< مَتَّى 27 >

وَلَمَّا كَانَ ٱلصَّبَاحُ تَشَاوَرَ جَمِيعُ رُؤَسَاءِ ٱلْكَهَنَةِ وَشُيُوخُ ٱلشَّعْبِ عَلَى يَسُوعَ حَتَّى يَقْتُلُوهُ، ١ 1
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
فَأَوْثَقُوهُ وَمَضَوْا بِهِ وَدَفَعُوهُ إِلَى بِيلَاطُسَ ٱلْبُنْطِيِّ ٱلْوَالِي. ٢ 2
ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
حِينَئِذٍ لَمَّا رَأَى يَهُوذَا ٱلَّذِي أَسْلَمَهُ أَنَّهُ قَدْ دِينَ، نَدِمَ وَرَدَّ ٱلثَّلَاثِينَ مِنَ ٱلْفِضَّةِ إِلَى رُؤَسَاءِ ٱلْكَهَنَةِ وَٱلشُّيُوخِ ٣ 3
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
قَائِلًا: «قَدْ أَخْطَأْتُ إِذْ سَلَّمْتُ دَمًا بَرِيئًا». فَقَالُوا: «مَاذَا عَلَيْنَا؟ أَنْتَ أَبْصِرْ!». ٤ 4
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
فَطَرَحَ ٱلْفِضَّةَ فِي ٱلْهَيْكَلِ وَٱنْصَرَفَ، ثُمَّ مَضَى وَخَنَقَ نَفْسَهُ. ٥ 5
ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
فَأَخَذَ رُؤَسَاءُ ٱلْكَهَنَةِ ٱلْفِضَّةَ وَقَالُوا: «لَا يَحِلُّ أَنْ نُلْقِيَهَا فِي ٱلْخِزَانَةِ لِأَنَّهَا ثَمَنُ دَمٍ». ٦ 6
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
فَتَشَاوَرُوا وَٱشْتَرَوْا بِهَا حَقْلَ ٱلْفَخَّارِيِّ مَقْبَرَةً لِلْغُرَبَاءِ. ٧ 7
ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
لِهَذَا سُمِّيَ ذَلِكَ ٱلْحَقْلُ «حَقْلَ ٱلدَّمِ» إِلَى هَذَا ٱلْيَوْمِ. ٨ 8
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.
حِينَئِذٍ تَمَّ مَا قِيلَ بِإِرْمِيَا ٱلنَّبِيِّ ٱلْقَائِلِ: «وَأَخَذُوا ٱلثَّلَاثِينَ مِنَ ٱلْفِضَّةِ، ثَمَنَ ٱلْمُثَمَّنِ ٱلَّذِي ثَمَّنُوهُ مِنْ بَنِي إِسْرَائِيلَ، ٩ 9
ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
وَأَعْطَوْهَا عَنْ حَقْلِ ٱلْفَخَّارِيِّ، كَمَا أَمَرَنِي ٱلرَّبُّ». ١٠ 10
೧೦ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
فَوَقَفَ يَسُوعُ أَمَامَ ٱلْوَالِي. فَسَأَلَهُ ٱلْوَالِي قَائِلًا: «أَأَنْتَ مَلِكُ ٱلْيَهُودِ؟». فَقَالَ لَهُ يَسُوعُ: «أَنْتَ تَقُولُ». ١١ 11
೧೧ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
وَبَيْنَمَا كَانَ رُؤَسَاءُ ٱلْكَهَنَةِ وَٱلشُّيُوخُ يَشْتَكُونَ عَلَيْهِ لَمْ يُجِبْ بِشَيْءٍ. ١٢ 12
೧೨ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
فَقَالَ لَهُ بِيلَاطُسُ: «أَمَا تَسْمَعُ كَمْ يَشْهَدُونَ عَلَيْكَ؟». ١٣ 13
೧೩ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
فَلَمْ يُجِبْهُ وَلَا عَنْ كَلِمَةٍ وَاحِدَةٍ، حَتَّى تَعَجَّبَ ٱلْوَالِي جِدًّا. ١٤ 14
೧೪ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
وَكَانَ ٱلْوَالِي مُعْتَادًا فِي ٱلْعِيدِ أَنْ يُطْلِقَ لِلْجَمْعِ أَسِيرًا وَاحِدًا، مَنْ أَرَادُوهُ. ١٥ 15
೧೫ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
وَكَانَ لَهُمْ حِينَئِذٍ أَسِيرٌ مَشْهُورٌ يُسَمَّى بَارَابَاسَ. ١٦ 16
೧೬ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
فَفِيمَا هُمْ مُجْتَمِعُونَ قَالَ لَهُمْ بِيلَاطُسُ: «مَنْ تُرِيدُونَ أَنْ أُطْلِقَ لَكُمْ؟ بَارَابَاسَ أَمْ يَسُوعَ ٱلَّذِي يُدْعَى ٱلْمَسِيحَ؟». ١٧ 17
೧೭ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
لِأَنَّهُ عَلِمَ أَنَّهُمْ أَسْلَمُوهُ حَسَدًا. ١٨ 18
೧೮ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
وَإِذْ كَانَ جَالِسًا عَلَى كُرْسِيِّ ٱلْوِلَايَةِ أَرْسَلَتْ إِلَيْهِ ٱمْرَأَتُهُ قَائِلَةً: «إِيَّاكَ وَذَلِكَ ٱلْبَارَّ، لِأَنِّي تَأَلَّمْتُ ٱلْيَوْمَ كَثِيرًا فِي حُلْمٍ مِنْ أَجْلِهِ». ١٩ 19
೧೯ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
وَلَكِنَّ رُؤَسَاءَ ٱلْكَهَنَةِ وَٱلشُّيُوخَ حَرَّضُوا ٱلْجُمُوعَ عَلَى أَنْ يَطْلُبُوا بَارَابَاسَ وَيُهْلِكُوا يَسُوعَ. ٢٠ 20
೨೦ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
فَأجَابَ ٱلْوَالِي وَقَالَ لَهُمْ: «مَنْ مِنْ ٱلِٱثْنَيْنِ تُرِيدُونَ أَنْ أُطْلِقَ لَكُمْ؟». فَقَالُوا: «بَارَابَاسَ!». ٢١ 21
೨೧ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
قَالَ لَهُمْ بِيلَاطُسُ: «فَمَاذَا أَفْعَلُ بِيَسُوعَ ٱلَّذِي يُدْعَى ٱلْمَسِيحَ؟». قَالَ لَهُ ٱلْجَمِيعُ: «لِيُصْلَبْ!». ٢٢ 22
೨೨ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
فَقَالَ ٱلْوَالِي: «وَأَيَّ شَرٍّ عَمِلَ؟». فَكَانُوا يَزْدَادُونَ صُرَاخًا قَائِلِينَ: «لِيُصْلَبْ!». ٢٣ 23
೨೩ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
فَلَمَّا رَأَى بِيلَاطُسُ أَنَّهُ لَا يَنْفَعُ شَيْئًا، بَلْ بِٱلْحَرِيِّ يَحْدُثُ شَغَبٌ، أَخَذَ مَاءً وَغَسَلَ يَدَيْهِ قُدَّامَ ٱلْجَمْعِ قَائِلًا: «إِنِّي بَرِيءٌ مِنْ دَمِ هَذَا ٱلْبَارِّ! أَبْصِرُوا أَنْتُمْ!». ٢٤ 24
೨೪ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
فَأَجَابَ جَمِيعُ ٱلشَّعْبِ وَقَالُوا: «دَمُهُ عَلَيْنَا وَعَلَى أَوْلَادِنَا». ٢٥ 25
೨೫ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
حِينَئِذٍ أَطْلَقَ لَهُمْ بَارَابَاسَ، وَأَمَّا يَسُوعُ فَجَلَدَهُ وَأَسْلَمَهُ لِيُصْلَبَ. ٢٦ 26
೨೬ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
فَأَخَذَ عَسْكَرُ ٱلْوَالِي يَسُوعَ إِلَى دَارِ ٱلْوِلَايَةِ وَجَمَعُوا عَلَيْهِ كُلَّ ٱلْكَتِيبَةِ، ٢٧ 27
೨೭ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
فَعَرَّوْهُ وَأَلْبَسُوهُ رِدَاءً قِرْمِزِيًّا، ٢٨ 28
೨೮ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,
وَضَفَرُوا إِكْلِيلًا مِنْ شَوْكٍ وَوَضَعُوهُ عَلَى رَأْسِهِ، وَقَصَبَةً فِي يَمِينِهِ. وَكَانُوا يَجْثُونَ قُدَّامَهُ وَيَسْتَهْزِئُونَ بِهِ قَائِلِينَ: «ٱلسَّلَامُ يا مَلِكَ ٱلْيَهُودِ!». ٢٩ 29
೨೯ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
وَبَصَقُوا عَلَيْهِ، وَأَخَذُوا ٱلْقَصَبَةَ وَضَرَبُوهُ عَلَى رَأْسِهِ. ٣٠ 30
೩೦ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
وَبَعْدَ مَا ٱسْتَهْزَأُوا بِهِ، نَزَعُوا عَنْهُ ٱلرِّدَاءَ وَأَلْبَسُوهُ ثِيَابَهُ، وَمَضَوْا بِهِ لِلصَّلْبِ. ٣١ 31
೩೧ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
وَفِيمَا هُمْ خَارِجُونَ وَجَدُوا إِنْسَانًا قَيْرَوَانِيًّا ٱسْمُهُ سِمْعَانُ، فَسَخَّرُوهُ لِيَحْمِلَ صَلِيبَهُ. ٣٢ 32
೩೨ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
وَلَمَّا أَتَوْا إِلَى مَوْضِعٍ يُقَالُ لَهُ جُلْجُثَةُ، وَهُوَ ٱلْمُسَمَّى «مَوْضِعَ ٱلْجُمْجُمَةِ» ٣٣ 33
೩೩ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ
أَعْطَوْهُ خَلًّا مَمْزُوجًا بِمَرَارَةٍ لِيَشْرَبَ. وَلَمَّا ذَاقَ لَمْ يُرِدْ أَنْ يَشْرَبَ. ٣٤ 34
೩೪ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
وَلَمَّا صَلَبُوهُ ٱقْتَسَمُوا ثِيَابَهُ مُقْتَرِعِينَ عَلَيْهَا، لِكَيْ يَتِمَّ مَا قِيلَ بِٱلنَّبِيِّ: «ٱقْتَسَمُوا ثِيَابِي بَيْنَهُمْ، وَعَلَى لِبَاسِي أَلْقَوْا قُرْعَةً». ٣٥ 35
೩೫ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
ثُمَّ جَلَسُوا يَحْرُسُونَهُ هُنَاكَ. ٣٦ 36
೩೬ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.
وَجَعَلُوا فَوْقَ رَأْسِهِ عِلَّتَهُ مَكْتُوبَةً: «هَذَا هُوَ يَسُوعُ مَلِكُ ٱلْيَهُودِ». ٣٧ 37
೩೭ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
حِينَئِذٍ صُلِبَ مَعَهُ لِصَّانِ، وَاحِدٌ عَنِ ٱلْيَمِينِ وَوَاحِدٌ عَنِ ٱلْيَسَارِ. ٣٨ 38
೩೮ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
وَكَانَ ٱلْمُجْتَازُونَ يُجَدِّفُونَ عَلَيْهِ وَهُمْ يَهُزُّونَ رُؤُوسَهُمْ ٣٩ 39
೩೯ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
قَائِلِينَ: «يَا نَاقِضَ ٱلْهَيْكَلِ وَبَانِيَهُ فِي ثَلَاثَةِ أَيَّامٍ، خَلِّصْ نَفْسَكَ! إِنْ كُنْتَ ٱبْنَ ٱللهِ فَٱنْزِلْ عَنِ ٱلصَّلِيبِ!». ٤٠ 40
೪೦“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
وَكَذَلِكَ رُؤَسَاءُ ٱلْكَهَنَةِ أَيْضًا وَهُمْ يَسْتَهْزِئُونَ مَعَ ٱلْكَتَبَةِ وَٱلشُّيُوخِ قَالُوا: ٤١ 41
೪೧ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
«خَلَّصَ آخَرِينَ وَأَمَّا نَفْسُهُ فَمَا يَقْدِرُ أَنْ يُخَلِّصَهَا! إِنْ كَانَ هُوَ مَلِكَ إِسْرَائِيلَ فَلْيَنْزِلِ ٱلْآنَ عَنِ ٱلصَّلِيبِ فَنُؤْمِنَ بِهِ! ٤٢ 42
೪೨ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
قَدِ ٱتَّكَلَ عَلَى ٱللهِ، فَلْيُنْقِذْهُ ٱلْآنَ إِنْ أَرَادَهُ! لِأَنَّهُ قَالَ: أَنَا ٱبْنُ ٱللهِ!». ٤٣ 43
೪೩ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
وَبِذَلِكَ أَيْضًا كَانَ ٱللِّصَّانِ ٱللَّذَانِ صُلِبَا مَعَهُ يُعَيِّرَانِهِ. ٤٤ 44
೪೪ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
وَمِنَ ٱلسَّاعَةِ ٱلسَّادِسَةِ كَانَتْ ظُلْمَةٌ عَلَى كُلِّ ٱلْأَرْضِ إِلَى ٱلسَّاعَةِ ٱلتَّاسِعَةِ. ٤٥ 45
೪೫ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
وَنَحْوَ ٱلسَّاعَةِ ٱلتَّاسِعَةِ صَرَخَ يَسُوعُ بِصَوْتٍ عَظِيمٍ قَائِلًا: «إِيلِي، إِيلِي، لَمَا شَبَقْتَنِي؟» أَيْ: إِلَهِي، إِلَهِي، لِمَاذَا تَرَكْتَنِي؟ ٤٦ 46
೪೬ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
فَقَوْمٌ مِنَ ٱلْوَاقِفِينَ هُنَاكَ لَمَّا سَمِعُوا قَالُوا: «إِنَّهُ يُنَادِي إِيلِيَّا». ٤٧ 47
೪೭ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
وَلِلْوَقْتِ رَكَضَ وَاحِدٌ مِنْهُمْ وَأَخَذَ إِسْفِنْجَةً وَمَلَأَهَا خَلًّا وَجَعَلَهَا عَلَى قَصَبَةٍ وَسَقَاهُ. ٤٨ 48
೪೮ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
وَأَمَّا ٱلْبَاقُونَ فَقَالُوا: «ٱتْرُكْ. لِنَرَى هَلْ يَأْتِي إِيلِيَّا يُخَلِّصُهُ!». ٤٩ 49
೪೯ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.
فَصَرَخَ يَسُوعُ أَيْضًا بِصَوْتٍ عَظِيمٍ، وَأَسْلَمَ ٱلرُّوحَ. ٥٠ 50
೫೦ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
وَإِذَا حِجَابُ ٱلْهَيْكَلِ قَدِ ٱنْشَقَّ إِلَى ٱثْنَيْنِ، مِنْ فَوْقُ إِلَى أَسْفَلُ. وَٱلْأَرْضُ تَزَلْزَلَتْ، وَٱلصُّخُورُ تَشَقَّقَتْ، ٥١ 51
೫೧ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
وَٱلْقُبُورُ تَفَتَّحَتْ، وَقَامَ كَثِيرٌ مِنْ أَجْسَادِ ٱلْقِدِّيسِينَ ٱلرَّاقِدِينَ ٥٢ 52
೫೨ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
وَخَرَجُوا مِنَ ٱلْقُبُورِ بَعْدَ قِيَامَتِهِ، وَدَخَلُوا ٱلْمَدِينَةَ ٱلْمُقَدَّسَةَ، وَظَهَرُوا لِكَثِيرِينَ. ٥٣ 53
೫೩ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
وَأَمَّا قَائِدُ ٱلْمِئَةِ وَٱلَّذِينَ مَعَهُ يَحْرُسُونَ يَسُوعَ فَلَمَّا رَأَوْا ٱلزَّلْزَلَةَ وَمَا كَانَ، خَافُوا جِدًّا وَقَالُوا: «حَقًّا كَانَ هَذَا ٱبْنَ ٱللهِ!». ٥٤ 54
೫೪ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
وَكَانَتْ هُنَاكَ نِسَاءٌ كَثِيرَاتٌ يَنْظُرْنَ مِنْ بَعِيدٍ، وَهُنَّ كُنَّ قَدْ تَبِعْنَ يَسُوعَ مِنَ ٱلْجَلِيلِ يَخْدِمْنَهُ، ٥٥ 55
೫೫ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
وَبَيْنَهُنَّ مَرْيَمُ ٱلْمَجْدَلِيَّةُ، وَمَرْيَمُ أُمُّ يَعْقُوبَ وَيُوسِي، وَأُمُّ ٱبْنَيْ زَبْدِي. ٥٦ 56
೫೬ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
وَلَمَّا كَانَ ٱلْمَسَاءُ، جَاءَ رَجُلٌ غَنِيٌّ مِنَ ٱلرَّامَةِ ٱسْمُهُ يُوسُفُ، وَكَانَ هُوَ أَيْضًا تِلْمِيذًا لِيَسُوعَ. ٥٧ 57
೫೭ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
فَهَذَا تَقَدَّمَ إِلَى بِيلَاطُسَ وَطَلَبَ جَسَدَ يَسُوعَ. فَأَمَرَ بِيلَاطُسُ حِينَئِذٍ أَنْ يُعْطَى ٱلْجَسَدُ. ٥٨ 58
೫೮ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
فَأَخَذَ يُوسُفُ ٱلْجَسَدَ وَلَفَّهُ بِكَتَّانٍ نَقِيٍّ، ٥٩ 59
೫೯ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
وَوَضَعَهُ فِي قَبْرِهِ ٱلْجَدِيدِ ٱلَّذِي كَانَ قَدْ نَحَتَهُ فِي ٱلصَّخْرَةِ، ثُمَّ دَحْرَجَ حَجَرًا كَبِيرًا عَلَى بَابِ ٱلْقَبْرِ وَمَضَى. ٦٠ 60
೬೦ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
وَكَانَتْ هُنَاكَ مَرْيَمُ ٱلْمَجْدَلِيَّةُ وَمَرْيَمُ ٱلْأُخْرَى جَالِسَتَيْنِ تُجَاهَ ٱلْقَبْرِ. ٦١ 61
೬೧ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
وَفِي ٱلْغَدِ ٱلَّذِي بَعْدَ ٱلِٱسْتِعْدَادِ ٱجْتَمَعَ رُؤَسَاءُ ٱلْكَهَنَةِ وَٱلْفَرِّيسِيُّونَ إِلَى بِيلَاطُسَ ٦٢ 62
೬೨ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
قَائِلِينَ: «يَا سَيِّدُ، قَدْ تَذَكَّرْنَا أَنَّ ذَلِكَ ٱلْمُضِلَّ قَالَ وَهُوَ حَيٌّ: إِنِّي بَعْدَ ثَلَاثَةِ أَيَّامٍ أَقُومُ. ٦٣ 63
೬೩“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
فَمُرْ بِضَبْطِ ٱلْقَبْرِ إِلَى ٱلْيَوْمِ ٱلثَّالِثِ، لِئَلَّا يَأْتِيَ تَلَامِيذُهُ لَيْلًا وَيَسْرِقُوهُ، وَيَقُولُوا لِلشَّعْبِ: إِنَّهُ قَامَ مِنَ ٱلْأَمْوَاتِ، فَتَكُونَ ٱلضَّلَالَةُ ٱلْأَخِيرَةُ أَشَرَّ مِنَ ٱلْأُولَى!». ٦٤ 64
೬೪ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
فَقَالَ لَهُمْ بِيلَاطُسُ: «عِنْدَكُمْ حُرَّاسٌ. اِذْهَبُوا وَٱضْبُطُوهُ كَمَا تَعْلَمُونَ». ٦٥ 65
೬೫ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು
فَمَضَوْا وَضَبَطُوا ٱلْقَبْرَ بِٱلْحُرَّاسِ وَخَتَمُوا ٱلْحَجَرَ. ٦٦ 66
೬೬ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

< مَتَّى 27 >