< ՂՈԻԿԱՍ 22 >

1 Մօտեցաւ Բաղարջակերաց տօնը, որը կոչւում էր Պասեք:
ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,
2 Իսկ քահանայապետներն ու օրէնսգէտները հնար էին փնտռում, թէ ինչպէս սպանեն նրան, բայց վախենում էին ժողովրդից:
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
3 Ապա սատանան մտաւ Իսկարիովտացի կոչուած Յուդայի մէջ, որ Տասներկուսի թւում էր:
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
4 Սա գնաց բանակցեց քահանայապետների, օրէնսգէտների եւ ժողովրդի իշխանաւորների հետ, որ Յիսուսին նրանց մատնի:
ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
5 Նրանք ուրախացան եւ խոստացան նրան արծաթ տալ:
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,
6 Եւ նա յանձն առաւ ու պատեհ առիթ էր փնտռում՝ նրան մատնելու նրանց՝ ամբոխից մեկուսի:
ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
7 Եկաւ Բաղարջակերաց օրը, երբ օրէնք էր մորթել Պասեքը:
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
8 Եւ նա ուղարկեց Պետրոսին եւ Յովհաննէսին ու ասաց. «Գնացէ՛ք, պատրաստեցէ՛ք մեզ համար Պասեքի ընթրիքը, որ ուտենք»:
ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
9 Եւ նրանք ասացին. «Ո՞ւր ես ուզում, որ պատրաստենք»:
ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,
10 Եւ նրանց ասաց. «Ահա՛, երբ քաղաք մտնէք, ձեզ կը հանդիպի մի մարդ՝ ջրի սափորը բարձած. գնացէ՛ք նրա յետեւից այն տունը, ուր նա կը մտնի:
೧೦ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
11 Եւ կ՚ասէք տանտիրոջը. «Վարդապետը քեզ ասում է՝ ո՞ւր է այն հիւրասրահը, որտեղ աշակերտներիս հետ պիտի ուտեմ Պասեքի ընթրիքը»:
೧೧ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
12 Եւ նա ձեզ ցոյց կը տայ զարդարուած մի մեծ վերնատուն, եւ այնտեղ կը պատրաստէք»:
೧೨ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
13 Եւ աշակերտները գնացին գտան, ինչպէս որ իրենց ասել էր. եւ պատրաստեցին Պասեքը:
೧೩ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
14 Եւ երբ ժամը հասաւ, սեղան նստեց, եւ տասներկու առաքեալներն էլ՝ իր հետ:
೧೪ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
15 Եւ նրանց ասաց. «Յոյժ ցանկացայ այս Պասեքի ընթրիքը ուտել ձեզ հետ, քանի դեռ չեմ չարչարուել:
೧೫ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
16 Բայց ասում եմ ձեզ, թէ այլեւս չեմ ուտելու սրանից, մինչեւ որ Պասեքը կատարուի Աստծու արքայութեան մէջ»:
೧೬ಇನ್ನು ದೇವರ ರಾಜ್ಯದಲ್ಲಿಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
17 Եւ, բաժակը վերցնելով, գոհութիւն յայտնեց Աստծուն եւ ասաց. «Առէ՛ք այս եւ բաժանեցէ՛ք ձեր մէջ.
೧೭ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
18 ասում եմ ձեզ, թէ այսուհետեւ որթատունկի բերքից չեմ խմելու, մինչեւ որ գայ Աստծու արքայութիւնը»:
೧೮ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
19 Եւ հաց վերցնելով՝ գոհութիւն յայտնեց Աստծուն, կտրեց, տուեց նրանց եւ ասաց. «Այս է իմ մարմինը, որ շատերի համար է տրուած. այս արէ՛ք իմ յիշատակի համար»:
೧೯ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
20 Նոյնպէս եւ բաժակը վերցրեց ընթրիքից յետոյ եւ ասաց. «Այս բաժակը նոր Ուխտ է իմ արիւնով՝ ձեզ համար թափուած:
೨೦ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
21 Բայց ահաւասիկ իմ մատնիչի ձեռքը ինձ հետ այս սեղանի վրայ է:
೨೧“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
22 Եւ մարդու Որդին աշխարհից կը գնայ ըստ սահմանուածի, բայց վա՜յ այն մարդուն, ում ձեռքով կը մատնուի»:
೨೨ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.
23 Եւ նրանք սկսեցին հարցնել իրար մէջ, թէ իրենցից ո՛վ է, որ այդ անելու է:
೨೩ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
24 Եւ նրանց մէջ հակաճառութիւն առաջացաւ, թէ իրենցից ո՛վ պիտի մեծ համարուի:
೨೪ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
25 Եւ նա նրանց ասաց. «Ազգերի թագաւորները տիրում են իրենց ժողովուրդների վրայ, եւ նրանք, որ իշխում են նրանց վրայ, բարերարներ են կոչւում:
೨೫ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
26 Բայց դուք այդպէս չլինէք, այլ՝ ով որ մեծ է ձեր մէջ, թող լինի ինչպէս կրտսերը, իսկ առաջնորդը՝ ինչպէս սպասաւորը:
೨೬ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
27 Ո՞վ է մեծ. սեղան նստո՞ղը, թէ՞ սպասաւորը: Չէ՞ որ՝ սեղան նստողը: Բայց ես ձեր մէջ եմ իբրեւ սպասաւոր»:
೨೭ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
28 «Եւ դուք էք, որ իմ փորձութիւնների մէջ ինձ հետ էիք մնում մինչեւ այժմ:
೨೮ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
29 Եւ ես խոստանում եմ ձեզ, - ինչպէս եւ իմ Հայրը ինձ խոստացաւ տալու արքայութիւնը, -
೨೯ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;
30 որ ուտէք եւ խմէք իմ սեղանից իմ արքայութեան մէջ եւ նստէք տասներկու գահերի վրայ՝ դատելու Իսրայէլի տասներկու ցեղերը»:
೩೦ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
31 Եւ Տէրն ասաց. «Սիմո՛ն, Սիմո՛ն, ահա սատանան ուզեց ձեզ ցորենի նման մաղել:
೩೧“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
32 Բայց ես աղօթեցի քեզ համար, որպէսզի քո հաւատը չպակասի, եւ դու, երբ վերադառնաս ինձ, հաստատես քո եղբայրներին»:
೩೨ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
33 Եւ Պետրոսն ասաց. «Տէ՛ր, պատրաստ եմ քեզ հետ գնալ ե՛ւ բանտ, ե՛ւ դէպի մահ»:
೩೩ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,
34 Եւ նա նրան ասաց. «Ասում եմ քեզ, Պետրո՛ս, այսօր դեռ աքաղաղը կանչած չպիտի լինի, մինչեւ որ դու երեք անգամ ուրանաս՝ ասելով, թէ ինձ չես ճանաչում»:
೩೪ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
35 Եւ նրանց ասաց. «Երբ ուղարկեցի ձեզ առանց քսակի, մախաղի եւ կօշիկների, մի՞թէ որեւէ բանի կարօտ մնացիք»:
೩೫ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
36 Եւ նրանք ասացին՝ եւ ո՛չ մի բանի: Ապա ասաց. «Իսկ այժմ՝ ով որ քսակ ունի, թող վերցնի այն, նոյնպէս եւ՝ մախաղ. իսկ ով որ չունի, թող վաճառի իր վերարկուն եւ իր համար սուր գնի:
೩೬ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
37 Բայց ասում եմ ձեզ, այս եւս, որ գրուած է, պէտք է, որ կատարուի իմ վրայ, թէ՝ «Անօրէնների հետ դասուեց». որովհետեւ, ինչ որ ինձ համար է գրուած, կատարուելու վրայ է»:
೩೭ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
38 Եւ նրանք ասացին. «Տէ՛ր, ահաւասիկ այստեղ երկու սուր կայ»: Եւ նրանց ասաց. «Բաւական են»:
೩೮ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.
39 Եւ Յիսուս ըստ իր սովորութեան ելաւ գնաց Ձիթենեաց լեռը. նրա յետեւից գնացին եւ աշակերտները:
೩೯ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
40 Երբ տեղ հասաւ, ասաց նրանց. «Աղօթքի՛ կանգնեցէք, որ փորձութեան մէջ չընկնէք»:
೪೦ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
41 Եւ ինքը հեռացաւ նրանցից մօտ մի քարընկեց, ծնրադրեց, աղօթում էր եւ ասում.
೪೧ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
42 «Հա՛յր, եթէ կամենում ես, այս բաժակը ինձնից հեռացրո՛ւ, բայց ոչ թէ իմ կամքը, այլ քո՛նը թող լինի»:
೪೨“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
43 Եւ նրան երկնքից երեւաց մի հրեշտակ եւ ուժ էր տալիս նրան. նա տագնապի մէջ էր եւ ամբողջ հոգով էր աղօթում:
೪೩ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
44 « Եւ նրանից քրտինքը հոսում էր արեան կաթիլների նման՝ շիթ-շիթ գետին թափուելով:
೪೪ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
45 Եւ վեր կենալով աղօթքից՝ եկաւ աշակերտների մօտ, նրանց քնած գտաւ տրտմութիւնից
೪೫ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
46 եւ նրանց ասաց. «Ինչո՞ւ էք քնել. վե՛ր կացէք, աղօթեցէ՛ք, որպէսզի փորձութեան մէջ չընկնէք»:
೪೬ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
47 Եւ մինչ նա դեռ խօսում էր, ահա երեւաց մի ամբոխ. եւ նա, որ Յուդա էր կոչւում, Տասներկուսից մէկը, առաջնորդում էր նրանց. երբ Յուդան մօտեցաւ Յիսուսին, համբուրեց նրան, որովհետեւ այն նշանն էր տուել նրանց, թէ՝ «Ում հետ ես համբուրուեմ, նա՛ է, նրա՛ն բռնեցէք»:
೪೭ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
48 Յիսուս նրան ասաց. «Յուդա՛, համբուրելո՞վ ես մատնում մարդու Որդուն»:
೪೮ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
49 Երբ նրա շուրջը գտնուողները տեսան եղածը, նրան ասացին. «Տէ՛ր, սրով նրանց հարուածե՞նք»:
೪೯ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
50 Եւ աշակերտներից մէկը հարուածեց քահանայապետի ծառային եւ կտրեց դէն գցեց նրա աջ ականջը:
೫೦ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.
51 Յիսուս պատասխանեց եւ ասաց. «Թո՛յլ տուէք, բաւ է եղածը»: Եւ դիպչելով ականջին՝ այն բժշկեց:
೫೧ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
52 Եւ իր վրայ եկած քահանայապետներին, տաճարի իշխանաւորներին եւ ծերերին ասաց. «Ինչպէս աւազակի՞ վրայ էք գալիս սրերով ու մահակներով.
೫೨ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
53 միշտ ձեզ հետ էի տաճարում, եւ դուք ինձ վրայ ձեռք չերկարեցիք. սակայն ա՛յս է ձեր ժամը եւ խաւարի իշխանութեան զօրութիւնը»:
೫೩ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.
54 Եւ բռնելով նրան՝ տարան եւ մտցրին քահանայապետի տունը. իսկ Պետրոսը հեռուից գնում էր նրա յետեւից:
೫೪ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
55 Երբ գաւթի մէջ կրակ վառեցին եւ նստեցին շուրջը, Պետրոսն էլ նստեց նրանց մէջ:
೫೫ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
56 Մի աղախին տեսաւ նրան կրակի լոյսի մօտ նստած, հայեացքը սեւեռեց նրան եւ ասաց. «Սա էլ էր նրանցից, որ նրա հետ էին»
೫೬ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
57 Իսկ Պետրոսն ուրացաւ ու ասաց. «Ես նրան չեմ ճանաչում, ո՛վ կին»:
೫೭ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.
58 Եւ քիչ յետոյ մէկ ուրիշը տեսաւ նրան եւ ասաց. «Դո՛ւ էլ նրանցից ես»: Պետրոսն ասաց. «Ո՛վ մարդ, ես նրանցից չեմ»:
೫೮ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
59 Եւ երբ մի ժամ էլ անցաւ, մէկ ուրիշը վիճում էր եւ ասում. «Ճիշտ որ սա էլ նրա հետ էր, որովհետեւ գալիլիացի է»:
೫೯ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.
60 Պետրոսն ասաց. «Ո՛վ մարդ, չգիտեմ այդ ի՛նչ ես խօսում»: Եւ նոյն պահին, մինչ նա այս ասում էր, աքաղաղը կանչեց:
೬೦ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
61 Տէրը դարձաւ եւ նայեց Պետրոսին. եւ Պետրոսը յիշեց Տիրոջ խօսքը, որ ասել էր իրեն. «Դեռ աքաղաղը չկանչած՝ երեք անգամ պիտի ուրանաս, թէ ինձ չես ճանաչում»:
೬೧ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
62 Եւ Պետրոսը դուրս ելնելով՝ դառնօրէն լաց եղաւ:
೬೨ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.
63 Եւ այն մարդիկ, որ նրան պահպանում էին, ծիծաղում էին նրա վրայ եւ խփում,
೬೩ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
64 ծածկում էին նրա երեսը եւ տանջում, հարցնում էին նրան եւ ասում. «Մարգարէացի՛ր՝ ո՞վ է, որ քեզ խփեց»:
೬೪
65 Եւ հայհոյելով՝ ուրիշ շատ բաներ էլ էին ասում նրա երեսին:
೬೫ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.
66 Եւ երբ լոյսը բացուեց, հաւաքուեց ժողովրդի ծերակոյտը՝ քահանայապետներ եւ օրէնսգէտներ, եւ Յիսուսին քաշեցին բերին իրենց ատեանի առաջ եւ ասացին. «Եթէ դու ես Քրիստոսը, ասա՛ մեզ»:
೬೬ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
67 Նրանց ասաց. «Եթէ ձեզ ասեմ իսկ, չէք հաւատայ:
೬೭“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
68 Եւ եթէ ես ձեզ հարցնեմ, ինձ պատասխան չէք տայ կամ չէք արձակի ինձ:
೬೮ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.
69 Բայց սրանից յետոյ մարդու Որդին պիտի նստի Աստծու զօրութեան աջին»:
೬೯ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
70 Եւ ամէնքը միասին ասացին. «Ուրեմն դու Աստծու Որդի՞ն ես»: Եւ նա նրանց ասաց. «Դուք ասում էք, թէ ես եմ»:
೭೦ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
71 Եւ նրանք ասացին. «Էլ ի՞նչ վկայութիւն է պէտք մեզ, որովհետեւ մենք ինքներս լսեցինք նրա բերանից»:
೭೧ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.

< ՂՈԻԿԱՍ 22 >