< ইষ্টের বিবরণ 3 >

1 ঐ সব ঘটনার পরে অহশ্বেরশ রাজা অগাগীয় হম্মদাথার ছেলে হামনকে উন্নত করলেন, উঁচু পদে উন্নত করলেন এবং তার সঙ্গী সমস্ত শাসনকর্ত্তার থেকে শ্রেষ্ঠ আসন দিলেন।
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.
2 তাতে রাজার যে দাসেরা রাজবাড়ীর দরজায় থাকত, তারা সবাই হামনের কাছে হাঁটু পেতে উপুড় হতে লাগল, কারণ রাজা তার সম্মন্ধে সেই রকম আদেশ করেছিলেন; কিন্তু মর্দখয় হাঁটুও পাততেন না, উপুড়ও হতেন না।
ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.
3 তাতে রাজার যে দাসেরা রাজবাড়ীর দরজায় থাকত, তারা মর্দখয়কে বলল, “তুমি রাজার আদেশ কেন অমান্য করছ?”
ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.
4 তারা দিনের র পর দিন তাকে বলত, তা সত্বেও তিনি তাদের কথা শুনতেন না। তাতে মর্দখয়ের কথা ঠিক থাকে কি না, তা জানবার ইচ্ছায় তারা হামনকে তা জানালো; কারণ মর্দখয় যে যিহূদী, এটা তিনি তাদেরকে বলেছিলেন।
ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.
5 আর হামন যখন দেখল যে, মর্দখয় তার কাছে হাঁটু পেতে প্রণাম করে না, তখন সে খুব রেগে গেল।
ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.
6 কিন্তু হামন শুধু মর্দখয়কে মেরে ফেলা একটা সামান্য বিষয় বলে মনে করল, পরিবর্তে সে একটা উপায় খুঁজতে লাগল যাতে অহশ্বেরশের গোটা রাজ্যের মধ্য থেকে মর্দখয়ের লোকদের, অর্থাৎ ইহুদীদের ধ্বংস করে ফেলতে পারে।
ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.
7 আর সেই বিষয়ে অহশ্বেরশ রাজার রাজত্বের বারো বছরের প্রথম মাসে অর্থাৎ নীষণ মাসে হামনের সামনে সবদিন প্রত্যেক দিনের ও প্রত্যেক মাসে অদর নামের দ্বাদশ মাস পর্যন্ত পূর অর্থাৎ গুলিবাঁট করা হল।
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
8 পরে হামন অহশ্বেরশ রাজাকে বলল, “আপনার রাজ্যের সমস্ত দেশে অবস্থিত জাতিদের মধ্যে ছড়ানো অথচ আলাদা এক জাতি আছে; অন্য সব জাতির আইন থেকে তাদের আইন অন্য রকম এবং তারা মহারাজের নিয়ম পালন করে না; অতএব তাদেরকে থাকতে দেওয়া মহারাজের উচিত না।
ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
9 যদি মহারাজের ইচ্ছে হয়, তবে তাদেরকে ধ্বংস করতে লেখা হোক; তাতে আমি রাজ কোষাগারে রাখবার জন্য সঠিক লোকদের হাতে দশ হাজার তালন্ত রূপা দেব।”
ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.
10 ১০ তখন রাজা নিজের আংটি খুলে ইহুদীদের শত্রু অগাগীয় হম্মদাথার ছেলে হামনকে দিলেন।
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.
11 ১১ আর রাজা হামনকে বললেন, “সেই রূপা ও সেই জাতি তোমাকে দেওয়া হল, তুমি তাদের প্রতি যা ভালো বোঝ, তাই কর।”
ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.
12 ১২ পরে প্রথম মাসের তেরো দিনের রাজার লেখকদের ডাকা হল; সেই দিন হামনের সমস্ত আদেশ অনুসারে রাজার নিযুক্ত রাজ্যপাল সবার ও প্রত্যেক দেশের শাসনকর্ত্তাদের এবং প্রত্যেক জাতির প্রধানদের কাছে, প্রত্যেক দেশের অক্ষর ও প্রত্যেক জাতির ভাষা অনুসারে চিঠি লেখা হল, তা অহশ্বেরশ রাজার নামে লেখা ও রাজার আংটি দিয়ে সীলমোহর করা হল।
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.
13 ১৩ আর এই চিঠি বাহকদের মাধ্যমে সমস্ত দেশে পাঠানো হল যে, এক দিনের অর্থাৎ অদর নামের দ্বাদশ মাসের তেরো দিনের অল্পবয়সী ও বুড়ো, শিশু স্ত্রী শুদ্ধ সমস্ত যিহূদী লোককে বিনাশ, হত্যা ও ধ্বংস এবং তাদের জিনিস লুট করতে হবে।
ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.
14 ১৪ সেই আদেশ যেন প্রত্যেক দেশে দেওয়া হয়, এই জন্য সেই চিঠির এক নকল সব জাতির কাছে প্রচারিত হল, যাতে সেই দিনের র জন্য সবাই তৈরী হয়।
ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.
15 ১৫ বাহকেরা রাজার আদেশ পেয়ে তাড়াতাড়ি বেরিয়ে গেল এবং সেই আদেশ শূশন রাজধানীতে প্রচার করা হল; পরে রাজা ও হামন পান করতে বসলেন, কিন্তু শূশন শহরের সব লোক অবাক হয়ে গেল।
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.

< ইষ্টের বিবরণ 3 >