< مَتَّى 21 >

وَلَمَّا قَرُبُوا مِنْ أُورُشَلِيمَ وَجَاءُوا إِلَى بَيْتِ فَاجِي عِنْدَ جَبَلِ ٱلزَّيْتُونِ، حِينَئِذٍ أَرْسَلَ يَسُوعُ تِلْمِيذَيْنِ ١ 1
ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
قَائِلًا لَهُمَا: «اِذْهَبَا إِلَى ٱلْقَرْيَةِ ٱلَّتِي أَمَامَكُمَا، فَلِلْوَقْتِ تَجِدَانِ أَتَانًا مَرْبُوطَةً وَجَحْشًا مَعَهَا، فَحُلَّاهُمَا وَأْتِيَانِي بِهِمَا. ٢ 2
ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
وَإِنْ قَالَ لَكُمَا أَحَدٌ شَيْئًا، فَقُولَا: ٱلرَّبُّ مُحْتَاجٌ إِلَيْهِمَا. فَلِلْوَقْتِ يُرْسِلُهُمَا». ٣ 3
ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.
فَكَانَ هَذَا كُلُّهُ لِكَيْ يَتِمَّ مَا قِيلَ بِٱلنَّبِيِّ ٱلْقَائِلِ: ٤ 4
ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,
«قُولُوا لِٱبْنَةِ صِهْيَوْنَ: هُوَذَا مَلِكُكِ يَأْتِيكِ وَدِيعًا، رَاكِبًا عَلَى أَتَانٍ وَجَحْشٍ ٱبْنِ أَتَانٍ». ٥ 5
“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
فَذَهَبَ ٱلتِّلْمِيذَانِ وَفَعَلَا كَمَا أَمَرَهُمَا يَسُوعُ، ٦ 6
ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
وَأَتَيَا بِٱلْأَتَانِ وَٱلْجَحْشِ، وَوَضَعَا عَلَيْهِمَا ثِيَابَهُمَا فَجَلَسَ عَلَيْهِمَا. ٧ 7
ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.
وَٱلْجَمْعُ ٱلْأَكْثَرُ فَرَشُوا ثِيَابَهُمْ فِي ٱلطَّرِيقِ. وَآخَرُونَ قَطَعُوا أَغْصَانًا مِنَ ٱلشَّجَرِ وَفَرَشُوهَا فِي ٱلطَّرِيقِ. ٨ 8
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
وَٱلْجُمُوعُ ٱلَّذِينَ تَقَدَّمُوا وَٱلَّذِينَ تَبِعُوا كَانُوا يَصْرَخُونَ قَائِلِينَ: «أُوصَنَّا لِٱبْنِ دَاوُدَ! مُبَارَكٌ ٱلْآتِي بِٱسْمِ ٱلرَّبِّ! أُوصَنَّا فِي ٱلْأَعَالِي!». ٩ 9
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
وَلَمَّا دَخَلَ أُورُشَلِيمَ ٱرْتَجَّتِ ٱلْمَدِينَةُ كُلُّهَا قَائِلَةً: «مَنْ هَذَا؟». ١٠ 10
೧೦ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.
فَقَالَتِ ٱلْجُمُوعُ: «هَذَا يَسُوعُ ٱلنَّبِيُّ ٱلَّذِي مِنْ نَاصِرَةِ ٱلْجَلِيلِ». ١١ 11
೧೧ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.
وَدَخَلَ يَسُوعُ إِلَى هَيْكَلِ ٱللهِ وَأَخْرَجَ جَمِيعَ ٱلَّذِينَ كَانُوا يَبِيعُونَ وَيَشْتَرُونَ فِي ٱلْهَيْكَلِ، وَقَلَبَ مَوَائِدَ ٱلصَّيَارِفَةِ وَكَرَاسِيَّ بَاعَةِ ٱلْحَمَامِ ١٢ 12
೧೨ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
وَقَالَ لَهُمْ: «مَكْتُوبٌ: بَيْتِي بَيْتَ ٱلصَّلَاةِ يُدْعَى. وَأَنْتُمْ جَعَلْتُمُوهُ مَغَارَةَ لُصُوصٍ!». ١٣ 13
೧೩ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
وَتَقَدَّمَ إِلَيْهِ عُمْيٌ وَعُرْجٌ فِي ٱلْهَيْكَلِ فَشَفَاهُمْ. ١٤ 14
೧೪ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
فَلَمَّا رَأَى رُؤَسَاءُ ٱلْكَهَنَةِ وَٱلْكَتَبَةِ ٱلْعَجَائِبَ ٱلَّتِي صَنَعَ، وَٱلْأَوْلَادَ يَصْرَخُونَ فِي ٱلْهَيْكَلِ وَيَقُولُونَ: «أُوصَنَّا لِٱبْنِ دَاوُدَ!». غَضِبُوا ١٥ 15
೧೫ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
وَقَالُوا لَهُ: «أَتَسْمَعُ مَا يَقُولُ هَؤُلَاءِ؟». فَقَالَ لَهُمْ يَسُوعُ: «نَعَمْ! أَمَا قَرَأْتُمْ قَطُّ: مِنْ أَفْوَاهِ ٱلْأَطْفَالِ وَٱلرُّضَّعِ هَيَّأْتَ تَسْبِيحًا؟». ١٦ 16
೧೬ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
ثُمَّ تَرَكَهُمْ وَخَرَجَ خَارِجَ ٱلْمَدِينَةِ إِلَى بَيْتِ عَنْيَا وَبَاتَ هُنَاكَ. ١٧ 17
೧೭ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.
وَفِي ٱلصُّبْحِ إِذْ كَانَ رَاجِعًا إِلَى ٱلْمَدِينَةِ جَاعَ، ١٨ 18
೧೮ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
فَنَظَرَ شَجَرَةَ تِينٍ عَلَى ٱلطَّرِيقِ، وَجَاءَ إِلَيْهَا فَلَمْ يَجِدْ فِيهَا شَيْئًا إِلَّا وَرَقًا فَقَطْ. فَقَالَ لَهَا: «لَا يَكُنْ مِنْكِ ثَمَرٌ بَعْدُ إِلَى ٱلْأَبَدِ!». فَيَبِسَتِ ٱلتِّينَةُ فِي ٱلْحَالِ. (aiōn g165) ١٩ 19
೧೯ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. (aiōn g165)
فَلَمَّا رَأَى ٱلتَّلَامِيذُ ذَلِكَ تَعَجَّبُوا قَائِلِينَ: «كَيْفَ يَبِسَتِ ٱلتِّينَةُ فِي ٱلْحَالِ؟». ٢٠ 20
೨೦ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
فَأَجَابَ يَسُوعُ وَقَالَ لَهُمْ: «اَلْحَقَّ أَقُولُ لَكُمْ: إِنْ كَانَ لَكُمْ إِيمَانٌ وَلَا تَشُكُّونَ، فَلَا تَفْعَلُونَ أَمْرَ ٱلتِّينَةِ فَقَطْ، بَلْ إِنْ قُلْتُمْ أَيْضًا لِهَذَا ٱلْجَبَلِ: ٱنْتَقِلْ وَٱنْطَرِحْ فِي ٱلْبَحْرِ فَيَكُونُ. ٢١ 21
೨೧ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
وَكُلُّ مَا تَطْلُبُونَهُ فِي ٱلصَّلَاةِ مُؤْمِنِينَ تَنَالُونَهُ». ٢٢ 22
೨೨ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
وَلَمَّا جَاءَ إِلَى ٱلْهَيْكَلِ تَقَدَّمَ إِلَيْهِ رُؤَسَاءُ ٱلْكَهَنَةِ وَشُيُوخُ ٱلشَّعْبِ وَهُوَ يُعَلِّمُ، قَائِلِينَ: «بِأَيِّ سُلْطَانٍ تَفْعَلُ هَذَا؟ وَمَنْ أَعْطَاكَ هَذَا ٱلسُّلْطَانَ؟». ٢٣ 23
೨೩ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
فَأَجَابَ يَسُوعُ وَقَالَ لَهُمْ: «وَأَنَا أَيْضًا أَسْأَلُكُمْ كَلِمَةً وَاحِدَةً، فَإِنْ قُلْتُمْ لِي عَنْهَا أَقُولُ لَكُمْ أَنَا أَيْضًا بِأَيِّ سُلْطَانٍ أَفْعَلُ هَذَا: ٢٤ 24
೨೪ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
مَعْمُودِيَّةُ يُوحَنَّا: مِنْ أَيْنَ كَانَتْ؟ مِنَ ٱلسَّمَاءِ أَمْ مِنَ ٱلنَّاسِ؟». فَفَكَّرُوا فِي أَنْفُسِهِمْ قَائِلِينَ: «إِنْ قُلْنَا: مِنَ ٱلسَّمَاءِ، يَقُولُ لَنَا: فَلِمَاذَا لَمْ تُؤْمِنُوا بِهِ؟ ٢٥ 25
೨೫ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
وَإِنْ قُلْنَا: مِنَ ٱلنَّاسِ، نَخَافُ مِنَ ٱلشَّعْبِ، لِأَنَّ يُوحَنَّا عِنْدَ ٱلْجَمِيعِ مِثْلُ نَبِيٍّ». ٢٦ 26
೨೬‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
فَأَجَابُوا يَسُوعَ وَقَالُوا: «لَا نَعْلَمُ». فَقَالَ لَهُمْ هُوَ أَيْضًا: «وَلَا أَنَا أَقُولُ لَكُمْ بِأَيِّ سُلْطَانٍ أَفْعَلُ هَذَا. ٢٧ 27
೨೭ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
«مَاذَا تَظُنُّونَ؟ كَانَ لِإِنْسَانٍ ٱبْنَانِ، فَجَاءَ إِلَى ٱلْأَوَّلِ وَقَالَ: يا ٱبْنِي، ٱذْهَبِ ٱلْيَوْمَ ٱعْمَلْ فِي كَرْمِي. ٢٨ 28
೨೮ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
فَأَجَابَ وَقَالَ: مَا أُرِيدُ. وَلَكِنَّهُ نَدِمَ أَخِيرًا وَمَضَى. ٢٩ 29
೨೯ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
وَجَاءَ إِلَى ٱلثَّانِي وَقَالَ كَذَلِكَ. فَأَجَابَ وَقَالَ: هَا أَنَا يا سَيِّدُ. وَلَمْ يَمْضِ. ٣٠ 30
೩೦ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
فَأَيُّ ٱلِٱثْنَيْنِ عَمِلَ إِرَادَةَ ٱلْأَبِ؟». قَالُوا لَهُ: «ٱلْأَوَّلُ». قَالَ لَهُمْ يَسُوعُ: «ٱلْحَقَّ أَقُولُ لَكُمْ: إِنَّ ٱلْعَشَّارِينَ وَٱلزَّوَانِيَ يَسْبِقُونَكُمْ إِلَى مَلَكُوتِ ٱللهِ، ٣١ 31
೩೧ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
لِأَنَّ يُوحَنَّا جَاءَكُمْ فِي طَرِيقِ ٱلْحَقِّ فَلَمْ تُؤْمِنُوا بِهِ، وَأَمَّا ٱلْعَشَّارُونَ وَٱلزَّوَانِي فَآمَنُوا بِهِ. وَأَنْتُمْ إِذْ رَأَيْتُمْ لَمْ تَنْدَمُوا أَخِيرًا لِتُؤْمِنُوا بِهِ. ٣٢ 32
೩೨ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
«اِسْمَعُوا مَثَلًا آخَرَ: كَانَ إِنْسَانٌ رَبُّ بَيْتٍ غَرَسَ كَرْمًا، وَأَحَاطَهُ بِسِيَاجٍ، وَحَفَرَ فِيهِ مَعْصَرَةً، وَبَنَى بُرْجًا، وَسَلَّمَهُ إِلَى كَرَّامِينَ وَسَافَرَ. ٣٣ 33
೩೩“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನುಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನುಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
وَلَمَّا قَرُبَ وَقْتُ ٱلْأَثْمَارِ أَرْسَلَ عَبِيدَهُ إِلَى ٱلْكَرَّامِينَ لِيَأْخُذَ أَثْمَارَهُ. ٣٤ 34
೩೪ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
فَأَخَذَ ٱلْكَرَّامُونَ عَبِيدَهُ وَجَلَدُوا بَعْضًا وَقَتَلُوا بَعْضًا وَرَجَمُوا بَعْضًا. ٣٥ 35
೩೫ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
ثُمَّ أَرْسَلَ أَيْضًا عَبِيدًا آخَرِينَ أَكْثَرَ مِنَ ٱلْأَوَّلِينَ، فَفَعَلُوا بِهِمْ كَذَلِكَ. ٣٦ 36
೩೬ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
فَأَخِيرًا أَرْسَلَ إِلَيْهِمُ ٱبْنَهُ قَائِلًا: يَهَابُونَ ٱبْنِي! ٣٧ 37
೩೭ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
وَأَمَّا ٱلْكَرَّامُونَ فَلَمَّا رَأَوْا ٱلِٱبْنَ قَالُوا فِيمَا بَيْنَهُمْ: هَذَا هُوَ ٱلْوَارِثُ! هَلُمُّوا نَقْتُلْهُ وَنَأْخُذْ مِيرَاثَهُ! ٣٨ 38
೩೮ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
فَأَخَذُوهُ وَأَخْرَجُوهُ خَارِجَ ٱلْكَرْمِ وَقَتَلُوهُ. ٣٩ 39
೩೯ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
فَمَتَى جَاءَ صَاحِبُ ٱلْكَرْمِ، مَاذَا يَفْعَلُ بِأُولَئِكَ ٱلْكَرَّامِينَ؟». ٤٠ 40
೪೦ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.
قَالُوا لَهُ: «أُولَئِكَ ٱلْأَرْدِيَاءُ يُهْلِكُهُمْ هَلَاكًا رَدِيًّا، وَيُسَلِّمُ ٱلْكَرْمَ إِلَى كَرَّامِينَ آخَرِينَ يُعْطُونَهُ ٱلْأَثْمَارَ فِي أَوْقَاتِهَا». ٤١ 41
೪೧ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
قَالَ لَهُمْ يَسُوعُ: «أَمَا قَرَأْتُمْ قَطُّ فِي ٱلْكُتُبِ: ٱلْحَجَرُ ٱلَّذِي رَفَضَهُ ٱلْبَنَّاؤُونَ هُوَ قَدْ صَارَ رَأْسَ ٱلزَّاوِيَةِ؟ مِنْ قِبَلِ ٱلرَّبِّ كَانَ هَذَا وَهُوَ عَجِيبٌ فِي أَعْيُنِنَا! ٤٢ 42
೪೨ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
لِذَلِكَ أَقُولُ لَكُمْ: إِنَّ مَلَكُوتَ ٱللهِ يُنْزَعُ مِنْكُمْ وَيُعْطَى لِأُمَّةٍ تَعْمَلُ أَثْمَارَهُ. ٤٣ 43
೪೩ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
وَمَنْ سَقَطَ عَلَى هَذَا ٱلْحَجَرِ يَتَرَضَّضُ، وَمَنْ سَقَطَ هُوَ عَلَيْهِ يَسْحَقُهُ!». ٤٤ 44
೪೪ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
وَلَمَّا سَمِعَ رُؤَسَاءُ ٱلْكَهَنَةِ وَٱلْفَرِّيسِيُّونَ أَمْثَالَهُ، عَرَفُوا أَنَّهُ تَكَلَّمَ عَلَيْهِمْ. ٤٥ 45
೪೫ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
وَإِذْ كَانُوا يَطْلُبُونَ أَنْ يُمْسِكُوهُ، خَافُوا مِنَ ٱلْجُمُوعِ، لِأَنَّهُ كَانَ عِنْدَهُمْ مِثْلَ نَبِيٍّ. ٤٦ 46
೪೬ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

< مَتَّى 21 >