< رُوما 11 >

فَأَقُولُ: أَلَعَلَّ ٱللهَ رَفَضَ شَعْبَهُ؟ حَاشَا! لِأَنِّي أَنَا أَيْضًا إِسْرَائِيلِيٌّ مِنْ نَسْلِ إِبْرَاهِيمَ مِنْ سِبْطِ بِنْيَامِينَ. ١ 1
ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
لَمْ يَرْفُضِ ٱللهُ شَعْبَهُ ٱلَّذِي سَبَقَ فَعَرَفَهُ. أَمْ لَسْتُمْ تَعْلَمُونَ مَاذَا يَقُولُ ٱلْكِتَابُ فِي إِيلِيَّا؟ كَيْفَ يَتَوَسَّلُ إِلَى ٱللهِ ضِدَّ إِسْرَائِيلَ قَائِلًا: ٢ 2
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
«يَارَبُّ، قَتَلُوا أَنْبِيَاءَكَ وَهَدَمُوا مَذَابِحَكَ، وَبَقِيتُ أَنَا وَحْدِي، وَهُمْ يَطْلُبُونَ نَفْسِي!». ٣ 3
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
لَكِنْ مَاذَا يَقُولُ لَهُ ٱلْوَحْيُ؟ «أَبْقَيْتُ لِنَفْسِي سَبْعَةَ آلَافِ رَجُلٍ لَمْ يُحْنُوا رُكْبَةً لِبَعْلٍ». ٤ 4
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
فَكَذَلِكَ فِي ٱلزَّمَانِ ٱلْحَاضِرِ أَيْضًا قَدْ حَصَلَتْ بَقِيَّةٌ حَسَبَ ٱخْتِيَارِ ٱلنِّعْمَةِ. ٥ 5
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
فَإِنْ كَانَ بِٱلنِّعْمَةِ فَلَيْسَ بَعْدُ بِٱلْأَعْمَالِ، وَإِلَّا فَلَيْسَتِ ٱلنِّعْمَةُ بَعْدُ نِعْمَةً. وَإِنْ كَانَ بِٱلْأَعْمَالِ فَلَيْسَ بَعْدُ نِعْمَةً، وَإِلَّا فَٱلْعَمَلُ لَا يَكُونُ بَعْدُ عَمَلًا. ٦ 6
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
فَمَاذَا؟ مَا يَطْلُبُهُ إِسْرَائِيلُ ذَلِكَ لَمْ يَنَلْهُ. وَلَكِنِ ٱلْمُخْتَارُونَ نَالُوهُ. وَأَمَّا ٱلْبَاقُونَ فَتَقَسَّوْا، ٧ 7
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
كَمَا هُوَ مَكْتُوبٌ: «أَعْطَاهُمُ ٱللهُ رُوحَ سُبَاتٍ، وَعُيُونًا حَتَّى لَا يُبْصِرُوا، وَآذَانًا حَتَّى لَا يَسْمَعُوا إِلَى هَذَا ٱلْيَوْمِ». ٨ 8
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
وَدَاوُدُ يَقُولُ: «لِتَصِرْ مَائِدَتُهُمْ فَخًّا وَقَنَصًا وَعَثْرَةً وَمُجَازَاةً لَهُمْ. ٩ 9
ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
لِتُظْلِمْ أَعْيُنُهُمْ كَيْ لَا يُبْصِرُوا، وَلْتَحْنِ ظُهُورَهُمْ فِي كُلِّ حِينٍ». ١٠ 10
೧೦ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
فَأَقُولُ: أَلَعَلَّهُمْ عَثَرُوا لِكَيْ يَسْقُطُوا؟ حَاشَا! بَلْ بِزَلَّتِهِمْ صَارَ ٱلْخَلَاصُ لِلْأُمَمِ لِإِغَارَتِهِمْ. ١١ 11
೧೧ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
فَإِنْ كَانَتْ زَلَّتُهُمْ غِنًى لِلْعَالَمِ، وَنُقْصَانُهُمْ غِنًى لِلْأُمَمِ، فَكَمْ بِٱلْحَرِيِّ مِلْؤُهُمْ؟ ١٢ 12
೧೨ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
فَإِنِّي أَقُولُ لَكُمْ أَيُّهَا ٱلْأُمَمُ: بِمَا أَنِّي أَنَا رَسُولٌ لِلْأُمَمِ أُمَجِّدُ خِدْمَتِي، ١٣ 13
೧೩ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
لَعَلِّي أُغِيرُ أَنْسِبَائِي وَأُخَلِّصُ أُنَاسًا مِنْهُمْ. ١٤ 14
೧೪ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
لِأَنَّهُ إِنْ كَانَ رَفْضُهُمْ هُوَ مُصَالَحَةَ ٱلْعَالَمِ، فَمَاذَا يَكُونُ ٱقْتِبَالُهُمْ إِلَّا حَيَاةً مِنَ ٱلْأَمْوَاتِ؟ ١٥ 15
೧೫ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
وَإِنْ كَانَتِ ٱلْبَاكُورَةُ مُقَدَّسَةً فَكَذَلِكَ ٱلْعَجِينُ! وَإِنْ كَانَ ٱلْأَصْلُ مُقَدَّسًا فَكَذَلِكَ ٱلْأَغْصَانُ! ١٦ 16
೧೬ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
فَإِنْ كَانَ قَدْ قُطِعَ بَعْضُ ٱلْأَغْصَانِ، وَأَنْتَ زَيْتُونَةٌ بَرِّيَّةٌ طُعِّمْتَ فِيهَا، فَصِرْتَ شَرِيكًا فِي أَصْلِ ٱلزَّيْتُونَةِ وَدَسَمِهَا، ١٧ 17
೧೭ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
فَلَا تَفْتَخِرْ عَلَى ٱلْأَغْصَانِ. وَإِنِ ٱفْتَخَرْتَ، فَأَنْتَ لَسْتَ تَحْمِلُ ٱلْأَصْلَ، بَلِ ٱلْأَصْلُ إِيَّاكَ يَحْمِلُ! ١٨ 18
೧೮ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
فَسَتَقُولُ: «قُطِعَتِ ٱلْأَغْصَانُ لِأُطَعَّمَ أَنَا!». ١٩ 19
೧೯ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
حَسَنًا! مِنْ أَجْلِ عَدَمِ ٱلْإِيمَانِ قُطِعَتْ، وَأَنْتَ بِٱلْإِيمَانِ ثَبَتَّ. لَا تَسْتَكْبِرْ بَلْ خَفْ! ٢٠ 20
೨೦ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
لِأَنَّهُ إِنْ كَانَ ٱللهُ لَمْ يُشْفِقْ عَلَى ٱلْأَغْصَانِ ٱلطَّبِيعِيَّةِ فَلَعَلَّهُ لَا يُشْفِقُ عَلَيْكَ أَيْضًا! ٢١ 21
೨೧ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
فَهُوَذَا لُطْفُ ٱللهِ وَصَرَامَتُهُ: أَمَّا ٱلصَّرَامَةُ فَعَلَى ٱلَّذِينَ سَقَطُوا، وَأَمَّا ٱللُّطْفُ فَلَكَ، إِنْ ثَبَتَّ فِي ٱللُّطْفِ، وَإِلَّا فَأَنْتَ أَيْضًا سَتُقْطَعُ. ٢٢ 22
೨೨ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
وَهُمْ إِنْ لَمْ يَثْبُتُوا فِي عَدَمِ ٱلْإِيمَانِ سَيُطَعَّمُونَ. لِأَنَّ ٱللهَ قَادِرٌ أَنْ يُطَعِّمَهُمْ أَيْضًا. ٢٣ 23
೨೩ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
لِأَنَّهُ إِنْ كُنْتَ أَنْتَ قَدْ قُطِعْتَ مِنَ ٱلزَّيْتُونَةِ ٱلْبَرِّيَّةِ حَسَبَ ٱلطَّبِيعَةِ، وَطُعِّمْتَ بِخِلَافِ ٱلطَّبِيعَةِ فِي زَيْتُونَةٍ جَيِّدَةٍ، فَكَمْ بِٱلْحَرِيِّ يُطَعَّمُ هَؤُلَاءِ ٱلَّذِينَ هُمْ حَسَبَ ٱلطَّبِيعَةِ، فِي زَيْتُونَتِهِمِ ٱلْخَاصَّةِ؟ ٢٤ 24
೨೪ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
فَإِنِّي لَسْتُ أُرِيدُ أَيُّهَا ٱلْإِخْوَةُ أَنْ تَجْهَلُوا هَذَا ٱلسِّرَّ، لِئَلَّا تَكُونُوا عِنْدَ أَنْفُسِكُمْ حُكَمَاءَ: أَنَّ ٱلْقَسَاوَةَ قَدْ حَصَلَتْ جُزْئِيًّا لِإِسْرَائِيلَ إِلَى أَنْ يَدْخُلَ مِلْؤُ ٱلْأُمَمِ، ٢٥ 25
೨೫ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
وَهَكَذَا سَيَخْلُصُ جَمِيعُ إِسْرَائِيلَ. كَمَا هُوَ مَكْتُوبٌ: «سَيَخْرُجُ مِنْ صِهْيَوْنَ ٱلْمُنْقِذُ وَيَرُدُّ ٱلْفُجُورَ عَنْ يَعْقُوبَ. ٢٦ 26
೨೬ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
وَهَذَا هُوَ ٱلْعَهْدُ مِنْ قِبَلِي لَهُمْ مَتَى نَزَعْتُ خَطَايَاهُمْ». ٢٧ 27
೨೭ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
مِنْ جِهَةِ ٱلْإِنْجِيلِ هُمْ أَعْدَاءٌ مِنْ أَجْلِكُمْ، وَأَمَّا مِنْ جِهَةِ ٱلِٱخْتِيَارِ فَهُمْ أَحِبَّاءُ مِنْ أَجْلِ ٱلْآبَاءِ، ٢٨ 28
೨೮ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
لِأَنَّ هِبَاتِ ٱللهِ وَدَعْوَتَهُ هِيَ بِلَا نَدَامَةٍ. ٢٩ 29
೨೯ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
فَإِنَّهُ كَمَا كُنْتُمْ أَنْتُمْ مَرَّةً لَا تُطِيعُونَ ٱللهَ، وَلَكِنِ ٱلْآنَ رُحِمْتُمْ بِعِصْيَانِ هَؤُلَاءِ، ٣٠ 30
೩೦ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
هَكَذَا هَؤُلَاءِ أَيْضًا ٱلْآنَ، لَمْ يُطِيعُوا لِكَيْ يُرْحَمُوا هُمْ أَيْضًا بِرَحْمَتِكُمْ. ٣١ 31
೩೧ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
لِأَنَّ ٱللهَ أَغْلَقَ عَلَى ٱلْجَمِيعِ مَعًا فِي ٱلْعِصْيَانِ، لِكَيْ يَرْحَمَ ٱلْجَمِيعَ. (eleēsē g1653) ٣٢ 32
೩೨ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
يَا لَعُمْقِ غِنَى ٱللهِ وَحِكْمَتِهِ وَعِلْمِهِ! مَا أَبْعَدَ أَحْكَامَهُ عَنِ ٱلْفَحْصِ وَطُرُقَهُ عَنِ ٱلِٱسْتِقْصَاءِ! ٣٣ 33
೩೩ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
«لِأَنْ مَنْ عَرَفَ فِكْرَ ٱلرَّبِّ؟ أَوْ مَنْ صَارَ لَهُ مُشِيرًا؟ ٣٤ 34
೩೪“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
أَوْ مَنْ سَبَقَ فَأَعْطَاهُ فَيُكَافَأَ؟». ٣٥ 35
೩೫ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
لِأَنَّ مِنْهُ وَبِهِ وَلَهُ كُلَّ ٱلْأَشْيَاءِ. لَهُ ٱلْمَجْدُ إِلَى ٱلْأَبَدِ. آمِينَ. (aiōn g165) ٣٦ 36
೩೬ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)

< رُوما 11 >