< ՅՈՎՀԱՆՆՈԻ 7 >

1 Դրանից յետոյ Յիսուս շրջում էր Գալիլիայում, քանի որ չէր կամենում Հրէաստանում շրջել, որովհետեւ հրեայ առաջնորդները ուզում էին սպանել նրան:
ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.
2 Հրեաների Տաղաւարահարաց տօնը մօտ էր:
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
3 Եւ նրա եղբայրներն ասացին նրան. «Այստեղից անցիր գնա՛ Հրէաստան, որպէսզի քո աշակերտներն էլ տեսնեն այն գործերը, որ դու անում ես.
ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.
4 որովհետեւ չկայ մէկը, որ թաքուն գործի եւ դեռ ուզենայ իրեն համարձակ ներկայացնել. եթէ այդ գործերն անում ես, ուրեմն յայտնի՛ր քեզ աշխարհին».
ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.
5 քանի որ եղբայրներն իսկ դեռեւս չէին հաւատացել նրան:
ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.
6 Յիսուս նրանց ասաց. «Իմ ժամանակը դեռ չի հասել, բայց ձեր ժամանակը միշտ պատրաստ է:
ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7 Աշխարհը չի կարող ձեզ ատել, բայց ինձ ատում է, որովհետեւ ես վկայում եմ աշխարհի մասին, թէ մարդկանց գործերը չար են:
ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
8 Դուք գնացէ՛ք այդ տօնին, ես այդ տօնին չեմ գնում, որովհետեւ իմ ժամանակը դեռ չի լրացել»:
ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.
9 Երբ այս ասաց, ինքը մնաց այնտեղ, Գալիլիայում:
ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.
10 Երբ նրա եղբայրները գնացին, ապա ինքն էլ գնաց տօնին, բայց ոչ յայտնապէս, այլ՝ թաքուն:
ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.
11 Իսկ հրեաները նրան փնտռում էին այդ տօնի ժամանակ եւ ասում էին՝ ո՞ւր է նա:
ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
12 Եւ ժողովրդի բազմութեան մէջ նրա մասին քրթմնջիւն կար. ոմանք ասում էին՝ լաւն է, ուրիշներ ասում էին՝ չէ, ընդհակառակը, ժողովրդին մոլորեցնում է:
ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.
13 Եւ հրեայ առաջնորդների վախի պատճառով ոչ ոք նրա մասին համարձակ չէր խօսում:
ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
14 Տօնակատարութեան կէսին Յիսուս տաճար ելաւ եւ ուսուցանում էր:
ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.
15 Հրեաները զարմանում էին ու ասում. «Սա ինչպէ՞ս գիտէ Գրուածքները, քանի որ բնաւ չի սովորել»:
ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.
16 Յիսուս նրանց պատասխան տուեց ու ասաց. «Իմ ուսուցումն իմը չէ, այլ՝ նրանը, ով ինձ ուղարկեց:
ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
17 Եթէ մէկը ուզում է նրա կամքը կատարել, կ՚իմանայ այս ուսուցման մասին, թէ Աստծո՞ւց է արդեօք, թէ՞ ես ինքս ինձնից եմ խօսում:
ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.
18 Ով ինքն իրենից է խօսում, իր համար է փառք փնտռում, իսկ ով փնտռում է նրա՛ փառքը, ով իրեն ուղարկել է, նա ճշմարիտ է, եւ նրա մէջ սուտ բան չկայ:
ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.
19 Օրէնքը ձեզ Մովսէսը չտուե՞ց, բայց ձեզնից ոչ ոք Օրէնքը չի կատարում:
ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.
20 Ինչո՞ւ էք ուզում ինձ սպանել»: Ժողովուրդը պատասխան տուեց ու ասաց. «Քո մէջ դեւ կայ, ո՞վ է ուզում քեզ սպանել»:
ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.
21 Յիսուս պատասխան տուեց նրանց ու ասաց. «Մի գործ արեցի, եւ ամէնքդ զարմացել էք:
ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.
22 Մովսէսը դրա համար ձեզ տուեց թլփատութիւնը (թէեւ այդ ոչ թէ Մովսէսից էր, այլ՝ հայրերից):
ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.
23 Եւ շաբաթ օրով մարդ էք թլփատում: Իսկ արդ, եթէ մարդը շաբաթ օրով թլփատւում է, որպէսզի Մովսէսի Օրէնքը չխախտուի, իմ վրա՞յ էք բարկացած, որ շաբաթ օրով մի ամբողջ մարդ բժշկեցի:
ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
24 Աչքներիդ երեւացածի պէս մի՛ դատէք, այլ ուղի՛ղ դատաստան արէք»:
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.
25 Երուսաղէմացիներից ոմանք ասում էին. «Սա չէ՞ նա, որին ուզում էին սպանել:
ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
26 Իսկ ահաւասիկ բացայայտօրէն խօսում է, եւ դրան բան չեն ասում. գուցէ արդարեւ իշխանաւորներն էլ ճանաչեցին, թէ սա՛ է Քրիստոսը:
ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
27 Բայց մենք սրան գիտենք, թէ որտեղից է. իսկ Քրիստոս երբ որ գայ, ոչ ոք չի գիտենայ, թէ որտեղից է»:
ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.
28 Յիսուս աղաղակեց տաճարի մէջ, ուսուցանում էր եւ ասում. «Ե՛ւ ինձ գիտէք, ե՛ւ գիտէք որտեղից եմ. ինքս ինձ չեմ եկել, այլ ճշմարիտ է նա, ով ինձ ուղարկեց. նա, որին դուք չգիտէք:
ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.
29 Ես գիտեմ նրան, որովհետեւ նրանից իսկ եմ, եւ նա՛ ուղարկեց ինձ»:
ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.
30 Ուզում էին նրան բռնել, բայց ոչ ոք նրա վրայ ձեռք չդրեց, որովհետեւ նրա ժամանակը դեռ չէր հասել:
ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.
31 Սակայն բազմութեան միջից շատերը հաւատացին նրան եւ ասում էին. «Երբ Քրիստոսը գայ, միթէ աւելի՞ նշաններ պիտի անի, քան սա է անում»:
ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.
32 Եւ փարիսեցիները նրա մասին ժողովրդի մէջ եղած քրթմնջիւնները լսեցին. եւ քահանայապետներն ու փարիսեցիները սպասաւորներ ուղարկեցին, որպէսզի բռնեն նրան:
ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.
33 Յիսուս ասաց. «Մի փոքր ժամանակ էլ ձեզ հետ եմ եւ ապա գնում եմ նրա մօտ, ով ինձ ուղարկեց:
ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.
34 Ինձ կը փնտռէք եւ չէք գտնի, եւ ուր ես եմ գնում, դուք չէք կարող գալ»:
ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.
35 Հրեայ առաջնորդներն իրար ասում էին. «Իսկ դա ո՞ւր պիտի գնայ, որ մենք դրան չգտնենք. միթէ հեթանոսների մէջ ցրուած հրեաների՞ մօտ պիտի գնայ եւ հեթանոսների՞ն պիտի ուսուցանի:
ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?
36 Ի՞նչ է այն խօսքը, որ նա ասաց՝ կը փնտռէք ինձ եւ չէք գտնի, եւ ուր ես եմ գնում, դուք չէք կարող գալ»:
ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.
37 Մեծ տօնի վերջին օրը Յիսուս կանգնած էր եւ աղաղակում էր՝ ասելով. «Եթէ մէկը ծարաւ է, թող ինձ մօտ գայ եւ խմի:
ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.
38 Ով ինձ հաւատում է, - ինչպէս Գիրքն է ասում, - նրա ներսից կենդանի ջրերի գետեր պիտի բխեն»:
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.
39 Նա այս ասում էր Հոգու մասին, որին ընդունելու էին իրեն հաւատացողները. քանի որ Հոգին դեռեւս չկար, որովհետեւ Յիսուս դեռ փառաւորուած չէր:
ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.
40 Ժողովրդից ոմանք, երբ լսում էին այս խօսքերը, ասում էին՝ սա՛ է ճշմարիտ մարգարէն.
ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು.
41 ուրիշներն ասում էին՝ սա՛ է Քրիստոսը. իսկ դեռ ուրիշներ ասում էին՝ միթէ Քրիստոս Գալիլիայի՞ց է գալու.
ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ?
42 չէ՞ որ Գիրքն ասում է, թէ Քրիստոս գալու է Դաւթի սերնդից եւ Բեթղեհէմ գիւղից, որտեղից Դաւիթն էր:
‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.
43 Եւ ժողովրդի մէջ նրա պատճառով պառակտում եղաւ:
ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
44 Եւ նրանցից ոմանք ուզեցին բռնել նրան, բայց ոչ ոք նրա վրայ ձեռք չդրեց:
ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.
45 Իսկ սպասաւորները վերադարձան քահանայապետների եւ փարիսեցիների մօտ. եւ սրանք նրանց ասացին. «Ինչո՞ւ նրան այստեղ չբերեցիք»:
ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.
46 Սպասաւորները պատասխանեցին ու ասացին. «Ոչ մի մարդ երբեք այնպէս չի խօսել, ինչպէս այն մարդը»:
ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.
47 Փարիսեցիները ասացին. «Միթէ դո՞ւք էլ էք մոլորուել:
ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?
48 Միթէ իշխանաւորներից կամ փարիսեցիներից որեւէ մէկը հաւատա՞ց նրան,
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?
49 բացի այն խաժամուժ ամբոխից, որ օրէնք չգիտէ եւ նզովեալ է»:
ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು.
50 Նիկոդեմոսը, որ նախապէս գիշերով եկել էր նրա մօտ եւ նրանցից մէկն էր, նրանց ասաց.
ಯೇಸುವಿನ ಬಳಿಗೆ ಒಮ್ಮೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು. ಅವನು ಅವರಿಗೆ,
51 «Միթէ մեր օրէնքը դատապարտո՞ւմ է մարդուն, եթէ նախ նրանից լսած եւ կամ իմացած չլինի, թէ ինչ է գործել նա»:
“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.
52 Նրան պատասխանեցին ու ասացին. «Միթէ դո՞ւ էլ Գալիլիայից ես. քննի՛ր ու տե՛ս, որ Գալիլիայից մարգարէ դուրս չի գալիս»:
ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.
53 Ապա ամէն ոք իր տունը գնաց:
ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

< ՅՈՎՀԱՆՆՈԻ 7 >