< ՂՈԻԿԱՍ 6 >

1 Առաջին ամսուայ երկրորդ շաբաթ օրը, երբ նա անցնում էր արտերի միջով, նրա աշակերտները հասկ էին պոկում, շփում իրենց ափի մէջ եւ ուտում:
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
2 Եւ փարիսեցիներից ոմանք ասացին նրանց. «Ինչո՞ւ էք անում այն, ինչ օրինաւոր չէ անել շաբաթ օրով»:
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
3 Յիսուս նրանց պատասխանեց եւ ասաց. «Դուք չէ՞ք կարդացել, թէ ինչ արեց Դաւիթը, երբ քաղց զգաց ինքը եւ նրանք, որ նրա հետ էին.
ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 թէ ինչպէս նա մտաւ Աստծու տունը, կերաւ առաջաւորութեան հացը եւ տուեց նրանց, որ իր հետ էին. մինչդեռ, բացի քահանայապետներից, ոչ ոքի չէր թոյլատրուած ուտել այն»:
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
5 Եւ Յիսուս նրանց ասաց. «Մարդու Որդին նաեւ շաբա՛թ օրուայ տէրն է»:
“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
6 Եւ մի ուրիշ շաբաթ օր նա մտաւ ժողովարան եւ ուսուցանում էր. եւ այնտեղ կար մի մարդ, որի աջ ձեռքը չորացած էր:
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7 Օրէնսգէտներն ու փարիսեցիները հետեւում էին՝ տեսնելու, թէ արդեօք շաբաթ օրը կը բժշկի՞. որպէսզի նրան ամբաստանելու համար բան գտնեն:
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8 Եւ նա գիտէր նրանց մտածումները: Չորացած ձեռքով մարդուն ասաց. «Վե՛ր կաց, մէջտե՛ղ արի»: Նա վեր կացաւ կանգնեց:
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
9 Յիսուս նրանց ասաց. «Ես ձեզ մի բան հարցնեմ. շաբաթ օրը ի՞նչ բան է օրինաւոր անել՝ բարի՞ գործ անել, թէ՞՝ չար գործ, մի հոգի՞ փրկել, թէ՞ կորստեան մատնել»:
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
10 Եւ իր շուրջը բոլորի վրայ զայրագին նայելով՝ ասաց նրան. «Ձեռքդ երկարի՛ր». եւ նա երկարեց, եւ նրա չորացած ձեռքը առողջացաւ միւսի նման:
೧೦ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
11 Նրանք լցուեցին կատաղութեամբ եւ միմեանց հետ խօսում էին, թէ ի՛նչ անեն Յիսուսին:
೧೧ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
12 Եւ այդ օրերին Յիսուս լեռ բարձրացաւ աղօթելու եւ ամբողջ գիշերն անցկացրեց Աստծուն աղօթելով:
೧೨ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
13 Եւ երբ լոյսը բացուեց, կանչեց իր աշակերտներին եւ ընտրեց նրանցից տասներկուսին, որոնց եւ առաքեալներ անուանեց.
೧೩ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 Սիմոնին, որին էլ Պետրոս կոչեց, եւ Անդրէասին՝ նրա եղբօրը, Յակոբոսին, Յովհաննէսին,
೧೪ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 Փիլիպպոսին, Բարթողոմէոսին, Մատթէոսին, Թովմասին, Ալփէոսի որդի Յակոբոսին, Սիմոնին՝ Նախանձայոյզ կոչուածին,
೧೫ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16 Յակոբի որդի Յուդային եւ Իսկարիովտացի Յուդային, որը եւ մատնիչ եղաւ:
೧೬ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
17 Եւ նրանց հետ միասին իջաւ մի տափարակ տեղ, ուր նրա աշակերտների խումբը եւ ամբողջ Հրէաստանից ու Երուսաղէմից եւ այն կողմերից եւ Տիւրոսի ու Սիդոնի ծովեզրից
೧೭ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
18 շատ մեծ բազմութիւն եկել էր լսելու նրան եւ բժշկուելու իրենց հիւանդութիւններից: Եւ պիղծ ոգիներից տառապողները բժշկւում էին:
೧೮ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
19 Եւ ամբողջ ժողովուրդն ուզում էր նրան դիպչել, որովհետեւ նրանից մեծ զօրութիւն էր դուրս գալիս եւ բժշկում բոլորին:
೧೯ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
20 Եւ Յիսուս աչքերը բարձրացրեց իր աշակերտների վրայ ու ասաց. Երանի՜ հոգով աղքատներիդ, որովհետեւ Աստծու արքայութիւնը ձերն է:
೨೦ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
21 Երանի՜ նրանց, որ քաղցած են այժմ, որովհետեւ պիտի յագենան: Երանի՜ նրանց, որ այժմ լալիս են, որովհետեւ պիտի ծիծաղեն:
೨೧ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22 Երանի՜ է ձեզ, երբ որ մարդիկ ձեզ ատեն եւ երբ որ ձեզ մերժեն եւ նախատեն ու մարդու Որդու պատճառով ձեր մասին չար անուն հանեն:
೨೨“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23 Ուրախացէ՛ք այդ օրը եւ ցնծացէ՛ք, որովհետեւ ձեր վարձը մեծ է երկնքում. նրանց հայրերը նոյն ձեւով էին վարւում մարգարէների հանդէպ:
೨೩ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24 Բայց վա՜յ ձեզ՝ հարուստներիդ, որովհետեւ դուք ձեր մխիթարութիւնը ստացել էք:
೨೪“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
25 Վա՜յ ձեզ, որ այժմ յագեցած էք, որովհետեւ քաղցած պիտի մնաք: Վա՜յ ձեզ, որ այժմ ծիծաղում էք, որովհետեւ պիտի սգաք ու պիտի լաք:
೨೫ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26 Վա՜յ ձեզ, երբ որ բոլոր մարդիկ լաւ խօսեն ձեր մասին, որովհետեւ նրանց հայրերը սուտ մարգարէներին այդպէս էին անում:
೨೬“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
27 «Բայց ասում եմ ձեզ, դո՛ւք, որ լսում էք ինձ. սիրեցէ՛ք ձեր թշնամիներին, ձեզ ատողներին բարութի՛ւն արէք.
೨೭“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28 օրհնեցէ՛ք ձեզ անիծողներին, ձեզ նեղողների համար աղօթեցէ՛ք:
೨೮ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29 Ով խփում է քո ծնօտին, նրան մի՛ւսն էլ մօտեցրու. եւ ով որ քեզնից քո բաճկոնը բռնի է վերցնում, նրան մի՛ արգելիր, որ վերցնի շապիկդ էլ:
೨೯ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
30 Ամէն մարդու, որ քեզնից ուզում է, տո՛ւր, եւ ինչ որ մէկը քեզնից վերցնի, ետ մի՛ պահանջիր:
೩೦ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31 Եւ ինչպէս կամենում էք, որ անեն ձեզ մարդիկ, այնպէս արէ՛ք եւ դուք նրանց:
೩೧ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32 Եւ եթէ դուք ձեզ սիրողներին սիրէք, ո՞րն է ձեր արած շնորհը, որովհետեւ մեղաւորներն էլ են սիրում իրենց սիրողներին:
೩೨“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33 Եւ եթէ ձեր բարերարներին բարութիւն անէք, ո՞րն է ձեր արած շնորհը, որովհետեւ մեղաւորներն էլ նոյնն են անում:
೩೩ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34 Եւ եթէ փոխ էք տալիս նրանց, որոնցից յետ առնելու ակնկալութիւն ունէք, ո՞րն է ձեր արած շնորհը, որովհետեւ մեղաւորներն էլ են փոխ տալիս մեղաւորներին, որպէսզի նոյն չափով յետ առնեն:
೩೪ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35 Բայց դուք սիրեցէ՛ք ձեր թշնամիներին եւ բարութի՛ւն արէք ձեզ ատողներին ու փո՛խ տուէք նրան, ումից յետ առնելու ակնկալութիւն չունէք: Եւ ձեր վարձը շատ կը լինի, եւ դուք Բարձրեալի որդիները կը լինէք, որովհետեւ նա բարեհաճ է չարերի եւ ապերախտների հանդէպ:
೩೫ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36 Գթասի՛րտ եղէք, ինչպէս որ ձեր Հայրը գթասիրտ է»:
೩೬ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37 «Մի՛ դատէք, որ Աստծուց չդատուէք, մի՛ դատապարտէք, եւ չպիտի դատապարտուէք, ներեցէ՛ք, եւ ներում պիտի գտնէք Աստծուց,
೩೭“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38 տուէ՛ք, եւ պիտի տրուի ձեզ. ձեր գոգը պիտի լցնեն առա՛տ չափով՝ թաթաղուն, շարժուն, զեղուն. այն չափով, որով չափում էք, նո՛ւյն չափով պիտի չափուի ձեզ համար»:
೩೮ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39 Նրանց մի առակ էլ ասաց. «Միթէ կարո՞ղ է կոյրը կոյրին առաջնորդել. չէ՞ որ երկուսն էլ փոսը կ՚ընկնեն:
೩೯ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40 Աշակերտը մեծ չէ, քան իր վարդապետը. ամէն կատարեալ աշակերտ իր վարդապետի պէս կը լինի:
೪೦ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41 Ինչո՞ւ քո եղբօր աչքի միջի շիւղը տեսնում ես, իսկ քո աչքի միջի գերանը չես նշմարում:
೪೧“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
42 Եւ կամ՝ ինչպէ՞ս կարող ես եղբօրդ ասել՝ եղբա՛յր, թող որ քո աչքից այդ շիւղը հանեմ, իսկ դու քո աչքի միջի գերանը չես տեսնում: Կեղծաւո՛ր, նախ քո աչքից գերանը հանի՛ր եւ ապա լաւ կը տեսնես՝ քո եղբօր աչքից շիւղը հանելու համար»:
೪೨ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
43 «Որովհետեւ չկայ բարի ծառ, որ չար պտուղ տայ. եւ դարձեալ՝ չկայ չար ծառ, որ բարի պտուղ տայ.
೪೩ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 որովհետեւ իւրաքանչիւր ծառ իր պտղից է ճանաչւում: Փշերից թուզ չեն քաղում եւ ոչ էլ մորենուց՝ խաղող:
೪೪ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
45 Բարի մարդը իր սրտի բարի գանձերից բարին է բխեցնում, իսկ չար մարդը՝ չարն է բխեցնում. որովհետեւ սրտի աւելցուկից է, որ խօսում է նրա բերանը»:
೪೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
46 «Ինչո՞ւ ինձ «Տէ՛ր, Տէ՛ր» էք կոչում, իսկ ինչ ասում եմ՝ չէք անում:
೪೬“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
47 Ամէն մարդ, որ ինձ է գալիս եւ լսում է իմ խօսքերն ու կատարում դրանք, ձեզ ցոյց տամ, թէ ում է նման:
೪೭ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
48 Նման է տուն շինող այն մարդուն, որ հողը փորեց ու խորացրեց եւ հիմքը դրեց ժայռի վրայ. եւ երբ հեղեղ բարձրացաւ, գետը զարկեց տանը եւ չկարողացաւ շարժել այն, որովհետեւ նրա հիմքը ժայռի վրայ էր հաստատուած:
೪೮ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49 Իսկ ով իմ խօսքերը լսում է եւ չի կատարում, նման է այն մարդուն, որ հողի վրայ առանց հիմքի տուն է շինում. գետը զարկեց, եւ այն իսկոյն փուլ եկաւ, եւ այդ տան կործանումը մեծ եղաւ»:
೪೯ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

< ՂՈԻԿԱՍ 6 >