< مَتَّى 22 >

وَجَعَلَ يَسُوعُ يُكَلِّمُهُمْ أَيْضًا بِأَمْثَالٍ قَائِلًا: ١ 1
ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
«يُشْبِهُ مَلَكُوتُ ٱلسَّمَاوَاتِ إِنْسَانًا مَلِكًا صَنَعَ عُرْسًا لِٱبْنِهِ، ٢ 2
“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
وَأَرْسَلَ عَبِيدَهُ لِيَدْعُوا ٱلْمَدْعُوِّينَ إِلَى ٱلْعُرْسِ، فَلَمْ يُرِيدُوا أَنْ يَأْتُوا. ٣ 3
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
فَأَرْسَلَ أَيْضًا عَبِيدًا آخَرِينَ قَائِلًا: قُولُوا لِلْمَدْعُوِّينَ: هُوَذَا غَدَائِي أَعْدَدْتُهُ. ثِيرَانِي وَمُسَمَّنَاتِي قَدْ ذُبِحَتْ، وَكُلُّ شَيْءٍ مُعَدٌّ. تَعَالَوْا إِلَى ٱلْعُرْسِ! ٤ 4
ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
وَلَكِنَّهُمْ تَهَاوَنُوا وَمَضَوْا، وَاحِدٌ إِلَى حَقْلِهِ، وَآخَرُ إِلَى تِجَارَتِهِ، ٥ 5
ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
وَٱلْبَاقُونَ أَمْسَكُوا عَبِيدَهُ وَشَتَمُوهُمْ وَقَتَلُوهُمْ. ٦ 6
ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
فَلَمَّا سَمِعَ ٱلْمَلِكُ غَضِبَ، وَأَرْسَلَ جُنُودَهُ وَأَهْلَكَ أُولَئِكَ ٱلْقَاتِلِينَ وَأَحْرَقَ مَدِينَتَهُمْ. ٧ 7
ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ثُمَّ قَالَ لِعَبِيدِهِ: أَمَّا ٱلْعُرْسُ فَمُسْتَعَدٌّ، وَأَمَّا ٱلْمَدْعُوُّونَ فَلَمْ يَكُونُوا مُسْتَحِقِّينَ. ٨ 8
ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
فَٱذْهَبُوا إِلَى مَفَارِقِ ٱلطُّرُقِ، وَكُلُّ مَنْ وَجَدْتُمُوهُ فَٱدْعُوهُ إِلَى ٱلْعُرْسِ. ٩ 9
ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
فَخَرَجَ أُولَئِكَ ٱلْعَبِيدُ إِلَى ٱلطُّرُقِ، وَجَمَعُوا كُلَّ ٱلَّذِينَ وَجَدُوهُمْ أَشْرَارًا وَصَالِحِينَ. فَٱمْتَلَأَ ٱلْعُرْسُ مِنَ ٱلْمُتَّكِئِينَ. ١٠ 10
೧೦ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
فَلَمَّا دَخَلَ ٱلْمَلِكُ لِيَنْظُرَ ٱلْمُتَّكِئِينَ، رَأَى هُنَاكَ إِنْسَانًا لَمْ يَكُنْ لَابِسًا لِبَاسَ ٱلْعُرْسِ. ١١ 11
೧೧ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
فَقَالَ لَهُ: يا صَاحِبُ، كَيْفَ دَخَلْتَ إِلَى هُنَا وَلَيْسَ عَلَيْكَ لِبَاسُ ٱلْعُرْسِ؟ فَسَكَتَ. ١٢ 12
೧೨ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
حِينَئِذٍ قَالَ ٱلْمَلِكُ لِلْخُدَّامِ: ٱرْبُطُوا رِجْلَيْهِ وَيَدَيْهِ، وَخُذُوهُ وَٱطْرَحُوهُ فِي ٱلظُّلْمَةِ ٱلْخَارِجِيَّةِ. هُنَاكَ يَكُونُ ٱلْبُكَاءُ وَصَرِيرُ ٱلْأَسْنَانِ. ١٣ 13
೧೩ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
لِأَنَّ كَثِيرِينَ يُدْعَوْنَ وَقَلِيلِينَ يُنْتَخَبُونَ». ١٤ 14
೧೪ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
حِينَئِذٍ ذَهَبَ ٱلْفَرِّيسِيُّونَ وَتَشَاوَرُوا لِكَيْ يَصْطَادُوهُ بِكَلِمَةٍ. ١٥ 15
೧೫ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
فَأَرْسَلُوا إِلَيْهِ تَلَامِيذَهُمْ مَعَ ٱلْهِيرُودُسِيِّينَ قَائِلِينَ: «يَا مُعَلِّمُ، نَعْلَمُ أَنَّكَ صَادِقٌ وَتُعَلِّمُ طَرِيقَ ٱللهِ بِٱلْحَقِّ، وَلَا تُبَالِي بِأَحَدٍ، لِأَنَّكَ لَا تَنْظُرُ إِلَى وُجُوهِ ٱلنَّاسِ. ١٦ 16
೧೬ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
فَقُلْ لَنَا: مَاذَا تَظُنُّ؟ أَيَجُوزُ أَنْ تُعْطَى جِزْيَةٌ لِقَيْصَرَ أَمْ لَا؟». ١٧ 17
೧೭ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
فَعَلِمَ يَسُوعُ خُبْثَهُمْ وَقَالَ: «لِمَاذَا تُجَرِّبُونَنِي يا مُرَاؤُونَ؟ ١٨ 18
೧೮ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
أَرُونِي مُعَامَلَةَ ٱلْجِزْيَةِ». فَقَدَّمُوا لَهُ دِينَارًا. ١٩ 19
೧೯ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
فَقَالَ لَهُمْ: «لِمَنْ هَذِهِ ٱلصُّورَةُ وَٱلْكِتَابَةُ؟». ٢٠ 20
೨೦ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
قَالُوا لَهُ: «لِقَيْصَرَ». فَقَالَ لَهُمْ: «أَعْطُوا إِذًا مَا لِقَيْصَرَ لِقَيْصَرَ وَمَا لِلهِ لِلهِ». ٢١ 21
೨೧ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
فَلَمَّا سَمِعُوا تَعَجَّبُوا وَتَرَكُوهُ وَمَضَوْا. ٢٢ 22
೨೨ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
فِي ذَلِكَ ٱلْيَوْمِ جَاءَ إِلَيْهِ صَدُّوقِيُّونَ، ٱلَّذِينَ يَقُولُونَ لَيْسَ قِيَامَةٌ، فَسَأَلُوهُ ٢٣ 23
೨೩ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
قَائِلِينَ: «يَا مُعَلِّمُ، قَالَ مُوسَى: إِنْ مَاتَ أَحَدٌ وَلَيْسَ لَهُ أَوْلَادٌ، يَتَزَوَّجْ أَخُوهُ بِٱمْرَأَتِهِ وَيُقِمْ نَسْلًا لِأَخِيهِ. ٢٤ 24
೨೪ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
فَكَانَ عِنْدَنَا سَبْعَةُ إِخْوَةٍ، وَتَزَوَّجَ ٱلْأَوَّلُ وَمَاتَ. وَإِذْ لَمْ يَكُنْ لَهُ نَسْلٌ تَرَكَ ٱمْرَأَتَهُ لِأَخِيهِ. ٢٥ 25
೨೫ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
وَكَذَلِكَ ٱلثَّانِي وَٱلثَّالِثُ إِلَى ٱلسَّبْعَةِ. ٢٦ 26
೨೬ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
وَآخِرَ ٱلْكُلِّ مَاتَتِ ٱلْمَرْأَةُ أَيْضًا. ٢٧ 27
೨೭ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
فَفِي ٱلْقِيَامَةِ لِمَنْ مِنَ ٱلسَّبْعَةِ تَكُونُ زَوْجَةً؟ فَإِنَّهَا كَانَتْ لِلْجَمِيعِ!». ٢٨ 28
೨೮ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
فَأَجَابَ يَسُوعُ وَقَالَ لَهُمْ: «تَضِلُّونَ إِذْ لَا تَعْرِفُونَ ٱلْكُتُبَ وَلَا قُوَّةَ ٱللهِ. ٢٩ 29
೨೯ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
لِأَنَّهُمْ فِي ٱلْقِيَامَةِ لَا يُزَوِّجُونَ وَلَا يَتَزَوَّجُونَ، بَلْ يَكُونُونَ كَمَلَائِكَةِ ٱللهِ فِي ٱلسَّمَاءِ. ٣٠ 30
೩೦ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
وَأَمَّا مِنْ جِهَةِ قِيَامَةِ ٱلْأَمْوَاتِ، أَفَمَا قَرَأْتُمْ مَا قِيلَ لَكُمْ مِنْ قِبَلِ ٱللهِ ٱلْقَائِلِ: ٣١ 31
೩೧ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
أَنَا إِلَهُ إِبْرَاهِيمَ وَإِلَهُ إِسْحَاقَ وَإِلَهُ يَعْقُوبَ؟ لَيْسَ ٱللهُ إِلَهَ أَمْوَاتٍ بَلْ إِلَهُ أَحْيَاءٍ». ٣٢ 32
೩೨‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
فَلَمَّا سَمِعَ ٱلْجُمُوعُ بُهِتُوا مِنْ تَعْلِيمِهِ. ٣٣ 33
೩೩ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
أَمَّا ٱلْفَرِّيسِيُّونَ فَلَمَّا سَمِعُوا أَنَّهُ أَبْكَمَ ٱلصَّدُّوقِيِّينَ ٱجْتَمَعُوا مَعًا، ٣٤ 34
೩೪ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
وَسَأَلَهُ وَاحِدٌ مِنْهُمْ، وَهُوَ نَامُوسِيٌّ، لِيُجَرِّبَهُ قَائِلًا: ٣٥ 35
೩೫ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
«يَا مُعَلِّمُ، أَيَّةُ وَصِيَّةٍ هِيَ ٱلْعُظْمَى فِي ٱلنَّامُوسِ؟». ٣٦ 36
೩೬“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
فَقَالَ لَهُ يَسُوعُ: «تُحِبُّ ٱلرَّبَّ إِلَهَكَ مِنْ كُلِّ قَلْبِكَ، وَمِنْ كُلِّ نَفْسِكَ، وَمِنْ كُلِّ فِكْرِكَ. ٣٧ 37
೩೭ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
هَذِهِ هِيَ ٱلْوَصِيَّةُ ٱلْأُولَى وَٱلْعُظْمَى. ٣٨ 38
೩೮ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
وَٱلثَّانِيَةُ مِثْلُهَا: تُحِبُّ قَرِيبَكَ كَنَفْسِكَ. ٣٩ 39
೩೯ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
بِهَاتَيْنِ ٱلْوَصِيَّتَيْنِ يَتَعَلَّقُ ٱلنَّامُوسُ كُلُّهُ وَٱلْأَنْبِيَاءُ». ٤٠ 40
೪೦ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
وَفِيمَا كَانَ ٱلْفَرِّيسِيُّونَ مُجْتَمِعِينَ سَأَلَهُمْ يَسُوعُ ٤١ 41
೪೧ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
قَائِلًا: «مَاذَا تَظُنُّونَ فِي ٱلْمَسِيحِ؟ ٱبْنُ مَنْ هُوَ؟» قَالُوا لَهُ: «ٱبْنُ دَاوُدَ». ٤٢ 42
೪೨“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
قَالَ لَهُمْ: «فَكَيْفَ يَدْعُوهُ دَاوُدُ بِٱلرُّوحِ رَبًّا؟ قَائِلًا: ٤٣ 43
೪೩ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
قَالَ ٱلرَّبُّ لِرَبِّي: ٱجْلِسْ عَنْ يَمِينِي حَتَّى أَضَعَ أَعْدَاءَكَ مَوْطِئًا لِقَدَمَيْكَ. ٤٤ 44
೪೪“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
فَإِنْ كَانَ دَاوُدُ يَدْعُوهُ رَبًّا، فَكَيْفَ يَكُونُ ٱبْنَهُ؟». ٤٥ 45
೪೫ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
فَلَمْ يَسْتَطِعْ أَحَدٌ أَنْ يُجِيبَهُ بِكَلِمَةٍ. وَمِنْ ذَلِكَ ٱلْيَوْمِ لَمْ يَجْسُرْ أَحَدٌ أَنْ يَسْأَلَهُ بَتَّةً. ٤٦ 46
೪೬ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

< مَتَّى 22 >