< مَرْقُس 13 >
وَفِيمَا هُوَ خَارِجٌ مِنَ ٱلْهَيْكَلِ، قَالَ لَهُ وَاحِدٌ مِنْ تَلَامِيذِهِ: «يَا مُعَلِّمُ، ٱنْظُرْ! مَا هَذِهِ ٱلْحِجَارَةُ! وَهَذِهِ ٱلْأَبْنِيَةُ!». | ١ 1 |
೧ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
فَأَجَابَ يَسُوعُ وَقَالَ لَهُ: «أَتَنْظُرُ هَذِهِ ٱلْأَبْنِيَةَ ٱلْعَظِيمَةَ؟ لَا يُتْرَكُ حَجَرٌ عَلَى حَجَرٍ لَا يُنْقَضُ». | ٢ 2 |
೨ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
وَفِيمَا هُوَ جَالِسٌ عَلَى جَبَلِ ٱلزَّيْتُونِ، تُجَاهَ ٱلْهَيْكَلِ، سَأَلَهُ بُطْرُسُ وَيَعْقُوبُ وَيُوحَنَّا وَأَنْدَرَاوُسُ عَلَى ٱنْفِرَادٍ: | ٣ 3 |
೩ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
«قُلْ لَنَا مَتَى يَكُونُ هَذَا؟ وَمَا هِيَ ٱلْعَلَامَةُ عِنْدَمَا يَتِمُّ جَمِيعُ هَذَا؟». | ٤ 4 |
೪ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
فَأَجَابَهُمْ يَسُوعُ وَٱبْتَدَأَ يَقُولُ: «ٱنْظُرُوا! لَا يُضِلُّكُمْ أَحَدٌ. | ٥ 5 |
೫ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
فَإِنَّ كَثِيرِينَ سَيَأْتُونَ بِٱسْمِي قَائِلِينَ: إِنِّي أَنَا هُوَ! وَيُضِلُّونَ كَثِيرِينَ. | ٦ 6 |
೬ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
فَإِذَا سَمِعْتُمْ بِحُرُوبٍ وَبِأَخْبَارِ حُرُوبٍ فَلَا تَرْتَاعُوا، لِأَنَّهَا لَابُدَّ أَنْ تَكُونَ، وَلَكِنْ لَيْسَ ٱلْمُنْتَهَى بَعْدُ. | ٧ 7 |
೭ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
لِأَنَّهُ تَقُومُ أُمَّةٌ عَلَى أُمَّةٍ، وَمَمْلَكَةٌ عَلَى مَمْلَكَةٍ، وَتَكُونُ زَلَازِلُ فِي أَمَاكِنَ، وَتَكُونُ مَجَاعَاتٌ وَٱضْطِرَابَاتٌ. هَذِهِ مُبْتَدَأُ ٱلْأَوْجَاعِ. | ٨ 8 |
೮ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
فَٱنْظُرُوا إِلَى نُفُوسِكُمْ. لِأَنَّهُمْ سَيُسَلِّمُونَكُمْ إِلَى مَجَالِسَ، وَتُجْلَدُونَ فِي مَجَامِعَ، وَتُوقَفُونَ أَمَامَ وُلَاةٍ وَمُلُوكٍ، مِنْ أَجْلِي، شَهَادَةً لَهُمْ. | ٩ 9 |
೯“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
وَيَنْبَغِي أَنْ يُكْرَزَ أَوَّلًا بِٱلْإِنْجِيلِ فِي جَمِيعِ ٱلْأُمَمِ. | ١٠ 10 |
೧೦ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
فَمَتَى سَاقُوكُمْ لِيُسَلِّمُوكُمْ، فَلَا تَعْتَنُوا مِنْ قَبْلُ بِمَا تَتَكَلَّمُونَ وَلَا تَهْتَمُّوا، بَلْ مَهْمَا أُعْطِيتُمْ فِي تِلْكَ ٱلسَّاعَةِ فَبِذَلِكَ تَكَلَّمُوا. لِأَنْ لَسْتُمْ أَنْتُمُ ٱلْمُتَكَلِّمِينَ بَلِ ٱلرُّوحُ ٱلْقُدُسُ. | ١١ 11 |
೧೧“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
وَسَيُسْلِمُ ٱلْأَخُ أَخَاهُ إِلَى ٱلْمَوْتِ، وَٱلْأَبُ وَلَدَهُ، وَيَقُومُ ٱلْأَوْلَادُ عَلَى وَالِدِيهِمْ وَيَقْتُلُونَهُمْ. | ١٢ 12 |
೧೨ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
وَتَكُونُونَ مُبْغَضِينَ مِنَ ٱلْجَمِيعِ مِنْ أَجْلِ ٱسْمِي. وَلَكِنَّ ٱلَّذِي يَصْبِرُ إِلَى ٱلْمُنْتَهَى فَهَذَا يَخْلُصُ. | ١٣ 13 |
೧೩ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
فَمَتَى نَظَرْتُمْ «رِجْسَةَ ٱلْخَرَابِ» ٱلَّتِي قَالَ عَنْهَا دَانِيآلُ ٱلنَّبِيُّ، قَائِمَةً حَيْثُ لَا يَنْبَغِي-لِيَفْهَمِ ٱلْقَارِئُ- فَحِينَئِذٍ لِيَهْرُبِ ٱلَّذِينَ فيِ ٱلْيَهُودِيَّةِ إِلَى ٱلْجِبَالِ، | ١٤ 14 |
೧೪“ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
وَٱلَّذِي عَلَى ٱلسَّطْحِ فَلَا يَنْزِلْ إِلَى ٱلْبَيْتِ وَلَا يَدْخُلْ لِيَأْخُذَ مِنْ بَيْتِهِ شَيْئًا، | ١٥ 15 |
೧೫ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
وَٱلَّذِي فِي ٱلْحَقْلِ فَلَا يَرْجِعْ إِلَى ٱلْوَرَاءِ لِيَأْخُذَ ثَوْبَهُ. | ١٦ 16 |
೧೬ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
وَوَيْلٌ لِلْحَبَالَى وَٱلْمُرْضِعَاتِ فِي تِلْكَ ٱلْأَيَّامِ! | ١٧ 17 |
೧೭“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
وَصَلُّوا لِكَيْ لَا يَكُونَ هَرَبُكُمْ فِي شِتَاءٍ. | ١٨ 18 |
೧೮ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
لِأَنَّهُ يَكُونُ فِي تِلْكَ ٱلْأَيَّامِ ضِيقٌ لَمْ يَكُنْ مِثْلُهُ مُنْذُ ٱبْتِدَاءِ ٱلْخَلِيقَةِ ٱلَّتِي خَلَقَهَا ٱللهُ إِلَى ٱلْآنَ، وَلَنْ يَكُونَ. | ١٩ 19 |
೧೯ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
وَلَوْ لَمْ يُقَصِّرِ ٱلرَّبُّ تِلْكَ ٱلْأَيَّامَ، لَمْ يَخْلُصْ جَسَدٌ. وَلَكِنْ لِأَجْلِ ٱلْمُخْتَارِينَ ٱلَّذِينَ ٱخْتَارَهُمْ، قَصَّرَ ٱلْأَيَّامَ. | ٢٠ 20 |
೨೦ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
حِينَئِذٍ إِنْ قَالَ لَكُمْ أَحَدٌ: هُوَذَا ٱلْمَسِيحُ هُنَا! أَوْ: هُوَذَا هُنَاكَ! فَلَا تُصَدِّقُوا. | ٢١ 21 |
೨೧“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
لِأَنَّهُ سَيَقُومُ مُسَحَاءُ كَذَبَةٌ وَأَنْبِيَاءُ كَذَبَةٌ، وَيُعْطُونَ آيَاتٍ وَعَجَائِبَ، لِكَيْ يُضِلُّوا لَوْ أَمْكَنَ ٱلْمُخْتَارِينَ أَيْضًا. | ٢٢ 22 |
೨೨ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
فَٱنْظُرُوا أَنْتُمْ. هَا أَنَا قَدْ سَبَقْتُ وَأَخْبَرْتُكُمْ بِكُلِّ شَيْءٍ. | ٢٣ 23 |
೨೩ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
«وَأَمَّا فِي تِلْكَ ٱلْأَيَّامِ بَعْدَ ذَلِكَ ٱلضِّيقِ، فَٱلشَّمْسُ تُظْلِمُ، وَٱلْقَمَرُ لَا يُعْطِي ضَوْءَهُ، | ٢٤ 24 |
೨೪ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
وَنُجُومُ ٱلسَّمَاءِ تَتَسَاقَطُ، وَٱلْقُوَّاتُ ٱلَّتِي فِي ٱلسَّمَاوَاتِ تَتَزَعْزَعُ. | ٢٥ 25 |
೨೫ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
وَحِينَئِذٍ يُبْصِرُونَ ٱبْنَ ٱلْإِنْسَانِ آتِيًا فِي سَحَابٍ بِقُوَّةٍ كَثِيرَةٍ وَمَجْدٍ، | ٢٦ 26 |
೨೬ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
فَيُرْسِلُ حِينَئِذٍ مَلَائِكَتَهُ وَيَجْمَعُ مُخْتَارِيهِ مِنَ ٱلْأَرْبَعِ ٱلرِّيَاحِ، مِنْ أَقْصَاءِ ٱلْأَرْضِ إِلَى أَقْصَاءِ ٱلسَّمَاءِ. | ٢٧ 27 |
೨೭ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
فَمِنْ شَجَرَةِ ٱلتِّينِ تَعَلَّمُوا ٱلْمَثَلَ: مَتَى صَارَ غُصْنُهَا رَخْصًا وَأَخْرَجَتْ أَوْرَاقًا، تَعْلَمُونَ أَنَّ ٱلصَّيْفَ قَرِيبٌ. | ٢٨ 28 |
೨೮“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
هَكَذَا أَنْتُمْ أَيْضًا، مَتَى رَأَيْتُمْ هَذِهِ ٱلْأَشْيَاءَ صَائِرَةً، فَٱعْلَمُوا أَنَّهُ قَرِيبٌ عَلَى ٱلْأَبْوَابِ. | ٢٩ 29 |
೨೯ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
اَلْحَقَّ أَقُولُ لَكُمْ: لَا يَمْضِي هَذَا ٱلْجِيلُ حَتَّى يَكُونَ هَذَا كُلُّهُ. | ٣٠ 30 |
೩೦ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
اَلسَّمَاءُ وَٱلْأَرْضُ تَزُولَانِ، وَلَكِنَّ كَلَامِي لَا يَزُولُ. | ٣١ 31 |
೩೧ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
«وَأَمَّا ذَلِكَ ٱلْيَوْمُ وَتِلْكَ ٱلسَّاعَةُ فَلَا يَعْلَمُ بِهِمَا أَحَدٌ، وَلَا ٱلْمَلَائِكَةُ ٱلَّذِينَ فِي ٱلسَّمَاءِ، وَلَا ٱلِٱبْنُ، إِلَّا ٱلْآبُ. | ٣٢ 32 |
೩೨“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
اُنْظُرُوا! اِسْهَرُوا وَصَلُّوا، لِأَنَّكُمْ لَا تَعْلَمُونَ مَتَى يَكُونُ ٱلْوَقْتُ. | ٣٣ 33 |
೩೩ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ, ಜಾಗರೂಕರಾಗಿರಿ.
كَأَنَّمَا إِنْسَانٌ مُسَافِرٌ تَرَكَ بَيْتَهُ، وَأَعْطَى عَبِيدَهُ ٱلسُّلْطَانَ، وَلِكُلِّ وَاحِدٍ عَمَلَهُ، وَأَوْصَى ٱلْبَوَّابَ أَنْ يَسْهَرَ. | ٣٤ 34 |
೩೪ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
اِسْهَرُوا إِذًا، لِأَنَّكُمْ لَا تَعْلَمُونَ مَتَى يَأْتِي رَبُّ ٱلْبَيْتِ، أَمَسَاءً، أَمْ نِصْفَ ٱللَّيْلِ، أَمْ صِيَاحَ ٱلدِّيكِ، أَمْ صَبَاحًا. | ٣٥ 35 |
೩೫“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
لِئَلَّا يَأْتِيَ بَغْتَةً فَيَجِدَكُمْ نِيَامًا! | ٣٦ 36 |
೩೬ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
وَمَا أَقُولُهُ لَكُمْ أَقُولُهُ لِلْجَمِيعِ: ٱسْهَرُوا». | ٣٧ 37 |
೩೭ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.