< اَلْعَدَد 11 >
وَكَانَ ٱلشَّعْبُ كَأَنَّهُمْ يَشْتَكُونَ شَرًّا فِي أُذُنَيِ ٱلرَّبِّ. وَسَمِعَ ٱلرَّبُّ فَحَمِيَ غَضَبُهُ، فَٱشْتَعَلَتْ فِيهِمْ نَارُ ٱلرَّبِّ وَأَحْرَقَتْ فِي طَرَفِ ٱلْمَحَلَّةِ. | ١ 1 |
೧ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
فَصَرَخَ ٱلشَّعْبُ إِلَى مُوسَى، فَصَلَّى مُوسَى إِلَى ٱلرَّبِّ فَخَمَدَتِ ٱلنَّارُ. | ٢ 2 |
೨ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
فَدُعِيَ ٱسْمُ ذَلِكَ ٱلْمَوْضِعِ «تَبْعِيرَةَ» لِأَنَّ نَارَ ٱلرَّبِّ ٱشْتَعَلَتْ فِيهِمْ. | ٣ 3 |
೩ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
وَٱللَّفِيفُ ٱلَّذِي فِي وَسَطِهِمِ ٱشْتَهَى شَهْوَةً. فَعَادَ بَنُو إِسْرَائِيلَ أَيْضًا وَبَكَوْا وَقَالُوا: «مَنْ يُطْعِمُنَا لَحْمًا؟ | ٤ 4 |
೪ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
قَدْ تَذَكَّرْنَا ٱلسَّمَكَ ٱلَّذِي كُنَّا نَأْكُلُهُ فِي مِصْرَ مَجَّانًا، وَٱلْقِثَّاءَ وَٱلْبَطِّيخَ وَٱلْكُرَّاثَ وَٱلْبَصَلَ وَٱلثُّومَ. | ٥ 5 |
೫ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
وَٱلْآنَ قَدْ يَبِسَتْ أَنْفُسُنَا. لَيْسَ شَيْءٌ غَيْرَ أَنَّ أَعْيُنَنَا إِلَى هَذَا ٱلْمَنِّ!». | ٦ 6 |
೬ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
وَأَمَّا ٱلْمَنُّ فَكَانَ كَبِزْرِ ٱلْكُزْبَرَةِ، وَمَنْظَرُهُ كَمَنْظَرِ ٱلْمُقْلِ. | ٧ 7 |
೭ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
كَانَ ٱلشَّعْبُ يَطُوفُونَ لِيَلْتَقِطُوهُ، ثُمَّ يَطْحَنُونَهُ بِٱلرَّحَى أَوْ يَدُقُّونَهُ فِي ٱلْهَاوَنِ وَيَطْبُخُونَهُ فِي ٱلْقُدُورِ وَيَعْمَلُونَهُ مَلَّاتٍ. وَكَانَ طَعْمُهُ كَطَعْمِ قَطَائِفَ بِزَيْتٍ. | ٨ 8 |
೮ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
وَمَتَى نَزَلَ ٱلنَّدَى عَلَى ٱلْمَحَلَّةِ لَيْلًا كَانَ يَنْزِلُ ٱلْمَنُّ مَعَهُ. | ٩ 9 |
೯ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
فَلَمَّا سَمِعَ مُوسَى ٱلشَّعْبَ يَبْكُونَ بِعَشَائِرِهِمْ، كُلَّ وَاحِدٍ فِي بَابِ خَيْمَتِهِ، وَحَمِيَ غَضَبُ ٱلرَّبِّ جِدًّا، سَاءَ ذَلِكَ فِي عَيْنَيْ مُوسَى. | ١٠ 10 |
೧೦ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
فَقَالَ مُوسَى لِلرَّبِّ: «لِمَاذَا أَسَأْتَ إِلَى عَبْدِكَ؟ وَلِمَاذَا لَمْ أَجِدْ نِعْمَةً فِي عَيْنَيْكَ حَتَّى أَنَّكَ وَضَعْتَ ثِقْلَ جَمِيعِ هَذَا ٱلشَّعْبِ عَلَيَّ؟ | ١١ 11 |
೧೧ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
أَلَعَلِّي حَبِلْتُ بِجَمِيعِ هَذَا ٱلشَّعْبِ؟ أَوْ لَعَلِّي وَلَدْتُهُ، حَتَّى تَقُولَ لِي ٱحْمِلْهُ فِي حِضْنِكَ كَمَا يَحْمِلُ ٱلْمُرَبِّي ٱلرَّضِيعَ، إِلَى ٱلْأَرْضِ ٱلَّتِي حَلَفْتَ لِآبَائِهِ؟ | ١٢ 12 |
೧೨ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
مِنْ أَيْنَ لِي لَحْمٌ حَتَّى أُعْطِيَ جَمِيعَ هَذَا ٱلشَّعْبِ؟ لِأَنَّهُمْ يَبْكُونَ عَلَيَّ قَائِلِينَ: أَعْطِنَا لَحْمًا لِنَأْكُلَ. | ١٣ 13 |
೧೩ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
لَا أَقْدِرُ أَنَا وَحْدِي أَنْ أَحْمِلَ جَمِيعَ هَذَا ٱلشَّعْبِ لِأَنَّهُ ثَقِيلٌ عَلَيَّ. | ١٤ 14 |
೧೪ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
فَإِنْ كُنْتَ تَفْعَلُ بِي هَكَذَا، فَٱقْتُلْنِي قَتْلًا إِنْ وَجَدْتُ نِعْمَةً فِي عَيْنَيْكَ، فَلَا أَرَى بَلِيَّتِي». | ١٥ 15 |
೧೫ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
فَقَالَ ٱلرَّبُّ لِمُوسَى: «ٱجْمَعْ إِلَيَّ سَبْعِينَ رَجُلًا مِنْ شُيُوخِ إِسْرَائِيلَ ٱلَّذِينَ تَعْلَمُ أَنَّهُمْ شُيُوخُ ٱلشَّعْبِ وَعُرَفَاؤُهُ، وَأَقْبِلْ بِهِمْ إِلَى خَيْمَةِ ٱلِٱجْتِمَاعِ فَيَقِفُوا هُنَاكَ مَعَكَ. | ١٦ 16 |
೧೬ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
فَأَنْزِلَ أَنَا وَأَتَكَلَّمَ مَعَكَ هُنَاكَ، وَآخُذَ مِنَ ٱلرُّوحِ ٱلَّذِي عَلَيْكَ وَأَضَعَ عَلَيْهِمْ، فَيَحْمِلُونَ مَعَكَ ثِقْلَ ٱلشَّعْبِ، فَلَا تَحْمِلُ أَنْتَ وَحْدَكَ. | ١٧ 17 |
೧೭ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
وَلِلشَّعْبِ تَقُولُ: تَقَدَّسُوا لِلْغَدِ فَتَأْكُلُوا لَحْمًا، لِأَنَّكُمْ قَدْ بَكَيْتُمْ فِي أُذُنَيِ ٱلرَّبِّ قَائِلِينَ: مَنْ يُطْعِمُنَا لَحْمًا؟ إِنَّهُ كَانَ لَنَا خَيْرٌ فِي مِصْرَ. فَيُعْطِيكُمُ ٱلرَّبُّ لَحْمًا فَتَأْكُلُونَ. | ١٨ 18 |
೧೮ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
تَأْكُلُونَ لَا يَوْمًا وَاحِدًا، وَلَا يَوْمَيْنِ، وَلَا خَمْسَةَ أَيَّامٍ، وَلَا عَشَرَةَ أَيَّامٍ، وَلَا عِشْرِينَ يَوْمًا، | ١٩ 19 |
೧೯ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
بَلْ شَهْرًا مِنَ ٱلزَّمَانِ، حَتَّى يَخْرُجَ مِنْ مَنَاخِرِكُمْ، وَيَصِيرَ لَكُمْ كَرَاهَةً، لِأَنَّكُمْ رَفَضْتُمُ ٱلرَّبَّ ٱلَّذِي فِي وَسَطِكُمْ وَبَكَيْتُمْ أَمَامَهُ قَائِلِينَ: لِمَاذَا خَرَجْنَا مِنْ مِصْرَ؟» | ٢٠ 20 |
೨೦ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
فَقَالَ مُوسَى: «سِتُّ مِئَةِ أَلْفِ مَاشٍ هُوَ ٱلشَّعْبُ ٱلَّذِي أَنَا فِي وَسَطِهِ، وَأَنْتَ قَدْ قُلْتَ: أُعْطِيهِمْ لَحْمًا لِيَأْكُلُوا شَهْرًا مِنَ ٱلزَّمَانِ. | ٢١ 21 |
೨೧ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
أَيُذْبَحُ لَهُمْ غَنَمٌ وَبَقَرٌ لِيَكْفِيَهُمْ؟ أَمْ يُجْمَعُ لَهُمْ كُلُّ سَمَكِ ٱلْبَحْرِ لِيَكْفِيَهُمْ؟» | ٢٢ 22 |
೨೨ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
فَقَالَ ٱلرَّبُّ لِمُوسَى: «هَلْ تَقْصُرُ يَدُ ٱلرَّبِّ؟ ٱلْآنَ تَرَى أَيُوافِيكَ كَلَامِي أَمْ لَا». | ٢٣ 23 |
೨೩ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
فَخَرَجَ مُوسَى وَكَلَّمَ ٱلشَّعْبَ بِكَلَامِ ٱلرَّبِّ، وَجَمَعَ سَبْعِينَ رَجُلًا مِنْ شُيُوخِ ٱلشَّعْبِ وَأَوْقَفَهُمْ حَوَالَيِ ٱلْخَيْمَةِ. | ٢٤ 24 |
೨೪ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
فَنَزَلَ ٱلرَّبُّ فِي سَحَابَةٍ وَتَكَلَّمَ مَعَهُ، وَأَخَذَ مِنَ ٱلرُّوحِ ٱلَّذِي عَلَيْهِ وَجَعَلَ عَلَى ٱلسَّبْعِينَ رَجُلًا ٱلشُّيُوخَ. فَلَمَّا حَلَّتْ عَلَيْهِمِ ٱلرُّوحُ تَنَبَّأُوا، وَلَكِنَّهُمْ لَمْ يَزِيدُوا. | ٢٥ 25 |
೨೫ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
وَبَقِيَ رَجُلَانِ فِي ٱلْمَحَلَّةِ، ٱسْمُ ٱلْوَاحِدِ أَلْدَادُ، وَٱسْمُ ٱلْآخَرِ مِيدَادُ، فَحَلَّ عَلَيْهِمَا ٱلرُّوحُ. وَكَانَا مِنَ ٱلْمَكْتُوبِينَ، لَكِنَّهُمَا لَمْ يَخْرُجَا إِلَى ٱلْخَيْمَةِ، فَتَنَبَّآ فِي ٱلْمَحَلَّةِ. | ٢٦ 26 |
೨೬ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
فَرَكَضَ غُلَامٌ وَأَخْبَرَ مُوسَى وَقَالَ: «أَلْدَادُ وَمِيدَادُ يَتَنَبَّآنِ فِي ٱلْمَحَلَّةِ». | ٢٧ 27 |
೨೭ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
فَأَجَابَ يَشُوعُ بْنُ نُونَ خَادِمُ مُوسَى مِنْ حَدَاثَتِهِ وَقَالَ: «يَا سَيِّدِي مُوسَى، ٱرْدَعْهُمَا!» | ٢٨ 28 |
೨೮ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
فَقَالَ لَهُ مُوسَى: «هَلْ تَغَارُ أَنْتَ لِي؟ يَا لَيْتَ كُلَّ شَعْبِ ٱلرَّبِّ كَانُوا أَنْبِيَاءَ إِذَا جَعَلَ ٱلرَّبُّ رُوحَهُ عَلَيْهِمْ». | ٢٩ 29 |
೨೯ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
ثُمَّ ٱنْحَازَ مُوسَى إِلَى ٱلْمَحَلَّةِ هُوَ وَشُيُوخُ إِسْرَائِيلَ. | ٣٠ 30 |
೩೦ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
فَخَرَجَتْ رِيحٌ مِنْ قِبَلِ ٱلرَّبِّ وَسَاقَتْ سَلْوَى مِنَ ٱلْبَحْرِ وَأَلْقَتْهَا عَلَى ٱلْمَحَلَّةِ، نَحْوَ مَسِيرَةِ يَوْمٍ مِنْ هُنَا وَمَسِيرَةِ يَوْمٍ مِنْ هُنَاكَ، حَوَالَيِ ٱلْمَحَلَّةِ، وَنَحْوَ ذِرَاعَيْنِ فَوْقَ وَجْهِ ٱلْأَرْضِ. | ٣١ 31 |
೩೧ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
فَقَامَ ٱلشَّعْبُ كُلَّ ذَلِكَ ٱلنَّهَارِ، وَكُلَّ ٱللَّيْلِ وَكُلَّ يَوْمِ ٱلْغَدِ وَجَمَعُوا ٱلسَّلْوَى. ٱلَّذِي قَلَّلَ جَمَعَ عَشَرَةَ حَوَامِرَ. وَسَطَّحُوهَا لَهُمْ مَسَاطِحَ حَوَالَيِ ٱلْمَحَلَّةِ. | ٣٢ 32 |
೩೨ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
وَإِذْ كَانَ ٱللَّحْمُ بَعْدُ بَيْنَ أَسْنَانِهِمْ قَبْلَ أَنْ يَنْقَطِعَ، حَمِيَ غَضَبُ ٱلرَّبِّ عَلَى ٱلشَّعْبِ، وَضَرَبَ ٱلرَّبُّ ٱلشَّعْبَ ضَرْبَةً عَظِيمَةً جِدًّا. | ٣٣ 33 |
೩೩ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
فَدُعِيَ ٱسْمُ ذَلِكَ ٱلْمَوْضِعِ «قَبَرُوتَ هَتَّأَوَةَ» لِأَنَّهُمْ هُنَاكَ دَفَنُوا ٱلْقَوْمَ ٱلَّذِينَ ٱشْتَهَوْا. | ٣٤ 34 |
೩೪ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
وَمِنْ قَبَرُوتَ هَتَّأَوَةَ ٱرْتَحَلَ ٱلشَّعْبُ إِلَى حَضَيْرُوتَ، فَكَانُوا فِي حَضَيْرُوتَ. | ٣٥ 35 |
೩೫ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.