< ՄԱՐԿՈՍ 1 >

1 Յիսուս Քրիստոսի՝ Աստծու Որդու Աւետարանի սկիզբը:
ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
2 Ինչպէս որ գրուած է մարգարէների գրքերում. «Ահաւասիկ ես ուղարկում եմ իմ պատգամաւորին քո առաջից, որ կը պատրաստի քո ճանապարհը քո առաջ»:
ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 Անապատում կանչողի ձայնն է. «Պատրաստեցէ՛ք Տիրոջ ճանապարհը եւ հարթեցէ՛ք նրա շաւիղները»:
“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
4 Յովհաննէսը մկրտում էր անապատում եւ քարոզում ապաշխարութեան մկրտութիւն՝ մեղքերի թողութեան համար:
ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
5 Ամբողջ Հրէաստանը եւ բոլոր երուսաղէմացիները գնում էին նրա մօտ եւ մկրտւում նրանից Յորդանան գետում՝ խոստովանելով իրենց մեղքերը:
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
6 Եւ Յովհաննէսը հագել էր ուղտի մազից զգեստ եւ մէջքին՝ կաշուէ գօտի. եւ նրա կերակուրն էր մորեխ եւ վայրի մեղր:
ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
7 Նա քարոզում էր եւ ասում. «Իմ յետեւից կը գայ ինձնից աւելի հզօրը, որի առաջ արժանի չեմ խոնարհուելու՝ նրա կօշիկների կապերն արձակելու համար:
ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
8 Ես ձեզ մկրտեցի ջրով, իսկ նա ձեզ կը մկրտի Սուրբ Հոգով»:
ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
9 Այն օրերին Յիսուս եկաւ Գալիլիայի Նազարէթ քաղաքից եւ Յովհաննէսից մկրտուեց Յորդանանում:
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
10 Եւ նոյն ժամին, երբ ջրից դուրս էր գալիս, տեսաւ երկինքը՝ պատռուած, եւ Աստծու Հոգին, որպէս աղաւնի, որ իջնում էր իր վրայ:
೧೦ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
11 Երկնքից մի ձայն եկաւ, որն ասում էր. «Դո՛ւ ես իմ սիրելի Որդին, որ ունես իմ ամբողջ բարեհաճութիւնը»:
೧೧ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
12 Եւ անմիջապէս Հոգին նրան հանեց տարաւ դէպի անապատ:
೧೨ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
13 Եւ նա այնտեղ էր քառասուն օր՝ փորձուելով սատանայից: Եւ նա գազանների հետ էր, իսկ հրեշտակները ծառայում էին նրան:
೧೩ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
14 Յովհաննէսի բանտարկուելուց յետոյ Յիսուս Գալիլիա եկաւ. քարոզում էր Աստծու Աւետարանը եւ ասում.
೧೪ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
15 «Ժամանակը հասել է, եւ մօտեցել է Աստծու արքայութիւնը. ապաշխարեցէ՛ք եւ հաւատացէ՛ք Աւետարանին»:
೧೫“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
16 Երբ նա անցնում էր Գալիլիայի ծովեզրով, տեսաւ Սիմոնին եւ նրա եղբայր Անդրէասին, որոնք ուռկանները ծովն էին գցել, որովհետեւ ձկնորսներ էին:
೧೬ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
17 Եւ Յիսուս նրանց ասաց. «Իմ յետեւի՛ց եկէք, եւ ես ձեզ կը դարձնեմ մարդկանց որսորդներ»:
೧೭ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
18 Եւ իսկոյն ուռկանները թողնելով՝ գնացին նրա հետ:
೧೮ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
19 Այստեղից մի քիչ առաջ գնալով՝ տեսաւ Զեբեդէոսի որդի Յակոբոսին եւ նրա եղբայր Յովհաննէսին. սրանց էլ տեսաւ իրենց նաւակի մէջ, մինչ ուռկաններն էին կարգի բերում:
೧೯ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 Եւ կանչեց նրանց. եւ նրանք իսկոյն նաւակի մէջ թողնելով իրենց հօրը՝ Զեբեդէոսին, վարձկան ձկնորսների հետ միասին, գնացին նրա յետեւից:
೨೦ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
21 Եւ մտան Կափառնայում: Եւ Յիսուս նոյն շաբաթ օրն իսկ ժողովարան մտնելով՝ ուսուցանում էր նրանց:
೨೧ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
22 Եւ նրանք զարմանում էին նրա քարոզութեան վրայ, որովհետեւ նրանց ուսուցանում էր իշխանութեամբ եւ ոչ՝ ինչպէս օրէնսգէտները:
೨೨ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
23 Արդ, նրանց ժողովարանում մի մարդ կար՝ պիղծ ոգուց բռնուած, որն աղաղակեց եւ ասաց.
೨೩ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
24 «Թո՛յլ տուր, ի՞նչ ես ուզում մեզնից, Յիսո՛ւս Նազովրեցի. մեզ կորստեան մատնելո՞ւ եկար. գիտենք քեզ, թէ ով ես դու, Աստծու Սուրբն ես»:
೨೪ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
25 Յիսուս սաստեց նրան ու ասաց. «Ձայնդ կտրի՛ր եւ դո՛ւրս ել դրանից»:
೨೫ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
26 Եւ պիղծ ոգին սաստիկ ցնցեց դիւահարին եւ բարձրաձայն աղաղակելով՝ դուրս ելաւ նրանից:
೨೬ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
27 Եւ ամէնքը զարմացան, այնպէս որ հարցնում էին իրար եւ ասում. «Այս ի՞նչ նոր վարդապետութիւն է, որ իշխանութեամբ պիղծ ոգիներին էլ է սաստում, եւ նրանք հնազանդւում են նրան»:
೨೭ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
28 Եւ նրա համբաւը տարածուեց Գալիլիայի բոլոր կողմերում:
೨೮ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
29 Եւ ժողովարանից դուրս ելնելով, անմիջապէս եկաւ Սիմոնի եւ Անդրէասի տունը՝ Յակոբոսի եւ Յովհաննէսի հետ:
೨೯ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
30 Սիմոնի զոքանչը տաքութեան մէջ պառկած էր. իսկոյն ասացին նրա մասին Յիսուսին:
೩೦ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31 Եւ նա մօտենալով՝ նրա ձեռքը բռնեց եւ նրան ոտքի կանգնեցրեց. եւ տենդը նրան թողեց. եւ նա ծառայում էր նրանց:
೩೧ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
32 Երբ երեկոյ եղաւ, արեւի մայր մտնելու ժամանակ, նրա մօտ էին բերում բոլոր հիւանդներին եւ դիւահարներին:
೩೨ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33 Եւ ամբողջ քաղաքը հաւաքուել էր դռների առաջ:
೩೩ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
34 Եւ նա տեսակ-տեսակ հիւանդութիւններից բազում հիւանդներ բժշկեց եւ բազում դեւեր հանեց. եւ թոյլ չէր տալիս դեւերին խօսել, որովհետեւ գիտէին նրան, որ Քրիստոսն է:
೩೪ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
35 Եւ առաւօտեան մօտ, լոյսը բացուելուց առաջ, վեր կացաւ եւ ելաւ գնաց ամայի մի տեղ ու այնտեղ աղօթում էր:
೩೫ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
36 Նրա յետեւից նրան փնտռելու գնաց Սիմոնը եւ նրանք, որ նրա հետ էին:
೩೬ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
37 Եւ երբ գտան նրան, ասացին. «Ամէնքը փնտռում են քեզ»:
೩೭ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
38 Եւ նրանց ասաց. «Եկէ՛ք գնանք այլ մօտակայ գիւղաքաղաքներ եւս, որպէսզի այնտեղ էլ քարոզեմ, որովհետեւ հէնց դրա համար եմ եկել»:
೩೮ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
39 Եւ ամբողջ Գալիլիայում նրանց ժողովարաններում քարոզում եւ դեւեր էր հանում:
೩೯ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
40 Նրա մօտ եկաւ մի բորոտ. նա ծնկի եկած աղաչում էր եւ ասում. «Տէ՛ր, եթէ կամենաս, կարո՛ղ ես ինձ մաքրել»:
೪೦ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
41 Իսկ Յիսուս գթալով՝ ձեռքը երկարեց, դիպաւ նրան եւ ասաց. «Կամենում եմ, մաքրուի՛ր»:
೪೧ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
42 Եւ երբ նրան այս ասաց, բորոտութիւնը նրանից իսկոյն գնաց, եւ նա մաքրուեց:
೪೨ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
43 Եւ Յիսուս իսկոյն դուրս հանեց նրան եւ խստիւ պատուիրեց.
೪೩ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
44 «Զգո՛յշ եղիր, ոչ ոքի բան չասես, այլ գնա՛, քեզ քահանային ցո՛յց տուր եւ մաքրուելուդ համար ընծայ տուր այն, ինչ հրամայել էր Մովսէսը՝ նրանց համար իբրեւ վկայութիւն»:
೪೪ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
45 Բայց նա դուրս գնալով՝ սկսեց եռանդուն կերպով քարոզել եւ լուրը տարածել այն աստիճան, որ Յիսուս չէր կարողանում այլեւս յայտնապէս քաղաք մտնել, այլ դուրսը, ամայի տեղերում էր մնում. եւ բոլոր կողմերից ժողովուրդը նրա մօտ էր գալիս:
೪೫ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

< ՄԱՐԿՈՍ 1 >