< ՂՈԻԿԱՍ 19 >

1 Երիքով մտնելով՝ քաղաքին մէջէն կ՚անցնէր,
ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ,
2 երբ ահա՛ հարուստ մարդ մը՝ Զաքէոս կոչուած, որ մաքսապետ էր,
ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.
3 կը ջանար տեսնել թէ ո՛վ է Յիսուսը. բայց բազմութեան պատճառով չէր կրնար, որովհետեւ կարճահասակ էր:
ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
4 Ուստի յառաջ վազեց եւ ժանտաթզենիի մը վրայ ելաւ՝ որպէսզի տեսնէ զայն, քանի որ անկէ պիտի անցնէր:
ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
5 Երբ Յիսուս այդ տեղը եկաւ, վեր նայելով՝ տեսաւ զայն ու ըսաւ անոր. «Զաքէո՛ս, աճապարէ՛, իջի՛ր ատկէ. որովհետեւ այսօր տունդ պէտք է մնամ»:
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
6 Ան ալ աճապարելով իջաւ, եւ ուրախութեամբ ընդունեց զայն:
ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
7 Երբ բոլորն ալ տեսան, կը տրտնջէին ու կ՚ըսէին. «Մեղաւոր մարդու քով գնաց՝ իջեւանելու»:
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
8 Իսկ Զաքէոս կայնեցաւ եւ ըսաւ Տէրոջ. «Տէ՛ր, ահա՛ ինչքիս կէ՛սը կու տամ աղքատներուն. ու եթէ զրպարտութեամբ ոեւէ մէկը զրկած եմ, քառապատի՛կ կը հատուցանեմ անոր»:
ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
9 Յիսուս ըսաւ անոր. «Այսօր փրկութիւն եղաւ այս տան, քանի որ ի՛նք ալ Աբրահամի որդի է:
ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
10 Արդարեւ մարդու Որդին եկաւ՝ որպէսզի փնտռէ կորսուածը եւ փրկէ»:
೧೦ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
11 Երբ անոնք կը լսէին այս բաները՝ առակ մըն ալ ըսաւ, քանի որ ինք Երուսաղէմի կը մօտենար եւ անոնք կը կարծէին թէ Աստուծոյ թագաւորութիւնը անմի՛ջապէս պիտի երեւնար:
೧೧ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
12 Ուրեմն ըսաւ. «Ազնուական մարդ մը գնաց հեռաւոր երկիր մը՝ իրեն թագաւորութիւն ստանալու եւ վերադառնալու:
೧೨ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
13 Իր տասը ծառաները կանչելով՝ տասը մնաս տուաւ անոնց, ու ըսաւ անոնց. “Շահարկեցէ՛ք՝ մինչեւ որ գամ”:
೧೩ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
14 Անոր քաղաքացիները կ՚ատէին զայն, եւ պատուիրակութիւն մը ղրկեցին անոր ետեւէն՝ ըսելով. “Չենք ուզեր որ ասիկա թագաւորէ մեր վրայ”:
೧೪ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
15 Բայց երբ ան վերադարձաւ՝ թագաւորութիւնը ստանալով, իրեն կանչեց այն ծառաները՝ որոնց դրամ տուեր էր, որպէսզի գիտնայ թէ ո՛վ ի՛նչպէս շահագործած էր:
೧೫ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
16 Առաջինը եկաւ եւ ըսաւ. “Տէ՛ր, քու մնասդ՝ տասը մնաս վաստկեցաւ”:
೧೬ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
17 Ան ալ ըսաւ անոր. “Ապրի՛ս, բարի՛ ծառայ. որովհետեւ ամենափոքր բանին մէջ հաւատարիմ եղար, տա՛սը քաղաքի վրայ իշխանութիւն ունեցիր”:
೧೭ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
18 Երկրորդը եկաւ ու ըսաւ. “Տէ՛ր, քու մնասդ՝ հինգ մնաս բերաւ”:
೧೮ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
19 Եւ ըսաւ անոր. “Դուն ալ հի՛նգ քաղաքի վրայ եղիր”:
೧೯ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
20 Ուրիշ մը եկաւ ու ըսաւ. “Տէ՛ր, ահա՛ քու մնասդ՝ որ կը պահէի թաշկինակի մը մէջ ծրարած,
೨೦ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
21 քանի որ կը վախնայի քեզմէ. որովհետեւ դուն խիստ մարդ մըն ես, կը վերցնես չդրած բանդ, եւ կը հնձես չսերմանածդ”:
೨೧
22 Ան ալ ըսաւ անոր. “Բերանո՛վդ պիտի դատեմ քեզ, չա՛ր ծառայ: Գիտէիր թէ ես խիստ մարդ մըն եմ, կը վերցնեմ չդրած բանս ու կը հնձեմ չսերմանածս.
೨೨ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
23 ուրեմն ինչո՞ւ չտուիր իմ դրամս սեղանաւորներուն, որպէսզի եկած ատենս՝ տոկոսո՛վ պահանջէի զայն”:
೨೩ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
24 Քովը կայնողներուն ըսաւ. “Առէ՛ք ատկէ մնասը, եւ տուէ՛ք անոր՝ որ տասը մնաս ունի.
೨೪ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.
25 (Ըսին իրեն. "Տէ՛ր, ան տա՛սը մնաս ունի".)
೨೫ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.
26 որովհետեւ կը յայտարարեմ ձեզի թէ ամէն ունեցողի պիտի տրուի, ու չունեցողին՝ ունեցա՛ծն ալ պիտի առնուի իրմէ:
೨೬ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
27 Բայց այդ թշնամիներս, որոնք չէին ուզեր որ իրենց վրայ թագաւորեմ, բերէ՛ք հոս եւ մեռցուցէ՛ք իմ առջեւս”»:
೨೭ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
28 Այս բաները խօսելէն ետք, յառաջ գնաց՝ որ բարձրանայ Երուսաղէմ:
೨೮ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
29 Երբ մօտեցաւ Բեթփագէի ու Բեթանիայի, այն լերան մօտ՝ որ Ձիթենիներու լեռ կը կոչուի, իր աշակերտներէն երկուքը ղրկեց
೨೯ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
30 եւ ըսաւ. «Գացէ՛ք մեր դիմացի գիւղը. երբ մտնէք անոր մէջ՝ պիտի գտնէք կապուած աւանակ մը, որուն վրայ բնա՛ւ մարդ նստած չէ. արձակեցէ՛ք զայն ու բերէ՛ք:
೩೦“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
31 Եթէ մէկը հարցնէ ձեզի. “Ինչո՞ւ կ՚արձակէք”, սա՛ ըսէք անոր. “Տէրո՛ջ պէտք է”»:
೩೧ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.
32 Ղրկուածները գացին, եւ գտան ինչպէս ըսած էր իրենց:
೩೨ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33 Մինչ աւանակը կ՚արձակէին, անոր տէրերը ըսին անոնց. «Ինչո՞ւ կ՚արձակէք այդ աւանակը»:
೩೩ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
34 Անոնք ալ ըսին. «Տէրո՛ջ պէտք է»:
೩೪ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.
35 Յիսուսի բերին զայն, եւ աւանակին վրայ ձգելով իրենց հանդերձները՝ հեծցուցին Յիսուսը:
೩೫ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
36 Մինչ կ՚երթար, մարդիկ իրենց հանդերձները կը փռէին ճամբային վրայ:
೩೬ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37 Երբ ա՛լ մօտեցաւ ու Ձիթենիներու լերան զառիվայրէն կ՚իջնէր, աշակերտներուն ամբողջ բազմութիւնը սկսաւ ուրախութեամբ բարձրաձայն Աստուած գովաբանել՝ այն բոլոր հրաշքներուն համար, որ տեսեր էին:
೩೭ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
38 Եւ կ՚ըսէին. «Օրհնեա՜լ է այդ թագաւորը, որ կու գայ Տէրոջ անունով. երկինքի մէջ խաղաղութի՜ւն, ու փա՜ռք՝ ամենաբարձր վայրերուն մէջ»:
೩೮“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
39 Փարիսեցիներէն ոմանք բազմութեան մէջէն ըսին անոր. «Վարդապե՛տ, յանդիմանէ՛ քու աշակերտներդ»:
೩೯ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
40 Ան ալ պատասխանեց անոնց. «Կը յայտարարեմ ձեզի. “Եթէ ատոնք լռեն՝ քարե՛րը պիտի աղաղակեն”»:
೪೦ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.
41 Երբ մօտեցաւ, քաղաքը տեսնելով՝ լացաւ անոր վրայ եւ ըսաւ.
೪೧ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
42 «Գո՛նէ այս օրուանդ մէջ գիտնայիր քու խաղաղութիւնդ. բայց հիմա ծածկուեցաւ աչքերէդ:
೪೨“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
43 Որովհետեւ օրերը պիտի գան քու վրադ, երբ թշնամիներդ պատնէշ պիտի շինեն շուրջդ, պիտի պաշարեն քեզ, ամէն կողմէ պիտի սեղմեն քեզ,
೪೩ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.
44 եւ հիմնայատակ պիտի ընեն քեզ ու մէջդ եղած զաւակներդ. եւ ամե՛նեւին քար մը քարի վրայ պիտի չթողուն մէջդ, քանի որ չգիտցար այցելութեանդ ատենը»:
೪೪
45 Մտնելով տաճարը՝ սկսաւ դուրս հանել անոր մէջ ծախողներն ու գնողները,
೪೫ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,
46 եւ ըսաւ անոնց. «Գրուած է. “Իմ տունս աղօթքի տուն է”, բայց դուք աւազակներու քարայր ըրիք զայն»:
೪೬“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
47 Ամէն օր կը սորվեցնէր տաճարին մէջ: Իսկ քահանայապետները, դպիրներն ու ժողովուրդին գլխաւորները կը փնտռէին թէ ի՛նչպէս կորսնցնեն զայն.
೪೭ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
48 բայց չէին կրնար գտնել թէ ի՛նչ ընեն, որովհետեւ ամբողջ ժողովուրդը շատ ուշադրութեամբ մտիկ կ՚ընէր անոր:
೪೮ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

< ՂՈԻԿԱՍ 19 >