< مَتَّى 2 >
وَلَمَّا وُلِدَ يَسُوعُ فِي بَيْتِ لَحْمِ ٱلْيَهُودِيَّةِ، فِي أَيَّامِ هِيرُودُسَ ٱلْمَلِكِ، إِذَا مَجُوسٌ مِنَ ٱلْمَشْرِقِ قَدْ جَاءُوا إِلَى أُورُشَلِيمَ | ١ 1 |
೧ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
قَائِلِينَ: «أَيْنَ هُوَ ٱلْمَوْلُودُ مَلِكُ ٱلْيَهُودِ؟ فَإِنَّنَا رَأَيْنَا نَجْمَهُ فِي ٱلْمَشْرِقِ وَأَتَيْنَا لِنَسْجُدَ لَهُ». | ٢ 2 |
೨“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
فَلَمَّا سَمِعَ هِيرُودُسُ ٱلْمَلِكُ ٱضْطَرَبَ وَجَمِيعُ أُورُشَلِيمَ مَعَهُ. | ٣ 3 |
೩ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
فَجَمَعَ كُلَّ رُؤَسَاءِ ٱلْكَهَنَةِ وَكَتَبَةِ ٱلشَّعْبِ، وَسَأَلَهُمْ: «أَيْنَ يُولَدُ ٱلْمَسِيحُ؟». | ٤ 4 |
೪ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.
فَقَالُوا لَهُ: «فِي بَيْتِ لَحْمِ ٱلْيَهُودِيَّةِ. لِأَنَّهُ هَكَذَا مَكْتُوبٌ بِٱلنَّبِيِّ: | ٥ 5 |
೫ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
وَأَنْتِ يا بَيْتَ لَحْمٍ، أَرْضَ يَهُوذَا، لَسْتِ ٱلصُّغْرَى بَيْنَ رُؤَسَاءِ يَهُوذَا، لِأَنْ مِنْكِ يَخْرُجُ مُدَبِّرٌ يَرْعَى شَعْبِي إِسْرَائِيلَ». | ٦ 6 |
೬“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
حِينَئِذٍ دَعَا هِيرُودُسُ ٱلْمَجُوسَ سِرًّا، وَتَحَقَّقَ مِنْهُمْ زَمَانَ ٱلنَّجْمِ ٱلَّذِي ظَهَرَ. | ٧ 7 |
೭ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
ثُمَّ أَرْسَلَهُمْ إِلَى بَيْتِ لَحْمٍ، وَقَالَ: «ٱذْهَبُوا وَٱفْحَصُوا بِٱلتَّدْقِيقِ عَنِ ٱلصَّبِيِّ. وَمَتَى وَجَدْتُمُوهُ فَأَخْبِرُونِي، لِكَيْ آتِيَ أَنَا أَيْضًا وَأَسْجُدَ لَهُ». | ٨ 8 |
೮“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
فَلَمَّا سَمِعُوا مِنَ ٱلْمَلِكِ ذَهَبُوا. وَإِذَا ٱلنَّجْمُ ٱلَّذِي رَأَوْهُ فِي ٱلْمَشْرِقِ يَتَقَدَّمُهُمْ حَتَّى جَاءَ وَوَقَفَ فَوْقُ، حَيْثُ كَانَ ٱلصَّبِيُّ. | ٩ 9 |
೯ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
فَلَمَّا رَأَوْا ٱلنَّجْمَ فَرِحُوا فَرَحًا عَظِيمًا جِدًّا. | ١٠ 10 |
೧೦ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
وَأَتَوْا إِلَى ٱلْبَيْتِ، وَرَأَوْا ٱلصَّبِيَّ مَعَ مَرْيَمَ أُمِّهِ. فَخَرُّوا وَسَجَدُوا لَهُ. ثُمَّ فَتَحُوا كُنُوزَهُمْ وَقَدَّمُوا لَهُ هَدَايَا: ذَهَبًا وَلُبَانًا وَمُرًّا. | ١١ 11 |
೧೧ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
ثُمَّ إِذْ أُوحِيَ إِلَيْهِمْ فِي حُلْمٍ أَنْ لَا يَرْجِعُوا إِلَى هِيرُودُسَ، ٱنْصَرَفُوا فِي طَرِيقٍ أُخْرَى إِلَى كُورَتِهِمْ. | ١٢ 12 |
೧೨ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
وَبَعْدَمَا ٱنْصَرَفُوا، إِذَا مَلَاكُ ٱلرَّبِّ قَدْ ظَهَرَ لِيُوسُفَ فِي حُلْمٍ قَائِلًا: «قُمْ وَخُذِ ٱلصَّبِيَّ وَأُمَّهُ وَٱهْرُبْ إِلَى مِصْرَ، وَكُنْ هُنَاكَ حَتَّى أَقُولَ لَكَ. لِأَنَّ هِيرُودُسَ مُزْمِعٌ أَنْ يَطْلُبَ ٱلصَّبِيَّ لِيُهْلِكَهُ». | ١٣ 13 |
೧೩ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
فَقَامَ وَأَخَذَ ٱلصَّبِيَّ وَأُمَّهُ لَيْلًا وَٱنْصَرَفَ إِلَى مِصْرَ. | ١٤ 14 |
೧೪ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.
وَكَانَ هُنَاكَ إِلَى وَفَاةِ هِيرُودُسَ. لِكَيْ يَتِمَّ مَا قِيلَ مِنَ ٱلرَّبِّ بِٱلنَّبِيِّ ٱلْقَائِلِ: «مِنْ مِصْرَ دَعَوْتُ ٱبْنِي». | ١٥ 15 |
೧೫ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
حِينَئِذٍ لَمَّا رَأَى هِيرُودُسُ أَنَّ ٱلْمَجُوسَ سَخِرُوا بِهِ غَضِبَ جِدًّا. فَأَرْسَلَ وَقَتَلَ جَمِيعَ ٱلصِّبْيَانِ ٱلَّذِينَ فِي بَيْتِ لَحْمٍ وَفِي كُلِّ تُخُومِهَا، مِنِ ٱبْنِ سَنَتَيْنِ فَمَا دُونُ، بِحَسَبِ ٱلزَّمَانِ ٱلَّذِي تَحَقَّقَهُ مِنَ ٱلْمَجُوسِ. | ١٦ 16 |
೧೬ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
حِينَئِذٍ تَمَّ مَا قِيلَ بِإِرْمِيَا ٱلنَّبِيِّ ٱلْقَائِلِ: | ١٧ 17 |
೧೭ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,
«صَوْتٌ سُمِعَ فِي ٱلرَّامَةِ، نَوْحٌ وَبُكَاءٌ وَعَوِيلٌ كَثِيرٌ. رَاحِيلُ تَبْكِي عَلَى أَوْلَادِهَا وَلَا تُرِيدُ أَنْ تَتَعَزَّى، لِأَنَّهُمْ لَيْسُوا بِمَوْجُودِينَ». | ١٨ 18 |
೧೮“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
فَلَمَّا مَاتَ هِيرُودُسُ، إِذَا مَلَاكُ ٱلرَّبِّ قَدْ ظَهَرَ فِي حُلْمٍ لِيُوسُفَ فِي مِصْرَ | ١٩ 19 |
೧೯ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
قَائِلًا: «قُمْ وَخُذِ ٱلصَّبِيَّ وَأُمَّهُ وَٱذْهَبْ إِلَى أَرْضِ إِسْرَائِيلَ، لِأَنَّهُ قَدْ مَاتَ ٱلَّذِينَ كَانُوا يَطْلُبُونَ نَفْسَ ٱلصَّبِيِّ». | ٢٠ 20 |
೨೦“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.
فَقَامَ وَأَخَذَ ٱلصَّبِيَّ وَأُمَّهُ وَجَاءَ إِلَى أَرْضِ إِسْرَائِيلَ. | ٢١ 21 |
೨೧ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
وَلَكِنْ لَمَّا سَمِعَ أَنَّ أَرْخِيلَاوُسَ يَمْلِكُ عَلَى ٱلْيَهُودِيَّةِ عِوَضًا عَنْ هِيرُودُسَ أَبِيهِ، خَافَ أَنْ يَذْهَبَ إِلَى هُنَاكَ. وَإِذْ أُوحِيَ إِلَيْهِ فِي حُلْمٍ، ٱنْصَرَفَ إِلَى نَوَاحِي ٱلْجَلِيلِ. | ٢٢ 22 |
೨೨ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
وَأَتَى وَسَكَنَ فِي مَدِينَةٍ يُقَالُ لَهَا نَاصِرَةُ، لِكَيْ يَتِمَّ مَا قِيلَ بِٱلْأَنْبِيَاءِ: «إِنَّهُ سَيُدْعَى نَاصِرِيًّا». | ٢٣ 23 |
೨೩ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.