< مَتَّى 4 >

ثُمَّ أُصْعِدَ يَسُوعُ إِلَى ٱلْبَرِّيَّةِ مِنَ ٱلرُّوحِ لِيُجَرَّبَ مِنْ إِبْلِيسَ. ١ 1
ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
فَبَعْدَ مَا صَامَ أَرْبَعِينَ نَهَارًا وَأَرْبَعِينَ لَيْلَةً، جَاعَ أَخِيرًا. ٢ 2
ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
فَتَقَدَّمَ إِلَيْهِ ٱلْمُجَرِّبُ وَقَالَ لَهُ: «إِنْ كُنْتَ ٱبْنَ ٱللهِ فَقُلْ أَنْ تَصِيرَ هَذِهِ ٱلْحِجَارَةُ خُبْزًا». ٣ 3
ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
فَأَجَابَ وَقَالَ: «مَكْتُوبٌ: لَيْسَ بِٱلْخُبْزِ وَحْدَهُ يَحْيَا ٱلْإِنْسَانُ، بَلْ بِكُلِّ كَلِمَةٍ تَخْرُجُ مِنْ فَمِ ٱللهِ». ٤ 4
ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
ثُمَّ أَخَذَهُ إِبْلِيسُ إِلَى ٱلْمَدِينَةِ ٱلْمُقَدَّسَةِ، وَأَوْقَفَهُ عَلَى جَنَاحِ ٱلْهَيْكَلِ، ٥ 5
ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
وَقَالَ لَهُ: «إِنْ كُنْتَ ٱبْنَ ٱللهِ فَٱطْرَحْ نَفْسَكَ إِلَى أَسْفَلُ، لِأَنَّهُ مَكْتُوبٌ: أَنَّهُ يُوصِي مَلَائِكَتَهُ بِكَ، فَعَلَى أيَادِيهِمْ يَحْمِلُونَكَ لِكَيْ لَا تَصْدِمَ بِحَجَرٍ رِجْلَكَ». ٦ 6
ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
قَالَ لَهُ يَسُوعُ: «مَكْتُوبٌ أَيْضًا: لَا تُجَرِّبِ ٱلرَّبَّ إِلَهَكَ». ٧ 7
ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
ثُمَّ أَخَذَهُ أَيْضًا إِبْلِيسُ إِلَى جَبَلٍ عَالٍ جِدًّا، وَأَرَاهُ جَمِيعَ مَمَالِكِ ٱلْعَالَمِ وَمَجْدَهَا، ٨ 8
ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
وَقَالَ لَهُ: «أُعْطِيكَ هَذِهِ جَمِيعَهَا إِنْ خَرَرْتَ وَسَجَدْتَ لِي». ٩ 9
ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
حِينَئِذٍ قَالَ لَهُ يَسُوعُ: «ٱذْهَبْ ياشَيْطَانُ! لِأَنَّهُ مَكْتُوبٌ: لِلرَّبِّ إِلَهِكَ تَسْجُدُ وَإِيَّاهُ وَحْدَهُ تَعْبُدُ». ١٠ 10
೧೦ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
ثُمَّ تَرَكَهُ إِبْلِيسُ، وَإِذَا مَلَائِكَةٌ قَدْ جَاءَتْ فَصَارَتْ تَخْدِمُهُ. ١١ 11
೧೧ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
وَلَمَّا سَمِعَ يَسُوعُ أَنَّ يُوحَنَّا أُسْلِمَ، ٱنْصَرَفَ إِلَى ٱلْجَلِيلِ. ١٢ 12
೧೨ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
وَتَرَكَ ٱلنَّاصِرَةَ وَأَتَى فَسَكَنَ فِي كَفْرَنَاحُومَ ٱلَّتِي عِنْدَ ٱلْبَحْرِ فِي تُخُومِ زَبُولُونَ وَنَفْتَالِيمَ، ١٣ 13
೧೩ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
لِكَيْ يَتِمَّ مَا قِيلَ بِإِشَعْيَاءَ ٱلنَّبِيِّ ٱلْقَائِلِ: ١٤ 14
೧೪ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,
«أَرْضُ زَبُولُونَ، وَأَرْضُ نَفْتَالِيمَ، طَرِيقُ ٱلْبَحْرِ، عَبْرُ ٱلْأُرْدُنِّ، جَلِيلُ ٱلْأُمَمِ. ١٥ 15
೧೫“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
ٱلشَّعْبُ ٱلْجَالِسُ فِي ظُلْمَةٍ أَبْصَرَ نُورًا عَظِيمًا، وَٱلْجَالِسُونَ فِي كُورَةِ ٱلْمَوْتِ وَظِلَالِهِ أَشْرَقَ عَلَيْهِمْ نُورٌ». ١٦ 16
೧೬ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
مِنْ ذَلِكَ ٱلزَّمَانِ ٱبْتَدَأَ يَسُوعُ يَكْرِزُ وَيَقُولُ: «تُوبُوا لِأَنَّهُ قَدِ ٱقْتَرَبَ مَلَكُوتُ ٱلسَّمَاوَاتِ». ١٧ 17
೧೭ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
وَإِذْ كَانَ يَسُوعُ مَاشِيًا عِنْدَ بَحْرِ ٱلْجَلِيلِ أَبْصَرَ أَخَوَيْنِ: سِمْعَانَ ٱلَّذِي يُقَالُ لَهُ بُطْرُسُ، وَأَنْدَرَاوُسَ أَخَاهُ يُلْقِيَانِ شَبَكَةً فِي ٱلْبَحْرِ، فَإِنَّهُمَا كَانَا صَيَّادَيْنِ. ١٨ 18
೧೮ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
فَقَالَ لَهُمَا: «هَلُمَّ وَرَائِي فَأَجْعَلُكُمَا صَيَّادَيِ ٱلنَّاسِ». ١٩ 19
೧೯ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
فَلِلْوَقْتِ تَرَكَا ٱلشِّبَاكَ وَتَبِعَاهُ. ٢٠ 20
೨೦ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
ثُمَّ ٱجْتَازَ مِنْ هُنَاكَ فَرَأَى أَخَوَيْنِ آخَرَيْنِ: يَعْقُوبَ بْنَ زَبْدِي وَيُوحَنَّا أَخَاهُ، فِي ٱلسَّفِينَةِ مَعَ زَبْدِي أَبِيهِمَا يُصْلِحَانِ شِبَاكَهُمَا، فَدَعَاهُمَا. ٢١ 21
೨೧ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
فَلِلْوَقْتِ تَرَكَا ٱلسَّفِينَةَ وَأَبَاهُمَا وَتَبِعَاهُ. ٢٢ 22
೨೨ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
وَكَانَ يَسُوعُ يَطُوفُ كُلَّ ٱلْجَلِيلِ يُعَلِّمُ فِي مَجَامِعِهِمْ، وَيَكْرِزُ بِبِشَارَةِ ٱلْمَلَكُوتِ، وَيَشْفِي كُلَّ مَرَضٍ وَكُلَّ ضَعْفٍ فِي ٱلشَّعْبِ. ٢٣ 23
೨೩ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
فَذَاعَ خَبَرُهُ فِي جَمِيعِ سُورِيَّةَ. فَأَحْضَرُوا إِلَيْهِ جَمِيعَ ٱلسُّقَمَاءِ ٱلْمُصَابِينَ بِأَمْرَاضٍ وَأَوْجَاعٍ مُخْتَلِفَةٍ، وَٱلْمَجَانِينَ وَٱلْمَصْرُوعِينَ وَٱلْمَفْلُوجِينَ، فَشَفَاهُمْ. ٢٤ 24
೨೪ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
فَتَبِعَتْهُ جُمُوعٌ كَثِيرَةٌ مِنَ ٱلْجَلِيلِ وَٱلْعَشْرِ ٱلْمُدُنِ وَأُورُشَلِيمَ وَٱلْيَهُودِيَّةِ وَمِنْ عَبْرِ ٱلْأُرْدُنِّ. ٢٥ 25
೨೫ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

< مَتَّى 4 >