< 1 مُلُوك 19 >
وَأَخْبَرَ أَخْآبُ إِيزَابَلَ بِمَا صَنَعَهُ إِيلِيَّا، وَكَيْفَ قَتَلَ جَمِيعَ أَنْبِيَاءِ الْبَعْلِ بِالسَّيْفِ، | ١ 1 |
೧ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
فَبَعَثَتْ إِيزَابَلُ رَسُولاً إِلَى إِيلِيَّا قَائِلَةً: «لِتُعَاقِبْنِي الآلِهَةُ أَشَّدَ عِقَابٍ وَتَزِدْ، إِنْ لَمْ أَقْتُلْكَ فِي مِثْلِ هَذَا الْوَقْتِ غَداً، فَتَكُونَ كَمِثْلِ الَّذِينَ قَتَلْتَهُمْ». | ٢ 2 |
೨ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
فَلَمَّا سَمِعَ إِيلِيَّا ذَلِكَ هَرَبَ لِيَنْجُوَ بِنَفْسِهِ، وَوَصَلَ إِلَى بِئْرِ سَبْعٍ التَّابِعَةِ لِيَهُوذَا، حَيْثُ تَرَكَ خَادِمَهُ. | ٣ 3 |
೩ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ثُمَّ هَامَ وَحْدَهُ فِي الصَّحْرَاءِ مَسِيرَةَ يَوْمٍ، حَتَّى أَتَى شَجَرَةَ شِيحٍ، فَجَلَسَ تَحْتَهَا، وَتَمَنَّى الْمَوْتَ لِنَفْسِهِ وَقَالَ: «قَدْ كَفَى الآنَ يَارَبِّي، خُذْ نَفْسِي فَلَسْتُ خَيْراً مِنْ آبَائِي». | ٤ 4 |
೪ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
وَاضْطَجَعَ وَنَامَ تَحْتَ شَجَرَةِ الشِّيحِ، وإِذَا بِمَلاَكٍ يَمَسُّهُ وَيَقُولُ: «قُمْ وَكُلْ». | ٥ 5 |
೫ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
فَتَطَلَّعَ حَوْلَهُ وَإِذَا بِهِ يَرَى عِنْدِ رَأْسِهِ رَغِيفاً مَخْبُوزاً عَلَى الجَمْرِ وَجَرَّةَ مَاءٍ. فَأَكَلَ وَشَرِبَ، ثُمَّ عَادَ وَنَامَ. | ٦ 6 |
೬ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
وَمَسَّهُ مَلاَكُ الرَّبِّ ثَانِيَّةً قَائِلاً: «قُمْ وَكُلْ، لأَنَّ أَمَامَكَ مَسَافَةً طَوِيلَةً لِلسَّفَرِ». | ٧ 7 |
೭ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
فَقَامَ وَأَكَلَ وَشَرِبَ، وَمَشَى بِقُوَّةِ تِلْكَ الْوَجْبَةِ أَرْبَعِينَ نَهَاراً وَأَرْبَعِينَ لَيْلَةً، حَتَّى بَلَغَ جَبَلَ اللهِ حُورِيبَ. | ٨ 8 |
೮ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
فَدَخَلَ مُغَارَةً هُنَاكَ وَبَاتَ فِيهَا وَقَالَ الرَّبُّ لإِيلِيَّا: «مَاذَا تَفْعَلُ هُنَا يَاإِيلِيَّا؟» | ٩ 9 |
೯ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
فَأَجَابَ: «غِرْتُ غَيْرَةً لِلرَّبِّ الإِلَهِ الْقَدِيرِ، لأَنَّ بَنِي إِسْرَائِيلَ تَنَكَّرُوا لِعَهْدِكَ وَهَدَمُوا مَذَابِحَكَ وَقَتَلُوا أَنْبِيَاءَكَ بِالسَّيْفِ، وَبَقِيتُ وَحْدِي. وَهَا هُمْ يَبْغُونَ قَتْلِي أَيْضاً» | ١٠ 10 |
೧೦ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
فَقَالَ لَهُ: «اخْرُجْ وَقِفْ عَلَى الْجَبَلِ أَمَامِي، لأَنِّي مُزْمِعٌ أَنْ أَعْبُرَ». ثُمَّ هَبَّتْ رِيحٌ عَاتِيَةٌ شَقَّتِ الْجِبَالَ وَحَطَّمَتِ الصُّخُورَ، وَلَكِنَّ الرَّبَّ لَمْ يَكُنْ فِي الرِّيحِ. ثُمَّ حَدَثَتْ زَلْزَلَةٌ، وَلَمْ يَكُنِ الرَّبُّ فِي الزَّلْزَلَةِ. | ١١ 11 |
೧೧ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
وَبَعْدَ الزَّلْزَلَةِ اجْتَازَتْ بِهِ نَارٌ، وَلَمْ يَكُنِ الرَّبُّ فِي النَّارِ. وَبَعْدَ النَّارِ رَفَّ فِي مَسَامِعِ إِيلِيَّا صَوْتٌ مُنْخَفِضٌ هَامِسٌ. | ١٢ 12 |
೧೨ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
فَلَمَّا سَمِعَ إِيلِيَّا الصَّوْتَ، لَفَّ وَجْهَهُ بِرِدَائِهِ، وَخَرَجَ وَوَقَفَ فِي بَابِ الْكَهْفِ. وَإِذَا بِصَوْتٍ يُخَاطِبُهُ: «مَاذَا تَفْعَلُ هُنَا يَاإِيلِيَّا؟» | ١٣ 13 |
೧೩ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
فَأَجَابَ: «غِرْتُ غَيْرَةً لِلرَّبِّ الإِلَهِ الْقَدِيرِ، لأَنَّ بَنِي إِسْرَائِيلَ تَنَكَّروا لِعَهْدِكَ وَهَدَمُوا مَذَابِحَكَ وَقَتَلُوا أَنْبِيَاءَكَ بِالسَّيْفُ، وَبَقِيتُ وَحْدِي، وَهَا هُمْ يَبْغُونَ قَتْلِي». | ١٤ 14 |
೧೪ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
فَقَالَ لَهُ الرَّبُّ: «اذْهَبْ رَاجِعاً فِي الطَّرِيقِ الصَّحْرَاوِيَّةِ الْمُفْضِيَةِ إِلَى دِمَشْقَ، وَهُنَاكَ امْسَحْ حَزَائِيلَ مَلِكاً عَلَى آرَامَ، | ١٥ 15 |
೧೫ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
ثُمَّ امْسَحْ يَاهُو بْنَ نِمْشِي مَلِكاً عَلَى إِسْرَائِيلَ، وَكَذَلِكَ امْسَحْ أَلِيشَعَ بْنَ شَافَاطَ مِنْ آبَلِ مَحُولَةَ نَبِيّاً خَلَفاً لَكَ. | ١٦ 16 |
೧೬ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
فَالَّذِي يَنْجُو مِنْ سَيْفِ حَزَائِيلَ يَقْتُلُهُ يَاهُو، وَالَّذِي يَنْجُو مِنْ سَيْفِ يَاهُو يَقْتُلُهُ أَلِيشَعُ. | ١٧ 17 |
೧೭ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
وَلَقَدْ أَبْقَيْتُ فِي إِسْرَائِيلَ سَبْعَةَ آلافٍ لَمْ يَحْنُوا رُكَبَهُمْ لِلْبَعْلِ وَلَمْ تُقَبِّلْهُ أَفْوَاهُهُمْ». | ١٨ 18 |
೧೮ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
فَانْطَلَقَ إِيلِيَّا مِنْ هُنَاكَ فَوَجَدَ أَلِيشَعَ بْنَ شَافَاطَ يَحْرُثُ حَقْلاً، وَأَمَامَهُ أَحَدَ عَشَرَ زَوْجاً مِنَ الْبَقَرِ، وَهُوَ يَسِيرُ خَلْفَ الزَّوْجِ الثَّانِي عَشَرَ. فَمَرَّ بِهِ إِيلِيَّا وَطَرَحَ عَلَيْهِ رِدَاءَهُ، | ١٩ 19 |
೧೯ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
فَتَرَكَ الْبَقَرَ وَرَكَضَ وَرَاءَ إِيلِيَّا وَقَالَ: «دَعْنِي أُوَدِّعْ أَبِي وَأُمِّي وَأَتْبَعَكَ». فَقَالَ لَهُ: «ارْجِعْ، فَأَيُّ شَيْءٍ فَعَلْتُهُ لَكَ؟» | ٢٠ 20 |
೨೦ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
فَرَجَعَ أَلِيشَعُ وَأَخَذَ زَوْجَ بَقَرٍ ذَبَحَهُمَا وَسَلَقَ لَحْمَهُمَا عَلَى خَشَبِ الْمِحْرَاثِ وَوَزَّعَهُ عَلَى الشَّعْبِ فَأَكَلُوا، ثُمَّ قَامَ وَلَحِقَ بِإِيلِيَّا وَوَاظَبَ عَلَى خِدْمَتِهِ. | ٢١ 21 |
೨೧ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.