< مَتَّى 20 >
«فَإِنَّ مَلَكُوتَ ٱلسَّمَاوَاتِ يُشْبِهُ رَجُلًا رَبَّ بَيْتٍ خَرَجَ مَعَ ٱلصُّبْحِ لِيَسْتَأْجِرَ فَعَلَةً لِكَرْمِهِ، | ١ 1 |
೧“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
فَٱتَّفَقَ مَعَ ٱلْفَعَلَةِ عَلَى دِينَارٍ فِي ٱلْيَوْمِ، وَأَرْسَلَهُمْ إِلَى كَرْمِهِ. | ٢ 2 |
೨ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
ثُمَّ خَرَجَ نَحْوَ ٱلسَّاعَةِ ٱلثَّالِثَةِ وَرَأَى آخَرِينَ قِيَامًا فِي ٱلسُّوقِ بَطَّالِينَ، | ٣ 3 |
೩ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
فَقَالَ لَهُمُ: ٱذْهَبُوا أَنْتُمْ أَيْضًا إِلَى ٱلْكَرْمِ فَأُعْطِيَكُمْ مَا يَحِقُّ لَكُمْ. فَمَضَوْا. | ٤ 4 |
೪ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
وَخَرَجَ أَيْضًا نَحْوَ ٱلسَّاعَةِ ٱلسَّادِسَةِ وَٱلتَّاسِعَةِ وَفَعَلَ كَذَلِكَ. | ٥ 5 |
೫ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
ثُمَّ نَحْوَ ٱلسَّاعَةِ ٱلْحَادِيَةَ عَشْرَةَ خَرَجَ وَوَجَدَ آخَرِينَ قِيَامًا بَطَّالِينَ، فَقَالَ لَهُمْ: لِمَاذَا وَقَفْتُمْ هَهُنَا كُلَّ ٱلنَّهَارِ بَطَّالِينَ؟ | ٦ 6 |
೬ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
قَالُوا لَهُ: لِأَنَّهُ لَمْ يَسْتَأْجِرْنَا أَحَدٌ. قَالَ لَهُمُ: ٱذْهَبُوا أَنْتُمْ أَيْضًا إِلَى ٱلْكَرْمِ فَتَأْخُذُوا مَا يَحِقُّ لَكُمْ. | ٧ 7 |
೭ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
فَلَمَّا كَانَ ٱلْمَسَاءُ قَالَ صَاحِبُ ٱلْكَرْمِ لِوَكِيلِهِ: ٱدْعُ ٱلْفَعَلَةَ وَأَعْطِهِمُ ٱلْأُجْرَةَ مُبْتَدِئًا مِنَ ٱلْآخِرِينَ إِلَى ٱلْأَوَّلِينَ. | ٨ 8 |
೮ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
فَجَاءَ أَصْحَابُ ٱلسَّاعَةِ ٱلْحَادِيَةَ عَشْرَةَ وَأَخَذُوا دِينَارًا دِينَارًا. | ٩ 9 |
೯ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
فَلَمَّا جَاءَ ٱلْأَوَّلُونَ ظَنُّوا أَنَّهُمْ يَأْخُذُونَ أَكْثَرَ. فَأَخَذُوا هُمْ أَيْضًا دِينَارًا دِينَارًا. | ١٠ 10 |
೧೦ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
وَفِيمَا هُمْ يَأْخُذُونَ تَذَمَّرُوا عَلَى رَبِّ ٱلْبَيْتِ | ١١ 11 |
೧೧ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
قَائِلِينَ: هَؤُلَاءِ ٱلْآخِرُونَ عَمِلُوا سَاعَةً وَاحِدَةً، وَقَدْ سَاوَيْتَهُمْ بِنَا نَحْنُ ٱلَّذِينَ ٱحْتَمَلْنَا ثِقَلَ ٱلنَّهَارِ وَٱلْحَرَّ! | ١٢ 12 |
೧೨‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
فَأجَابَ وَقَالَ لِوَاحِدٍ مِنْهُمْ: يا صَاحِبُ، مَا ظَلَمْتُكَ! أَمَا اتَّفَقْتَ مَعِي عَلَى دِينَارٍ؟ | ١٣ 13 |
೧೩ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
فَخُذِ ٱلَّذِي لَكَ وَٱذْهَبْ، فَإِنِّي أُرِيدُ أَنْ أُعْطِيَ هَذَا ٱلْأَخِيرَ مِثْلَكَ. | ١٤ 14 |
೧೪ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
أَوَ مَا يَحِلُّ لِي أَنْ أَفْعَلَ مَا أُرِيدُ بِمَا لِي؟ أَمْ عَيْنُكَ شِرِّيرَةٌ لِأَنِّي أَنَا صَالِحٌ؟ | ١٥ 15 |
೧೫ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
هَكَذَا يَكُونُ ٱلْآخِرُونَ أَوَّلِينَ وَٱلْأَوَّلُونَ آخِرِينَ، لِأَنَّ كَثِيرِينَ يُدْعَوْنَ وَقَلِيلِينَ يُنْتَخَبُونَ». | ١٦ 16 |
೧೬ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
وَفِيمَا كَانَ يَسُوعُ صَاعِدًا إِلَى أُورُشَلِيمَ أَخَذَ ٱلِٱثْنَيْ عَشَرَ تِلْمِيذًا عَلَى ٱنْفِرَادٍ فِي ٱلطَّرِيقِ وَقَالَ لَهُمْ: | ١٧ 17 |
೧೭ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
«هَا نَحْنُ صَاعِدُونَ إِلَى أُورُشَلِيمَ، وَٱبْنُ ٱلْإِنْسَانِ يُسَلَّمُ إِلَى رُؤَسَاءِ ٱلْكَهَنَةِ وَٱلْكَتَبَةِ، فَيَحْكُمُونَ عَلَيْهِ بِٱلْمَوْتِ، | ١٨ 18 |
೧೮“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
وَيُسَلِّمُونَهُ إِلَى ٱلْأُمَمِ لِكَيْ يَهْزَأُوا بِهِ وَيَجْلِدُوهُ وَيَصْلِبُوهُ، وَفِي ٱلْيَوْمِ ٱلثَّالِثِ يَقُومُ». | ١٩ 19 |
೧೯ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
حِينَئِذٍ تَقَدَّمَتْ إِلَيْهِ أُمُّ ٱبْنَيْ زَبْدِي مَعَ ٱبْنَيْهَا، وَسَجَدَتْ وَطَلَبَتْ مِنْهُ شَيْئًا. | ٢٠ 20 |
೨೦ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
فَقَالَ لَهَا: «مَاذَا تُرِيدِينَ؟». قَالَتْ لَهُ: «قُلْ أَنْ يَجْلِسَ ٱبْنَايَ هَذَانِ وَاحِدٌ عَنْ يَمِينِكَ وَٱلْآخَرُ عَنِ ٱلْيَسَارِ فِي مَلَكُوتِكَ». | ٢١ 21 |
೨೧ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
فَأَجَابَ يَسُوعُ وَقَالَ: «لَسْتُمَا تَعْلَمَانِ مَا تَطْلُبَانِ. أَتَسْتَطِيعَانِ أَنْ تَشْرَبَا ٱلْكَأْسَ ٱلَّتِي سَوْفَ أَشْرَبُهَا أَنَا، وَأَنْ تَصْطَبِغَا بِٱلصِّبْغَةِ ٱلَّتِي أَصْطَبِغُ بِهَا أَنَا؟». قَالَا لَهُ: «نَسْتَطِيعُ». | ٢٢ 22 |
೨೨ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
فَقَالَ لَهُمَا: «أَمَّا كَأْسِي فَتَشْرَبَانِهَا، وَبِالصِّبْغَةِ ٱلَّتِي أَصْطَبِغُ بِهَا أَنَا تَصْطَبِغَانِ. وَأَمَّا ٱلْجُلُوسُ عَنْ يَمِينِي وَعَنْ يَسَارِي فَلَيْسَ لِي أَنْ أُعْطِيَهُ إِلَّا لِلَّذِينَ أُعِدَّ لَهُمْ مِنْ أَبِي». | ٢٣ 23 |
೨೩ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
فَلَمَّا سَمِعَ ٱلْعَشَرَةُ ٱغْتَاظُوا مِنْ أَجْلِ ٱلْأَخَوَيْنِ. | ٢٤ 24 |
೨೪ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
فَدَعَاهُمْ يَسُوعُ وَقَالَ: «أَنْتُمْ تَعْلَمُونَ أَنَّ رُؤَسَاءَ ٱلْأُمَمِ يَسُودُونَهُمْ، وَٱلْعُظَمَاءَ يَتَسَلَّطُونَ عَلَيْهِمْ. | ٢٥ 25 |
೨೫ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
فَلَا يَكُونُ هَكَذَا فِيكُمْ. بَلْ مَنْ أَرَادَ أَنْ يَكُونَ فِيكُمْ عَظِيمًا فَلْيَكُنْ لَكُمْ خَادِمًا، | ٢٦ 26 |
೨೬ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
وَمَنْ أَرَادَ أَنْ يَكُونَ فِيكُمْ أَوَّلًا فَلْيَكُنْ لَكُمْ عَبْدًا، | ٢٧ 27 |
೨೭ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
كَمَا أَنَّ ٱبْنَ ٱلْإِنْسَانِ لَمْ يَأْتِ لِيُخْدَمَ بَلْ لِيَخْدِمَ، وَلِيَبْذِلَ نَفْسَهُ فِدْيَةً عَنْ كَثِيرِينَ». | ٢٨ 28 |
೨೮ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
وَفِيمَا هُمْ خَارِجُونَ مِنْ أَرِيحَا تَبِعَهُ جَمْعٌ كَثِيرٌ، | ٢٩ 29 |
೨೯ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
وَإِذَا أَعْمَيَانِ جَالِسَانِ عَلَى ٱلطَّرِيقِ. فَلَمَّا سَمِعَا أَنَّ يَسُوعَ مُجْتَازٌ صَرَخَا قَائِلَيْنِ: «ٱرْحَمْنَا ياسَيِّدُ، يا ٱبْنَ دَاوُدَ!». | ٣٠ 30 |
೩೦ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
فَٱنْتَهَرَهُمَا ٱلْجَمْعُ لِيَسْكُتَا، فَكَانَا يَصْرُخَانِ أَكْثَرَ قَائِلَيْنِ: «ٱرْحَمْنَا ياسَيِّدُ، يا ٱبْنَ دَاوُدَ!». | ٣١ 31 |
೩೧ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
فَوَقَفَ يَسُوعُ وَنَادَاهُمَا وَقَالَ: «مَاذَا تُرِيدَانِ أَنْ أَفْعَلَ بِكُمَا؟». | ٣٢ 32 |
೩೨ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
قَالَا لَهُ: «يَا سَيِّدُ، أَنْ تَنْفَتِحَ أَعْيُنُنَا!». | ٣٣ 33 |
೩೩ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
فَتَحَنَّنَ يَسُوعُ وَلَمَسَ أَعْيُنَهُمَا، فَلِلْوَقْتِ أَبْصَرَتْ أَعْيُنُهُمَا فَتَبِعَاهُ. | ٣٤ 34 |
೩೪ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.