< مَتَّى 7 >
«لَا تَدِينُوا لِكَيْ لَا تُدَانُوا، | ١ 1 |
೧“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
لِأَنَّكُمْ بِٱلدَّيْنُونَةِ ٱلَّتِي بِهَا تَدِينُونَ تُدَانُونَ، وَبِالْكَيْلِ ٱلَّذِي بِهِ تَكِيلُونَ يُكَالُ لَكُمْ. | ٢ 2 |
೨ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
وَلِمَاذَا تَنْظُرُ ٱلْقَذَى ٱلَّذِي فِي عَيْنِ أَخِيكَ، وَأَمَّا ٱلْخَشَبَةُ ٱلَّتِي فِي عَيْنِكَ فَلَا تَفْطَنُ لَهَا؟ | ٣ 3 |
೩“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
أَمْ كَيْفَ تَقُولُ لِأَخِيكَ: دَعْنِي أُخْرِجِ ٱلْقَذَى مِنْ عَيْنِكَ، وَهَا ٱلْخَشَبَةُ فِي عَيْنِكَ؟ | ٤ 4 |
೪ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
يَا مُرَائِي، أَخْرِجْ أَوَّلًا ٱلْخَشَبَةَ مِنْ عَيْنِكَ، وَحِينَئِذٍ تُبْصِرُ جَيِّدًا أَنْ تُخْرِجَ ٱلْقَذَى مِنْ عَيْنِ أَخِيكَ! | ٥ 5 |
೫ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
لَا تُعْطُوا ٱلْقُدْسَ لِلْكِلَابِ، وَلَا تَطْرَحُوا دُرَرَكُمْ قُدَّامَ ٱلْخَنَازِيرِ، لِئَلَّا تَدُوسَهَا بِأَرْجُلِهَا وَتَلْتَفِتَ فَتُمَزِّقَكُمْ. | ٦ 6 |
೬“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
«اِسْأَلُوا تُعْطَوْا. اُطْلُبُوا تَجِدُوا. اِقْرَعُوا يُفْتَحْ لَكُمْ. | ٧ 7 |
೭“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
لِأَنَّ كُلَّ مَنْ يَسْأَلُ يَأْخُذُ، وَمَنْ يَطْلُبُ يَجِدُ، وَمَنْ يَقْرَعُ يُفْتَحُ لَهُ. | ٨ 8 |
೮ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
أَمْ أَيُّ إِنْسَانٍ مِنْكُمْ إِذَا سَأَلَهُ ٱبْنُهُ خُبْزًا، يُعْطِيهِ حَجَرًا؟ | ٩ 9 |
೯“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
وَإِنْ سَأَلَهُ سَمَكَةً، يُعْطِيهِ حَيَّةً؟ | ١٠ 10 |
೧೦ಮೀನು ಕೇಳಿದರೆ ಹಾವನ್ನು ಕೊಡುವನೋ?
فَإِنْ كُنْتُمْ وَأَنْتُمْ أَشْرَارٌ تَعْرِفُونَ أَنْ تُعْطُوا أَوْلَادَكُمْ عَطَايَا جَيِّدَةً، فَكَمْ بِٱلْحَرِيِّ أَبُوكُمُ ٱلَّذِي فِي ٱلسَّمَاوَاتِ، يَهَبُ خَيْرَاتٍ لِلَّذِينَ يَسْأَلُونَهُ! | ١١ 11 |
೧೧ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
فَكُلُّ مَا تُرِيدُونَ أَنْ يَفْعَلَ ٱلنَّاسُ بِكُمُ ٱفْعَلُوا هَكَذَا أَنْتُمْ أَيْضًا بِهِمْ، لِأَنَّ هَذَا هُوَ ٱلنَّامُوسُ وَٱلْأَنْبِيَاءُ. | ١٢ 12 |
೧೨ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
«اُدْخُلُوا مِنَ ٱلْبَابِ ٱلضَّيِّقِ، لِأَنَّهُ وَاسِعٌ ٱلْبَابُ وَرَحْبٌ ٱلطَّرِيقُ ٱلَّذِي يُؤَدِّي إِلَى ٱلْهَلَاكِ، وَكَثِيرُونَ هُمُ ٱلَّذِينَ يَدْخُلُونَ مِنْهُ! | ١٣ 13 |
೧೩“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
مَا أَضْيَقَ ٱلْبَابَ وَأَكْرَبَ ٱلطَّرِيقَ ٱلَّذِي يُؤَدِّي إِلَى ٱلْحَيَاةِ، وَقَلِيلُونَ هُمُ ٱلَّذِينَ يَجِدُونَهُ! | ١٤ 14 |
೧೪ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
«اِحْتَرِزُوا مِنَ ٱلْأَنْبِيَاءِ ٱلْكَذَبَةِ ٱلَّذِينَ يَأْتُونَكُمْ بِثِيَابِ ٱلْحُمْلَانِ، وَلَكِنَّهُمْ مِنْ دَاخِلٍ ذِئَابٌ خَاطِفَةٌ! | ١٥ 15 |
೧೫“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
مِنْ ثِمَارِهِمْ تَعْرِفُونَهُمْ. هَلْ يَجْتَنُونَ مِنَ ٱلشَّوْكِ عِنَبًا، أَوْ مِنَ ٱلْحَسَكِ تِينًا؟ | ١٦ 16 |
೧೬ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
هَكَذَا كُلُّ شَجَرَةٍ جَيِّدَةٍ تَصْنَعُ أَثْمَارًا جَيِّدَةً، وَأَمَّا ٱلشَّجَرَةُ ٱلرَّدِيَّةُ فَتَصْنَعُ أَثْمَارًا رَدِيَّةً، | ١٧ 17 |
೧೭ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
لَا تَقْدِرُ شَجَرَةٌ جَيِّدَةٌ أَنْ تَصْنَعَ أَثْمَارًا رَدِيَّةً، وَلَا شَجَرَةٌ رَدِيَّةٌ أَنْ تَصْنَعَ أَثْمَارًا جَيِّدَةً. | ١٨ 18 |
೧೮ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.
كُلُّ شَجَرَةٍ لَا تَصْنَعُ ثَمَرًا جَيِّدًا تُقْطَعُ وَتُلْقَى فِي ٱلنَّارِ. | ١٩ 19 |
೧೯ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
فَإِذًا مِنْ ثِمَارِهِمْ تَعْرِفُونَهُمْ. | ٢٠ 20 |
೨೦ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
«لَيْسَ كُلُّ مَنْ يَقُولُ لِي: يَارَبُّ، يَارَبُّ! يَدْخُلُ مَلَكُوتَ ٱلسَّمَاوَاتِ. بَلِ ٱلَّذِي يَفْعَلُ إِرَادَةَ أَبِي ٱلَّذِي فِي ٱلسَّمَاوَاتِ. | ٢١ 21 |
೨೧“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
كَثِيرُونَ سَيَقُولُونَ لِي فِي ذَلِكَ ٱلْيَوْمِ: يَارَبُّ، يَارَبُّ! أَلَيْسَ بِٱسْمِكَ تَنَبَّأْنَا، وَبِٱسْمِكَ أَخْرَجْنَا شَيَاطِينَ، وَبِٱسْمِكَ صَنَعْنَا قُوَّاتٍ كَثِيرَةً؟ | ٢٢ 22 |
೨೨ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
فَحِينَئِذٍ أُصَرِّحُ لَهُمْ: إِنِّي لَمْ أَعْرِفْكُمْ قَطُّ! ٱذْهَبُوا عَنِّي يافَاعِلِي ٱلْإِثْمِ! | ٢٣ 23 |
೨೩ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
«فَكُلُّ مَنْ يَسْمَعُ أَقْوَالِي هَذِهِ وَيَعْمَلُ بِهَا، أُشَبِّهُهُ بِرَجُلٍ عَاقِلٍ، بَنَى بَيْتَهُ عَلَى ٱلصَّخْرِ. | ٢٤ 24 |
೨೪“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
فَنَزَلَ ٱلْمَطَرُ، وَجَاءَتِ ٱلْأَنْهَارُ، وَهَبَّتِ ٱلرِّيَاحُ، وَوَقَعَتْ عَلَى ذَلِكَ ٱلْبَيْتِ فَلَمْ يَسْقُطْ، لِأَنَّهُ كَانَ مُؤَسَّسًا عَلَى ٱلصَّخْرِ. | ٢٥ 25 |
೨೫ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
وَكُلُّ مَنْ يَسْمَعُ أَقْوَالِي هَذِهِ وَلَا يَعْمَلُ بِهَا، يُشَبَّهُ بِرَجُلٍ جَاهِلٍ، بَنَى بَيْتَهُ عَلَى ٱلرَّمْلِ. | ٢٦ 26 |
೨೬ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
فَنَزَلَ ٱلْمَطَرُ، وَجَاءَتِ ٱلْأَنْهَارُ، وَهَبَّتِ ٱلرِّيَاحُ، وَصَدَمَتْ ذَلِكَ ٱلْبَيْتَ فَسَقَطَ، وَكَانَ سُقُوطُهُ عَظِيمًا!». | ٢٧ 27 |
೨೭ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
فَلَمَّا أَكْمَلَ يَسُوعُ هَذِهِ ٱلْأَقْوَالَ بُهِتَتِ ٱلْجُمُوعُ مِنْ تَعْلِيمِهِ، | ٢٨ 28 |
೨೮“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
لِأَنَّهُ كَانَ يُعَلِّمُهُمْ كَمَنْ لَهُ سُلْطَانٌ وَلَيْسَ كَٱلْكَتَبَةِ. | ٢٩ 29 |
೨೯ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.