< ՂՈԻԿԱՍ 9 >

1 Իր տասներկու աշակերտները հաւաքելով՝ զօրութիւն ու իշխանութիւն տուաւ անոնց բոլոր դեւերուն վրայ, եւ ախտերը բժշկելու:
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,
2 Ու ղրկեց զանոնք՝ որ քարոզեն Աստուծոյ թագաւորութիւնը եւ բժշկեն հիւանդները:
ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
3 Ըսաւ անոնց. «Ճամբորդութեան համար ոչի՛նչ առէք, ո՛չ գաւազան եւ ո՛չ պարկ, ո՛չ հաց եւ ո՛չ դրամ. ո՛չ ալ կրկին բաճկոն ունեցէք՝՝:
ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4 Որո՛ւ տուն որ մտնէք՝ հո՛ն մնացէք, ապա անկէ մեկնեցէք:
ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
5 Իսկ անոնք որ չեն ընդունիր ձեզ, երբ դուրս ելլէք այդ քաղաքէն՝ թօթուեցէ՛ք ձեր ոտքերուն փոշին անգամ, իբր վկայութիւն անոնց դէմ»:
ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.
6 Անոնք ալ մեկնեցան եւ գիւղէ գիւղ կը շրջէին, ամէնուրեք աւետարանելով ու բուժելով:
ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.
7 Հերովդէս չորրորդապետը՝ անոր բոլոր կատարածներուն մասին լսելով՝ տարակոյսի մէջ էր, որովհետեւ ոմանք ըսած էին.
ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.
8 «Յովհաննէս մեռելներէն յարութիւն առաւ», եւ ոմանք. «Եղիա յայտնուեցաւ», իսկ ուրիշներ ալ. «Նախկին մարգարէներէն մէկը յարութիւն առաւ»:
ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.
9 Հերովդէս ըսաւ. «Յովհաննէսը ե՛ս գլխատեցի, իսկ ո՞վ պիտի ըլլայ ասիկա՝ որուն մասին այսպիսի բաներ կը լսեմ»: Ու կը ջանար տեսնել զայն:
ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.
10 Առաքեալները վերադարձան, ու պատմեցին անոր՝ ինչ որ ըրին. եւ առնելով զանոնք՝ մէկդի քաշուեցաւ ամայի տեղ մը, քաղաքի մը քով՝ որուն անունը Բեթսայիդա էր:
ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.
11 Երբ բազմութիւնները գիտցան՝ անոր հետեւեցան: Ինք ալ զանոնք ընդունելով՝ կը խօսէր անոնց Աստուծոյ թագաւորութեան մասին, եւ կը բժշկէր անո՛նք՝ որ բուժումի պէտք ունէին:
ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.
12 Երբ օրը սկսաւ մթննալ՝ տասներկուքը մօտեցան եւ ըսին անոր. «Արձակէ՛ բազմութիւնը, որպէսզի երթան շրջակայ գիւղերն ու արտերը, իջեւանին եւ ուտելիք գտնեն, որովհետեւ հոս ամայի տեղ մըն ենք»:
ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.
13 Ըսաւ անոնց. «Դո՛ւք անոնց կերակուր տուէք»: Անոնք ալ ըսին. «Մենք հինգ նկանակէն ու երկու ձուկէն աւելի բան չունինք, եթէ չերթանք այդ ամբողջ ժողովուրդին համար կերակուր չգնենք»:
ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.
14 (Արդարեւ հինգ հազարի չափ այր մարդիկ կային: ) Ըսաւ իր աշակերտներուն. «Նստեցուցէ՛ք ատոնք՝ յիսունական շարքերով»:
ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.
15 Այդպէս ըրին, ու բոլորն ալ նստեցուցին:
ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.
16 Ինք ալ առաւ այդ հինգ նկանակներն ու երկու ձուկերը, դէպի երկինք նայելով՝ օրհնեց զանոնք, կտրեց ու տուաւ աշակերտներուն, որպէսզի հրամցնեն բազմութեան:
ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.
17 Կերան, բոլորն ալ կշտացան, եւ վերցնելով աւելցած բեկորները՝ տասներկու կողով լեցուցին:
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
18 Երբ ինք առանձին կ՚աղօթէր, աշակերտները իրեն հետ էին, եւ հարցուց անոնց. «Բազմութիւնները ինծի համար ի՞նչ կ՚ըսեն, ո՞վ եմ»:
ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.
19 Անոնք ալ պատասխանեցին. «Ոմանք՝ Յովհաննէս Մկրտիչը, ուրիշներ՝ Եղիան, ուրիշներ ալ՝ նախկին մարգարէներէն մէկը, որ յարութիւն առած է»:
ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.
20 Ինք ըսաւ անոնց. «Իսկ դո՛ւք ի՞նչ կ՚ըսէք, ո՞վ եմ»: Պետրոս պատասխանեց. «Աստուծոյ Քրիստո՛սը»:
ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.
21 Յիսուս ազդարարեց անոնց, ու պատուիրեց որ ո՛չ մէկուն ըսեն այս բանը:
ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.
22 Եւ ըսաւ. «Պէտք է որ մարդու Որդին շատ չարչարանքներ կրէ, մերժուի երէցներէն, քահանայապետներէն եւ դպիրներէն, սպաննուի ու յարութիւն առնէ երրորդ օրը»:
ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.
23 Եւ կ՚ըսէր բոլորին. «Եթէ մէկը ուզէ գալ իմ ետեւէս՝ թող ուրանայ ինքզինք, ամէն օր վերցնէ իր խաչը ու հետեւի ինծի.
ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 որովհետեւ ո՛վ որ ուզէ փրկել իր անձը՝ պիտի կորսնցնէ զայն, իսկ ո՛վ որ կորսնցնէ իր անձը՝ ինծի համար, պիտի փրկէ զայն:
ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
25 Քանի որ մարդ ի՞նչ օգուտ կ՚ունենայ, եթէ շահի ամբողջ աշխարհը բայց կորսնցնէ ինքզինք, կամ տուժէ:
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?
26 Որովհետեւ ո՛վ որ ամօթ սեպէ զիս եւ իմ խօսքերս դաւանիլը, մարդու Որդին ալ ամօթ պիտի սեպէ զայն դաւանիլը՝ երբ գայ իր ու Հօր եւ սուրբ հրեշտակներուն փառքով:
ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
27 Բայց ճշմա՛րտապէս կը յայտարարեմ ձեզի. “Հոս կայնողներէն կան ոմանք՝ որ մահ պիտի չհամտեսեն, մինչեւ որ տեսնեն Աստուծոյ թագաւորութիւնը”»:
“ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
28 Այս խօսքերէն գրեթէ ութ օր ետք՝ առնելով Պետրոսը, Յովհաննէսն ու Յակոբոսը՝ լեռը ելաւ աղօթելու:
ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.
29 Մինչ կ՚աղօթէր, իր երեսին տեսքը փոխուեցաւ, եւ իր պատմուճանը ճերմակ ու փայլուն եղաւ:
ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.
30 Եւ ահա՛ երկու մարդիկ կը խօսակցէին իրեն հետ. անոնք֊ Մովսէսն ու Եղիան,
ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
31 փառքով երեւցած, եւ կը խօսէին անոր այս կեանքէն մեկնումին մասին, որ պիտի իրագործուէր Երուսաղէմի մէջ:
ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 Պետրոս ու անոր հետ եղողները քունով ծանրացած էին. երբ արթնցան, տեսան անոր փառքը եւ այդ երկու մարդիկը՝ որ անոր քով կեցած էին:
ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
33 Երբ անոնք զատուեցան անոր քովէն, Պետրոս ըսաւ Յիսուսի. «Վարդապե՛տ, լաւ է որ կենանք հոս եւ շինենք երեք վրան, մէկը՝ քեզի, մէկը՝ Մովսէսի ու մէկը՝ Եղիայի». որովհետեւ չէր գիտեր թէ ի՛նչ կը խօսէր:
ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34 Մինչ այսպէս կը խօսէր, ամպ մը եկաւ եւ հովանի եղաւ անոնց վրայ. ու երբ անոնք ամպին տակ մտան՝ վախցան:
ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.
35 Ձայն մը եկաւ ամպէն՝ ըսելով. «Ա՛յս է իմ սիրելի Որդիս, անո՛ր մտիկ ըրէք»:
ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.
36 Երբ լսեցին այդ ձայնը՝ Յիսուս մինակ մնաց: Իրենք ալ լուռ կեցան, եւ այդ օրերը ո՛չ մէկուն բան մը պատմեցին իրենց տեսածներէն:
ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37 Հետեւեալ օրը, երբ անոնք լեռնէն վար իջան, մեծ բազմութիւն մը դիմաւորեց զայն:
ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.
38 Բազմութենէն մարդ մը գոչեց. «Վարդապե՛տ, կ՚աղերսե՜մ քեզի, նայէ՛ որդիիս, քանի որ իմ մէկ հատիկս է:
ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.
39 Ահա՛ ոգի մը կը բռնէ զինք, ինք ալ յանկարծ կ՚աղաղակէ. ոգին զինք ցնցելով կը փրփրցնէ, ու հազիւ կը հեռանայ իրմէ՝ ջախջախելով զինք:
ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.
40 Աղերսեցի քու աշակերտներուդ՝ որ դուրս հանեն զայն, բայց չկրցան»:
ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.
41 Յիսուս պատասխանեց. «Ո՛վ անհաւատ ու խոտորեալ սերունդ, մինչեւ ե՞րբ ձեզի հետ պիտի ըլլամ եւ ձեզի հանդուրժեմ: Հո՛ս բեր որդիդ»:
ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.
42 Երբ կը մօտենար, դեւը գետին զարկաւ զայն ու սաստիկ ցնցեց:
ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.
43 Իսկ Յիսուս սաստեց անմաքուր ոգին, բժշկեց պատանին եւ տուաւ զայն իր հօր:
ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
44 Բոլորը կ՚ապշէին Աստուծոյ մեծամեծ գործերուն վրայ: Մինչ բոլորն ալ կը սքանչանային Յիսուսի բոլոր ըրածներուն վրայ, ան ըսաւ իր աշակերտներուն. «Դուք այս խօսքերը ձեր մի՛տքը պահեցէք՝՝, որովհետեւ մարդու Որդին պիտի մատնուի մարդոց ձեռքը»:
“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.
45 Բայց անոնք չէին հասկնար այս խօսքը, եւ անոնցմէ ծածկուած էր՝ որպէսզի չըմբռնեն. ու կը վախնային հարցնել իրեն այդ խօսքին մասին:
ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.
46 Մտածում մըն ալ ծագեցաւ անոնց մէջ, թէ արդեօք ո՛վ է մեծագոյնը իրենց մէջ:
ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.
47 Յիսուս ըմբռնելով անոնց սիրտին մտածումը՝ առաւ մանուկ մը, կայնեցուց զայն իր քով,
ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,
48 ու ըսաւ անոնց. «Ո՛վ որ կ՚ընդունի այս մանուկը իմ անունովս՝ զի՛ս կ՚ընդունի, եւ ո՛վ որ զիս կ՚ընդունի՝ զիս ղրկո՛ղը կ՚ընդունի. որովհետեւ ա՛ն որ ամենէն պզտիկն է ձեր բոլորին մէջ, անիկա՛ պիտի ըլլայ մեծը»:
“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.
49 Յովհաննէս ըսաւ. «Վարդապե՛տ, մէկը տեսանք որ դեւեր կը հանէր քու անունովդ, եւ արգիլեցինք զայն՝ քանի որ մեզի չի հետեւիր»:
ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.
50 Յիսուս ըսաւ անոր. «Մի՛ արգիլէք, որովհետեւ ա՛ն որ մեզի հակառակ չէ, մեր՝՝ կողմէն է»:
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.
51 Երբ իր աշխարհէն վերանալու ժամանակը հասաւ՝՝, հաստատապէս որոշեց՝՝ Երուսաղէմ երթալ:
ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು
52 Եւ իր առջեւէն ղրկեց պատգամաւորներ, որոնք երբ գացին՝ մտան Սամարացիներուն մէկ գիւղը, որպէսզի պատրաստութիւն տեսնեն իրեն համար:
ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53 Բայց չընդունեցին զայն, որովհետեւ անոր երեսը դէպի Երուսաղէմ ուղղուած էր:
ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.
54 Երբ իր աշակերտները՝ Յակոբոս ու Յովհաննէս՝ տեսան ասիկա, ըսին անոր. «Տէ՛ր, կ՚ուզե՞ս որ ըսենք, որպէսզի երկինքէն կրակ իջնէ եւ սպառէ զանոնք, ինչպէս Եղիա ալ ըրաւ»:
ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.
55 Դարձաւ ու յանդիմանեց զանոնք՝ ըսելով. «Չէք գիտեր թէ ի՛նչ հոգիի տէր էք.
ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56 որովհետեւ մարդու Որդին եկաւ ո՛չ թէ մարդոց անձերը կորսնցնելու, հապա՝ փրկելու՝՝»: Եւ ուրիշ գիւղ մը գացին:
ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.
57 Երբ անոնք ճամբան կ՚երթային, մէկը ըսաւ անոր. «Տէ՛ր, պիտի հետեւիմ քեզի՝ ո՛ւր որ երթաս»:
ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.
58 Յիսուս ըսաւ անոր. «Աղուէսները որջեր ունին, ու երկինքի թռչունները՝ բոյներ, բայց մարդու Որդին տե՛ղ մը չունի՝ ուր հանգչեցնէ իր գլուխը»:
ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
59 Ուրիշի մըն ալ ըսաւ. «Հետեւէ՛ ինծի»: Իսկ ան ըսաւ. «Տէ՛ր, արտօնէ՛ ինծի, որ նախ երթամ՝ թաղեմ հայրս»:
ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
60 Յիսուս ըսաւ անոր. «Թո՛ղ մեռելներուն՝ թաղել իրենց մեռելները, իսկ դուն գնա՛ ու քարոզէ՛ Աստուծոյ թագաւորութիւնը»:
ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.
61 Ուրիշ մըն ալ ըսաւ. «Տէ՛ր, պիտի հետեւիմ քեզի. բայց արտօնէ՛ որ նախ հրաժեշտ առնեմ տանս մէջ եղողներէն»:
ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.
62 Յիսուս ըսաւ անոր. «Ո՛չ մէկը՝ որ կը դնէ ձեռքը մաճին վրայ ու ետեւ կը նայի՝ յարմար է Աստուծոյ թագաւորութեան»:
ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.

< ՂՈԻԿԱՍ 9 >