< ՄԱՐԿՈՍ 5 >

1 Եւ Յիսուս եկաւ ծովի հանդիպակաց կողմը, գերգեսացիների երկիրը:
ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.
2 Եւ երբ նա նաւակից դուրս ելաւ, գերեզմաններից նրա դէմն ելաւ մի մարդ, որին բռնել էր մի պիղծ ոգի,
ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.
3 եւ որի բնակութեան տեղն իսկ գերեզմանների մէջ էր: Եւ ոչ ոք նրան շղթաներով անգամ չէր կարող կապել,
ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.
4 որովհետեւ շատ անգամ ոտնակապերով եւ շղթաներով կապուած էր, բայց շղթաները փշրել էր ու ոտնակապերը՝ ջարդել: Ոչ ոք նրան չէր կարողանում զսպել,
ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.
5 որովհետեւ միշտ, գիշեր ու ցերեկ, գերեզմաններում եւ լեռներում, աղաղակում էր եւ ինքն իրեն քարերով ծեծում:
ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
6 Երբ նա Յիսուսին հեռուից տեսաւ, առաջ վազեց ու երկրպագեց նրան.
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,
7 բարձրաձայն աղաղակեց եւ ասաց. «Ի՞նչ ես ուզում ինձնից, Յիսո՛ւս, բարձրեալ Աստծո՛ւ Որդի: Երդուեցնում եմ քեզ Աստուծով, ինձ մի՛ տանջիր».
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.
8 քանի որ Յիսուս նրան ասում էր. «Պի՛ղծ ոգի, դո՛ւրս ելիր այդ մարդուց»:
ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
9 Եւ նրան հարցրեց. «Անունդ ի՞նչ է»: Եւ նա ասաց նրան. «Իմ անունը Լեգէոն է, քանի որ բազում ենք»:
ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
10 Իսկ պիղծ ոգիները սաստիկ աղաչում էին նրան, որ այդ շրջանից դուրս չուղարկի իրենց:
ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 Եւ այնտեղ, լերան լանջին, խոզերի մի մեծ երամակ կար, որ արածում էր:
ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.
12 Բոլոր դեւերը աղաչեցին նրան եւ ասացին. «Մեզ խոզերի մէջ ուղարկիր, որ մտնենք նրանց մէջ»:
“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
13 Եւ նա հրամայեց նրանց: Երբ պիղծ ոգիները դուրս ելան, մտան խոզերի մէջ, եւ երամակը, թուով մօտ երկու հազար, դարաւանդից դիմեց դէպի ծովը. եւ խեղդուեցին ծովում:
ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 Խոզարածները փախան եւ քաղաքում ու ագարակներում պատմեցին. եւ մարդիկ դուրս ելան տեսնելու, թէ ի՛նչ էր կատարուել:
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
15 Եկան Յիսուսի մօտ եւ տեսան դիւահարին, որ նստել էր՝ հագնուած եւ զգաստացած, նրան, որ լեգէոն ունէր. եւ զարհուրեցին:
ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.
16 Եւ ովքեր որ տեսել էին, պատմեցին նրանց, թէ ինչ պատահեց այսահարին եւ ինչ՝ խոզերին:
ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.
17 Եւ սկսեցին աղաչել Յիսուսին, որ հեռանայ իրենց սահմաններից:
ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
18 Եւ երբ նաւակ մտաւ, դիւահարը նրան աղաչում էր, որ նրա հետ լինի:
ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.
19 Բայց Յիսուս նրան թոյլ չտուեց, այլ ասաց. «Գնա՛ քո տունը հարազատներիդ մօտ եւ պատմի՛ր նրանց այն ամէնը, ինչ Տէրը քեզ արեց եւ թէ ինչպէս խղճաց քեզ»:
ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.
20 Եւ նա գնաց ու սկսեց տարածել Դեկապոլսում, ինչ որ Յիսուս իր համար արել էր: Եւ ամէնքը զարմանում էին:
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
21 Եւ երբ Յիսուս նաւակով նորից ծովի միւս կողմն անցաւ, նրա մօտ հաւաքուեց բազում ժողովուրդ: Եւ ինքը ծովեզրին էր:
ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.
22 Ահա եկաւ ժողովրդապետներից մէկը, որի անունը Յայրոս էր. եւ երբ տեսաւ նրան, նրա ոտքերն ընկաւ.
ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,
23 սաստիկ աղաչում էր նրան ու ասում, որ իր դուստրը մահամերձ է, եւ որ նա գայ ու նրա վրայ իր ձեռքը դնի, որպէսզի առողջանայ եւ ապրի:
“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.
24 Եւ Յիսուս գնաց նրա հետ. նրա յետեւից գնում էր նաեւ բազում ժողովուրդ եւ նեղում էր նրան:
ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
25 Եւ մի կին կար, որ տասներկու տարուց ի վեր արիւնահոսութիւն ունէր:
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.
26 Նա շատ էր տառապել բազմաթիւ բժիշկների ձեռքից եւ իր ամբողջ ունեցուածքը ծախսել էր, բայց որեւէ օգուտ չէր գտել, այլ է՛լ աւելի վատացել էր:
ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
27 Նա երբ լսեց Յիսուսի մասին, եկաւ ամբոխի մէջ նրա յետեւից եւ ձեռքը դիպցրեց նրա զգեստին,
ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
28 որովհետեւ մտքում խորհում էր. «Եթէ միայն դիպչեմ նրա զգեստներին, կը բժշկուեմ»:
ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.
29 Եւ իսկոյն նրա արեան աղբիւրը չորացաւ, եւ իր մարմնի մէջ զգաց, որ տանջանքներից բժշկուեց:
ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
30 Եւ Յիսուս իսկոյն ինքն իր մէջ իմանալով իրենից դուրս ելած զօրութիւնը, դարձաւ դէպի ամբոխը եւ ասաց. «Ո՞վ դիպաւ իմ զգեստներին»:
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
31 Եւ աշակերտները նրան ասացին. «Տեսնում ես, որ ամբոխը նեղում է քեզ, եւ ասում ես, թէ՝ ո՞վ դիպաւ իմ զգեստներին»:
ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.
32 Եւ նա շուրջն էր նայում՝ տեսնելու, թէ ո՛վ այդ արեց:
ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.
33 Եւ այդ կինը, զարհուրած ու դողալով նրա համար, որ գաղտնի էր արել, - որովհետեւ գիտէր, թէ ինչ կատարուեց իր հետ, - եկաւ ընկաւ նրա առաջ եւ ամէն ինչ ստուգութեամբ ասաց:
ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.
34 Եւ Յիսուս նրան ասաց. «Դո՛ւստր, քո հաւատը քեզ փրկեց, գնա՛ խաղաղութեամբ եւ քո տանջանքներից բժշկուած եղիր»:
ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
35 Մինչ Յիսուս այս բանն էր խօսում, ժողովրդապետի տնից ոմանք եկան եւ ասացին. «Քո դուստրը մեռաւ, էլ ի՞նչ ես նեղութիւն տալիս Վարդապետին»:
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
36 Իսկ Յիսուս, երբ լսեց ասուած խօսքը, ժողովրդապետին ասաց. «Մի՛ վախեցիր, այլ միայն հաւատա՛»:
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
37 Եւ ոչ ոքի թոյլ չտուեց իր հետ գնալ, այլ միայն՝ Պետրոսին, Յակոբոսին եւ նրա եղբօրը՝ Յովհաննէսին:
ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.
38 Յիսուս ժողովրդապետի տունը եկաւ եւ տեսաւ մի մեծ ամբոխ, լացուկոծ անողներ եւ աղմուկ-աղաղակ:
ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.
39 Ապա ներս մտնելով՝ նրանց ասաց. «Ինչո՞ւ էք խռովուած ու լաց էք լինում. մանուկը մեռած չէ, այլ ննջում է»:
ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.
40 Սակայն նրանք ծաղրում էին նրան: Իսկ նա, ամենքին դուրս հանելով, վերցրեց իր հետ մանկան հօրն ու մօրը եւ նրանց, որ իր հետ էին, եւ մտաւ այնտեղ, ուր պառկած էր մանուկը:
ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.
41 Եւ բռնելով մանկան ձեռքից՝ ասաց նրան՝ Տալի՛թա, կո՛ւմի, որ նշանակում է՝ աղջի՛կ, դո՛ւ, քե՛զ եմ ասում, վե՛ր կաց:
ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
42 Եւ աղջիկը իսկոյն վեր կացաւ ու քայլում էր, քանի որ մօտ տասներկու տարեկան էր: Եւ ամէնքը մեծապէս զարմացան:
ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
43 Իսկ նա նրանց խստիւ պատուիրեց, որ ոչ ոք այդ բանը չիմանայ. ու ասաց, որ նրան ուտելու բան տան:
ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.

< ՄԱՐԿՈՍ 5 >