< ՄԱՐԿՈՍ 11 >

1 Երբ մօտեցան Երուսաղէմին, Բեթփագէին եւ Բեթանիային, Ձիթենեաց լերան մօտ, նա ուղարկեց աշակերտներից երկուսին եւ նրանց ասաց.
ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,
2 «Դուք գնացէ՛ք այդ գիւղը, որ ձեր դիմացն է. եւ հէնց որ այնտեղ մտնէք, կը գտնէք մի կապուած աւանակ, որի վրայ ոչ մի մարդ արարած չի նստել. արձակեցէ՛ք այն եւ բերէ՛ք:
“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.
3 Եւ եթէ մէկը ձեզ ասի. «Այդ աւանակը ինչո՞ւ էք արձակում», կ՚ասէք. «Տիրոջը պէտք է». եւ նա իսկոյն դրան այստեղ կ՚ուղարկի»:
ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’” ಎಂದು ಹೇಳಿರಿ ಎಂದರು.
4 Գնացին եւ գտան աւանակը՝ կապուած դռան մօտ, դրսում, փողոցի մէջ, եւ այն արձակեցին:
ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ,
5 Եւ այնտեղ կանգնածներից ոմանք ասացին նրանց. «Ի՞նչ էք անում, ինչո՞ւ էք այդ աւանակն արձակում»:
ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು.
6 Եւ նրանք նրանց ասացին, ինչպէս Յիսուս ասել էր. ու նրանց թոյլ տուին:
ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು.
7 Աւանակը բերեցին Յիսուսի մօտ. եւ դրա վրայ զգեստներ գցեցին, եւ Յիսուս նստեց դրա վրայ:
ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು.
8 Եւ շատեր իրենց զգեստները փռում էին ճանապարհին. եւ ուրիշներ ծառերից ճիւղեր էին կտրում ու գցում ճանապարհի վրայ:
ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
9 Եւ նրանք, որ առաջից ու յետեւից էին գնում, աղաղակում էին եւ ասում. «Ովսաննա՜ Բարձրեալին, օրհնեա՜լ լինի նա, որ գալիս է Տիրոջ անունով.
ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”
10 օրհնեա՜լ լինի մեր հօր՝ Դաւթի թագաւորութիւնը, որ գալիս է: Խաղաղութի՜ւն՝ երկնքում եւ փա՜ռք՝ բարձունքներում»:
“ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.
11 Եւ Յիսուս մտաւ Երուսաղէմ, գնաց տաճար ու նայեց իր շուրջը, ամէն ինչի վրայ. եւ որովհետեւ երեկոյի ժամ էր, բարձրացաւ Բեթանիա՝ Տասներկուսի հետ միասին:
ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು.
12 Յաջորդ օրը, մինչ Բեթանիայից դուրս էին գալիս, Յիսուս քաղցած էր:
ಮರುದಿನ ಅವರು ಬೇಥಾನ್ಯದಿಂದ ಬರುತ್ತಿರುವಾಗ ಯೇಸುವಿಗೆ ಹಸಿವಾಯಿತು.
13 Եւ հեռուից մի տերեւալից թզենի տեսնելով՝ եկաւ, որ թերեւս նրա վրայ մի բան գտնի. եւ երբ նրան մօտեցաւ, ոչինչ չգտաւ, այլ միայն՝ տերեւ, որովհետեւ տակաւին թզի ժամանակը չէր:
ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
14 Յիսուս խօսքը թզենուն ուղղեց եւ ասաց. «Էլ քեզնից ոչ ոք պտուղ չուտի յաւիտեան»: Եւ նրա աշակերտները լսում էին: (aiōn g165)
ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು. (aiōn g165)
15 Եկան Երուսաղէմ. եւ Յիսուս տաճար մտնելով՝ սկսեց դուրս հանել տաճարում գտնուող վաճառողներին ու գնորդներին եւ լումայափոխների սեղանները ցրեց ու աղաւնեվաճառների աթոռները շուռ տուեց.
ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.
16 եւ չէր թողնում, որ որեւէ մէկը տաճարի միջով նոյնիսկ որեւէ բան անցկացնի:
ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು.
17 Եւ ուսուցանում էր նրանց ու ասում. «Գրուած է՝ իմ տունը բոլոր ազգերի համար աղօթքի տուն է կոչուելու, իսկ դուք այն դարձրել էք աւազակների որջեր»:
ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.
18 Քահանայապետներն ու օրէնսգէտները լսեցին այս եւ մի միջոց էին փնտռում, թէ ինչպէս կորստեան մատնեն նրան, բայց վախենում էին նրանից, որովհետեւ ամբողջ ժողովուրդը զարմացած էր նրա ուսուցման վրայ:
ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
19 Երբ երեկոյ եղաւ, քաղաքից դուրս ելան:
ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.
20 Յաջորդ օրը, առաւօտեան, մինչ նոյն ճանապարհից էին անցնում, թզենին արմատից չորացած տեսան:
ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು.
21 Պետրոսը յիշեց եւ ասաց նրան. «Ռաբբի՛, ահաւասիկ թզենին, որին անիծեցիր, չորացել է»:
ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.
22 Յիսուս պատասխանեց եւ ասաց նրան. «Եթէ Աստծու հանդէպ հաւատ ունենաք,
ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.
23 ճշմարիտ եմ ասում ձեզ, ով որ այս լերանն ասի՝ ե՛լ եւ ծո՛վն ընկիր, եւ իր սրտում չկասկածի, այլ հաւատայ, թէ ինչ որ ասում է, կը լինի, նա ինչ էլ ասի, կը կատարուի:
ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.
24 Դրա համար ասում եմ ձեզ. ամէն ինչ, որ աղօթք անելով խնդրէք եւ հաւատաք, թէ կը ստանաք, կը տրուի ձեզ:
ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.
25 Եւ երբ աղօթքի կանգնէք, թէ մէկի դէմ մի բան ունէք, ներեցէ՛ք, որպէսզի ձեր Հայրն էլ, որ երկնքում է, ների ձեզ ձեր յանցանքները»:
ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.
ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
27 Դարձեալ Երուսաղէմ եկան. եւ մինչ նա այնտեղ, տաճարում շրջում էր, նրա մօտ եկան քահանայապետները, օրէնսգէտները եւ ծերերը
ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು
28 ու ասացին նրան. «Ի՞նչ իշխանութեամբ ես դու այդ անում, եւ ո՞վ տուեց քեզ այդ իշխանութիւնը»:
ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು.
29 Յիսուս պատասխան տուեց եւ ասաց նրանց. «Ես էլ ձե՛զ մի բան հարցնեմ, պատասխանեցէ՛ք ինձ, եւ ես ձեզ կ՚ասեմ, թէ ինչ իշխանութեամբ եմ այս անում:
ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
30 Յովհաննէսի մկրտութիւնը երկնքի՞ց էր, թէ՞՝ մարդկանցից. պատասխանեցէ՛ք ինձ»:
ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು.
31 Նրանք իրար միջեւ խորհում էին ու ասում. «Եթէ ասենք՝ երկնքից, մեզ կ՚ասի՝ իսկ ինչո՞ւ նրան չհաւատացիք.
ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
32 իսկ եթէ ասենք՝ մարդկանցից, ժողովրդից ենք վախենում». որովհետեւ բոլորը գիտէին, թէ Յովհաննէսը մարգարէ էր:
ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.
33 Պատասխան տուեցին եւ Յիսուսին ասացին՝ չգիտենք. եւ Յիսուս նրանց պատասխանեց ու ասաց. «Ես էլ ձե՛զ չեմ ասի, թէ ինչ իշխանութեամբ եմ այս անում»:
ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.

< ՄԱՐԿՈՍ 11 >