< مَتَّى 26 >
وَلَمَّا أَكْمَلَ يَسُوعُ هَذِهِ ٱلْأَقْوَالَ كُلَّهَا قَالَ لِتَلَامِيذِهِ: | ١ 1 |
೧ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;
«تَعْلَمُونَ أَنَّهُ بَعْدَ يَوْمَيْنِ يَكُونُ ٱلْفِصْحُ، وَٱبْنُ ٱلْإِنْسَانِ يُسَلَّمُ لِيُصْلَبَ». | ٢ 2 |
೨ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.
حِينَئِذٍ ٱجْتَمَعَ رُؤَسَاءُ ٱلْكَهَنَةِ وَٱلْكَتَبَةُ وَشُيُوخُ ٱلشَّعْبِ إِلَى دَارِ رَئِيسِ ٱلْكَهَنَةِ ٱلَّذِي يُدْعَى قَيَافَا، | ٣ 3 |
೩ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
وَتَشَاوَرُوا لِكَيْ يُمْسِكُوا يَسُوعَ بِمَكْرٍ وَيَقْتُلُوهُ. | ٤ 4 |
೪ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
وَلَكِنَّهُمْ قَالُوا: «لَيْسَ فِي ٱلْعِيدِ لِئَلَّا يَكُونَ شَغَبٌ فِي ٱلشَّعْبِ». | ٥ 5 |
೫“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
وَفِيمَا كَانَ يَسُوعُ فِي بَيْتِ عَنْيَا فِي بَيْتِ سِمْعَانَ ٱلْأَبْرَصِ، | ٦ 6 |
೬ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
تَقَدَّمَتْ إِلَيْهِ ٱمْرَأَةٌ مَعَهَا قَارُورَةُ طِيبٍ كَثِيرِ ٱلثَّمَنِ، فَسَكَبَتْهُ عَلَى رَأْسِهِ وَهُوَ مُتَّكِئٌ. | ٧ 7 |
೭ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
فَلَمَّا رَأَى تَلَامِيذُهُ ذَلِكَ ٱغْتَاظُوا قَائِلِينَ: «لِمَاذَا هَذَا ٱلْإِتْلَافُ؟ | ٨ 8 |
೮ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?
لِأَنَّهُ كَانَ يُمْكِنُ أَنْ يُبَاعَ هَذَا ٱلطِّيبُ بِكَثِيرٍ وَيُعْطَى لِلْفُقَرَاءِ». | ٩ 9 |
೯ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.
فَعَلِمَ يَسُوعُ وَقَالَ لَهُمْ: «لِمَاذَا تُزْعِجُونَ ٱلْمَرْأَةَ؟ فَإِنَّهَا قَدْ عَمِلَتْ بِي عَمَلًا حَسَنًا! | ١٠ 10 |
೧೦ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
لِأَنَّ ٱلْفُقَرَاءَ مَعَكُمْ فِي كُلِّ حِينٍ، وَأَمَّا أَنَا فَلَسْتُ مَعَكُمْ فِي كُلِّ حِينٍ. | ١١ 11 |
೧೧ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
فَإِنَّهَا إِذْ سَكَبَتْ هَذَا ٱلطِّيبَ عَلَى جَسَدِي إِنَّمَا فَعَلَتْ ذَلِكَ لِأَجْلِ تَكْفِينِي. | ١٢ 12 |
೧೨ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
اَلْحَقَّ أَقُولُ لَكُمْ: حَيْثُمَا يُكْرَزْ بِهَذَا ٱلْإِنْجِيلِ فِي كُلِّ ٱلْعَالَمِ، يُخْبَرْ أَيْضًا بِمَا فَعَلَتْهُ هَذِهِ تَذْكَارًا لَهَا». | ١٣ 13 |
೧೩ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
حِينَئِذٍ ذَهَبَ وَاحِدٌ مِنَ ٱلِٱثْنَيْ عَشَرَ، ٱلَّذِي يُدْعَى يَهُوذَا ٱلْإِسْخَرْيُوطِيَّ، إِلَى رُؤَسَاءِ ٱلْكَهَنَةِ | ١٤ 14 |
೧೪ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
وَقَالَ: «مَاذَا تُرِيدُونَ أَنْ تُعْطُونِي وَأَنَا أُسَلِّمُهُ إِلَيْكُمْ؟». فَجَعَلُوا لَهُ ثَلَاثِينَ مِنَ ٱلْفِضَّةِ. | ١٥ 15 |
೧೫“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
وَمِنْ ذَلِكَ ٱلْوَقْتِ كَانَ يَطْلُبُ فُرْصَةً لِيُسَلِّمَهُ. | ١٦ 16 |
೧೬ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
وَفِي أَوَّلِ أَيَّامِ ٱلْفَطِيرِ تَقَدَّمَ ٱلتَّلَامِيذُ إِلَى يَسُوعَ قَائِلِينَ لَهُ: «أَيْنَ تُرِيدُ أَنْ نُعِدَّ لَكَ لِتَأْكُلَ ٱلْفِصْحَ؟». | ١٧ 17 |
೧೭ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
فَقَالَ: «ٱذْهَبُوا إِلَى ٱلْمَدِينَةِ، إِلَى فُلَانٍ وَقُولُوا لَهُ: ٱلْمُعَلِّمُ يَقُولُ: إِنَّ وَقْتِي قَرِيبٌ. عِنْدَكَ أَصْنَعُ ٱلْفِصْحَ مَعَ تَلَامِيذِي». | ١٨ 18 |
೧೮ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
فَفَعَلَ ٱلتَّلَامِيذُ كَمَا أَمَرَهُمْ يَسُوعُ وَأَعَدُّوا ٱلْفِصْحَ. | ١٩ 19 |
೧೯ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
وَلَمَّا كَانَ ٱلْمَسَاءُ ٱتَّكَأَ مَعَ ٱلِٱثْنَيْ عَشَرَ. | ٢٠ 20 |
೨೦ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
وَفِيمَا هُمْ يَأْكُلُونَ قَالَ: «ٱلْحَقَّ أَقُولُ لَكُمْ: إِنَّ وَاحِدًا مِنْكُمْ يُسَلِّمُنِي». | ٢١ 21 |
೨೧ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
فَحَزِنُوا جِدًّا، وَٱبْتَدَأَ كُلُّ وَاحِدٍ مِنْهُمْ يَقُولُ لَهُ: «هَلْ أَنَا هُوَ يَارَبُّ؟». | ٢٢ 22 |
೨೨ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.
فَأَجَابَ وَقَالَ: «ٱلَّذِي يَغْمِسُ يَدَهُ مَعِي فِي ٱلصَّحْفَةِ هُوَ يُسَلِّمُنِي! | ٢٣ 23 |
೨೩ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.
إِنَّ ٱبْنَ ٱلْإِنْسَانِ مَاضٍ كَمَا هُوَ مَكْتُوبٌ عَنْهُ، وَلَكِنْ وَيْلٌ لِذَلِكَ ٱلرَّجُلِ ٱلَّذِي بِهِ يُسَلَّمُ ٱبْنُ ٱلْإِنْسَانِ. كَانَ خَيْرًا لِذَلِكَ ٱلرَّجُلِ لَوْ لَمْ يُولَدْ!». | ٢٤ 24 |
೨೪ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
فَأَجَابَ يَهُوذَا مُسَلِّمُهُ وَقَالَ: «هَلْ أَنَا هُوَ يا سَيِّدِي؟». قَالَ لَهُ: «أَنْتَ قُلْتَ». | ٢٥ 25 |
೨೫ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
وَفِيمَا هُمْ يَأْكُلُونَ أَخَذَ يَسُوعُ ٱلْخُبْزَ، وَبَارَكَ وَكَسَّرَ وَأَعْطَى ٱلتَّلَامِيذَ وَقَالَ: «خُذُوا كُلُوا. هَذَا هُوَ جَسَدِي». | ٢٦ 26 |
೨೬ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.
وَأَخَذَ ٱلْكَأْسَ وَشَكَرَ وَأَعْطَاهُمْ قَائِلًا: «ٱشْرَبُوا مِنْهَا كُلُّكُمْ، | ٢٧ 27 |
೨೭ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
لِأَنَّ هَذَا هُوَ دَمِي ٱلَّذِي لِلْعَهْدِ ٱلْجَدِيدِ ٱلَّذِي يُسْفَكُ مِنْ أَجْلِ كَثِيرِينَ لِمَغْفِرَةِ ٱلْخَطَايَا. | ٢٨ 28 |
೨೮ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.
وَأَقُولُ لَكُمْ: إِنِّي مِنَ ٱلْآنَ لَا أَشْرَبُ مِنْ نِتَاجِ ٱلْكَرْمَةِ هَذَا إِلَى ذَلِكَ ٱلْيَوْمِ حِينَمَا أَشْرَبُهُ مَعَكُمْ جَدِيدًا فِي مَلَكُوتِ أَبِي». | ٢٩ 29 |
೨೯ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
ثُمَّ سَبَّحُوا وَخَرَجُوا إِلَى جَبَلِ ٱلزَّيْتُونِ. | ٣٠ 30 |
೩೦ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
حِينَئِذٍ قَالَ لَهُمْ يَسُوعُ: «كُلُّكُمْ تَشُكُّونَ فِيَّ فِي هَذِهِ ٱللَّيْلَةِ، لِأَنَّهُ مَكْتُوبٌ: أَنِّي أَضْرِبُ ٱلرَّاعِيَ فَتَتَبَدَّدُ خِرَافُ ٱلرَّعِيَّةِ. | ٣١ 31 |
೩೧ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
وَلَكِنْ بَعْدَ قِيَامِي أَسْبِقُكُمْ إِلَى ٱلْجَلِيلِ». | ٣٢ 32 |
೩೨“ಆದರೆ ನಾನು ಜೀವಿತನಾಗಿ ಎದ್ದ ಮೇಲೆನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
فَأَجَابَ بُطْرُسُ وَقَالَ لَهُ: «وَإِنْ شَكَّ فِيكَ ٱلْجَمِيعُ فَأَنَا لَا أَشُكُّ أَبَدًا». | ٣٣ 33 |
೩೩ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
قَالَ لَهُ يَسُوعُ: «ٱلْحَقَّ أَقُولُ لَكَ: إِنَّكَ فِي هَذِهِ ٱللَّيْلَةِ قَبْلَ أَنْ يَصِيحَ دِيكٌ تُنْكِرُنِي ثَلَاثَ مَرَّاتٍ». | ٣٤ 34 |
೩೪ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.
قَالَ لَهُ بُطْرُسُ: «وَلَوِ ٱضْطُرِرْتُ أَنْ أَمُوتَ مَعَكَ لَا أُنْكِرُكَ!». هَكَذَا قَالَ أَيْضًا جَمِيعُ ٱلتَّلَامِيذِ. | ٣٥ 35 |
೩೫ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
حِينَئِذٍ جَاءَ مَعَهُمْ يَسُوعُ إِلَى ضَيْعَةٍ يُقَالُ لَهَا جَثْسَيْمَانِي، فَقَالَ لِلتَّلَامِيذِ: «ٱجْلِسُوا هَهُنَا حَتَّى أَمْضِيَ وَأُصَلِّيَ هُنَاكَ». | ٣٦ 36 |
೩೬ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
ثُمَّ أَخَذَ مَعَهُ بُطْرُسَ وَٱبْنَيْ زَبْدِي، وَٱبْتَدَأَ يَحْزَنُ وَيَكْتَئِبُ. | ٣٧ 37 |
೩೭ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
فَقَالَ لَهُمْ: «نَفْسِي حَزِينَةٌ جِدًّا حَتَّى ٱلْمَوْتِ. اُمْكُثُوا هَهُنَا وَٱسْهَرُوا مَعِي». | ٣٨ 38 |
೩೮ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
ثُمَّ تَقَدَّمَ قَلِيلًا وَخَرَّ عَلَى وَجْهِهِ، وَكَانَ يُصَلِّي قَائِلًا: «يَا أَبَتَاهُ، إِنْ أَمْكَنَ فَلْتَعْبُرْ عَنِّي هَذِهِ ٱلْكَأْسُ، وَلَكِنْ لَيْسَ كَمَا أُرِيدُ أَنَا بَلْ كَمَا تُرِيدُ أَنْتَ». | ٣٩ 39 |
೩೯ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
ثُمَّ جَاءَ إِلَى ٱلتَّلَامِيذِ فَوَجَدَهُمْ نِيَامًا، فَقَالَ لِبُطْرُسَ: «أَهَكَذَا مَا قَدَرْتُمْ أَنْ تَسْهَرُوا مَعِي سَاعَةً وَاحِدَةً؟ | ٤٠ 40 |
೪೦ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
اِسْهَرُوا وَصَلُّوا لِئَلَّا تَدْخُلُوا فِي تَجْرِبَةٍ. أَمَّا ٱلرُّوحُ فَنَشِيطٌ وَأَمَّا ٱلْجَسَدُ فَضَعِيفٌ». | ٤١ 41 |
೪೧ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
فَمَضَى أَيْضًا ثَانِيَةً وَصَلَّى قَائِلًا: «يَا أَبَتَاهُ، إِنْ لَمْ يُمْكِنْ أَنْ تَعْبُرَ عَنِّي هَذِهِ ٱلْكَأْسُ إِلَّا أَنْ أَشْرَبَهَا، فَلْتَكُنْ مَشِيئَتُكَ». | ٤٢ 42 |
೪೨ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
ثُمَّ جَاءَ فَوَجَدَهُمْ أَيْضًا نِيَامًا، إِذْ كَانَتْ أَعْيُنُهُمْ ثَقِيلَةً. | ٤٣ 43 |
೪೩ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.
فَتَرَكَهُمْ وَمَضَى أَيْضًا وَصَلَّى ثَالِثَةً قَائِلًا ذَلِكَ ٱلْكَلَامَ بِعَيْنِهِ. | ٤٤ 44 |
೪೪ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
ثُمَّ جَاءَ إِلَى تَلَامِيذِهِ وَقَالَ لَهُمْ: «نَامُوا ٱلْآنَ وَٱسْتَرِيحُوا! هُوَذَا ٱلسَّاعَةُ قَدِ ٱقْتَرَبَتْ، وَٱبْنُ ٱلْإِنْسَانِ يُسَلَّمُ إِلَى أَيْدِي ٱلْخُطَاةِ. | ٤٥ 45 |
೪೫ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
قُومُوا نَنْطَلِقْ! هُوَذَا ٱلَّذِي يُسَلِّمُنِي قَدِ ٱقْتَرَبَ!». | ٤٦ 46 |
೪೬ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
وَفِيمَا هُوَ يَتَكَلَّمُ، إِذَا يَهُوذَا أَحَدُ ٱلِٱثْنَيْ عَشَرَ قَدْ جَاءَ وَمَعَهُ جَمْعٌ كَثِيرٌ بِسُيُوفٍ وَعِصِيٍّ مِنْ عِنْدِ رُؤَسَاءِ ٱلْكَهَنَةِ وَشُيُوخِ ٱلشَّعْبِ. | ٤٧ 47 |
೪೭ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
وَٱلَّذِي أَسْلَمَهُ أَعْطَاهُمْ عَلَامَةً قَائِلًا: «ٱلَّذِي أُقَبِّلُهُ هُوَ هُوَ. أَمْسِكُوهُ». | ٤٨ 48 |
೪೮ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
فَلِلْوَقْتِ تَقَدَّمَ إِلَى يَسُوعَ وَقَالَ: «ٱلسَّلَامُ يا سَيِّدِي!» وَقَبَّلَهُ. | ٤٩ 49 |
೪೯ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
فَقَالَ لَهُ يَسُوعُ: «يَا صَاحِبُ، لِمَاذَا جِئْتَ؟». حِينَئِذٍ تَقَدَّمُوا وَأَلْقَوْا ٱلْأَيَادِيَ عَلَى يَسُوعَ وَأَمْسَكُوهُ. | ٥٠ 50 |
೫೦ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
وَإِذَا وَاحِدٌ مِنَ ٱلَّذِينَ مَعَ يَسُوعَ مَدَّ يَدَهُ وَٱسْتَلَّ سَيْفَهُ وَضَرَبَ عَبْدَ رَئِيسِ ٱلْكَهَنَةِ، فَقَطَعَ أُذْنَهُ. | ٥١ 51 |
೫೧ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
فَقَالَ لَهُ يَسُوعُ: «رُدَّ سَيْفَكَ إِلَى مَكَانِهِ. لِأَنَّ كُلَّ ٱلَّذِينَ يَأْخُذُونَ ٱلسَّيْفَ بِٱلسَّيْفِ يَهْلِكُونَ! | ٥٢ 52 |
೫೨ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
أَتَظُنُّ أَنِّي لَا أَسْتَطِيعُ ٱلْآنَ أَنْ أَطْلُبَ إِلَى أَبِي فَيُقَدِّمَ لِي أَكْثَرَ مِنِ ٱثْنَيْ عَشَرَ جَيْشًا مِنَ ٱلْمَلَائِكَةِ؟ | ٥٣ 53 |
೫೩ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
فَكَيْفَ تُكَمَّلُ ٱلْكُتُبُ: أَنَّهُ هَكَذَا يَنْبَغِي أَنْ يَكُونَ؟». | ٥٤ 54 |
೫೪ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.
فِي تِلْكَ ٱلسَّاعَةِ قَالَ يَسُوعُ لِلْجُمُوعِ: «كَأَنَّهُ عَلَى لِصٍّ خَرَجْتُمْ بِسُيُوفٍ وَعِصِيٍّ لِتَأْخُذُونِي! كُلَّ يَوْمٍ كُنْتُ أَجْلِسُ مَعَكُمْ أُعَلِّمُ فِي ٱلْهَيْكَلِ وَلَمْ تُمْسِكُونِي. | ٥٥ 55 |
೫೫ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;
وَأَمَّا هَذَا كُلُّهُ فَقَدْ كَانَ لِكَيْ تُكَمَّلَ كُتُبُ ٱلْأَنْبِيَاءِ». حِينَئِذٍ تَرَكَهُ ٱلتَّلَامِيذُ كُلُّهُمْ وَهَرَبُوا. | ٥٦ 56 |
೫೬ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
وَٱلَّذِينَ أَمْسَكُوا يَسُوعَ مَضَوْا بِهِ إِلَى قَيَافَا رَئِيسِ ٱلْكَهَنَةِ، حَيْثُ ٱجْتَمَعَ ٱلْكَتَبَةُ وَٱلشُّيُوخُ. | ٥٧ 57 |
೫೭ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
وَأَمَّا بُطْرُسُ فَتَبِعَهُ مِنْ بَعِيدٍ إِلَى دَارِ رَئِيسِ ٱلْكَهَنَةِ، فَدَخَلَ إِلَى دَاخِلٍ وَجَلَسَ بَيْنَ ٱلْخُدَّامِ لِيَنْظُرَ ٱلنِّهَايَةَ. | ٥٨ 58 |
೫೮ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
وَكَانَ رُؤَسَاءُ ٱلْكَهَنَةِ وَٱلشُّيُوخُ وَٱلْمَجْمَعُ كُلُّهُ يَطْلُبُونَ شَهَادَةَ زُورٍ عَلَى يَسُوعَ لِكَيْ يَقْتُلُوهُ، | ٥٩ 59 |
೫೯ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
فَلَمْ يَجِدُوا. وَمَعَ أَنَّهُ جَاءَ شُهُودُ زُورٍ كَثِيرُونَ، لَمْ يَجِدُوا. وَلَكِنْ أَخِيرًا تَقَدَّمَ شَاهِدَا زُورٍ | ٦٠ 60 |
೬೦ಅನಂತರ ಇಬ್ಬರು ಮುಂದೆ ಬಂದು,
وَقَالَا: «هَذَا قَالَ: إِنِّي أَقْدِرُ أَنْ أَنْقُضَ هَيْكَلَ ٱللهِ، وَفِي ثَلَاثَةِ أَيَّامٍ أَبْنِيهِ». | ٦١ 61 |
೬೧“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;
فَقَامَ رَئِيسُ ٱلْكَهَنَةِ وَقَالَ لَهُ: «أَمَا تُجِيبُ بِشَيْءٍ؟ مَاذَا يَشْهَدُ بِهِ هَذَانِ عَلَيْكَ؟». | ٦٢ 62 |
೬೨ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
وَأَمَّا يَسُوعُ فَكَانَ سَاكِتًا. فَأَجَابَ رَئِيسُ ٱلْكَهَنَةِ وَقَالَ لَهُ: «أَسْتَحْلِفُكَ بِٱللهِ ٱلْحَيِّ أَنْ تَقُولَ لَنَا: هَلْ أَنْتَ ٱلْمَسِيحُ ٱبْنُ ٱللهِ؟». | ٦٣ 63 |
೬೩ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
قَالَ لَهُ يَسُوعُ: «أَنْتَ قُلْتَ! وَأَيْضًا أَقُولُ لَكُمْ: مِنَ ٱلْآنَ تُبْصِرُونَ ٱبْنَ ٱلْإِنْسَانِ جَالِسًا عَنْ يَمِينِ ٱلْقُوَّةِ، وَآتِيًا عَلَى سَحَابِ ٱلسَّمَاءِ». | ٦٤ 64 |
೬೪ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
فَمَزَّقَ رَئِيسُ ٱلْكَهَنَةِ حِينَئِذٍ ثِيَابَهُ قَائِلًا: «قَدْ جَدَّفَ! مَا حَاجَتُنَا بَعْدُ إِلَى شُهُودٍ؟ هَا قَدْ سَمِعْتُمْ تَجْدِيفَهُ! | ٦٥ 65 |
೬೫ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
مَاذَا تَرَوْنَ؟». فَأَجَابُوا وَقَالُوا: «إِنَّهُ مُسْتَوْجِبُ ٱلْمَوْتِ». | ٦٦ 66 |
೬೬ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.
حِينَئِذٍ بَصَقُوا فِي وَجْهِهِ وَلَكَمُوهُ، وَآخَرُونَ لَطَمُوهُ | ٦٧ 67 |
೬೭ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
قَائِلِينَ: «تَنَبَّأْ لَنَا أَيُّهَا ٱلْمَسِيحُ، مَنْ ضَرَبَكَ؟». | ٦٨ 68 |
೬೮“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
أَمَّا بُطْرُسُ فَكَانَ جَالِسًا خَارِجًا فِي ٱلدَّارِ، فَجَاءَتْ إِلَيْهِ جَارِيَةٌ قَائِلَةً: «وَأَنْتَ كُنْتَ مَعَ يَسُوعَ ٱلْجَلِيلِيِّ!». | ٦٩ 69 |
೬೯ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
فَأَنْكَرَ قُدَّامَ ٱلْجَمِيعِ قَائِلًا: «لَسْتُ أَدْرِي مَا تَقُولِينَ!». | ٧٠ 70 |
೭೦ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.
ثُمَّ إِذْ خَرَجَ إِلَى ٱلدِّهْلِيزِ رَأَتْهُ أُخْرَى، فَقَالَتْ لِلَّذِينَ هُنَاكَ: «وَهَذَا كَانَ مَعَ يَسُوعَ ٱلنَّاصِرِيِّ!». | ٧١ 71 |
೭೧ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
فَأَنْكَرَ أَيْضًا بِقَسَمٍ: «إِنِّي لَسْتُ أَعْرِفُ ٱلرَّجُلَ!». | ٧٢ 72 |
೭೨ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.
وَبَعْدَ قَلِيلٍ جَاءَ ٱلْقِيَامُ وَقَالُوا لِبُطْرُسَ: «حَقًّا أَنْتَ أَيْضًا مِنْهُمْ، فَإِنَّ لُغَتَكَ تُظْهِرُكَ!». | ٧٣ 73 |
೭೩ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
فَٱبْتَدَأَ حِينَئِذٍ يَلْعَنُ وَيَحْلِفُ: «إِنِّي لَا أَعْرِفُ ٱلرَّجُلَ!». وَلِلْوَقْتِ صَاحَ ٱلدِّيكُ. | ٧٤ 74 |
೭೪ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
فَتَذَكَّرَ بُطْرُسُ كَلَامَ يَسُوعَ ٱلَّذِي قَالَ لَهُ: «إِنَّكَ قَبْلَ أَنْ يَصِيحَ ٱلدِّيكُ تُنْكِرُنِي ثَلَاثَ مَرَّاتٍ». فَخَرَجَ إِلَى خَارِجٍ وَبَكَى بُكَاءً مُرًّا. | ٧٥ 75 |
೭೫ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.