< مَرْقُس 8 >

فِي تِلْكَ ٱلْأَيَّامِ إِذْ كَانَ ٱلْجَمْعُ كَثِيرًا جِدًّا، وَلَمْ يَكُنْ لَهُمْ مَا يَأْكُلُونَ، دَعَا يَسُوعُ تَلَامِيذَهُ وَقَالَ لَهُمْ: ١ 1
ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
«إِنِّي أُشْفِقُ عَلَى ٱلْجَمْعِ، لِأَنَّ ٱلْآنَ لَهُمْ ثَلَاثَةَ أَيَّامٍ يَمْكُثُونَ مَعِي وَلَيْسَ لَهُمْ مَا يَأْكُلُونَ. ٢ 2
“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
وَإِنْ صَرَفْتُهُمْ إِلَى بُيُوتِهِمْ صَائِمِينَ يُخَوِّرُونَ فِي ٱلطَّرِيقِ، لِأَنَّ قَوْمًا مِنْهُمْ جَاءُوا مِنْ بَعِيدٍ». ٣ 3
ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
فَأَجَابَهُ تَلَامِيذُهُ: «مِنْ أَيْنَ يَسْتَطِيعُ أَحَدٌ أَنْ يُشْبِعَ هَؤُلَاءِ خُبْزًا هُنَا فِي ٱلْبَرِّيَّةِ؟». ٤ 4
ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
فَسَأَلَهُمْ: «كَمْ عِنْدَكُمْ مِنَ ٱلْخُبْزِ؟». فَقَالُوا: «سَبْعَةٌ». ٥ 5
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
فَأَمَرَ ٱلْجَمْعَ أَنْ يَتَّكِئُوا عَلَى ٱلْأَرْضِ، وَأَخَذَ ٱلسَّبْعَ خُبْزَاتٍ وَشَكَرَ وَكَسَرَ وَأَعْطَى تَلَامِيذَهُ لِيُقَدِّمُوا، فَقَدَّمُوا إِلَى ٱلْجَمْعِ. ٦ 6
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
وَكَانَ مَعَهُمْ قَلِيلٌ مِنْ صِغَارِ ٱلسَّمَكِ، فَبَارَكَ وَقَالَ أَنْ يُقَدِّمُوا هَذِهِ أَيْضًا. ٧ 7
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
فَأَكَلُوا وَشَبِعُوا. ثُمَّ رَفَعُوا فَضَلَاتِ ٱلْكِسَرِ: سَبْعَةَ سِلَالٍ. ٨ 8
ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
وَكَانَ ٱلْآكِلُونَ نَحْوَ أَرْبَعَةِ آلَافٍ. ثُمَّ صَرَفَهُمْ. ٩ 9
ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
وَلِلْوَقْتِ دَخَلَ ٱلسَّفِينَةَ مَعَ تَلَامِيذِهِ وَجَاءَ إِلَى نَوَاحِي دَلْمَانُوثَةَ. ١٠ 10
೧೦ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
فَخَرَجَ ٱلْفَرِّيسِيُّونَ وَٱبْتَدَأُوا يُحَاوِرُونَهُ طَالِبِينَ مِنْهُ آيَةً مِنَ ٱلسَّمَاءِ، لِكَيْ يُجَرِّبُوهُ. ١١ 11
೧೧ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
فَتَنَهَّدَ بِرُوحِهِ وَقَالَ: «لِمَاذَا يَطْلُبُ هَذَا ٱلْجِيلُ آيَةً؟ اَلْحَقَّ أَقُولُ لَكُمْ: لَنْ يُعْطَى هَذَا ٱلْجِيلُ آيَةً!». ١٢ 12
೧೨ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
ثُمَّ تَرَكَهُمْ وَدَخَلَ أَيْضًا ٱلسَّفِينَةَ وَمَضَى إِلَى ٱلْعَبْرِ. ١٣ 13
೧೩ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
وَنَسُوا أَنْ يَأْخُذُوا خُبْزًا، وَلَمْ يَكُنْ مَعَهُمْ فِي ٱلسَّفِينَةِ إِلَّا رَغِيفٌ وَاحِدٌ. ١٤ 14
೧೪ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
وَأَوْصَاهُمْ قَائِلًا: «ٱنْظُرُوا! وَتَحَرَّزُوا مِنْ خَمِيرِ ٱلْفَرِّيسِيِّينَ وَخَمِيرِ هِيرُودُسَ». ١٥ 15
೧೫ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
فَفَكَّرُوا قَائِلِينَ بَعْضُهُمْ لِبَعْضٍ: «لَيْسَ عِنْدَنَا خُبْزٌ». ١٦ 16
೧೬ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
فَعَلِمَ يَسُوعُ وَقَالَ لَهُمْ: «لِمَاذَا تُفَكِّرُونَ أَنْ لَيْسَ عِنْدَكُمْ خُبْزٌ؟ أَلَا تَشْعُرُونَ بَعْدُ وَلَا تَفْهَمُونَ؟ أَحَتَّى ٱلْآنَ قُلُوبُكُمْ غَلِيظَةٌ؟ ١٧ 17
೧೭ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
أَلَكُمْ أَعْيُنٌ وَلَا تُبْصِرُونَ، وَلَكُمْ آذَانٌ وَلَا تَسْمَعُونَ، وَلَا تَذْكُرُونَ؟ ١٨ 18
೧೮ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
حِينَ كَسَّرْتُ ٱلْأَرْغِفَةَ ٱلْخَمْسَةَ لِلْخَمْسَةِ ٱلْآلَافِ، كَمْ قُفَّةً مَمْلُوَّةً كِسَرًا رَفَعْتُمْ؟». قَالُوا لَهُ: «ٱثْنَتَيْ عَشْرَةَ». ١٩ 19
೧೯ನಾನುಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
«وَحِينَ ٱلسَّبْعَةِ لِلْأَرْبَعَةِ ٱلْآلَافِ، كَمْ سَلَّ كِسَرٍ مَمْلُوًّا رَفَعْتُمْ؟». قَالُوا: «سَبْعَةً». ٢٠ 20
೨೦“ಮತ್ತುಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
فَقَالَ لَهُمْ: «كَيْفَ لَا تَفْهَمُونَ؟». ٢١ 21
೨೧ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
وَجَاءَ إِلَى بَيْتِ صَيْدَا، فَقَدَّمُوا إِلَيْهِ أَعْمَى وَطَلَبُوا إِلَيْهِ أَنْ يَلْمِسَهُ، ٢٢ 22
೨೨ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
فَأَخَذَ بِيَدِ ٱلْأَعْمَى وَأَخْرَجَهُ إِلَى خَارِجِ ٱلْقَرْيَةِ، وَتَفَلَ فِي عَيْنَيْهِ، وَوَضَعَ يَدَيْهِ عَلَيْهِ وَسَأَلَهُ: هَلْ أَبْصَرَ شَيْئًا؟ ٢٣ 23
೨೩ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
فَتَطَلَّعَ وَقَالَ: «أُبْصِرُ ٱلنَّاسَ كَأَشْجَارٍ يَمْشُونَ». ٢٤ 24
೨೪ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
ثُمَّ وَضَعَ يَدَيْهِ أَيْضًا عَلَى عَيْنَيْهِ، وَجَعَلَهُ يَتَطَلَّعُ. فَعَادَ صَحِيحًا وَأَبْصَرَ كُلَّ إِنْسَانٍ جَلِيًّا. ٢٥ 25
೨೫ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
فَأَرْسَلَهُ إِلَى بَيْتِهِ قَائِلًا: «لَا تَدْخُلِ ٱلْقَرْيَةَ، وَلَا تَقُلْ لِأَحَدٍ فِي ٱلْقَرْيَةِ». ٢٦ 26
೨೬ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
ثُمَّ خَرَجَ يَسُوعُ وَتَلامِيذُهُ إِلَى قُرَى قَيْصَرِيَّةِ فِيلُبُّسَ. وَفِي ٱلطَّرِيقِ سَأَلَ تَلَامِيذَهُ قَائِلًا لَهُمْ: «مَنْ يَقُولُ ٱلنَّاسُ إِنِّي أَنَا؟». ٢٧ 27
೨೭ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
فَأَجَابُوا: «يُوحَنَّا ٱلْمَعْمَدَانُ. وَآخَرُونَ: إِيلِيَّا. وَآخَرُونَ: وَاحِدٌ مِنَ ٱلْأَنْبِيَاءِ». ٢٨ 28
೨೮ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
فَقَالَ لَهُمْ: «وَأَنْتُمْ، مَنْ تَقُولُونَ إِنِّي أَنَا؟». فَأَجَابَ بُطْرُسُ وَقَالَ لَهُ: «أَنْتَ ٱلْمَسِيحُ!». ٢٩ 29
೨೯ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
فَٱنْتَهَرَهُمْ كَيْ لَا يَقُولُوا لِأَحَدٍ عَنْهُ. ٣٠ 30
೩೦ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
وَٱبْتَدَأَ يُعَلِّمُهُمْ أَنَّ ٱبْنَ ٱلْإِنْسَانِ يَنْبَغِي أَنْ يَتَأَلَّمَ كَثِيرًا، وَيُرْفَضَ مِنَ ٱلشُّيُوخِ وَرُؤَسَاءِ ٱلْكَهَنَةِ وَٱلْكَتَبَةِ، وَيُقْتَلَ، وَبَعْدَ ثَلَاثَةِ أَيَّامٍ يَقُومُ. ٣١ 31
೩೧ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
وَقَالَ ٱلْقَوْلَ عَلَانِيَةً. فَأَخَذَهُ بُطْرُسُ إِلَيْهِ وَٱبْتَدَأَ يَنْتَهِرُهُ. ٣٢ 32
೩೨ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
فَٱلْتَفَتَ وَأَبْصَرَ تَلَامِيذَهُ، فَٱنْتَهَرَ بُطْرُسَ قَائِلًا: «ٱذْهَبْ عَنِّي يَا شَيْطَانُ! لِأَنَّكَ لَا تَهْتَمُّ بِمَا لِلهِ لَكِنْ بِمَا لِلنَّاسِ». ٣٣ 33
೩೩ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
وَدَعَا ٱلْجَمْعَ مَعَ تَلَامِيذِهِ وَقَالَ لَهُمْ: «مَنْ أَرَادَ أَنْ يَأْتِيَ وَرَائِي فَلْيُنْكِرْ نَفْسَهُ وَيَحْمِلْ صَلِيبَهُ وَيَتْبَعْنِي. ٣٤ 34
೩೪ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
فَإِنَّ مَنْ أَرَادَ أَنْ يُخَلِّصَ نَفْسَهُ يُهْلِكُهَا، وَمَنْ يُهْلِكُ نَفْسَهُ مِنْ أَجْلِي وَمِنْ أَجْلِ ٱلْإِنْجِيلِ فَهُوَ يُخَلِّصُهَا. ٣٥ 35
೩೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
لِأَنَّهُ مَاذَا يَنْتَفِعُ ٱلْإِنْسَانُ لَوْ رَبِحَ ٱلْعَالَمَ كُلَّهُ وَخَسِرَ نَفْسَهُ؟ ٣٦ 36
೩೬ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
أَوْ مَاذَا يُعْطِي ٱلْإِنْسَانُ فِدَاءً عَنْ نَفْسِهِ؟ ٣٧ 37
೩೭ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
لِأَنَّ مَنِ ٱسْتَحَى بِي وَبِكَلَامِي فِي هَذَا ٱلْجِيلِ ٱلْفَاسِقِ ٱلْخَاطِئِ، فَإِنَّ ٱبْنَ ٱلْإِنْسَانِ يَسْتَحِي بِهِ مَتَى جَاءَ بِمَجْدِ أَبِيهِ مَعَ ٱلْمَلَائِكَةِ ٱلْقِدِّيسِينَ». ٣٨ 38
೩೮ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

< مَرْقُس 8 >