< رُؤيا 16 >

وَسَمِعْتُ صَوْتًا عَظِيمًا مِنَ ٱلْهَيْكَلِ قَائِلًا لِلسَّبْعَةِ ٱلْمَلَائِكَةِ: «ٱمْضُوا وَٱسْكُبُوا جَامَاتِ غَضَبِ ٱللهِ عَلَى ٱلْأَرْضِ». ١ 1
ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
فَمَضَى ٱلْأَوَّلُ وَسَكَبَ جَامَهُ عَلَى ٱلْأَرْضِ، فَحَدَثَتْ دَمَامِلُ خَبِيثَةٌ وَرَدِيَّةٌ عَلَى ٱلنَّاسِ ٱلَّذِينَ بِهِمْ سِمَةُ ٱلْوَحْشِ وَٱلَّذِينَ يَسْجُدُونَ لِصُورَتِهِ. ٢ 2
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
ثُمَّ سَكَبَ ٱلْمَلَاكُ ٱلثَّانِي جَامَهُ عَلَى ٱلْبَحْرِ، فَصَارَ دَمًا كَدَمِ مَيِّتٍ. وَكُلُّ نَفْسٍ حَيَّةٍ مَاتَتْ فِي ٱلْبَحْرِ. ٣ 3
ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
ثُمَّ سَكَبَ ٱلْمَلَاكُ ٱلثَّالِثُ جَامَهُ عَلَى ٱلْأَنْهَارِ وَعَلَى يَنَابِيعِ ٱلْمِيَاهِ، فَصَارَتْ دَمًا. ٤ 4
ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
وَسَمِعْتُ مَلَاكَ ٱلْمِيَاهِ يَقُولُ: «عَادِلٌ أَنْتَ أَيُّهَا ٱلْكَائِنُ وَٱلَّذِي كَانَ وَٱلَّذِي يَكُونُ، لِأَنَّكَ حَكَمْتَ هَكَذَا. ٥ 5
ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
لِأَنَّهُمْ سَفَكُوا دَمَ قِدِّيسِينَ وَأَنْبِيَاءَ، فَأَعْطَيْتَهُمْ دَمًا لِيَشْرَبُوا. لِأَنَّهُمْ مُسْتَحِقُّونَ!». ٦ 6
ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
وَسَمِعْتُ آخَرَ مِنَ ٱلْمَذْبَحِ قَائِلًا: «نَعَمْ أَيُّهَا ٱلرَّبُّ ٱلْإِلَهُ ٱلْقَادِرُ عَلَى كُلِّ شَيْءٍ! حَقٌّ وَعَادِلَةٌ هِيَ أَحْكَامُكَ». ٧ 7
ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
ثُمَّ سَكَبَ ٱلْمَلَاكُ ٱلرَّابِعُ جَامَهُ عَلَى ٱلشَّمْسِ، فَأُعْطِيَتْ أَنْ تُحْرِقَ ٱلنَّاسَ بِنَارٍ، ٨ 8
ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
فَٱحْتَرَقَ ٱلنَّاسُ ٱحْتِرَاقًا عَظِيمًا، وَجَدَّفُوا عَلَى ٱسْمِ ٱللهِ ٱلَّذِي لَهُ سُلْطَانٌ عَلَى هَذِهِ ٱلضَّرَبَاتِ، وَلَمْ يَتُوبُوا لِيُعْطُوهُ مَجْدًا. ٩ 9
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
ثُمَّ سَكَبَ ٱلْمَلَاكُ ٱلخَامِسُ جَامَهُ عَلَى عَرْشِ ٱلْوَحْشِ، فَصَارَتْ مَمْلَكَتُهُ مُظْلِمَةً. وَكَانُوا يَعَضُّونَ عَلَى أَلْسِنَتِهِمْ مِنَ ٱلْوَجَعِ. ١٠ 10
೧೦ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
وَجَدَّفُوا عَلَى إِلَهِ ٱلسَّمَاءِ مِنْ أَوْجَاعِهِمْ وَمِنْ قُرُوحِهِمْ، وَلَمْ يَتُوبُوا عَنْ أَعْمَالِهِمْ. ١١ 11
೧೧ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
ثُمَّ سَكَبَ ٱلْمَلَاكُ ٱلسَّادِسُ جَامَهُ عَلَى ٱلنَّهْرِ ٱلْكَبِيرِ ٱلْفُرَاتِ، فَنَشِفَ مَاؤُهُ لِكَيْ يُعَدَّ طَرِيقُ ٱلْمُلُوكِ ٱلَّذِينَ مِنْ مَشْرِقِ ٱلشَّمْسِ. ١٢ 12
೧೨ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
وَرَأَيْتُ مِنْ فَمِ ٱلتِّنِّينِ، وَمِنْ فَمِ ٱلْوَحْشِ، وَمِنْ فَمِ ٱلنَّبِيِّ ٱلْكَذَّابِ، ثَلَاثَةَ أَرْوَاحٍ نَجِسَةٍ شِبْهَ ضَفَادِعَ، ١٣ 13
೧೩ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
فَإِنَّهُمْ أَرْوَاحُ شَيَاطِينَ صَانِعَةٌ آيَاتٍ، تَخْرُجُ عَلَى مُلُوكِ ٱلْعَالَمِ وَكُلِّ ٱلْمَسْكُونَةِ، لِتَجْمَعَهُمْ لِقِتَالِ ذَلِكَ ٱلْيَوْمِ ٱلْعَظِيمِ، يَوْمِ ٱللهِ ٱلْقَادِرِ عَلَى كُلِّ شَيْءٍ. ١٤ 14
೧೪ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
«هَا أَنَا آتِي كَلِصٍّ! طُوبَى لِمَنْ يَسْهَرُ وَيَحْفَظُ ثِيَابَهُ لِئَلَّا يَمْشِيَ عُرْيَانًا فَيَرَوْا عُرْيَتَهُ». ١٥ 15
೧೫“ಇಗೋಕಳ್ಳನು ಬರುವಂತೆ ಬರುತ್ತೇನೆ. ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
فَجَمَعَهُمْ إِلَى ٱلْمَوْضِعِ ٱلَّذِي يُدْعَى بِٱلْعِبْرَانِيَّةِ «هَرْمَجَدُّونَ». ١٦ 16
೧೬ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
ثُمَّ سَكَبَ ٱلْمَلَاكُ ٱلسَّابِعُ جَامَهُ عَلَى ٱلْهَوَاءِ، فَخَرَجَ صَوْتٌ عَظِيمٌ مِنْ هَيْكَلِ ٱلسَّمَاءِ مِنَ ٱلْعَرْشِ قَائِلًا: «قَدْ تَمَّ!». ١٧ 17
೧೭ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
فَحَدَثَتْ أَصْوَاتٌ وَرُعُودٌ وَبُرُوقٌ. وَحَدَثَتْ زَلْزَلَةٌ عَظِيمَةٌ، لَمْ يَحْدُثْ مِثْلُهَا مُنْذُ صَارَ ٱلنَّاسُ عَلَى ٱلْأَرْضِ، زَلْزَلَةٌ بِمِقْدَارِهَا عَظِيمَةٌ هَكَذَا. ١٨ 18
೧೮ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
وَصَارَتِ ٱلْمَدِينَةُ ٱلْعَظِيمَةُ ثَلَاثَةَ أَقْسَامٍ، وَمُدُنُ ٱلْأُمَمِ سَقَطَتْ، وَبَابِلُ ٱلْعَظِيمَةُ ذُكِرَتْ أَمَامَ ٱللهِ لِيُعْطِيَهَا كَأْسَ خَمْرِ سَخَطِ غَضَبِهِ. ١٩ 19
೧೯ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
وَكُلُّ جَزِيرَةٍ هَرَبَتْ، وَجِبَالٌ لَمْ تُوجَدْ. ٢٠ 20
೨೦ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
وَبَرَدٌ عَظِيمٌ، نَحْوُ ثِقَلِ وَزْنَةٍ، نَزَلَ مِنَ ٱلسَّمَاءِ عَلَى ٱلنَّاسِ. فَجَدَّفَ ٱلنَّاسُ عَلَى ٱللهِ مِنْ ضَرْبَةِ ٱلْبَرَدِ، لِأَنَّ ضَرْبَتَهُ عَظِيمَةٌ جِدًّا. ٢١ 21
೨೧ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

< رُؤيا 16 >