< ՄԱՏԹԷՈՍ 12 >

1 Յիսուս, շաբաթ օրով, անցաւ արտերի միջով. նրա աշակերտները քաղցած էին եւ սկսեցին հասկ պոկել եւ ուտել:
ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2 Փարիսեցիները երբ այս տեսան, Յիսուսին ասացին. «Ահա քո աշակերտները անում են մի բան, որ շաբաթ օրն անել օրինաւոր չէ»:
ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
3 Եւ նա նրանց ասաց. «Դուք չէ՞ք կարդացել, թէ ինչ արեց Դաւիթը, երբ քաղց զգաց նա եւ նրանք, որ նրա հետ էին:
ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
4 Թէ ինչպէս մտաւ Աստծու տունը եւ կերաւ առաջաւորութեան հացը, որն ուտել օրէնք չէր ո՛չ նրա եւ ո՛չ էլ նրա հետ եղողների համար, այլ միայն՝ քահանաների համար:
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?
5 Կամ թէ Օրէնքում չէ՞ք կարդացել, որ շաբաթ օրերը տաճարում քահանաները պղծում են շաբաթը եւ անմեղ են:
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?
6 Բայց ասում եմ ձեզ, որ այստեղ տաճարից մեծ մէկը կայ:
ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
7 Եւ եթէ իմանայիք, թէ ի՛նչ է՝ ողորմութիւն եմ կամենում եւ ոչ՝ զոհ, ապա դուք անպարտներին չէիք դատապարտի.
ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.
8 ուրեմն մարդու Որդին շաբաթ օրուայ տէրն է»:
ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.
9 Յիսուս այստեղից մեկնելով՝ եկաւ նրանց ժողովարանը:
ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.
10 Այնտեղ կար մի մարդ, որի ձեռքը գօսացած էր: Յիսուսին հարցրին ու ասացին. «Շաբաթ օրը թոյլատրելի՞ է բժշկել». որպէսզի նրան ամբաստանեն:
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.
11 Եւ նա ասաց նրանց. «Ո՞վ է ձեզնից այն մարդը, որ մի ոչխար ունենայ, եւ դա շաբաթ օրն ընկնի փոսի մէջ, միթէ չի՞ բռնի ու վեր հանի այն:
ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
12 Իսկ արդ, մարդը ոչխարից որքա՜ն եւս առաւել է. ապա ուրեմն, պէտք է շաբաթ օրը բարիք գործել»:
ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.
13 Այն ժամանակ մարդուն ասաց՝ ձեռքդ երկարի՛ր. եւ նա երկարեց. եւ առողջացաւ գօսացած ձեռքը, ինչպէս միւսը:
ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
14 Իսկ փարիսեցիները դուրս գալով՝ նրա դէմ խորհուրդ արին, թէ ինչպէս կորստեան մատնեն նրան:
ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.
15 Երբ Յիսուս այդ իմացաւ, այդտեղից մեկնեց: Նրա յետեւից գնաց շատ ժողովուրդ, եւ նա բոլորին բժշկեց:
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.
16 Եւ խստիւ պատուիրեց նրանց, որ իր մասին ոչ ոքի բան չասեն,
ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.
17 որպէսզի կատարուի այն, ինչ որ ասուեց Եսայի մարգարէի բերանով.
ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:
“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.
ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.
ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.
ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”
22 Այն ժամանակ նրա մօտ բերուեց կոյր ու համր մի դիւահար, եւ նա բժշկեց նրան, այնպէս որ համրն ու կոյրը խօսում էր ու տեսնում:
ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
23 Ամբողջ ժողովուրդը զարմացաւ եւ ասում էր. «Միթէ սա՞ է Քրիստոսը՝ Դաւթի Որդին»:
ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.
24 Բայց երբ փարիսեցիները լսեցին, ասացին. «Նա դեւերին այլ կերպ չի հանում, եթէ ոչ Բէեղզեբուղի՝ դեւերի իշխանի միջոցով»:
ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.
25 Երբ Յիսուս նրանց մտածումներն իմացաւ, նրանց ասաց. «Ինքն իր մէջ բաժանուած ամէն թագաւորութիւն աւերւում է, եւ ինքն իր մէջ բաժանուած ամէն քաղաք կամ տուն կանգուն չի մնայ.
ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.
26 եւ եթէ սատանան սատանային հանում է, ուրեմն՝ ինքն իր մէջ բաժանուեց. արդ, նրա թագաւորութիւնը ինչպէ՞ս կարող է կանգուն մնալ:
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?
27 Եւ եթէ ես Բէեղզեբուղով եմ հանում դեւերին, ձեր որդիները ինչո՞վ կը հանեն. դրա համար էլ նրանք կը լինեն ձեր դատաւորները:
ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
28 Իսկ եթէ Աստծու Հոգով եմ հանում դեւերին, ուրեմն Աստծու արքայութիւնը հասել է ձեր վրայ:
ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
29 Կամ՝ ինչպէ՞ս կարող է մէկը մտնել հզօր մի մարդու տունը եւ յափշտակել նրա գոյքերը, եթէ նախ չկապի հզօրին եւ ապա նրա տունը կողոպտի:
“ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
30 Ով ինձ հետ չէ՝ իմ դէմ է, եւ ով ինձ հետ չի հաւաքում՝ ցրում է»:
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
31 «Դրա համար ասում եմ ձեզ. ամէն մեղք եւ հայհոյանք կը ներուեն մարդկանց, բայց Հոգու դէմ հայհոյանքը չպիտի ներուի:
ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
32 Եւ ով որ մարդու Որդու դէմ խօսք ասի, նրան պիտի ներուի, բայց ով ասի Սուրբ Հոգու դէմ, նրան չպիտի ներուի ո՛չ այս աշխարհում եւ ո՛չ էլ հանդերձեալում: (aiōn g165)
ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. (aiōn g165)
33 Կա՛մ ծառը բարի արէք, եւ նրա պտուղն էլ բարի կը լինի, կա՛մ ծառը չար արէք, եւ նրա պտուղն էլ չար կը լինի. քանի որ իր պտղից է ծառը ճանաչւում:
“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
34 Իժերի՛ ծնունդներ, դուք, որ չար էք, ինչպէ՞ս կը կարողանաք բարի բաներ խօսել, քանի որ բերանը սրտի լիութիւնից է, որ խօսում է:
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
35 Բարի մարդը իր սրտի բարի գանձերից հանում է բարի բաներ, իսկ չար մարդը իր սրտի չար գանձերից հանում է չար բաներ:
ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
36 Բայց ասում եմ ձեզ, թէ մարդիկ իրենց խօսած ամէն դատարկ բանի համար դատաստանի օրը հաշիւ պիտի տան,
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
37 որովհետեւ՝ քո խօսքերով պիտի արդարանաս եւ քո խօսքերով պիտի դատապարտուես»:
ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
38 Այն ժամանակ օրէնսգէտներից եւ փարիսեցիներից ոմանք նրան պատասխան տուեցին ու ասացին. «Վարդապե՛տ, քեզնից մի նշան ենք կամենում տեսնել»:
ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.
39 Նա պատասխան տուեց նրանց ու ասաց. «Չար եւ շնացող ազգը նշան է փնտռում. այլ նշան չի տրուի նրան, բայց միայն Յովնան մարգարէի նշանը.
ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.
40 որովհետեւ, ինչպէս Յովնանը երեք օր ու երեք գիշեր կէտի փորի մէջ էր, նոյնպէս եւ մարդու Որդին երկրի ընդերքում՝ երեք օր ու երեք գիշեր:
ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
41 Նինուէի մարդիկ դատաստանի ժամանակ այս ազգի դէմ պիտի դուրս գան եւ պիտի դատապարտեն նրան, քանի որ նրանք Յովնանի քարոզութեամբ ապաշխարեցին. եւ ահաւասիկ այստեղ Յովնանից մեծը կայ:
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.
42 Հարաւի Դշխոն դատաստանի ժամանակ պիտի դուրս գայ այս ազգի դէմ եւ պիտի դատապարտի նրան, որովհետեւ նա երկրի ծագերից եկաւ լսելու Սողոմոնի իմաստութիւնը. եւ ահա այստեղ Սողոմոնից մեծը կայ»:
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
43 «Սակայն պիղծ ոգին դուրս է ելնում մարդուց, շրջում է անջրդի վայրերում, հանգիստ է որոնում եւ չի գտնում:
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
44 Այն ժամանակ ասում է՝ դառնամ իմ տունը, որտեղից դուրս եկայ. եւ գալիս է ու այն գտնում դատարկ՝ մաքրուած ու կարգի բերուած:
‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
45 Այն ժամանակ գնում եւ վերցնում է իր հետ իրենից աւելի չար եօթը այլ ոգիներ եւ մտնում բնակւում է այնտեղ. եւ այդ մարդու վերջը լինում է աւելի վատ, քան առաջ էր. այսպէս պիտի լինի եւ այս չար սերնդին»:
ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
46 Մինչ Յիսուս դեռ խօսքն ուղղում էր բազմութեանը, ահա նրա մայրն ու նրա եղբայրները կանգնած էին դրսում եւ ուզում էին խօսել նրա հետ:
ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
47 Եւ մէկն ասաց նրան. «Ահա քո մայրն ու քո եղբայրները դրսում կանգնած են եւ ուզում են քեզ հետ խօսել»:
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
48 Նա այդ ասողին պատասխանեց ու ասաց. «Ո՞վ է իմ մայրը, կամ ովքե՞ր են իմ եղբայրները»:
ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,
49 Եւ իր ձեռքը երկարելով դէպի իր աշակերտները՝ ասաց. «Ահա՛ իմ մայրը եւ իմ եղբայրները.
ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
50 որովհետեւ, ով կատարում է կամքը իմ Հօր, որ երկնքում է, նա՛ է ինձ եղբայր եւ քոյր եւ մայր»:
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.

< ՄԱՏԹԷՈՍ 12 >