< ՂՈԻԿԱՍ 14 >

1 Երբ մի շաբաթ օր նա մտաւ փարիսեցիների իշխանաւորներից մէկի տունը հաց ուտելու, նրանք դիտում էին նրան:
ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.
2 Եւ ահա այնտեղ, նրա առաջ ջրգողով հիւանդ մի մարդ կար:
ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು.
3 Յիսուս պատասխանեց օրէնսգէտներին ու փարիսեցիներին եւ ասաց. «Շաբաթ օրով բժշկելը օրինաւո՞ր է, թէ՞՝ ոչ»:
ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.
4 Նրանք լուռ մնացին: Յիսուս նրան բռնելով՝ բուժեց եւ արձակեց:
ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.
5 Եւ նրանց ասաց. «Ձեզնից ո՞ւմ եզը կամ էշը ընկնի ջրհորի մէջ, նա իսկոյն այն չի հանի շաբաթ օրով»:
ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.
6 Եւ այդ մասին նրան պատասխան տալ չկարողացան:
ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.
7 Հրաւիրուածներին էլ մի առակ ասաց՝ տեսնելով, թէ ինչպէս նրանք պատուոյ տեղերն էին ընտրում:
ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:
8 Նրանց ասաց. «Երբ մէկը քեզ հարսանիքի կամ հրաւէրքի կանչի, առաջին տեղը մի՛ նստիր, գուցէ քեզնից աւելի պատուական մէկը նրա կողմից կանչուած լինի:
“ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು.
9 Եւ քեզ ու նրան կանչողը գայ ու քեզ ասի՝ «Սրան տե՛ղ տուր»: Եւ ապա սկսես ամօթով վերջին տեղը գրաւել:
ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.
10 Այլ, երբ հրաւիրուես, գնա բազմի՛ր վերջին տեղը, որպէսզի, երբ քեզ կանչողը գայ եւ քեզ ասի՝ «Բարեկա՛մ, աւելի վե՛ր մօտեցիր», այն ժամանակ քո սեղանակիցների առաջ դու փառաւորուես.
ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.
11 որովհետեւ նա, ով ինքն իրեն բարձրացնում է, պիտի խոնարհուի, եւ նա, ով ինքն իրեն խոնարհեցնում է, պիտի բարձրանայ»:
ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
12 Իրեն հրաւիրողին էլ ասաց. «Երբ ճաշ կամ ընթրիք ես տալիս, մի՛ կանչիր ո՛չ քո բարեկամներին, ո՛չ քո եղբայրներին, ո՛չ քո ազգականներին եւ ո՛չ էլ քո հարուստ հարեւաններին, որպէսզի նրանք էլ փոխարէնը քեզ չհրաւիրեն, եւ քեզ հատուցում լինի:
ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.
13 Այլ, երբ ընդունելութիւն անես, կանչի՛ր աղքատներին, խեղանդամներին, կաղերին ու կոյրերին
ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.
14 եւ երանելի կը լինես, որովհետեւ փոխարէնը քեզ հատուցելու ոչինչ չունեն: Եւ դրա փոխարէն քեզ կը հատուցուի արդարների յարութեան օրը»:
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”
15 Երբ սեղանակիցներից մէկը այս լսեց, ասաց նրան. «Երանի՜ նրան, ով ճաշ կ՚ուտի Աստծու արքայութեան մէջ»:
ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.
16 Եւ Յիսուս ասաց. «Մի մարդ ընթրիք սարքեց եւ հրաւիրեց շատերին:
ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.
17 Եւ ընթրիքի ժամին իր ծառային ուղարկեց՝ կանչելու հրաւիրուածներին, թէ՝ «Եկէ՛ք, որովհետեւ ահա ամէն ինչ պատրաստ է»:
ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.
18 Եւ ամէնքը մէկ-մէկ սկսեցին հրաժարուել: Առաջինն ասաց. «Ագարակ գնեցի եւ պէտք է, որ գնամ տեսնեմ. խնդրում եմ քեզ, ինձ հրաժարուա՛ծ համարիր»:
“ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.
19 Եւ միւսն ասաց. «Հինգ լուծ եզներ գնեցի. գնում եմ դրանք փորձելու. խնդրում եմ քեզ, ինձ հրաժարուա՛ծ համարիր»:
“ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.
20 Իսկ միւսն ասաց. «Կին եմ առել, դրա համար էլ չեմ կարող գալ»:
“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.
21 Եւ ծառան եկաւ ու իր տիրոջը պատմեց այս: Այդ ժամանակ, բարկանալով, տանտէրն իր ծառային ասաց. «Իսկոյն դո՛ւրս եկ քաղաքի հրապարակներն ու փողոցները եւ աղքատներին, խեղանդամներին, կաղերին ու կոյրերին բեր մտցրո՛ւ այստեղ»:
“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.
22 Եւ ծառան ասաց. «Տէ՛ր, ինչ հրամայեցիր՝ կատարուեց եւ էլի տեղ կայ»:
“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.
23 Եւ տէրը ծառային ասաց. «Դո՛ւրս եկ ճանապարհներն ու ցանկապատների առաջ եւ մարդկանց այստեղ մտցրո՛ւ, որպէսզի տունս լցուի»:
“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.
24 Ասում եմ ձեզ, որ այդ հրաւիրուածներից ոչ ոք իմ ընթրիքից չի ճաշակի»:
ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’”
25 Եւ նրա հետ շատ ժողովուրդ էր գնում. նա դարձաւ եւ ասաց նրանց.
ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:
26 «Եթէ մէկը ինձ մօտ գայ եւ չնախընտրի ինձ իր հօրից ու մօրից, կնոջից ու որդիներից, եղբայրներից ու քոյրերից, նոյնիսկ իր անձից անգամ, չի կարող իմ աշակերտը լինել.
“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.
27 որովհետեւ, ով որ չվերցնի իր խաչը եւ իմ յետեւից չգայ, չի կարող իմ աշակերտը լինել:
ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.
28 Ձեզնից ո՞վ, եթէ կամենայ աշտարակ շինել, նախ նստելով չի հաշուի իր ծախսերը, թէ աւարտելու համար բաւական դրամ ունի՞,
“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?
29 որպէսզի, գուցէ, երբ հիմը դնի եւ չկարողանայ աւարտել, բոլոր նրանք, որ տեսնեն, չսկսեն նրան ծաղրել
ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.
30 եւ ասել, թէ՝ «Այս մարդը սկսեց կառուցել եւ չկարողացաւ աւարտել»:
31 Կամ ո՞ր թագաւորը, եթէ գնայ պատերազմելու մի այլ թագաւորի դէմ, նախ չի նստի եւ խորհի, թէ տասը հազարով կը կարողանա՞յ դիմադրել նրան, որ իր վրայ քսան հազարով է գալիս:
“ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ?
32 Ապա թէ ոչ, մինչ սա դեռ հեռու է, պատգամաւորութիւն ուղարկելով՝ խաղաղութիւն կը խնդրի:
ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?
33 Արդ, այսպէս էլ՝ ձեզնից ով որ իր ամբողջ ունեցուածքից չհրաժարուի, չի կարող իմ աշակերտը լինել»:
ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.
34 «Աղը լաւ բան է, բայց եթէ աղն էլ անհամանայ, ինչո՞վ այն պիտի համեմուի:
“ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು?
35 Ո՛չ հողի համար է պիտանի եւ ո՛չ էլ՝ պարարտանիւթի, այլ՝ դուրս թափելու: Ով որ ականջ ունի լսելու, թող լսի»:
ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”

< ՂՈԻԿԱՍ 14 >