< إرْمِيا 49 >

نُبُوءَةٌ عَنْ بَنِي عَمُّونَ، هَذَا مَا يُعْلِنُهُ الرَّبُّ: «أَلَيْسَ لإِسْرَائِيلَ أَبْنَاءُ؟ أَلَيْسَ لَهُ وَارِثٌ؟ فَمَا بَالُ مَلِكِ الْعَمُّونِيِّينَ قَدِ اسْتَوْلَى عَلَى مِيرَاثِ سِبْطِ جَادٍ وَسَكَنَ شَعْبُهُ فِي مُدُنِهِ؟ ١ 1
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
لِذَلِكَ هَا أَيَّامٌ مُقْبِلَةٌ، يَقُولُ الرَّبُّ، أَجْعَلُ فِيهَا هُتَافَ الْقِتَالِ يَتَرَدَّدُ فِي رَبَّةِ الْعَمُّونِيِّينَ، فَتَصِيرُ تَلَّةَ أَطْلالٍ، وَتُحْرَقُ قُرَاهَا بِالنَّارِ فَيُجْلِي الإِسْرَائِيلِيُّونَ الَّذِينَ أَجْلَوْهُمْ، يَقُولُ الرَّبُّ. ٢ 2
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
أَعْوِلِي يَا حَشْبُونُ لأَنَّ عَايَ قَدْ خَرِبَتْ. ابْكِينَ يَا بَنَاتِ رَبَّةَ وَتَمَنْطَقْنَ بِالْمُسُوحِ. انْدُبْنَ وَاذْرَعْنَ الأَرْضَ بَيْنَ السِّيَاجَاتِ فَإِنَّ مَلِكَكُنَّ سَيَذْهَبُ إِلَى السَّبْيِ مَعَ كَهَنَتِهِ وَرُؤَسَائِهِ جَمِيعاً. ٣ 3
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
مَا بَالُكِ تُبَاهِينَ بِالأَوْدِيَةِ أَيَّتُهَا الابْنَةُ الْمُخَادِعَةُ الَّتِي اتَّكَلَتْ عَلَى نَفَائِسِهَا قَائِلَةً: مَنْ يُهَاجِمُنِي؟ ٤ 4
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
هَا أَنَا أُوْقِعُ بِكِ الرُّعْبَ مِنْ جَمِيعِ الْمُحِيطِينَ بِكِ، فَيَتَشَرَّدُ كُلُّ وَاحِدٍ مِنْكُمْ مَطْرُوداً، وَلَيْسَ مَنْ يَجْمَعُ شَتَاتَ الْهَارِبِينَ. ٥ 5
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
ثُمَّ أَعُودُ فَأَرُدُّ سَبْيَ الْعَمُّونِيِّينَ، يَقُولُ الرَّبُّ». ٦ 6
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
نُبُوءَةٌ عَنِ الأَدُومِيِّينَ: هَذَا مَا يُعْلِنُهُ الرَّبُّ الْقَدِيرُ: «أَلَمْ تَبْقَ فِي تِيمَانَ حِكْمَةٌ بَعْدُ؟ هَلْ بَادَتِ الْمَشُورَةُ مِنْ ذَوِي الْفَهْمِ؟ هَلْ تَلاشَتْ حِكْمَتُهُمْ؟ ٧ 7
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
اهْرُبُوا: أَدْبِرُوا، اخْتَبِئُوا فِي الأَعْمَاقِ يَا سُكَّانَ دَدَانَ، لأَنِّي سَأُوْقِعُ الْبَلِيَّةَ بِذُرِّيَّةِ عِيسُو فِي أَوَانِ عِقَابِهَا. ٨ 8
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
لَوْ أَقْبَلَ قَاطِفُو الْعِنَبِ إِلَيْكَ، أَلا يُبْقُونَ خُصَاصَةً؟ وَلَوِ انْسَلَّ اللُّصُوصُ لَيْلاً، أَلا يَقْنَعُونَ بِسَلْبِ مَا يَكْفِيهِمْ؟ ٩ 9
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
أَمَّا أَنَا فَقَدْ جَرَّدْتُ ذُرِّيَّةَ عِيسُو، وَكَشَفْتُ عَنْ مَخَابِئِهَا السِّرِّيَّةِ، وَلَيْسَ فِي وُسْعِهَا الاخْتِفَاءُ. هَلَكَ أَبْنَاءُ عِيسُو وَإخْوَتُهُ وَجِيرَانُهُ وَلَمْ يَبْقَ لَهُ أَثَرٌ بَعْدُ. ١٠ 10
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
اتْرُكْ أَيْتَامَكَ فَإِنِّي أُحْيِيهِمْ، وَلْتَتَّكِلْ أَرَامِلُكَ عَلَيَّ». ١١ 11
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
لأَنَّ هَذَا مَا يُعْلِنُهُ الرَّبُّ: «إِنْ كَانَ الَّذِينَ لَا يَسْتَحِقُّونَ تَجَرُّعَ كَأْسِ الْعِقَابِ قَدْ تَجَرَّعُوهُ، أَتُفْلِتُ أَنْتَ مِنَ الْعِقَابِ؟ إِنَّكَ لَنْ تُفْلِتَ مِنَ الْعِقَابِ، بَلْ عَلَيْكَ أَنْ تَجْرَعَهُ حَتْماً. ١٢ 12
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
هَا أَنَا قَدْ أَقْسَمْتُ بِنَفْسِي»، يَقُولُ الرَّبُّ، «أَنْ تُصْبِحَ بُصْرَةُ عُرْضَةً لِلرُّعْبِ وَالْعَارِ وَالْخَرَابِ وَاللَّعْنَةِ، وَتَغْدُو مُدُنُهَا خَرَائِبَ دَائِمَةً». ١٣ 13
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
تَبَلَّغْتُ رِسَالَةً مِنْ لَدُنِ الرَّبِّ، أَنَّ سَفِيراً قَدْ بُعِثَ إِلَى الأُمَمِ قَائِلاً: «احْشِدُوا أَنْفُسَكُمْ لِمُهَاجَمَتِهَا. هُبُّوا لِلْقِتَالِ. ١٤ 14
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
قَدْ جَعَلْتُكَ صَغِيراً فِي الأُمَمِ، حَقِيراً بَيْنَ النَّاسِ. ١٥ 15
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
قَدْ خَدَعَكَ مَا تُثِيرُهُ مِنْ رُعْبٍ، وَأَغْوَتْكَ كِبْرِيَاءُ قَلْبِكَ، يَا مَنْ تُقِيمُ فِي شُقُوقِ الصَّخْرِ وَتَعْتَصِمُ بِقِمَّةِ التَّلِّ. وَلَكِنَّنِي سَأَطْرَحُكَ مِنْ هُنَاكَ وَلَوْ بَنَيْتَ عُشَّكَ عَالِياً كَعُشِّ النَّسْرِ، يَقُولُ الرَّبُّ. ١٦ 16
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
سَتُصْبِحُ أَدُومُ مَثَارَ رُعْبٍ، وَكُلُّ مَنْ يَمُرُّ بِها تَعْتَرِيهِ رِعْدَةٌ، وَيَصْفَرُ مِنْ جَرَّاءِ كُلِّ نَكْبَاتِهَا، ١٧ 17
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
وَيُصِيبُهَا مَا أَصَابَ سَدُومَ وَعَمُورَةَ وَمَا جَاوَرَهُمَا، مِنِ انْقِلابٍ، يَقُولُ الرَّبُّ، فَلا يَسْكُنُ هُنَاكَ إِنْسَانٌ وَلا يَتَغَرَّبُ فِيهَا أَحَدٌ. ١٨ 18
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
هَا هُوَ يَنْقَضُّ عَلَى الأَدُومِيِّينَ فِي مَوَاطِنِ صُخُورِهِمْ كَمَا يَنْقَضُّ فَجْأَةً أَسَدٌ مِنْ أَجَمَاتِ نَهْرِ الأُرْدُنِّ؛ وَفِي لَحْظَةٍ أَطْرُدُهُمْ مِنْهَا وَأُقِيمُ عَلَيْهَا مَنْ أَخْتَارُهُ، لأَنَّهُ مَنْ هُوَ مِثْلِي؟ وَمَنْ يُحَاكِمُنِي؟ وَأَيُّ رَاعٍ يَقْوَى عَلَى مُوَاجَهَتِي؟ ١٩ 19
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
لِذَلِكَ اسْمَعُوا مَا خَطَّطَهُ الرَّبُّ ضِدَّ أَدُومَ، وَمَا دَبَّرَهُ ضِدَّ سَاكِنِي تِيمَانَ: هَا صِغَارُ الْقَوْمِ يُجَرُّونَ، وَتَنْهَدِمُ مَسَاكِنُهُمْ عَلَيْهِمْ. ٢٠ 20
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
مِنْ صَوْتِ سُقُوطِهِمْ تَرْجُفُ الأَرْضُ، وَأَصْدَاءُ صُرَاخِهِمْ تَبْلُغُ الْبَحْرَ الأَحْمَرَ. ٢١ 21
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
هَا هُوَ يُحَلِّقُ كَالنَّسْرِ، وَيَنْشُرُ جَنَاحَيْهِ عَلَى بُصْرَةَ، فَتُصْبِحُ قُلُوبُ جَبَابِرَةِ أَدُومَ كَقَلْبِ امْرَأَةٍ مَاخِضٍ». ٢٢ 22
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
نُبُوءةٌ عَنْ دِمَشْقَ: «قَدْ لَحِقَ الْخِزْيُ بِحَمَاةَ وَأَرْفَادَ إِذْ بَلَغَتْهُمَا الأَنْبَاءُ الْمُزْعِجَةُ، ذَابَتَا خَوْفاً وَاضْطَرَبَتَا كَالْبَحْرِ الْهَائِجِ. ٢٣ 23
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
خَارَتْ قُوَى دِمَشْقَ وَأَدْبَرَتْ لِتَهْرُبَ، وَاسْتَوْلَى عَلَيْهَا الرُّعْبُ، وَأَدْرَكَهَا الْكَرْبُ وَالأَلَمُ كَامْرَأَةٍ مَاخِضٍ. ٢٤ 24
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
كَيْفَ لَمْ يُبْقِ عَلَى الْمَدِينَةِ الشَّهِيرَةِ، مَدِينَةِ مَسَرَّتِي؟ ٢٥ 25
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
لِذَلِكَ سَيَتَسَاقَطُ شَبَابُهَا فِي سَاحَاتِهَا، وَيَبِيدُ جَمِيعُ جُنُودِهَا فِي ذَلِكَ الْيَوْمِ، يَقُولُ الرَّبُّ الْقَدِيرُ. ٢٦ 26
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
سَأُضْرِمُ النَّارَ فِي سُورِ دِمَشْقَ فَتَلْتَهِمُ قُصُورَ بَنْهَدَدَ». ٢٧ 27
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
نُبُوءَةٌ عَنْ قِيدَارَ وَمَمَالِكِ حَاصُورَ الَّتِي هَاجَمَهَا نَبُوخَذْنَصَّرُ: «هَذَا مَا يُعْلِنُهُ الرَّبُّ: هُبُّوا وَازْحَفُوا عَلَى قِيدَارَ. دَمِّرُوا أُمَمَ الْمَشْرِقِ. ٢٨ 28
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
فَإِنَّ خِيَامَهُمْ وَقُطْعَانَ أَغْنَامِهِمْ يُسْتَوْلَى عَلَيْهَا، وَتُؤْخَذُ أَسْتَارُهُمْ وَأَمْتِعَتُهُمْ، وَتُنْهَبُ جِمَالُهُمْ مِنْهُمْ، وَيَهْتِفُ بِهِمِ الرِّجَالُ: الرُّعْبُ يُحْدِقُ مِنْ كُلِّ جَانِبٍ. ٢٩ 29
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
اهْرُبُوا سَرِيعاً. تَفَرَّقُوا. تَوَارَوْا فِي الأَعْمَاقِ يَا أَهْلَ حَاصُورَ، يَقُولُ الرَّبُّ، لأَنَّ نَبُوخَذْنَصَّرَ مَلِكَ بَابِلَ تَآمَرَ عَلَيْكُمْ وَدَبَّرَ خُطَّتَهُ ضِدَّكُمْ. ٣٠ 30
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
هُبُّوا، وَازْحَفُوا عَلَى أُمَّةٍ مُتْرَفَةٍ تَسْكُنُ فِي طُمَأْنِينَةٍ، يَقُولُ الرَّبُّ. لَا بَوَّابَاتِ لَهَا وَلا مَزَالِيجَ بَلْ تَسْكُنُ مُنْفَرِدَةً. ٣١ 31
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
سَتُصْبِحُ إِبِلُهُمْ غَنِيمَةً وَمَاشِيَتُهُمْ سَلْباً، وَأُذَرِّي لِكُلِّ رِيحٍ كُلَّ مَقْصُوصِي زَوَايَا الشَّعْرِ، وَأُوْقِعُ بِهِمِ الْبَلِيَّةَ مِنْ كُلِّ جَوَانِبِهِمْ، يَقُولُ الرَّبُّ. ٣٢ 32
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
فَتُصْبِحُ حَاصُورُ مَأْوَى لِبَنَاتِ آوَى، وَخَرَاباً إِلَى الأَبَدِ. لَا يُقِيمُ هُنَاكَ أَحَدٌ، وَلا يَتَغَرَّبُ فِيهَا إِنْسَانٌ». ٣٣ 33
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
النُّبُوءَةُ الَّتِي أَوْحَى بِها الرَّبُّ إِلَى إِرْمِيَا عَنْ عِيلامَ فِي مُسْتَهَلِّ حُكْمِ صِدْقِيَّا مَلِكِ يَهُوذَا: ٣٤ 34
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
هَذَا مَا يُعْلِنُهُ الرَّبُّ الْقَدِيرُ: «هَا أَنَا أُحَطِّمُ قَوْسَ عِيلامَ، عِمَادَ قُوَّتِهِمْ. ٣٥ 35
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
وَأُرْسِلُ عَلَى عِيلامَ الرِّيَاحَ الأَرْبَعَ مِنْ أَطْرَافِ السَّمَاءِ الأَرْبَعَةِ، وَأُذَرِّيهِمْ لِكُلِّ تِلْكَ الرِّيَاحِ، فَلا تَبْقَى أُمَّةٌ لَا يُسْبَى إِلَيْهَا الْعِيلامِيُّونَ. ٣٦ 36
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
وَأُفْزِعُ عِيلامَ أَمَامَ أَعْدَائِهِمْ وَأَمَامَ طَالِبِي نُفُوسِهِمْ، وَأُعَاقِبُهُمْ بِالشَّرِّ وَبِغَضَبِي اللّاهِبِ، وَأَجْعَلُ السَّيْفَ يَتَعَقَّبُهُمْ حَتَّى أُفْنِيَهُمْ. ٣٧ 37
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
وَأَنْصِبُ عَرْشِي فِي عِيلامَ، وَأَقْضِي عَلَى مَلِكِهِمْ وَعَلَى عُظَمَائِهِمْ. ٣٨ 38
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
وَلَكِنْ أَرُدُّ سَبْيَ عِيلامَ فِي الأَيَّامِ الآتِيَةِ يَقُولُ الرَّبُّ». ٣٩ 39
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

< إرْمِيا 49 >