< مَرْقُس 1 >
بَدْءُ إِنْجِيلِ يَسُوعَ ٱلْمَسِيحِ ٱبْنِ ٱللهِ، | ١ 1 |
೧ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
كَمَا هُوَ مَكْتُوبٌ فِي ٱلْأَنْبِيَاءِ: «هَا أَنَا أُرْسِلُ أَمَامَ وَجْهِكَ مَلَاكِي، ٱلَّذِي يُهَيِّئُ طَرِيقَكَ قُدَّامَكَ. | ٢ 2 |
೨ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
صَوْتُ صَارِخٍ فِي ٱلْبَرِّيَّةِ: أَعِدُّوا طَرِيقَ ٱلرَّبِّ، ٱصْنَعُوا سُبُلَهُ مُسْتَقِيمَةً». | ٣ 3 |
೩“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
كَانَ يُوحَنَّا يُعَمِّدُ فِي ٱلْبَرِّيَّةِ وَيَكْرِزُ بِمَعْمُودِيَّةِ ٱلتَّوْبَةِ لِمَغْفِرَةِ ٱلْخَطَايَا. | ٤ 4 |
೪ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
وَخَرَجَ إِلَيْهِ جَمِيعُ كُورَةِ ٱلْيَهُودِيَّةِ وَأَهْلُ أُورُشَلِيمَ وَٱعْتَمَدُوا جَمِيعُهُمْ مِنْهُ فِي نَهْرِ ٱلْأُرْدُنِّ، مُعْتَرِفِينَ بِخَطَايَاهُمْ. | ٥ 5 |
೫ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
وَكَانَ يُوحَنَّا يَلْبَسُ وَبَرَ ٱلْإِبِلِ، وَمِنْطَقَةً مِنْ جِلْدٍ عَلَى حَقْوَيْهِ، وَيَأْكُلُ جَرَادًا وَعَسَلًا بَرِّيًّا. | ٦ 6 |
೬ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
وَكَانَ يَكْرِزُ قَائِلًا: «يَأْتِي بَعْدِي مَنْ هُوَ أَقْوَى مِنِّي، ٱلَّذِي لَسْتُ أَهْلًا أَنْ أَنْحَنِيَ وَأَحُلَّ سُيُورَ حِذَائِهِ. | ٧ 7 |
೭ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
أَنَا عَمَّدْتُكُمْ بِٱلْمَاءِ، وَأَمَّا هُوَ فَسَيُعَمِّدُكُمْ بِٱلرُّوحِ ٱلْقُدُسِ». | ٨ 8 |
೮ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
وَفِي تِلْكَ ٱلْأَيَّامِ جَاءَ يَسُوعُ مِنْ نَاصِرَةِ ٱلْجَلِيلِ وَٱعْتَمَدَ مِنْ يُوحَنَّا فِي ٱلْأُرْدُنِّ. | ٩ 9 |
೯ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
وَلِلْوَقْتِ وَهُوَ صَاعِدٌ مِنَ ٱلْمَاءِ رَأَى ٱلسَّمَاوَاتِ قَدِ ٱنْشَقَّتْ، وَٱلرُّوحَ مِثْلَ حَمَامَةٍ نَازِلًا عَلَيْهِ. | ١٠ 10 |
೧೦ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
وَكَانَ صَوْتٌ مِنَ ٱلسَّمَاوَاتِ: «أَنْتَ ٱبْنِي ٱلْحَبِيبُ ٱلَّذِي بِهِ سُرِرْتُ». | ١١ 11 |
೧೧ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
وَلِلْوَقْتِ أَخْرَجَهُ ٱلرُّوحُ إِلَى ٱلْبَرِّيَّةِ، | ١٢ 12 |
೧೨ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
وَكَانَ هُنَاكَ فِي ٱلْبَرِّيَّةِ أَرْبَعِينَ يَوْمًا يُجَرَّبُ مِنَ ٱلشَّيْطَانِ. وَكَانَ مَعَ ٱلْوُحُوشِ. وَصَارَتِ ٱلْمَلَائِكَةُ تَخْدِمُهُ. | ١٣ 13 |
೧೩ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
وَبَعْدَمَا أُسْلِمَ يُوحَنَّا جَاءَ يَسُوعُ إِلَى ٱلْجَلِيلِ يَكْرِزُ بِبِشَارَةِ مَلَكُوتِ ٱللهِ | ١٤ 14 |
೧೪ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
وَيَقُولُ: «قَدْ كَمَلَ ٱلزَّمَانُ وَٱقْتَرَبَ مَلَكُوتُ ٱللهِ، فَتُوبُوا وَآمِنُوا بِٱلْإِنْجِيلِ». | ١٥ 15 |
೧೫“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
وَفِيمَا هُوَ يَمْشِي عِنْدَ بَحْرِ ٱلْجَلِيلِ أَبْصَرَ سِمْعَانَ وَأَنْدَرَاوُسَ أَخَاهُ يُلْقِيَانِ شَبَكَةً فِي ٱلْبَحْرِ، فَإِنَّهُمَا كَانَا صَيَّادَيْنِ. | ١٦ 16 |
೧೬ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
فَقَالَ لَهُمَا يَسُوعُ: «هَلُمَّ وَرَائِي فَأَجْعَلُكُمَا تَصِيرَانِ صَيَّادَيِ ٱلنَّاسِ». | ١٧ 17 |
೧೭ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
فَلِلْوَقْتِ تَرَكَا شِبَاكَهُمَا وَتَبِعَاهُ. | ١٨ 18 |
೧೮ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ثُمَّ ٱجْتَازَ مِنْ هُنَاكَ قَلِيلًا فَرَأَى يَعْقُوبَ بْنَ زَبْدِي وَيُوحَنَّا أَخَاهُ، وَهُمَا فِي ٱلسَّفِينَةِ يُصْلِحَانِ ٱلشِّبَاكَ. | ١٩ 19 |
೧೯ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
فَدَعَاهُمَا لِلْوَقْتِ. فَتَرَكَا أَبَاهُمَا زَبْدِي فِي ٱلسَّفِينَةِ مَعَ ٱلْأَجْرَى وَذَهَبَا وَرَاءَهُ. | ٢٠ 20 |
೨೦ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
ثُمَّ دَخَلُوا كَفْرَنَاحُومَ، وَلِلْوَقْتِ دَخَلَ ٱلْمَجْمَعَ فِي ٱلسَّبْتِ وَصَارَ يُعَلِّمُ. | ٢١ 21 |
೨೧ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
فَبُهِتُوا مِنْ تَعْلِيمِهِ لِأَنَّهُ كَانَ يُعَلِّمُهُمْ كَمَنْ لَهُ سُلْطَانٌ وَلَيْسَ كَٱلْكَتَبَةِ. | ٢٢ 22 |
೨೨ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
وَكَانَ فِي مَجْمَعِهِمْ رَجُلٌ بِهِ رُوحٌ نَجِسٌ، فَصَرَخَ | ٢٣ 23 |
೨೩ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
قَائِلًا: «آهِ! مَا لَنَا وَلَكَ يَا يَسُوعُ ٱلنَّاصِرِيُّ؟ أَتَيْتَ لِتُهْلِكَنَا! أَنَا أَعْرِفُكَ مَنْ أَنْتَ: قُدُّوسُ ٱللهِ!». | ٢٤ 24 |
೨೪ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
فَٱنْتَهَرَهُ يَسُوعُ قَائِلًا: «ٱخْرَسْ! وَٱخْرُجْ مِنْهُ!». | ٢٥ 25 |
೨೫ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
فَصَرَعَهُ ٱلرُّوحُ ٱلنَّجِسُ وَصَاحَ بِصَوْتٍ عَظِيمٍ وَخَرَجَ مِنْهُ. | ٢٦ 26 |
೨೬ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
فَتَحَيَّرُوا كُلُّهُمْ، حَتَّى سَأَلَ بَعْضُهُمْ بَعْضًا قَائِلِينَ: «مَا هَذَا؟ مَا هُوَ هَذَا ٱلتَّعْلِيمُ ٱلْجَدِيدُ؟ لِأَنَّهُ بِسُلْطَانٍ يَأْمُرُ حَتَّى ٱلْأَرْوَاحَ ٱلنَّجِسَةَ فَتُطِيعُهُ!». | ٢٧ 27 |
೨೭ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
فَخَرَجَ خَبَرُهُ لِلْوَقْتِ فِي كُلِّ ٱلْكُورَةِ ٱلْمُحِيطَةِ بِٱلْجَلِيلِ. | ٢٨ 28 |
೨೮ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
وَلَمَّا خَرَجُوا مِنَ ٱلْمَجْمَعِ جَاءُوا لِلْوَقْتِ إِلَى بَيْتِ سِمْعَانَ وَأَنْدَرَاوُسَ مَعَ يَعْقُوبَ وَيُوحَنَّا، | ٢٩ 29 |
೨೯ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
وَكَانَتْ حَمَاةُ سِمْعَانَ مُضْطَجِعَةً مَحْمُومَةً، فَلِلْوَقْتِ أَخْبَرُوهُ عَنْهَا. | ٣٠ 30 |
೩೦ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
فَتَقَدَّمَ وَأَقَامَهَا مَاسِكًا بِيَدِهَا، فَتَرَكَتْهَا ٱلْحُمَّى حَالًا وَصَارَتْ تَخْدِمُهُمْ. | ٣١ 31 |
೩೧ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
وَلَمَّا صَارَ ٱلْمَسَاءُ، إِذْ غَرَبَتِ ٱلشَّمْسُ، قَدَّمُوا إِلَيْهِ جَمِيعَ ٱلسُّقَمَاءِ وَٱلْمَجَانِينَ. | ٣٢ 32 |
೩೨ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
وَكَانَتِ ٱلْمَدِينَةُ كُلُّهَا مُجْتَمِعَةً عَلَى ٱلْبَابِ. | ٣٣ 33 |
೩೩ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
فَشَفَى كَثِيرِينَ كَانُوا مَرْضَى بِأَمْرَاضٍ مُخْتَلِفَةٍ، وَأَخْرَجَ شَيَاطِينَ كَثِيرَةً، وَلَمْ يَدَعِ ٱلشَّيَاطِينَ يَتَكَلَّمُونَ لِأَنَّهُمْ عَرَفُوهُ. | ٣٤ 34 |
೩೪ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
وَفِي ٱلصُّبْحِ بَاكِرًا جِدًّا قَامَ وَخَرَجَ وَمَضَى إِلَى مَوْضِعٍ خَلَاءٍ، وَكَانَ يُصَلِّي هُنَاكَ، | ٣٥ 35 |
೩೫ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
فَتَبِعَهُ سِمْعَانُ وَٱلَّذِينَ مَعَهُ. | ٣٦ 36 |
೩೬ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
وَلَمَّا وَجَدُوهُ قَالُوا لَهُ: «إِنَّ ٱلْجَمِيعَ يَطْلُبُونَكَ». | ٣٧ 37 |
೩೭ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
فَقَالَ لَهُمْ: «لِنَذْهَبْ إِلَى ٱلْقُرَى ٱلْمُجَاوِرَةِ لِأَكْرِزَ هُنَاكَ أَيْضًا، لِأَنِّي لِهَذَا خَرَجْتُ». | ٣٨ 38 |
೩೮ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
فَكَانَ يَكْرِزُ فِي مَجَامِعِهِمْ فِي كُلِّ ٱلْجَلِيلِ وَيُخْرِجُ ٱلشَّيَاطِينَ. | ٣٩ 39 |
೩೯ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
فَأَتَى إِلَيْهِ أَبْرَصُ يَطْلُبُ إِلَيْهِ جَاثِيًا وَقَائِلًا لَهُ: «إِنْ أَرَدْتَ تَقْدِرْ أَنْ تُطَهِّرَنِي». | ٤٠ 40 |
೪೦ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
فَتَحَنَّنَ يَسُوعُ وَمَدَّ يَدَهُ وَلَمَسَهُ وَقَالَ لَهُ: «أُرِيدُ، فَٱطْهُرْ!». | ٤١ 41 |
೪೧ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
فَلِلْوَقْتِ وَهُوَ يَتَكَلَّمُ ذَهَبَ عَنْهُ ٱلْبَرَصُ وَطَهَرَ. | ٤٢ 42 |
೪೨ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
فَٱنْتَهَرَهُ وَأَرْسَلَهُ لِلْوَقْتِ، | ٤٣ 43 |
೪೩ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
وَقَالَ لَهُ: «ٱنْظُرْ، لَا تَقُلْ لِأَحَدٍ شَيْئًا، بَلِ ٱذْهَبْ أَرِ نَفْسَكَ لِلْكَاهِنِ وَقَدِّمْ عَنْ تَطْهِيرِكَ مَا أَمَرَ بِهِ مُوسَى، شَهَادَةً لَهُمْ». | ٤٤ 44 |
೪೪ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
وَأَمَّا هُوَ فَخَرَجَ وَٱبْتَدَأَ يُنَادِي كَثِيرًا وَيُذِيعُ ٱلْخَبَرَ، حَتَّى لَمْ يَعُدْ يَقْدِرُ أَنْ يَدْخُلَ مَدِينَةً ظَاهِرًا، بَلْ كَانَ خَارِجًا فِي مَوَاضِعَ خَالِيَةٍ، وَكَانُوا يَأْتُونَ إِلَيْهِ مِنْ كُلِّ نَاحِيَةٍ. | ٤٥ 45 |
೪೫ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.