< ՂՈԻԿԱՍ 13 >

1 Այդ նոյն ժամանակ ոմանք եկան եւ պատմեցին նրան այն գալիլիացիների մասին, որոնց արիւնը Պիղատոսը խառնեց իրենց զոհերի արեան հետ:
ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
2 Նա պատասխանեց նրանց եւ ասաց. «Կարծո՞ւմ էք, թէ այն գալիլիացիները, որոնք այդպիսի պատահարների ենթարկուեցին, աւելի մեղաւոր էին քան բոլոր գալիլիացիները:
ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
3 Ո՛չ, ասում եմ ձեզ, սակայն, եթէ չապաշխարէք, ամէնքդ էլ նոյնպէս պիտի կորչէք:
ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
4 Կամ նրանք՝ այն տասնութ մարդիկ, որոնց վրայ Սիլովամում աշտարակը փուլ եկաւ եւ սպանեց նրանց, կարծում էք, թէ աւելի մեղապա՞րտ էին, քան Երուսաղէմում բնակուող բոլոր մարդիկ:
ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
5 Ո՛չ, ասում եմ ձեզ, սակայն եթէ չապաշխարէք, ամէնքդ էլ նոյնպէս պիտի կորչէք»:
ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
6 Պատմեց եւ այս առակը. «Մի մարդ իր այգում մի թզենի էր տնկել. եւ երբ պտղի ժամանակը հասաւ, նա եկաւ նրա վրայ պտուղ փնտռելու ու չգտաւ:
ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
7 Այգեգործին ասաց. «Ահա երեք տարի է, որ գալիս եմ այդ թզենու վրայ պտուղ փնտռելու եւ չեմ գտնում. արդ, կտրի՛ր այդ. ինչո՞ւ է հողն զբաղեցնում»:
ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
8 Այգեգործը պատասխանեց եւ ասաց. «Տէ՛ր իմ, նրան այս տարի էլ թո՛ղ, մինչեւ որ նրա շուրջը փորեմ եւ աղբ գցեմ.
ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
9 գուցէ թէ պտուղ տայ. ապա թէ ոչ՝ մի տարուց յետոյ կը կտրես այդ»:
ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
10 Եւ մի շաբաթ օր Յիսուս մի ժողովարանում ուսուցանում էր:
೧೦ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
11 Եւ ահա այնտեղ կար մի կին, որին չար դեւը տասնութ տարի բռնած էր պահում. եւ կուչ էր եկած ու ամենեւին վեր նայել չէր կարողանում:
೧೧ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
12 Եւ Յիսուս նրան տեսնելով՝ կանչեց իր մօտ եւ ասաց. «Ո՛վ կին, բժշկուած ես քո հիւանդութիւնից»:
೧೨ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
13 Եւ ձեռքը դրեց նրա վրայ, ու նոյն ժամին հիւանդը ուղղուեց եւ Աստծուն փառք էր տալիս:
೧೩ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
14 Ժողովրդապետը բարկացաւ, թէ ինչո՛ւ Յիսուս շաբաթ օրով բուժեց. եւ ասաց ժողովրդին. «Վեց օր կայ, երբ արժան է գործել, ա՛յդ օրերին եկէք բուժուեցէք եւ ոչ թէ շաբաթ օրը»:
೧೪ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
15 Տէրը նրան պատասխանեց եւ ասաց. «Կեղծաւորնե՛ր, ձեզնից իւրաքանչիւր ոք շաբաթ օրով իր եզը կամ էշը մսուրից չի՞ արձակում եւ չի՞ տանում ջուր տալու:
೧೫ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
16 Իսկ սա Աբրահամի դուստրն էր, որին սատանան ահա տասնութ տարի է, ինչ կապել էր, - արժանի չէ՞ր միթէ շաբաթ օրով արձակել նրան կապանքներից»:
೧೬ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
17 Եւ երբ այս ասաց, ամաչեցին նրանք, որոնք հակառակում էին նրան. իսկ ամբողջ ժողովուրդը ուրախանում էր այն բոլոր փառաւոր գործերի համար, որ կատարւում էին Յիսուսի կողմից:
೧೭ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
18 Եւ ասաց. «Ինչի՞ նման է Աստծու արքայութիւնը, եւ ինչի՞ նմանեցնեմ այն:
೧೮ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
19 Նման է մանանեխի հատիկին, որ մի մարդ վերցրեց եւ նետեց իր պարտէզը: Սա աճեց եւ ծառ եղաւ, եւ երկնքի թռչունները ապրում էին նրա ճիւղերի վրայ»:
೧೯ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
20 Եւ դարձեալ ասաց. «Ինչի՞ նմանեցնեմ Աստծու արքայութիւնը.
೨೦ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21 նման է այն խմորին, որ մի կին, վերցնելով, խառնեց երեք գրիւ ալիւրի մէջ, մինչեւ որ ամբողջը խմորուեց»:
೨೧ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
22 Եւ Յիսուս շրջում էր քաղաքներով ու գիւղերով եւ ուսուցանում էր: Երբ ճանապարհ էր ընկել դէպի Երուսաղէմ,
೨೨ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
23 մէկը նրան ասաց. «Տէ՛ր, սակաւաթի՞ւ են նրանք, որ փրկուելու են»:
೨೩ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
24 Եւ նա նրանց ասաց. «Ջանացէ՛ք մտնել նեղ դռնով. ասում եմ ձեզ, որ շատերը կ՚ուզենան մտնել, բայց չեն կարողանայ:
೨೪ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
25 Այն բանից յետոյ, երբ տանտէրը մտնի եւ դուռը փակի, դուք, դրսում կանգնած, կը սկսէք դուռը բախել եւ ասել. «Տէ՛ր, տէ՛ր, բա՛ց մեզ համար». իսկ նա պատասխանելով կ՚ասի ձեզ. «Չգիտեմ, թէ որտեղից էք»:
೨೫ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26 Այն ժամանակ կը սկսէք ասել. «Մենք քո առաջ կերանք եւ խմեցինք, եւ դու հրապարակներում ուսուցանեցիր»:
೨೬ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
27 Եւ տանտէրը կ՚ասի. «Ասում եմ՝ ձեզ չգիտեմ, թէ որտեղից էք. հեռացէ՛ք ինձնից դուք՝ բոլոր անիրաւ մշակներդ»:
೨೭ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
28 Այնտեղ կը լինի լաց եւ ատամների կրճտում, երբ տեսնէք Աբրահամին, Իսահակին, Յակոբին եւ բոլոր մարգարէներին Աստծու արքայութեան մէջ, իսկ ձեզ՝ դուրս հանուած:
೨೮ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
29 Եւ կը գան մարդիկ արեւելքից եւ արեւմուտքից, հիւսիսից եւ հարաւից ու կը բազմեն Աստծու արքայութեան մէջ:
೨೯ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
30 Եւ ահա վերջիններ կան, որ առաջին կը լինեն, եւ առաջիններ՝ որ կը լինեն վերջին»:
೩೦ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
31 Նոյն օրը մի քանի փարիսեցիներ մօտեցան եւ ասացին նրան. «Վե՛ր կաց, գնա՛ այստեղից, որովհետեւ Հերովդէսն ուզում է քեզ սպանել»:
೩೧ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
32 Եւ Յիսուս նրանց ասաց. «Գնացէք ասացէ՛ք այն աղուէսին, թէ ահա դեւեր եմ հանում, բուժումներ եմ կատարում այսօր եւ վաղը, իսկ երրորդ օրը գործս կ՚աւարտեմ:
೩೨ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
33 Բայց պէտք է այսօր, վաղը եւ միւս օրը գնալ. որովհետեւ մարգարէն պէտք չէ, որ Երուսաղէմից դուրս կորստեան մատնուի»:
೩೩ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
34 «Երուսաղէ՜մ, Երուսաղէ՜մ, որ կոտորում էիր մարգարէներին եւ քարկոծում էիր քեզ մօտ ուղարկուածներին. քանի՜ քանի՜ անգամ կամեցայ հաւաքել քո որդիներին, ինչպէս հաւը իր ձագերին՝ թեւերի տակ, բայց դու չկամեցար:
೩೪ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
35 Ահա ձեր տունը ձեզ պիտի թողնուի աւերակ. բայց ասում եմ ձեզ, որ ինձ այլեւս չէք տեսնի, մինչեւ որ չասէք՝ «Օրհնեա՜լ է նա, որ գալիս է Տիրոջ անունով»:
೩೫ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.

< ՂՈԻԿԱՍ 13 >