< বংশাবলির দ্বিতীয় খণ্ড 23 >

1 পরে সপ্তম বছরে যিহোয়াদা নিজেকে শক্তিশালী করে শতপতিদের যিহোরামের ছেলে অসরিয়কে, যিহোহাননের ছেলে ইশ্মায়েলকে, ওবেদের ছেলে অসরিয়, অদায়ার ছেলে মাসেয় ও সিখ্রির ছেলে ইলীশাফটকে নিয়ে একটা চুক্তি করলেন।
ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
2 পরে তাঁরা যিহূদা দেশে ঘুরে যিহূদার সমস্ত নগর থেকে লেবীয়দেরকে এবং ইস্রায়েলের পিতার বংশের নেতাদের জড়ো করলে তারাও যিরূশালেমে এল।
ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
3 পরে সব সমাজ মিলে ঈশ্বরের গৃহে রাজার সঙ্গে একটি চুক্তি করল। আর যিহোয়াদা তাদের বললেন, “দেখ, দায়ূদের সন্তানদের বিষয়ে সদাপ্রভু যে কথা বলেছেন, সেই অনুসারে রাজপুত্রই রাজত্ব করবেন।
ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
4 তোমরা এই কাজ করবে: তোমাদের অর্থাৎ যাজকদের ও লেবীয়দের যে তিন ভাগের এক ভাগ যারা বিশ্রামবারে কাজ করবে, তারা দারোয়ান হবে।
ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
5 অন্য এক ভাগ রাজবাড়ীতে থাকবে, আর এক ভাগ ভিত্তি-দরজা থাকবে এবং সবাই থাকবে সদাপ্রভুর গৃহের উঠানে।
ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
6 কিন্তু যাজকরা ও সেবা-কাজে থাকা লেবীয়েরা ছাড়া আর কাউকে সদাপ্রভুর ঘরে ঢুকতে দিও না; এরা ঢুকবে, কারণ এরা ঈশ্বরের উদ্দেশ্যে পবিত্র; কিন্তু অন্য সব লোক সদাপ্রভুর আদেশ রক্ষা করবে।
ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
7 আর লেবীয়েরা প্রত্যেকে নিজের নিজের অস্ত্র হাতে নিয়ে রাজার চারপাশ ঘিরে থাকবে, আর যে কেউ গৃহে ঢুকবে, তাকে মেরে ফেলা হবে এবং রাজা যখন ভিতরে যাওয়া-আসা করেন, তখন তোমরা তাঁর সঙ্গে থাকবে।”
ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
8 পরে যিহোয়াদা যাজক যে আদেশ দিলেন, লেবীয়েরা ও যিহূদার সবাই তাই করল; ফলে তারা প্রত্যেকে নিজের নিজের লোকদের, অর্থাৎ যারা বিশ্রামবারে বাইরে যাওয়া-আসা করে, তাদেরকে নিল, কারণ যিহোয়াদা যাজক এদের কোনো দলকেই ছুটি দেন নি।
ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
9 আর রাজা দায়ূদের যে সব বর্শা, ঢাল ও ঈশ্বরের গৃহে ছিল, যিহোয়াদা যাজক সেগুলি নিয়ে শতপতিদের দিলেন।
ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
10 ১০ আর তিনি সমস্ত লোককে স্থাপন করলেন, প্রত্যেক জন নিজের নিজের হাতে অস্ত্র নিয়ে দক্ষিণ দিক থেকে উত্তর দিক পর্যন্ত যজ্ঞবেদির ও গৃহের কাছে রাজার চারদিকে দাঁড়ালেন।
ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
11 ১১ তারপর তাঁরা রাজপুত্রকে বের করে এনে তাঁর মাথায় মুকুট পরিয়ে দিলেন ও তাঁকে ব্যবস্থার বই দিলেন এবং তারা তাঁকে রাজা করলেন এবং যিহোয়াদা ও তাঁর ছেলেরা তাঁকে রাজা হিসাবে অভিষেক করলেন; পরে তাঁরা বলল, “রাজা চিরজীবী হোন।”
ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
12 ১২ আর লোকেরা দৌড়াদৌড়ি করে রাজার প্রশংসা করলে অমলিয়া সেই আওয়াজ শুনে অথলিয়া সদাপ্রভুর গৃহে তাদের কাছে গেল;
ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
13 ১৩ আর দেখল, গৃহে ঢুকবার পথে রাজা তাঁর মঞ্চের উপরে দাঁড়িয়ে আছেন এবং সেনাপতিরা ও তূরী বাদকেরা রাজার পাশে আছে এবং দেশের সব লোক আনন্দ করছে ও তূরী বাজাচ্ছে আর গায়কেরা বাজনা বাজিয়ে প্রশংসা গান করছে; তখন অথলিয়া তার পোশাক ছিঁড়ে বলল, “এ তো বিশ্বাসঘাতকতা! বিশ্বাসঘাতকতা!”
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
14 ১৪ কিন্তু যিহোয়াদা যাজক সৈন্যদলের উপরে নিযুক্ত শতপতিদের বাইরে এনে বললেন, “ওকে বের করে দুই সারির মাঝখান দিয়ে নিয়ে যাও; আর যে তার পিছনে আসবে তাকে তরোয়াল দিয়ে হত্যা করবে;” কারণ যাজক আদেশ দিয়েছিলেন যে, সদাপ্রভুর গৃহের মধ্যে ওকে হত্যা কোরো না।
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
15 ১৫ কাজেই লোকেরা তাঁর জন্য দুই সারি হয়ে রাস্তা ছেড়ে দিলে সে রাজবাড়ীর অশ্বদ্বারে ঢুকবার পথে গেল; সেখানে তারা তাকে হত্যা করল।
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
16 ১৬ তারপর যিহোয়াদা তাঁর, সব লোকের ও রাজার মধ্যে এক চুক্তি করলেন, যেন তারা সদাপ্রভুর প্রজা হয়।
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
17 ১৭ পরে সব লোক বাল দেবতার মন্দিরে গিয়ে সেটা ভেঙে ফেলল, তার যজ্ঞবেদি ও মূর্তিগুলি চুরমার করে দিল এবং বেদিগুলির সামনে বাল দেবতার যাজক মত্তনকে মেরে ফেলল।
ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
18 ১৮ তারপর দায়ূদের আদেশ মতে আনন্দের সঙ্গে গান করে মোশির ব্যবস্থা অনুসারে সদাপ্রভুর উদ্দেশ্যে হোম করতে দায়ূদ যে লেবীয় যাজকদের সদাপ্রভুর গৃহের জন্য নির্ধারণ করেছিলেন, তাদের হাতে যিহোয়াদা সদাপ্রভুর গৃহের দেখাশোনার ভার দিলেন।
ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
19 ১৯ আর কোনো রকম অশুচি লোক যাতে ঢুকতে না পারে সেইজন্য তিনি সদাপ্রভুর গৃহের দরজাগুলিতে দারোয়ান রাখলেন।
ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
20 ২০ পরে তিনি শতপতিদের, কুলীনদের, লোকেদের শাসনকর্ত্তাদের ও দেশের সব লোকদের সঙ্গে নিলেন, তারা সদাপ্রভুর গৃহ থেকে রাজাকে বের করে আনলেন; তারপর তাঁরা উঁচু দরজা দিয়ে রাজবাড়ীতে গিয়ে রাজাকে রাজ সিংহাসনে বসালেন।
ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
21 ২১ তখন দেশের সব লোক আনন্দ করল এবং নগরটি শান্ত হল; আর অথলিয়াকে তারা তরোয়াল দিয়ে হত্যা করেছিল।
ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.

< বংশাবলির দ্বিতীয় খণ্ড 23 >