٌ خَاطِئٌ!». ٨ 8
ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.
إِذِ ٱعْتَرَتْهُ وَجمِيعَ ٱلَّذِينَ مَعَهُ دَهْشَةٌ عَلَى صَيْدِ ٱلسَّمَكِ ٱلَّذِي أَخَذُوهُ. ٩ 9
ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
وَكَذَلِكَ أَيْضًا يَعْقُوبُ وَيُوحَنَّا ٱبْنَا زَبَدِي ٱللَّذَانِ كَانَا شَرِيكَيْ سِمْعَانَ. فَقَالَ يَسُوعُ لِسِمْعَانَ: «لَاتَخَفْ! مِنَ ٱلْآنَ تَكُونُ تَصْطَادُ ٱلنَّاسَ!». ١٠ 10
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.
وَلَمَّا جَاءُوا بِٱلسَّفِينَتَيْنِ إِلَى ٱلْبَرِّ تَرَكُوا كُلَّ شَيْءٍ وَتَبِعُوهُ. ١١ 11
ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
وَكَانَ فِي إِحْدَى ٱلْمُدُنِ، فَإِذَا رَجُلٌ مَمْلُوءٌ بَرَصًا. فَلَمَّا رَأَى يَسُوعَ خَرَّ عَلَى وَجْهِهِ وَطَلَبَ إِلَيْهِ قَائِلًا: «يَا سَيِّدُ، إِنْ أَرَدْتَ تَقْدِرْ أَنْ تُطَهِّرَنِي». ١٢ 12
ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
فَمَدَّ يَدَهُ وَلَمَسَهُ قَائِلًا: «أُرِيدُ، فَٱطْهُرْ!». وَلِلْوَقْتِ ذَهَبَ عَنْهُ ٱلْبَرَصُ. ١٣ 13
ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
فَأَوْصَاهُ أَنْ لَا يَقُولَ لِأَحَدٍ. بَلِ «ٱمْضِ وَأَرِ نَفْسَكَ لِلْكَاهِنِ، وَقَدِّمْ عَنْ تَطْهِيرِكَ كَمَا أَمَرَ مُوسَى شَهَادَةً لَهُمْ». ١٤ 14
ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.
فَذَاعَ ٱلْخَبَرُ عَنْهُ أَكْثَرَ. فَٱجْتَمَعَ جُمُوعٌ كَثِيرَةٌ لِكَيْ يَسْمَعُوا وَيُشْفَوْا بِهِ مِنْ أَمْرَاضِهِمْ. ١٥ 15
ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.
وَأَمَّا هُوَ فَكَانَ يَعْتَزِلُ فِي ٱلْبَرَارِي وَيُصَلِّي. ١٦ 16
ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.
وَفِي أَحَدِ ٱلْأَيَّامِ كَانَ يُعَلِّمُ، وَكَانَ فَرِّيسِيُّونَ وَمُعَلِّمُونَ لِلنَّامُوسِ جَالِسِينَ وَهُمْ قَدْ أَتَوْا مِنْ كُلِّ قَرْيَةٍ مِنَ ٱلْجَلِيلِ وَٱلْيَهُودِيَّةِ وَأُورُشَلِيمَ. وَكَانَتْ قُوَّةُ ٱلرَّبِّ لِشِفَائِهِمْ. ١٧ 17
ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.
وَإِذَا بِرِجَالٍ يَحْمِلُونَ عَلَى فِرَاشٍ إِنْسَانًا مَفْلُوجًا، وَكَانُوا يَطْلُبُونَ أَنْ يَدْخُلُوا بِهِ وَيَضَعُوهُ أَمَامَهُ. ١٨ 18
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.
وَلَمَّا لَمْ يَجِدُوا مِنْ أَيْنَ يَدْخُلُونَ بِهِ لِسَبَبِ ٱلْجَمْعِ، صَعِدُوا عَلَى ٱلسَّطْحِ وَدَلَّوْهُ مَعَ ٱلْفِرَاشِ مِنْ بَيْنِ ٱلْأَجُرِّ إِلَى ٱلْوَسْطِ قُدَّامَ يَسُوعَ. ١٩ 19
ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
فَلَمَّا رَأَى إِيمَانَهُمْ قَالَ لَهُ: «أَيُّهَا ٱلْإِنْسَانُ، مَغْفُورَةٌ لَكَ خَطَايَاكَ». ٢٠ 20
ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.
فَٱبْتَدَأَ ٱلْكَتَبَةُ وَٱلْفَرِّيسِيُّونَ يُفَكِّرُونَ قَائِلِينَ «مَنْ هَذَا ٱلَّذِي يَتَكَلَّمُ بِتَجَادِيفَ؟ مَنْ يَقْدِرُ أَنْ يَغْفِرَ خَطَايَا إِلَّا ٱللهُ وَحْدَهُ؟». ٢١ 21
ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
فَشَعَرَ يَسُوعُ بِأَفْكَارِهِمْ، وَأَجَابَ وَقَالَ لَهُمْ: «مَاذَا تُفَكِّرُونَ فِي قُلُوبِكُمْ؟ ٢٢ 22
ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?
أَيُّمَا أَيْسَرُ: أَنْ يُقَالَ: مَغْفُورَةٌ لَكَ خَطَايَاكَ، أَمْ أَنْ يُقَالَ: قُمْ وَٱمْشِ؟ ٢٣ 23
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
وَلَكِنْ لِكَيْ تَعْلَمُوا أَنَّ لِٱبْنِ ٱلْإِنْسَانِ سُلْطَانًا عَلَى ٱلْأَرْضِ أَنْ يَغْفِرَ ٱلْخَطَايَا»، قَالَ لِلْمَفْلُوجِ: «لَكَ أَقُولُ: قُمْ وَٱحْمِلْ فِرَاشَكَ وَٱذْهَبْ إِلَى بَيْتِكَ!». ٢٤ 24
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
فَفِي ٱلْحَالِ قَامَ أَمَامَهُمْ، وَحَمَلَ مَا كَانَ مُضْطَجِعًا عَلَيْهِ، وَمَضَى إِلَى بَيْتِهِ وَهُوَ يُمَجِّدُ ٱللهَ. ٢٥ 25
ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
فَأَخَذَتِ ٱلْجَمِيعَ حَيْرَةٌ وَمَجَّدُوا ٱللهَ، وَٱمْتَلَأُوا خَوْفًا قَائِلِينَ: «إِنَّنَا قَدْ رَأَيْنَا ٱلْيَوْمَ عَجَائِبَ!». ٢٦ 26
ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.
وَبَعْدَ هَذَا خَرَجَ فَنَظَرَ عَشَّارًا ٱسْمُهُ لَاوِي جَالِسًا عِنْدَ مَكَانِ ٱلْجِبَايَةِ، فَقَالَ لَهُ: «ٱتْبَعْنِي». ٢٧ 27
ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
فَتَرَكَ كُلَّ شَيْءٍ وَقَامَ وَتَبِعَهُ. ٢٨ 28
ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.
وَصَنَعَ لَهُ لَاوِي ضِيَافَةً كَبِيرَةً فِي بَيْتِهِ. وَٱلَّذِينَ كَانُوا مُتَّكِئِينَ مَعَهُمْ كَانُوا جَمْعًا كَثِيرًا مِنْ عَشَّارِينَ وَآخَرِينَ. ٢٩ 29
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.
فَتَذَمَّرَ كَتَبَتُهُمْ وَٱلْفَرِّيسِيُّونَ عَلَى تَلَامِيذِهِ قَائِلِينَ: «لِمَاذَا تَأْكُلُونَ وَتَشْرَبُونَ مَعَ عَشَّارِينَ وَخُطَاةٍ؟». ٣٠ 30
ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.
فَأَجَابَ يَسُوعُ وَقَالَ لَهُمْ: «لَا يَحْتَاجُ ٱلْأَصِحَّاءُ إِلَى طَبِيبٍ، بَلِ ٱلْمَرْضَى. ٣١ 31
ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
لَمْ آتِ لِأَدْعُوَ أَبْرَارًا بَلْ خُطَاةً إِلَى ٱلتَّوْبَةِ». ٣٢ 32
ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.
وَقَالُوا لَهُ: «لِمَاذَا يَصُومُ تَلَامِيذُ يُوحَنَّا كَثِيرًا وَيُقَدِّمُونَ طَلَبَاتٍ، وَكَذَلِكَ تَلَامِيذُ ٱلْفَرِّيسِيِّينَ أَيْضًا، وَأَمَّا تَلَامِيذُكَ فَيَأْكُلُونَ وَيَشْرَبُونَ؟». ٣٣ 33
ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.
فَقَالَ لَهُمْ: «أَتَقْدِرُونَ أَنْ تَجْعَلُوا بَنِي ٱلْعُرْسِ يَصُومُونَ مَا دَامَ ٱلْعَرِيسُ مَعَهُمْ؟ ٣٤ 34
ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?
وَلَكِنْ سَتَأْتِي أَيَّامٌ حِينَ يُرْفَعُ ٱلْعَرِيسُ عَنْهُمْ، فَحِينَئِذٍ يَصُومُونَ فِي تِلْكَ ٱلْأَيَّامِ». ٣٥ 35
ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.
وَقَالَ لَهُمْ أَيْضًا مَثَلًا: «لَيْسَ أَحَدٌ يَضَعُ رُقْعَةً مِنْ ثَوْبٍ جَدِيدٍ عَلَى ثَوْبٍ عَتِيقٍ، وَإِلَّا فَٱلْجَدِيدُ يَشُقُّهُ، وَٱلْعَتِيقُ لَا تُوافِقُهُ ٱلرُّقْعَةُ ٱلَّتِي مِنَ ٱلْجَدِيدِ. ٣٦ 36
ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.
وَلَيْسَ أَحَدٌ يَجْعَلُ خَمْرًا جَدِيدَةً فِي زِقَاقٍ عَتِيقَةٍ لِئَلَّا تَشُقَّ ٱلْخَمْرُ ٱلْجَدِيدَةُ ٱلزِّقَاقَ، فَهِيَ تُهْرَقُ وَٱلزِّقَاقُ تَتْلَفُ. ٣٧ 37
ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.
بَلْ يَجْعَلُونَ خَمْرًا جَدِيدَةً فِي زِقَاقٍ جَدِيدَةٍ، فَتُحْفَظُ جَمِيعًا. ٣٨ 38
ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.
وَلَيْسَ أَحَدٌ إِذَا شَرِبَ ٱلْعَتِيقَ يُرِيدُ لِلْوَقْتِ ٱلْجَدِيدَ، لِأَنَّهُ يَقُولُ: ٱلْعَتِيقُ أَطْيَبُ». ٣٩ 39
ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.

< لُوقا 5 >