< 2 أخبار 32 >

وَبَعْدَ كُلِّ مَا قَامَ بِهِ حَزَقِيَّا بِأَمَانَةٍ، زَحَفَ سِنْحَارِيبُ عَلَى أَرْضِ يَهُوذَا وَدَخَلَهَا، وَحَاصَرَ الْمُدُنَ الْحَصِينَةَ طَمَعاً فِي الاسْتِيلاءِ عَلَيْهَا. ١ 1
ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
وَعِنْدَمَا رَأَى حَزَقِيَّا أَنَّ سِنْحَارِيبَ قَدْ وَطَّدَ الْعَزْمَ عَلَى مُحَارَبَةِ أُورُشَلِيمَ، ٢ 2
ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
تَدَاوَلَ فِي الأَمْرِ مَعَ رُؤَسَاءِ جَيْشِهِ وَزُعَمَاءِ الْبِلادِ، وَاتَّفَقُوا عَلَى رَدْمِ مِيَاهِ الْعُيُونِ الْقَائِمَةِ خَارِجَ الْمَدِينَةِ، فَأَعَانُوهُ. ٣ 3
ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
وَتَجَمَّعَ جُمْهُورٌ غَفِيرٌ، رَدَمُوا جَمِيعَ الْيَنَابِيعِ وَالنَّهْرَ الْجَارِيَ فِي وَسَطِ الأَرْضِ قَائِلِينَ: «لِمَاذَا يَأْتِي مُلُوكُ أَشُّورَ وَيَجِدُونَ مِيَاهاً غَزِيرَةً؟» ٤ 4
ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
وَتَشَجَّعَ وَرَمَّمَ السُّورَ الْمُنْهَدِمَ، وَعَزَّزَهُ بِالأَبْرَاجِ الْمُرْتَفِعَةِ، وَبَنَى سُوراً آخَرَ خَارِجَهُ، وَحَصَّنَ قَلْعَةَ مَدِينَةِ دَاوُدَ، وَصَنَعَ أَسْلِحَةً كَثِيرَةً وَأَتْرَاساً. ٥ 5
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
وَعَبَّأَ كُلَّ شَعْبِ الْمَدِينَةِ تَحْتَ قِيَادَةِ ضُبَّاطِ الْجَيْشِ، وَاسْتَدْعَاهُمْ إِلَى سَاحَةِ بَابِ الْمَدِينَةِ لِيَبُثَّ فِيهِمِ الشَّجَاعَةَ قَائِلاً لَهُمْ: ٦ 6
ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
«تَقَوَّوْا وَتَشَجَّعُوا، لَا تَجْزَعُوا وَلا تَرْتَعِبُوا مِنْ مَلِكِ أَشُّورَ وَلا مِنْ كُلِّ الْجَيْشِ الَّذِي مَعَهُ، لأَنَّ الَّذِي مَعَنَا أَكْثَرُ مِنَ الَّذِي مَعَهُ. ٧ 7
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
فَمَعَهُ قُوىً بَشَرِيَّةٌ، وَمَعَنَا الرَّبُّ إِلَهُنَا لِيُنْجِدَنَا وَيُحَارِبَ حُرُوبَنَا». فَبَثَّ كَلامُ حَزَقِيَّا الشَّجَاعَةَ فِي قُلُوبِ الشَّعْبِ. ٨ 8
ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
وَفِيمَا كَانَ سِنْحَارِيبُ وَجَيْشُهُ يُحَاصِرُونَ لَخِيشَ، أَرْسَلَ رِجَالَهُ إِلَى أُورُشَلِيمَ إِلَى حَزَقِيَّا مَلِكِ يَهُوذَا وَإِلَى أَهْلِ أُورُشَلِيمَ قَائِلِينَ: ٩ 9
ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
«هَذَا مَا يَقُولُهُ سِنْحَارِيبُ مَلِكُ أَشُّورَ: عَلَى مَاذَا تَتَّكِلُونَ فَتُقِيمُوا فِي أُورُشَلِيمَ تَحْتَ الْحِصَارِ؟ ١٠ 10
೧೦“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
أَلا يُغْوِيكُمْ حَزَقِيَّا لِكَيْ تَمُوتُوا جُوعاً وَعَطَشاً، عِنْدَمَا يَقُولُ لَكُمْ: الرَّبُّ إِلَهُنَا يُنْقِذُنَا مِنْ يَدِ مَلِكِ أَشُورَ؟ ١١ 11
೧೧ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
أَلَيْسَ حَزَقِيَّا هُوَ الَّذِي أَزَالَ مُرْتَفَعَاتِهِ وَمَذَابِحَهُ، وَأَمَرَ يَهُوذَا وَأُورُشَلِيمَ قَائِلاً: أَمَامَ مَذْبَحٍ وَاحِدٍ تَسْجُدُونَ وَعَلَيْهِ تُوْقِدُونَ؟ ١٢ 12
೧೨ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
أَمَا تَعْرِفُونَ مَا أَجْرَيْتُهُ أَنَا وَآبَائِي عَلَى جَمِيعِ أُمَمِ الأَرَاضِي، فَهَلِ اسْتَطَاعَتْ آلِهَتُهَا أَنْ تُنْقِذَ أَرْضَهَا مِنْ يَدِي؟ ١٣ 13
೧೩ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
مَنْ مِنْ بَيْنِ جَمِيعِ آلِهَةِ هَؤُلاءِ الأُمَمِ الَّذِينَ دَمَّرَهُمْ آبَائِي اسْتَطَاعَ أَنْ يُنْقِذَ شَعْبَهُ مِنِّي؟ فَكَيْفَ يَسْتَطِيعُ إِلَهُكُمْ أَنْ يُنْقِذَكُمْ مِنْ يَدِي؟ ١٤ 14
೧೪ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
لِذَلِكَ لَا يَخْدَعَنَّكُمْ حَزَقِيَّا وَلا يُغْوِيَنَّكُمْ. لَا تُصَدِّقُوهُ لأَنَّهُ لَمْ يَقْدِرْ إِلَهُ أَيِّ أُمَّةٍ أَوْ مَمْلَكَةٍ أَنْ يُنَجِّيَ شَعْبَهُ مِنْ يَدِي وَمِنْ يَدِ آبَائِي، فَكَيْفَ يُمْكِنُ لإِلَهِكُمْ أَنْ يُنَجِّيَكُمْ؟» ١٥ 15
೧೫ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
وَأَكْثَرَ الضُّبَّاطُ الأَشُّورِيُّونَ مِنَ التَّهَجُّمِ عَلَى الرَّبِّ وَعَلَى عَبْدِهِ حَزَقِيَّا. ١٦ 16
೧೬ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
وَكَتَبَ الْمَلِكُ الأَشُّورِيُّ رَسَائِلَ عَيَّرَ فِيهَا الرَّبَّ إِلَهَ إِسْرَائِيلَ، جَاءَ فِيهَا: «كَمَا أَنَّ آلِهَةَ أُمَمِ الأَرْضِ عَجَزَتْ عَنْ إِنْقَاذِ شُعُوبِهَا مِنْ يَدِي، كَذَلِكَ لَا يُنْقِذُ إِلَهُ حَزَقِيَّا شَعْبَهُ مِنْ يَدِي». ١٧ 17
೧೭ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
وَهَتَفَ رِجَالُ سِنْحَارِيبَ بِالْيَهُودِيَّةِ مُخَاطِبِينَ أَهْلَ أُورُشَلِيمَ الْوَاقِفِينَ عَلَى السُّورِ، لِيُوْقِعُوا فِيهِمِ الرُّعْبَ وَالْخَوْفَ، تَمْهِيداً لِلاسْتِيلاءِ عَلَى الْمَدِينَةِ، ١٨ 18
೧೮ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
وَكَانَ تَهَجُّمُهُمْ عَلَى الرَّبِّ إِلَهِ أُورُشَلِيمَ مُمَاثِلاً لِتَهَجُّمِهِمْ عَلَى أَصْنَامِ الشُّعُوبِ الأُخْرَى الَّتِي صَنَعَتْهَا أَيْدِي النَّاسِ. ١٩ 19
೧೯ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
فَصَلَّى حَزَقِيَّا الْمَلِكُ وَإِشَعْيَاءُ بْنُ آمُوصَ النَّبِيُّ، وَاسْتَغَاثَا بِالسَّمَاءِ مِنْ جَرَّاءِ ذَلِكَ، ٢٠ 20
೨೦ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
فَأَرْسَلَ الرَّبُّ مَلاكاً فَأَبَادَ كُلَّ بَطَلٍ شُجَاعٍ وَرَئِيسٍ وَقَائِدٍ فِي مُعَسْكَرِ مَلِكِ أَشُورَ، فَرَجَعَ إِلَى أَرْضِهِ مَخْذُولاً. وَعِنْدَمَا دَخَلَ مَعْبَدَ إِلَهِهِ اغْتَالَهُ هُنَاكَ أَوْلادُهُ بِالسَّيْفِ ٢١ 21
೨೧ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
وَهَكَذَا أَنْقَذَ الرَّبُّ حَزَقِيَّا وَسُكَّانَ أُورُشَلِيمَ مِنْ سِنْحَارِيبَ مَلِكِ أَشُورَ وَمِنْ أَيْدِي سِوَاهُ مِنَ الأَعْدَاءِ، وَوَقَاهُمْ مِنْ كُلِّ نَاحِيَةٍ. ٢٢ 22
೨೨ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
وَأَتَى كَثِيرُونَ بِتَقْدِمَاتٍ لِلرَّبِّ إِلَى أُورُشَلِيمَ، وَبِتُحَفٍ لِحَزَقِيَّا مَلِكِ يَهُوذَا، وَارْتَفَعَتْ مَكَانَتُهُ فِي أَعْيُنِ جَمِيعِ الأُمَمِ بَعْدَ ذَلِكَ. ٢٣ 23
೨೩ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
فِي تِلْكَ الأَيَّامِ مَرِضَ حَزَقِيَّا إِلَى أَنْ أَشْرَفَ عَلَى الْمَوْتِ، وَصَلَّى إِلَى الرَّبِّ، فَاسْتَجَابَ لَهُ وَأَعْطَاهُ عَلامَةً تَأْكِيداً لِشِفَائِهِ. ٢٤ 24
೨೪ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
وَلَكِنَّ حَزَقِيَّا لَمْ يَتَجَاوَبْ مَعَ مَا أَبْدَاهُ اللهُ نَحْوَهُ مِنْ نِعَمٍ، إِذِ امْتَلأَ قَلْبُهُ كِبْرِيَاءَ، فَغَضِبَ الرَّبُّ عَلَيْهِ وَعَلَى يَهُوذَا وَأُورُشَلِيمَ. ٢٥ 25
೨೫ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
ثُمَّ اتَّضَعَ حَزَقِيَّا بَعْدَ كِبْرِيَائِهِ، هُوَ وَأَهْلُ أُورُشَلِيمَ، فَلَمْ يَحُلَّ بِهِمْ غَضَبُ الرَّبِّ فِي أَيَّامِ حَزَقِيَّا. ٢٦ 26
೨೬ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
وَأَحْرَزَ حَزَقِيَّا غِنىً وَمَجْداً عَظِيمَيْنِ، وَبَنَى لِنَفْسِهِ مَخَازِنَ لِلْفِضَّةِ وَالذَّهَبِ وَالْحِجَارَةِ الْكَرِيمَةِ وَالأَطْيَابِ وَالأَتْرَاسِ وَكُلِّ آنِيَةٍ ثَمِينَةٍ، ٢٧ 27
೨೭ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
وَمَخَازِنَ لِمَحَاصِيلِ الْحِنْطَةِ، وَنِتَاجِ الْكَرْمَةِ وَالزَّيْتِ، وَمَرَابِطَ لِكُلِّ أَنْوَاعِ الْبَهَائِمِ وَحَظَائِرَ لِلْقُطْعَانِ. ٢٨ 28
೨೮ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
وَبَنَى لِنَفْسِهِ قُرىً، وَامْتَلَكَ مَوَاشِيَ غَنَمٍ وَبَقَرٍ بِوَفْرَةٍ، لأَنَّ اللهَ أَغْدَقَ عَلَيْهِ أَمْوَالاً كَثِيرَةً جِدّاً. ٢٩ 29
೨೯ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
وَهُوَ الَّذِي سَدَّ مَخْرَجَ مِيَاهِ جَدْوَلِ جِيحُونَ الأَعْلَى، وَحَوَّلَهُ إِلَى قَنَاةٍ تَحْتَ الأَرْضِ، تَمْتَدُّ إِلَى الْجِهَةِ الْغَرْبِيَّةِ فِي مَدِينَةِ دَاوُدَ. وَلَقَدْ أَفْلَحَ حَزَقِيَّا فِي كُلِّ عَمَلٍ قَامَ بِهِ. ٣٠ 30
೩೦ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
وَلَكِنْ عِنْدَمَا وَفَدَ عَلَيْهِ مَبْعُوثُو مُلُوكِ بَابِلَ لِيَسْتَعْلِمُوا مِنْهُ عَنْ مُعْجِزَةِ شِفَائِهِ، تَرَكَهُ اللهُ لِيَخْتَبِرَ سَرَائِرَ قَلْبِهِ. ٣١ 31
೩೧ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
أَمَّا بَقِيَّةُ أَخْبَارِ حَزَقِيَّا فَهِيَ مُدَوَّنَةٌ فِي رُؤْيَا إِشَعْيَاءَ بْنِ آمُوصَ النَّبِيِّ، وَفِي كِتَابِ تَارِيخِ مُلُوكِ يَهُوذَا وَإِسْرَائِيلَ. ٣٢ 32
೩೨ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
ثُمَّ مَاتَ حَزَقِيَّا فَدَفَنُوهُ فِي الْجُزْءِ الأَعْلَى مِنْ مَقَابِرِ بَيْتِ دَاوُدَ، فَكَرَّمَهُ كُلُّ أَهْلِ أُورُشَلِيمَ وَيَهُوذَا عِنْدَ مَوْتِهِ، وَخَلَفَهُ ابْنُهُ مَنَسَّى عَلَى الْمُلْكِ. ٣٣ 33
೩೩ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

< 2 أخبار 32 >