< أَمْثَالٌ 29 >
اَلْكَثِيرُ ٱلتَّوَبُّخِ، ٱلْمُقَسِّي عُنُقَهُ، بَغْتَةً يُكَسَّرُ وَلَا شِفَاءَ. | ١ 1 |
ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.
إِذَا سَادَ ٱلصِّدِّيقُونَ فَرِحَ ٱلشَّعْبُ، وَإِذَا تَسَلَّطَ ٱلشِّرِّيرُ يَئِنُّ ٱلشَّعْبُ. | ٢ 2 |
ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.
مَنْ يُحِبُّ ٱلْحِكْمَةَ يُفَرِّحُ أَبَاهُ، وَرَفِيقُ ٱلزَّوَانِي يُبَدِّدُ مَالًا. | ٣ 3 |
ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.
اَلْمَلِكُ بِٱلْعَدْلِ يُثَبِّتُ ٱلْأَرْضَ، وَٱلْقَابِلُ ٱلْهَدَايَا يُدَمِّرُهَا. | ٤ 4 |
ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.
اَلرَّجُلُ ٱلَّذِي يُطْرِي صَاحِبَهُ يَبْسُطُ شَبَكَةً لِرِجْلَيْهِ. | ٥ 5 |
ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.
فِي مَعْصِيَةِ رَجُلٍ شِرِّيرٍ شَرَكٌ، أَمَّا ٱلصِّدِّيقُ فَيَتَرَنَّمُ وَيَفْرَحُ. | ٦ 6 |
ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.
ٱلصِّدِّيقُ يَعْرِفُ دَعْوَى ٱلْفُقَرَاءِ، أَمَّا ٱلشِّرِّيرُ فَلَا يَفْهَمُ مَعْرِفَةً. | ٧ 7 |
ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.
اَلنَّاسُ ٱلْمُسْتَهْزِئُونَ يَفْتِنُونَ ٱلْمَدِينَةَ، أَمَّا ٱلْحُكَمَاءُ فَيَصْرِفُونَ ٱلْغَضَبَ. | ٨ 8 |
ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.
رَجُلٌ حَكِيمٌ إِنْ حَاكَمَ رَجُلًا أَحْمَقَ، فَإِنْ غَضِبَ وَإِنْ ضَحِكَ فَلَا رَاحَةَ. | ٩ 9 |
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.
أَهْلُ ٱلدِّمَاءِ يُبْغِضُونَ ٱلْكَامِلَ، أَمَّا ٱلْمُسْتَقِيمُونَ فَيَسْأَلُونَ عَنْ نَفْسِهِ. | ١٠ 10 |
ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.
اَلْجَاهِلُ يُظْهِرُ كُلَّ غَيْظِهِ، وَٱلْحَكِيمُ يُسَكِّنُهُ أَخِيرًا. | ١١ 11 |
ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
اَلْحَاكِمُ ٱلْمُصْغِي إِلَى كَلَامِ كَذِبٍ كُلُّ خُدَّامِهِ أَشْرَارٌ. | ١٢ 12 |
ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.
اَلْفَقِيرُ وَٱلْمُرْبِي يَتَلَاقَيَانِ. ٱلرَّبُّ يُنَوِّرُ أَعْيُنَ كِلَيْهِمَا. | ١٣ 13 |
ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.
اَلْمَلِكُ ٱلْحَاكِمُ بِٱلْحَقِّ لِلْفُقَرَاءِ يُثَبَّتُ كُرْسِيُّهُ إِلَى ٱلْأَبَدِ. | ١٤ 14 |
ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.
اَلْعَصَا وَٱلتَّوْبِيخُ يُعْطِيَانِ حِكْمَةً، وَٱلصَّبِيُّ ٱلْمُطْلَقُ إِلَى هَوَاهُ يُخْجِلُ أُمَّهُ. | ١٥ 15 |
ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
إِذَا سَادَ ٱلْأَشْرَارُ كَثُرَتِ ٱلْمَعَاصِي، أَمَّا ٱلصِّدِّيقُونَ فَيَنْظُرُونَ سُقُوطَهُمْ. | ١٦ 16 |
ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
أَدِّبِ ٱبْنَكَ فَيُرِيحَكَ وَيُعْطِيَ نَفْسَكَ لَذَّاتٍ. | ١٧ 17 |
ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.
بِلَا رُؤْيَا يَجْمَحُ ٱلشَّعْبُ، أَمَّا حَافِظُ ٱلشَّرِيعَةِ فَطُوبَاهُ. | ١٨ 18 |
ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.
بِٱلْكَلَامِ لَا يُؤَدَّبُ ٱلْعَبْدُ، لِأَنَّهُ يَفْهَمُ وَلَا يُعْنَى. | ١٩ 19 |
ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.
أَرَأَيْتَ إِنْسَانًا عَجُولًا فِي كَلَامِهِ؟ ٱلرَّجَاءُ بِٱلْجَاهِلِ أَكْثَرُ مِنَ ٱلرَّجَاءِ بِهِ. | ٢٠ 20 |
ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.
مَنْ فَنَّقَ عَبْدَهُ مِنْ حَدَاثَتِهِ، فَفِي آخِرَتِهِ يَصِيرُ مَنُونًا. | ٢١ 21 |
ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ.
اَلرَّجُلُ ٱلْغَضُوبُ يُهَيِّجُ ٱلْخِصَامَ، وَٱلرَّجُلُ ٱلسَّخُوطُ كَثِيرُ ٱلْمَعَاصِي. | ٢٢ 22 |
ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.
كِبْرِيَاءُ ٱلْإِنْسَانِ تَضَعُهُ، وَٱلْوَضِيعُ ٱلرُّوحِ يَنَالُ مَجْدًا. | ٢٣ 23 |
ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.
مَنْ يُقَاسِمْ سَارِقًا يُبْغِضْ نَفْسَهُ، يَسْمَعُ ٱللَّعْنَ وَلَا يُقِرُّ. | ٢٤ 24 |
ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.
خَشْيَةُ ٱلْإِنْسَانِ تَضَعُ شَرَكًا، وَٱلْمُتَّكِلُ عَلَى ٱلرَّبِّ يُرْفَعُ. | ٢٥ 25 |
ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.
كَثِيرُونَ يَطْلُبُونَ وَجْهَ ٱلْمُتَسَلِّطِ، أَمَّا حَقُّ ٱلْإِنْسَانِ فَمِنَ ٱلرَّبِّ. | ٢٦ 26 |
ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.
اَلرَّجُلُ ٱلظَّالِمُ مَكْرَهَةُ ٱلصِّدِّيقِينَ، وَٱلْمُسْتَقِيمُ ٱلطَّرِيقِ مَكْرَهَةُ ٱلشِّرِّيرِ. | ٢٧ 27 |
ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.